AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jamnagar: ಪೂಜೆ ಹೆಸರಲ್ಲಿ ಶಾಸಕರಿಗೆ ಟೋಪಿ ಹಾಕಲು ಹೋಗಿ ಸಿಕ್ಕಿ ಬಿದ್ದ ತಾಂತ್ರಿಕರು

ಶಾಸಕರಿಗೆ ಪೂಜೆ ಹೆಸರಿನಲ್ಲಿ ಟೋಪಿ ಹಾಕಲು ಹೋಗಿ ಮೂವರು ತಾಂತ್ರಿಕರು ಸಿಕ್ಕಿಬಿದ್ದಿರುವ ಘಟನೆ ಜಾಮ್ನಗರದಲ್ಲಿ ನಡೆದಿದೆ. ಇತ್ತೀಚಿನ ದಿನಗಳಲ್ಲಿ, ಪೂಜೆಗಳ ನೆಪವೊಡ್ಡಿ ಜನರಿಂದ ಸುಲಿಗೆ ಮಾಡುವ ಪ್ರವೃತ್ತಿ ಹೆಚ್ಚಾಗಿದೆ. ಕಮಲೇಶ್​ ಎಂದು ಗುರುತಿಸಿಕೊಂಡಿರುವ ವ್ಯಕ್ತಿ ಜಾಮ್ನಗರದ ಶಾಸಕ ದಿವ್ಯೇಶ್ ಅಕ್ಬರಿಗೆ ಕರೆ ಮಾಡಿ, ತಾವು ಜೈನ ಮುನಿಗಳು ಎಂದು ಹೇಳಿಕೊಂಡಿದ್ದಾರೆ. ಆಗಲೇ ಶಾಸಕರಿಗೆ ಅನುಮಾನ ಬಂದಿತ್ತು, ಜೈನ ಮುನಿಗಳು ಫೋನ್​ನಲ್ಲಿ ಮಾತನಾಡುವುದಿಲ್ಲ ನಮಗೆ ಮೋಸ ಮಾಡುವ ಆಲೋಚನೆಯೇ ಇರಬೇಕು ಎಂದು ಅರಿತುಕೊಂಡರು.

Jamnagar: ಪೂಜೆ ಹೆಸರಲ್ಲಿ ಶಾಸಕರಿಗೆ ಟೋಪಿ ಹಾಕಲು ಹೋಗಿ ಸಿಕ್ಕಿ ಬಿದ್ದ ತಾಂತ್ರಿಕರು
ದಿವ್ಯೇಶ್
ನಯನಾ ರಾಜೀವ್
|

Updated on: Oct 12, 2023 | 2:54 PM

Share

ಶಾಸಕರಿಗೆ ಪೂಜೆ ಹೆಸರಿನಲ್ಲಿ ಟೋಪಿ ಹಾಕಲು ಹೋಗಿ ಮೂವರು ತಾಂತ್ರಿಕರು ಸಿಕ್ಕಿಬಿದ್ದಿರುವ ಘಟನೆ ಜಾಮ್ನಗರದಲ್ಲಿ ನಡೆದಿದೆ. ಇತ್ತೀಚಿನ ದಿನಗಳಲ್ಲಿ, ಪೂಜೆಗಳ ನೆಪವೊಡ್ಡಿ ಜನರಿಂದ ಸುಲಿಗೆ ಮಾಡುವ ಪ್ರವೃತ್ತಿ ಹೆಚ್ಚಾಗಿದೆ. ಕಮಲೇಶ್​ ಎಂದು ಗುರುತಿಸಿಕೊಂಡಿರುವ ವ್ಯಕ್ತಿ ಜಾಮ್ನಗರದ ಶಾಸಕ ದಿವ್ಯೇಶ್ ಅಕ್ಬರಿಗೆ ಕರೆ ಮಾಡಿ, ತಾವು ಜೈನ ಮುನಿಗಳು ಎಂದು ಹೇಳಿಕೊಂಡಿದ್ದಾರೆ. ಆಗಲೇ ಶಾಸಕರಿಗೆ ಅನುಮಾನ ಬಂದಿತ್ತು, ಜೈನ ಮುನಿಗಳು ಫೋನ್​ನಲ್ಲಿ ಮಾತನಾಡುವುದಿಲ್ಲ ನಮಗೆ ಮೋಸ ಮಾಡುವ ಆಲೋಚನೆಯೇ ಇರಬೇಕು ಎಂದು ಅರಿತುಕೊಂಡರು.

ನೀವು ತೊಂದರೆಯಲ್ಲಿದ್ದೀರಿ, ನಿಮ್ಮ ಇಷ್ಟಾರ್ಥ ಇಡೇರಲು ಜೈನ ದಿಗಂಬರರ ಹೆಸರಿನಲ್ಲಿ ಪೂಜೆ ನಡೆಸಬೇಕು ಅದರಿಂದ ನಿಮಗೆ ಒಳ್ಳೆಯದಾಗುತ್ತದೆ, 51 ಸಾವಿರದ ಮೂರು ಕವರ್​ಗಳನ್ನು ನಮಗೆ ಕಳುಹಿಸಿಕೊಡಿ ಎಂದು ಕೇಳಿದ್ದಾರೆ, ಆಗುವುದಿಲ್ಲ ಎಂದು ಶಾಸಕರು ಹೇಳಿದಾಗ 21 ಸಾವಿರ ಕೊಡುವಂತೆ ಕೇಳಿದ್ದಾರೆ, ಬಳಿಕ 5 ಸಾವಿರ ಕೊಡುವಂತೆ ಕೇಳಿದ್ದಾರೆ.

ನಾಲ್ಕು ದಿನ ಬೇರೆ ಬೇರೆ ನೆಪದಲ್ಲಿ ಶಾಸಕರು ಆ ಕಳ್ಳರ ಗುಂಪಿನೊಂದಿಗೆ ಮಾತುಕತೆ ನಡೆಸುತ್ತಿದ್ದರು, ಕೊನೆಗೆ ಹಣ ತೆಗೆದುಕೊಳ್ಳಲು ಜಾಮ್ನಗರಕ್ಕೆ ಬನ್ನಿ ಎಂದು ಹೇಳಿದ್ದರು, ಈ ವೇಳೆ ಪೊಲೀಸರು ಕಟ್ಟೆಚ್ಚರವಹಿಸಿದ್ದರು.

ಮತ್ತಷ್ಟು ಓದಿ: ಬಂಬಲ್ ಡೇಟಿಂಗ್ ಆ್ಯಪ್​ನಲ್ಲಿ ಭೇಟಿ, ವ್ಯಕ್ತಿಯಿಂದ ಚಿನ್ನ, ನಗದು, ಐಫೋನ್ ಕದ್ದು ಮಹಿಳೆ ಪರಾರಿ

ಬಳಿಕ ಅಕ್ಬರಿ ಅವರು ಪೊಲೀಸರಿಗೆ ವಿಷಯ ತಿಳಿಸಿ, ಫೋನ್ ನಂಬರ್​ ಹಾಗೂ ಇತರೆ ವಿವರಗಳನ್ನು ನೀಡಿದ್ದಾರೆ. ಶಾಸಕರ ದೂರಿನಂತೆ ಮೊಬೈಲ್ ನಂಬರ್ ಆಧರಿಸಿ ತನಿಖೆ ನಡೆಸಿದ್ದಾರೆ, ಅಮ್ರೇಲಿಯಲ್ಲಿ ಮೂವರನ್ನು ಬಂಧಿಸಿದ್ದಾರೆ. ಅವರನ್ನು ಅಭಯ್ ಸೋಮಾನಿ, ಅಜುಮ್ ಜುನೇಜಾ ಹಾಗೂ ಮೊಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ. ಮೂವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ. ಕಪಟಿಗಳು ನಾನಾ ಕತೆಗಳನ್ನು ಕಟ್ಟಿ ಜನರಿಗೆ ವಂಚಿಸಿ ಆರ್ಥಿಕ ಲಾಭ ಮಾಡಿಕೊಳ್ಳುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ