AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರತಕ್ಷತೆ ದಿನವೇ ಶವವಾಗಿ ಪತ್ತೆಯಾದ ನವ ದಂಪತಿ, ಮನೆಯವರಿಗೆ ಕಾದಿತ್ತು ಅಚ್ಚರಿ

ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದಲ್ಲಿ ಮದುವೆಯ ಆರತಕ್ಷತೆಗೆ ದಿನವೇ ನವವಿವಾಹಿತ ದಂಪತಿಗಳು ತಮ್ಮ ಮನೆಯ ಕೋಣೆಯೊಳಗೆ ದೇಹದ ಮೇಲೆ ಗಾಯಗಳೊಂದಿಗೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಆರತಕ್ಷತೆ ದಿನವೇ ಶವವಾಗಿ ಪತ್ತೆಯಾದ ನವ ದಂಪತಿ, ಮನೆಯವರಿಗೆ ಕಾದಿತ್ತು ಅಚ್ಚರಿ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Feb 22, 2023 | 12:35 PM

Share

ರಾಯಪುರ: ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದಲ್ಲಿ ಮದುವೆಯ ಆರತಕ್ಷತೆಗೆ ಮುನ್ನ ನವವಿವಾಹಿತ ದಂಪತಿಗಳು ತಮ್ಮ ಮನೆಯ ಕೋಣೆಯೊಳಗೆ ದೇಹದ ಮೇಲೆ ಗಾಯಗಳೊಂದಿಗೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಇಬ್ಬರ ನಡುವೆ ಜಗಳ ನಡೆದಿದ್ದು, ಬಳಿಕ ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಮಂಗಳವಾರ ತಡರಾತ್ರಿ ತಿಕ್ರಪಾರ ಪೊಲೀಸ್ ಠಾಣೆ ವ್ಯಾಪ್ತಿಯ ಬ್ರಿಜ್‌ನಗರದಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಸ್ಲಾಂ (24) ಮತ್ತು ಕಹ್ಕಶಾ ಬಾನೊ (22) ಭಾನುವಾರ ವಿವಾಹವಾಗಿದ್ದು, ಮಂಗಳವಾರ ರಾತ್ರಿ ಅವರ ವಿವಾಹ ಆರತಕ್ಷತೆ ನಡೆಯಬೇಕಿತ್ತು. ಅವರು ತಮ್ಮ ಕೊಠಡಿಯೊಳಗೆ ಕಾರ್ಯಕ್ರಮಕ್ಕೆ ತಯಾರಾಗುತ್ತಿದ್ದಾಗ ವರನ ತಾಯಿ ವಧುವಿನ ಕಿರುಚಾಟವನ್ನು ಕೇಳಿ ಅಲ್ಲಿಗೆ ಬಂದಿದ್ದಾರೆ ಎಂದು ಅವರು ಹೇಳಿದರು.

ಕೋಣೆಯ ಒಳಗಿನಿಂದ ಲಾಕ್ ಆಗಿತ್ತು, ಇಬ್ಬರ ಬಾಗಿಲು ತೆಗೆಯದ ಕಾರಣ ಹೊರಗಿನಿಂದ ಕುಟುಂಬದ ಸದಸ್ಯರು ಕಿಟಕಿಯ ಮೂಲಕ ಇಣುಕಿ ನೋಡಿದಾಗ ಅವರು ರಕ್ತದ ಮಡುವಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇದನ್ನು ಓದಿ: Crime News: 14 ವರ್ಷದ ಬಾಲಕಿ ಮೇಲೆ ಕಸಿನ್, ಚಿಕ್ಕಪ್ಪನಿಂದಲೇ ಅತ್ಯಾಚಾರ

ಪೊಲೀಸರು ಬಾಗಿಲು ಒಡೆದು ಒಳಗೆ ಹೋಗಿದ್ದಾರೆ. ಇದೀಗ ಅವರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ, ಚಾಕುವನ್ನು ಕೂಡ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು. ದಂಪತಿಗಳ ನಡುವೆ ವಾಗ್ವಾದ ನಡೆದಿದ್ದು, ಪತಿ ಪತ್ನಿಗೆ ಚಾಕುವಿನಿಂದ ಹಲ್ಲೆ ನಡೆಸಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಪೊಲೀಸ್ ಅಧಿಆಕರಿಗಳು ಹೇಳಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:34 pm, Wed, 22 February 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ