AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ 19 ವಿರುದ್ಧ ಹೋರಾಟದಲ್ಲಿ ಮುಂದಿನ 125 ದಿನಗಳು ತುಂಬ ನಿರ್ಣಾಯಕ: ಡಾ.ವಿ.ಕೆ.ಪೌಲ್​

ಕೊವಿಡ್​ 19 ಎರಡನೇ ಅಲೆ ಸ್ವಲ್ಪ ಮಟ್ಟಿಗೆ ತಗ್ಗುತ್ತಿದ್ದಂತೆ ಹಲವು ರಾಜ್ಯಗಳು ನಿಧಾನವಾಗಿ ನಿರ್ಬಂಧಗಳನ್ನು ಸಡಿಲಗೊಳಿಸುತ್ತಿವೆ. ಇದೀಗ ಆಗಸ್ಟ್​ನಲ್ಲೇ ಕೊವಿಡ್​ 19 ಮೂರನೇ ಅಲೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಆರೋಗ್ಯ ತಜ್ಞರು ಹೇಳಿದ್ದು, ಆತಂಕ ಮೂಡಿಸಿದೆ.

ಕೊವಿಡ್​ 19 ವಿರುದ್ಧ ಹೋರಾಟದಲ್ಲಿ ಮುಂದಿನ 125 ದಿನಗಳು ತುಂಬ ನಿರ್ಣಾಯಕ: ಡಾ.ವಿ.ಕೆ.ಪೌಲ್​
ವಿ.ಕೆ.ಪೌಲ್​
TV9 Web
| Edited By: |

Updated on: Jul 17, 2021 | 10:47 AM

Share

ದೆಹಲಿ: ಕೊವಿಡ್​ 19 (Covid 19) ವಿರುದ್ಧ ಹೋರಾಟದಲ್ಲಿ ಮುಂದಿನ 100-125 ದಿನಗಳು ತುಂಬ ನಿರ್ಣಾಯಕ ಮತ್ತು ಸಂದಿಗ್ಧವಾಗಿರಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಕಳೆದ ಎರಡು ತಿಂಗಳ ಹಿಂದೆ ಕೊವಿಡ್​ ಎರಡನೇ ಅಲೆ ಉತ್ತುಂಗಕ್ಕೆ ಏರಿತ್ತು. ಅದಾದ ಬಳಿಕ ದಿನದಲ್ಲಿ ಪತ್ತೆಯಾಗುವ ಕೊವಿಡ್​ ಕೇಸ್​ಗಳ ಸಂಖ್ಯೆಯಲ್ಲಿ ಇಳಿಮುಖವಾಯಿತು. ಆದರೆ ಈಗೀಗ ಕೊರೊನಾ ಕೇಸ್​ಗಳಲ್ಲಿ ತುಂಬ ಇಳಿಮುಖ ಆಗುತ್ತಿಲ್ಲ. ಅದು ಎಚ್ಚರಿಕೆಯ ಸಂಕೇತ ಎಂದು ನೀತಿ ಆಯೋಗದ ಸದಸ್ಯ ಡಾ. ವಿ.ಕೆ.ಪೌಲ್​ ಹೇಳಿದ್ದಾರೆ.

ಕೊವಿಡ್​ 19 ಎರಡನೇ ಅಲೆ ಸ್ವಲ್ಪ ಮಟ್ಟಿಗೆ ತಗ್ಗುತ್ತಿದ್ದಂತೆ ಹಲವು ರಾಜ್ಯಗಳು ನಿಧಾನವಾಗಿ ನಿರ್ಬಂಧಗಳನ್ನು ಸಡಿಲಗೊಳಿಸುತ್ತಿವೆ. ಇದೀಗ ಆಗಸ್ಟ್​ನಲ್ಲೇ ಕೊವಿಡ್​ 19 ಮೂರನೇ ಅಲೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಆರೋಗ್ಯ ತಜ್ಞರು ಹೇಳಿದ್ದು, ಆತಂಕ ಮೂಡಿಸಿದೆ. ಇದರ ಬೆನ್ನಲ್ಲೇ ಈ ಹೇಳಿಕೆ ನೀಡಿರುವ ಡಾ. ಪೌಲ್​, ಜುಲೈ ಅಂತ್ಯದೊಳಗೆ 50 ಕೋಟಿ ಜನರಿಗೆ ಕೊವಿಡ್ 19 ಲಸಿಕೆ ಕೊಟ್ಟು ಮುಗಿಸಬೇಕು ಎಂಬ ಗುರಿಯನ್ನು ನಾವು ಹೊಂದಿದ್ದೇವೆ. 66 ಕೋಟಿ ಡೋಸ್​ ಕೊವಿಶೀಲ್ಡ್ ಮತ್ತು ಕೊವ್ಯಾಕ್ಸಿನ್​​ನ್ನು ಕೇಂದ್ರ ಸರ್ಕಾರ ಆದೇಶಿಸಿದೆ. ಅದರೊಂದಿಗೆ 22 ಕೋಟಿ ಡೋಸ್​ ಲಸಿಕೆ ಖಾಸಗಿ ವಲಯಕ್ಕೆ ಸೇರಲಿದೆ. ಉಳಿದಂತೆ ಕೊವಿಡ್​ 19 ಮೂರನೇ ಅಲೆ ತಡೆಯಲು ಏನೇನು ಸಾಧ್ಯವೋ ಅದನ್ನೆಲ್ಲ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಕೊವಿಡ್​ 19 ಟಾಸ್ಕ್​ಫೋರ್ಸ್​ಗೆ ಹೇಳಿದ್ದಾರೆ ಎಂದೂ ತಿಳಿಸಿದ್ದಾರೆ.

ಕೊರೊನಾ ಮತ್ತು ಅದರ ರೂಪಾಂತರಿ ವೈರಾಣುಗಳಿಂದ ರಕ್ಷಿಸಿಕೊಳ್ಳಲು ಲಸಿಕೆ ಪಡೆಯುವುದೊಂದೇ ಮಾರ್ಗ ಎಂದು ವಿ.ಕೆ.ಪೌಲ್​ ಒತ್ತಿ ಹೇಳಿದ್ದಾರೆ. ಅಲ್ಲದೆ, ಈ ಬಗ್ಗೆ ಭಾರತೀಯ ವೈದ್ಯಕೀಯ ಮಂಡಳಿ ಸಂಶೋಧನೆ ಕೂಡ ನಡೆಸಿದೆ. ಐಸಿಎಂಆರ್​ ಪೊಲೀಸ್ ಸಿಬ್ಬಂದಿಯ ಮೇಲೆ ಅಧ್ಯಯನ ನಡೆಸಿತ್ತು. ಕೊರೊನಾ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಪೊಲೀಸರಲ್ಲಿ ಎರಡೂ ಡೋಸ್ ಲಸಿಕೆ ಪಡೆದ ಪೊಲೀಸರಿಗಿಂತ, ಲಸಿಕೆ ಪಡೆಯದ ಪೊಲೀಸರಿಗೇ ಸಾವಿನ ಅಪಾಯ ಜಾಸ್ತಿ ಇರುವುದು ಈ ಸಂಶೋಧನೆಯಿಂದ ಗೊತ್ತಾಗಿದೆ ಎಂದು ಪೌಲ್​ ತಿಳಿಸಿದ್ದಾರೆ.

ಇದನ್ನೂ ಓದಿ: ರಾಜೀನಾಮೆ ನೀಡುವ ಪ್ರಶ್ನೆ ಇಲ್ಲ; ಮತ್ತೆ ಆಗಸ್ಟ್ ಮೊದಲ ವಾರದಲ್ಲಿ ದೆಹಲಿಗೆ ಬರುತ್ತೇನೆ – ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ

The next 125 days are critical in the fight against COVID 19 Says Dr VK Poul

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ