ಆರತಕ್ಷತೆ ದಿನವೇ ಶವವಾಗಿ ಪತ್ತೆಯಾದ ನವ ದಂಪತಿ, ಮನೆಯವರಿಗೆ ಕಾದಿತ್ತು ಅಚ್ಚರಿ

ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದಲ್ಲಿ ಮದುವೆಯ ಆರತಕ್ಷತೆಗೆ ದಿನವೇ ನವವಿವಾಹಿತ ದಂಪತಿಗಳು ತಮ್ಮ ಮನೆಯ ಕೋಣೆಯೊಳಗೆ ದೇಹದ ಮೇಲೆ ಗಾಯಗಳೊಂದಿಗೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಆರತಕ್ಷತೆ ದಿನವೇ ಶವವಾಗಿ ಪತ್ತೆಯಾದ ನವ ದಂಪತಿ, ಮನೆಯವರಿಗೆ ಕಾದಿತ್ತು ಅಚ್ಚರಿ
ಸಾಂದರ್ಭಿಕ ಚಿತ್ರ

Updated on: Feb 22, 2023 | 12:35 PM

ರಾಯಪುರ: ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದಲ್ಲಿ ಮದುವೆಯ ಆರತಕ್ಷತೆಗೆ ಮುನ್ನ ನವವಿವಾಹಿತ ದಂಪತಿಗಳು ತಮ್ಮ ಮನೆಯ ಕೋಣೆಯೊಳಗೆ ದೇಹದ ಮೇಲೆ ಗಾಯಗಳೊಂದಿಗೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಇಬ್ಬರ ನಡುವೆ ಜಗಳ ನಡೆದಿದ್ದು, ಬಳಿಕ ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಮಂಗಳವಾರ ತಡರಾತ್ರಿ ತಿಕ್ರಪಾರ ಪೊಲೀಸ್ ಠಾಣೆ ವ್ಯಾಪ್ತಿಯ ಬ್ರಿಜ್‌ನಗರದಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಸ್ಲಾಂ (24) ಮತ್ತು ಕಹ್ಕಶಾ ಬಾನೊ (22) ಭಾನುವಾರ ವಿವಾಹವಾಗಿದ್ದು, ಮಂಗಳವಾರ ರಾತ್ರಿ ಅವರ ವಿವಾಹ ಆರತಕ್ಷತೆ ನಡೆಯಬೇಕಿತ್ತು. ಅವರು ತಮ್ಮ ಕೊಠಡಿಯೊಳಗೆ ಕಾರ್ಯಕ್ರಮಕ್ಕೆ ತಯಾರಾಗುತ್ತಿದ್ದಾಗ ವರನ ತಾಯಿ ವಧುವಿನ ಕಿರುಚಾಟವನ್ನು ಕೇಳಿ ಅಲ್ಲಿಗೆ ಬಂದಿದ್ದಾರೆ ಎಂದು ಅವರು ಹೇಳಿದರು.

ಕೋಣೆಯ ಒಳಗಿನಿಂದ ಲಾಕ್ ಆಗಿತ್ತು, ಇಬ್ಬರ ಬಾಗಿಲು ತೆಗೆಯದ ಕಾರಣ ಹೊರಗಿನಿಂದ ಕುಟುಂಬದ ಸದಸ್ಯರು ಕಿಟಕಿಯ ಮೂಲಕ ಇಣುಕಿ ನೋಡಿದಾಗ ಅವರು ರಕ್ತದ ಮಡುವಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇದನ್ನು ಓದಿ: Crime News: 14 ವರ್ಷದ ಬಾಲಕಿ ಮೇಲೆ ಕಸಿನ್, ಚಿಕ್ಕಪ್ಪನಿಂದಲೇ ಅತ್ಯಾಚಾರ

ಪೊಲೀಸರು ಬಾಗಿಲು ಒಡೆದು ಒಳಗೆ ಹೋಗಿದ್ದಾರೆ. ಇದೀಗ ಅವರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ, ಚಾಕುವನ್ನು ಕೂಡ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು. ದಂಪತಿಗಳ ನಡುವೆ ವಾಗ್ವಾದ ನಡೆದಿದ್ದು, ಪತಿ ಪತ್ನಿಗೆ ಚಾಕುವಿನಿಂದ ಹಲ್ಲೆ ನಡೆಸಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಪೊಲೀಸ್ ಅಧಿಆಕರಿಗಳು ಹೇಳಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:34 pm, Wed, 22 February 23

Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Follow Us