AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajasthan: ಆಂಬ್ಯುಲೆನ್ಸ್‌ ಇಂಧನ ಖಾಲಿಯಾಗಿ ರೋಗಿ ಸಾವು, ನಿರ್ವಹಣೆಯ ವೈಫಲ್ಯ ಎಂದ ಸಚಿವ

ಆಂಬ್ಯುಲೆನ್ಸ್‌ (ambulance) ಇಂಧನ ಖಾಲಿಯಾಗಿ ರೋಗಿಯೊಬ್ಬರನ್ನು ಆಂಬ್ಯುಲೆನ್ಸ್‌ನಲ್ಲಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ (Rajasthan) ಬನ್ಸಾವರಾನಲ್ಲಿ ನಡೆದಿದೆ. ಆಂಬ್ಯುಲೆನ್ಸ್​ನಲ್ಲಿ ಇಂಧನ ಕೊರತೆ ಉಂಟಾದ ಕಾರಣ ಆಂಬ್ಯುಲೆನ್ಸ್‌ ಮಧ್ಯದಲ್ಲಿ ನಿಂತಿದೆ.

Rajasthan: ಆಂಬ್ಯುಲೆನ್ಸ್‌ ಇಂಧನ ಖಾಲಿಯಾಗಿ ರೋಗಿ ಸಾವು, ನಿರ್ವಹಣೆಯ ವೈಫಲ್ಯ ಎಂದ ಸಚಿವ
Relatives of patients were seen pushing the ambulance in Rajasthan's Banswara on Friday Image Credit source: ANI
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Nov 26, 2022 | 3:46 PM

Share

ರಾಜಸ್ಥಾನ: ಆಂಬ್ಯುಲೆನ್ಸ್‌ ನ(ambulance) ಇಂಧನ ಖಾಲಿಯಾಗಿ ರೋಗಿಯೊಬ್ಬರು ಆಂಬ್ಯುಲೆನ್ಸ್‌ನಲ್ಲಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ (Rajasthan) ಬನ್ಸಾವರಾನಲ್ಲಿ ನಡೆದಿದೆ. ಆಂಬ್ಯುಲೆನ್ಸ್​ನಲ್ಲಿ ಇಂಧನ ಕೊರತೆ ಉಂಟಾದ ಕಾರಣ ಆಂಬ್ಯುಲೆನ್ಸ್‌ ಮಧ್ಯದಲ್ಲಿ ನಿಂತಿದೆ. ನಂತರ ರೋಗಿಯ ಸಂಬಂಧಿಕರು ಆಂಬ್ಯುಲೆನ್ಸ್ ಅನ್ನು ತಳ್ಳಿದ್ದಾರೆ, ಇದೀಗ ಈ  ವಿಡಿಯೋ ವೈರಲ್ ಆಗಿದೆ ಎಂದು ANI ಸುದ್ದಿ ಸಂಸ್ಥೆ ವರದಿ ಮಾಡಿದೆ.

ಈ ಘಟನೆ ನಮ್ಮ ಗಮನಕ್ಕೆ ಬಂದಿದೆ, ಈಗಾಗಲೇ ನಾವು ತನಿಖೆ ಆರಂಭಿಸಿದ್ದೇವೆ. ಆಂಬ್ಯುಲೆನ್ಸ್​​ನಲ್ಲಿ ಸಾವನ್ನಪ್ಪಿರುವ ರೋಗಿಯ ಸಂಬಂಧಿಕರನ್ನು ಭೇಟಿ ಮಾಡಿ ಈ ಘಟನೆ ಬಗ್ಗೆ ತಿಳಿದುಕೊಳ್ಳುತ್ತೇವೆ. ಈ ಆಂಬ್ಯುಲೆನ್ಸ್‌ನ್ನು ಖಾಸಗಿ ಏಜೆನ್ಸಿ ನಡೆಸುತ್ತಿದೆ, ಆಂಬ್ಯುಲೆನ್ಸ್‌ಗಳ ನಿರ್ವಹಣೆಯ ಬೇಜಾವಾಬ್ದಾರಿಯಿಂದ ನಡೆದಿರುವ ಘಟನೆ ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಮುಖ್ಯ ವೈದ್ಯಕೀಯ ಆರೋಗ್ಯ ಅಧಿಕಾರಿ ANIಗೆ ತಿಳಿಸಿದ್ದಾರೆ.

ರಾಜಸ್ಥಾನದ ರಾಜ್ಯ ಸಚಿವ ಪ್ರತಾಪ್ ಸಿಂಗ್ ಖಚರಿಯಾವಾಸ್ ಈ ಘಟನೆಯು ನಿರ್ವಹಣೆಯ ವೈಫಲ್ಯ ಎಂದು ಹೇಳಿದ್ದಾರೆ. ಅವರು ಪ್ರಸ್ತುತ ಸಾರಿಗೆ ಮತ್ತು ಸೈನಿಕರ ಕಲ್ಯಾಣ ಇಲಾಖೆಯ ಕ್ಯಾಬಿನೆಟ್ ಸಚಿವರಾಗಿದ್ದಾರೆ.

ಇದನ್ನು ಓದಿ: Rajasthan: ಹೆಲಿಕಾಪ್ಟರ್‌ನ ಶಬ್ದದಿಂದ ನನ್ನ ಎಮ್ಮೆ ಸಾವನ್ನಪ್ಪಿದೆ ಶಾಸಕನ ವಿರುದ್ಧ ದೂರು ನೀಡಿದ ರೈತ

ನಮ್ಮ ಸರ್ಕಾರವು ಖಾಸಗಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡಿದೆ, ಆಂಬ್ಯುಲೆನ್ಸ್‌ನಲ್ಲಿ ಇಂಧನ ಕೊರತೆಯಿಂದ ರೋಗಿಯು ಸಾವನ್ನಪ್ಪಿದ್ದರೆ  ಅದು ನಿರ್ವಹಣೆಯ ವೈಫಲ್ಯವೇ ಹೊರತು ವ್ಯವಸ್ಥೆಯದ್ದಲ್ಲ, ಅದಕ್ಕೆ ಕಾರಣರಾದವರ ವಿರುದ್ಧ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವರು ಹೇಳಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:46 pm, Sat, 26 November 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್