AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jamnagar: ಪೂಜೆ ಹೆಸರಲ್ಲಿ ಶಾಸಕರಿಗೆ ಟೋಪಿ ಹಾಕಲು ಹೋಗಿ ಸಿಕ್ಕಿ ಬಿದ್ದ ತಾಂತ್ರಿಕರು

ಶಾಸಕರಿಗೆ ಪೂಜೆ ಹೆಸರಿನಲ್ಲಿ ಟೋಪಿ ಹಾಕಲು ಹೋಗಿ ಮೂವರು ತಾಂತ್ರಿಕರು ಸಿಕ್ಕಿಬಿದ್ದಿರುವ ಘಟನೆ ಜಾಮ್ನಗರದಲ್ಲಿ ನಡೆದಿದೆ. ಇತ್ತೀಚಿನ ದಿನಗಳಲ್ಲಿ, ಪೂಜೆಗಳ ನೆಪವೊಡ್ಡಿ ಜನರಿಂದ ಸುಲಿಗೆ ಮಾಡುವ ಪ್ರವೃತ್ತಿ ಹೆಚ್ಚಾಗಿದೆ. ಕಮಲೇಶ್​ ಎಂದು ಗುರುತಿಸಿಕೊಂಡಿರುವ ವ್ಯಕ್ತಿ ಜಾಮ್ನಗರದ ಶಾಸಕ ದಿವ್ಯೇಶ್ ಅಕ್ಬರಿಗೆ ಕರೆ ಮಾಡಿ, ತಾವು ಜೈನ ಮುನಿಗಳು ಎಂದು ಹೇಳಿಕೊಂಡಿದ್ದಾರೆ. ಆಗಲೇ ಶಾಸಕರಿಗೆ ಅನುಮಾನ ಬಂದಿತ್ತು, ಜೈನ ಮುನಿಗಳು ಫೋನ್​ನಲ್ಲಿ ಮಾತನಾಡುವುದಿಲ್ಲ ನಮಗೆ ಮೋಸ ಮಾಡುವ ಆಲೋಚನೆಯೇ ಇರಬೇಕು ಎಂದು ಅರಿತುಕೊಂಡರು.

Jamnagar: ಪೂಜೆ ಹೆಸರಲ್ಲಿ ಶಾಸಕರಿಗೆ ಟೋಪಿ ಹಾಕಲು ಹೋಗಿ ಸಿಕ್ಕಿ ಬಿದ್ದ ತಾಂತ್ರಿಕರು
ದಿವ್ಯೇಶ್
ನಯನಾ ರಾಜೀವ್
|

Updated on: Oct 12, 2023 | 2:54 PM

Share

ಶಾಸಕರಿಗೆ ಪೂಜೆ ಹೆಸರಿನಲ್ಲಿ ಟೋಪಿ ಹಾಕಲು ಹೋಗಿ ಮೂವರು ತಾಂತ್ರಿಕರು ಸಿಕ್ಕಿಬಿದ್ದಿರುವ ಘಟನೆ ಜಾಮ್ನಗರದಲ್ಲಿ ನಡೆದಿದೆ. ಇತ್ತೀಚಿನ ದಿನಗಳಲ್ಲಿ, ಪೂಜೆಗಳ ನೆಪವೊಡ್ಡಿ ಜನರಿಂದ ಸುಲಿಗೆ ಮಾಡುವ ಪ್ರವೃತ್ತಿ ಹೆಚ್ಚಾಗಿದೆ. ಕಮಲೇಶ್​ ಎಂದು ಗುರುತಿಸಿಕೊಂಡಿರುವ ವ್ಯಕ್ತಿ ಜಾಮ್ನಗರದ ಶಾಸಕ ದಿವ್ಯೇಶ್ ಅಕ್ಬರಿಗೆ ಕರೆ ಮಾಡಿ, ತಾವು ಜೈನ ಮುನಿಗಳು ಎಂದು ಹೇಳಿಕೊಂಡಿದ್ದಾರೆ. ಆಗಲೇ ಶಾಸಕರಿಗೆ ಅನುಮಾನ ಬಂದಿತ್ತು, ಜೈನ ಮುನಿಗಳು ಫೋನ್​ನಲ್ಲಿ ಮಾತನಾಡುವುದಿಲ್ಲ ನಮಗೆ ಮೋಸ ಮಾಡುವ ಆಲೋಚನೆಯೇ ಇರಬೇಕು ಎಂದು ಅರಿತುಕೊಂಡರು.

ನೀವು ತೊಂದರೆಯಲ್ಲಿದ್ದೀರಿ, ನಿಮ್ಮ ಇಷ್ಟಾರ್ಥ ಇಡೇರಲು ಜೈನ ದಿಗಂಬರರ ಹೆಸರಿನಲ್ಲಿ ಪೂಜೆ ನಡೆಸಬೇಕು ಅದರಿಂದ ನಿಮಗೆ ಒಳ್ಳೆಯದಾಗುತ್ತದೆ, 51 ಸಾವಿರದ ಮೂರು ಕವರ್​ಗಳನ್ನು ನಮಗೆ ಕಳುಹಿಸಿಕೊಡಿ ಎಂದು ಕೇಳಿದ್ದಾರೆ, ಆಗುವುದಿಲ್ಲ ಎಂದು ಶಾಸಕರು ಹೇಳಿದಾಗ 21 ಸಾವಿರ ಕೊಡುವಂತೆ ಕೇಳಿದ್ದಾರೆ, ಬಳಿಕ 5 ಸಾವಿರ ಕೊಡುವಂತೆ ಕೇಳಿದ್ದಾರೆ.

ನಾಲ್ಕು ದಿನ ಬೇರೆ ಬೇರೆ ನೆಪದಲ್ಲಿ ಶಾಸಕರು ಆ ಕಳ್ಳರ ಗುಂಪಿನೊಂದಿಗೆ ಮಾತುಕತೆ ನಡೆಸುತ್ತಿದ್ದರು, ಕೊನೆಗೆ ಹಣ ತೆಗೆದುಕೊಳ್ಳಲು ಜಾಮ್ನಗರಕ್ಕೆ ಬನ್ನಿ ಎಂದು ಹೇಳಿದ್ದರು, ಈ ವೇಳೆ ಪೊಲೀಸರು ಕಟ್ಟೆಚ್ಚರವಹಿಸಿದ್ದರು.

ಮತ್ತಷ್ಟು ಓದಿ: ಬಂಬಲ್ ಡೇಟಿಂಗ್ ಆ್ಯಪ್​ನಲ್ಲಿ ಭೇಟಿ, ವ್ಯಕ್ತಿಯಿಂದ ಚಿನ್ನ, ನಗದು, ಐಫೋನ್ ಕದ್ದು ಮಹಿಳೆ ಪರಾರಿ

ಬಳಿಕ ಅಕ್ಬರಿ ಅವರು ಪೊಲೀಸರಿಗೆ ವಿಷಯ ತಿಳಿಸಿ, ಫೋನ್ ನಂಬರ್​ ಹಾಗೂ ಇತರೆ ವಿವರಗಳನ್ನು ನೀಡಿದ್ದಾರೆ. ಶಾಸಕರ ದೂರಿನಂತೆ ಮೊಬೈಲ್ ನಂಬರ್ ಆಧರಿಸಿ ತನಿಖೆ ನಡೆಸಿದ್ದಾರೆ, ಅಮ್ರೇಲಿಯಲ್ಲಿ ಮೂವರನ್ನು ಬಂಧಿಸಿದ್ದಾರೆ. ಅವರನ್ನು ಅಭಯ್ ಸೋಮಾನಿ, ಅಜುಮ್ ಜುನೇಜಾ ಹಾಗೂ ಮೊಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ. ಮೂವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ. ಕಪಟಿಗಳು ನಾನಾ ಕತೆಗಳನ್ನು ಕಟ್ಟಿ ಜನರಿಗೆ ವಂಚಿಸಿ ಆರ್ಥಿಕ ಲಾಭ ಮಾಡಿಕೊಳ್ಳುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​