AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ 19 ವಿರುದ್ಧ ಹೋರಾಟದಲ್ಲಿ ಮುಂದಿನ 125 ದಿನಗಳು ತುಂಬ ನಿರ್ಣಾಯಕ: ಡಾ.ವಿ.ಕೆ.ಪೌಲ್​

ಕೊವಿಡ್​ 19 ಎರಡನೇ ಅಲೆ ಸ್ವಲ್ಪ ಮಟ್ಟಿಗೆ ತಗ್ಗುತ್ತಿದ್ದಂತೆ ಹಲವು ರಾಜ್ಯಗಳು ನಿಧಾನವಾಗಿ ನಿರ್ಬಂಧಗಳನ್ನು ಸಡಿಲಗೊಳಿಸುತ್ತಿವೆ. ಇದೀಗ ಆಗಸ್ಟ್​ನಲ್ಲೇ ಕೊವಿಡ್​ 19 ಮೂರನೇ ಅಲೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಆರೋಗ್ಯ ತಜ್ಞರು ಹೇಳಿದ್ದು, ಆತಂಕ ಮೂಡಿಸಿದೆ.

ಕೊವಿಡ್​ 19 ವಿರುದ್ಧ ಹೋರಾಟದಲ್ಲಿ ಮುಂದಿನ 125 ದಿನಗಳು ತುಂಬ ನಿರ್ಣಾಯಕ: ಡಾ.ವಿ.ಕೆ.ಪೌಲ್​
ವಿ.ಕೆ.ಪೌಲ್​
TV9 Web
| Edited By: |

Updated on: Jul 17, 2021 | 10:47 AM

Share

ದೆಹಲಿ: ಕೊವಿಡ್​ 19 (Covid 19) ವಿರುದ್ಧ ಹೋರಾಟದಲ್ಲಿ ಮುಂದಿನ 100-125 ದಿನಗಳು ತುಂಬ ನಿರ್ಣಾಯಕ ಮತ್ತು ಸಂದಿಗ್ಧವಾಗಿರಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಕಳೆದ ಎರಡು ತಿಂಗಳ ಹಿಂದೆ ಕೊವಿಡ್​ ಎರಡನೇ ಅಲೆ ಉತ್ತುಂಗಕ್ಕೆ ಏರಿತ್ತು. ಅದಾದ ಬಳಿಕ ದಿನದಲ್ಲಿ ಪತ್ತೆಯಾಗುವ ಕೊವಿಡ್​ ಕೇಸ್​ಗಳ ಸಂಖ್ಯೆಯಲ್ಲಿ ಇಳಿಮುಖವಾಯಿತು. ಆದರೆ ಈಗೀಗ ಕೊರೊನಾ ಕೇಸ್​ಗಳಲ್ಲಿ ತುಂಬ ಇಳಿಮುಖ ಆಗುತ್ತಿಲ್ಲ. ಅದು ಎಚ್ಚರಿಕೆಯ ಸಂಕೇತ ಎಂದು ನೀತಿ ಆಯೋಗದ ಸದಸ್ಯ ಡಾ. ವಿ.ಕೆ.ಪೌಲ್​ ಹೇಳಿದ್ದಾರೆ.

ಕೊವಿಡ್​ 19 ಎರಡನೇ ಅಲೆ ಸ್ವಲ್ಪ ಮಟ್ಟಿಗೆ ತಗ್ಗುತ್ತಿದ್ದಂತೆ ಹಲವು ರಾಜ್ಯಗಳು ನಿಧಾನವಾಗಿ ನಿರ್ಬಂಧಗಳನ್ನು ಸಡಿಲಗೊಳಿಸುತ್ತಿವೆ. ಇದೀಗ ಆಗಸ್ಟ್​ನಲ್ಲೇ ಕೊವಿಡ್​ 19 ಮೂರನೇ ಅಲೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಆರೋಗ್ಯ ತಜ್ಞರು ಹೇಳಿದ್ದು, ಆತಂಕ ಮೂಡಿಸಿದೆ. ಇದರ ಬೆನ್ನಲ್ಲೇ ಈ ಹೇಳಿಕೆ ನೀಡಿರುವ ಡಾ. ಪೌಲ್​, ಜುಲೈ ಅಂತ್ಯದೊಳಗೆ 50 ಕೋಟಿ ಜನರಿಗೆ ಕೊವಿಡ್ 19 ಲಸಿಕೆ ಕೊಟ್ಟು ಮುಗಿಸಬೇಕು ಎಂಬ ಗುರಿಯನ್ನು ನಾವು ಹೊಂದಿದ್ದೇವೆ. 66 ಕೋಟಿ ಡೋಸ್​ ಕೊವಿಶೀಲ್ಡ್ ಮತ್ತು ಕೊವ್ಯಾಕ್ಸಿನ್​​ನ್ನು ಕೇಂದ್ರ ಸರ್ಕಾರ ಆದೇಶಿಸಿದೆ. ಅದರೊಂದಿಗೆ 22 ಕೋಟಿ ಡೋಸ್​ ಲಸಿಕೆ ಖಾಸಗಿ ವಲಯಕ್ಕೆ ಸೇರಲಿದೆ. ಉಳಿದಂತೆ ಕೊವಿಡ್​ 19 ಮೂರನೇ ಅಲೆ ತಡೆಯಲು ಏನೇನು ಸಾಧ್ಯವೋ ಅದನ್ನೆಲ್ಲ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಕೊವಿಡ್​ 19 ಟಾಸ್ಕ್​ಫೋರ್ಸ್​ಗೆ ಹೇಳಿದ್ದಾರೆ ಎಂದೂ ತಿಳಿಸಿದ್ದಾರೆ.

ಕೊರೊನಾ ಮತ್ತು ಅದರ ರೂಪಾಂತರಿ ವೈರಾಣುಗಳಿಂದ ರಕ್ಷಿಸಿಕೊಳ್ಳಲು ಲಸಿಕೆ ಪಡೆಯುವುದೊಂದೇ ಮಾರ್ಗ ಎಂದು ವಿ.ಕೆ.ಪೌಲ್​ ಒತ್ತಿ ಹೇಳಿದ್ದಾರೆ. ಅಲ್ಲದೆ, ಈ ಬಗ್ಗೆ ಭಾರತೀಯ ವೈದ್ಯಕೀಯ ಮಂಡಳಿ ಸಂಶೋಧನೆ ಕೂಡ ನಡೆಸಿದೆ. ಐಸಿಎಂಆರ್​ ಪೊಲೀಸ್ ಸಿಬ್ಬಂದಿಯ ಮೇಲೆ ಅಧ್ಯಯನ ನಡೆಸಿತ್ತು. ಕೊರೊನಾ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಪೊಲೀಸರಲ್ಲಿ ಎರಡೂ ಡೋಸ್ ಲಸಿಕೆ ಪಡೆದ ಪೊಲೀಸರಿಗಿಂತ, ಲಸಿಕೆ ಪಡೆಯದ ಪೊಲೀಸರಿಗೇ ಸಾವಿನ ಅಪಾಯ ಜಾಸ್ತಿ ಇರುವುದು ಈ ಸಂಶೋಧನೆಯಿಂದ ಗೊತ್ತಾಗಿದೆ ಎಂದು ಪೌಲ್​ ತಿಳಿಸಿದ್ದಾರೆ.

ಇದನ್ನೂ ಓದಿ: ರಾಜೀನಾಮೆ ನೀಡುವ ಪ್ರಶ್ನೆ ಇಲ್ಲ; ಮತ್ತೆ ಆಗಸ್ಟ್ ಮೊದಲ ವಾರದಲ್ಲಿ ದೆಹಲಿಗೆ ಬರುತ್ತೇನೆ – ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ

The next 125 days are critical in the fight against COVID 19 Says Dr VK Poul

ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ಚಿನ್ನದ ನಿಧಿಯನ್ನು ಸರ್ಕಾರಕ್ಕೆ ನೀಡಿದ್ದೇ ತಪ್ಪಾಯ್ತಾ?
ಚಿನ್ನದ ನಿಧಿಯನ್ನು ಸರ್ಕಾರಕ್ಕೆ ನೀಡಿದ್ದೇ ತಪ್ಪಾಯ್ತಾ?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ಯಾವ ಕಾಲದ್ದು ಗೊತ್ತಾ?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ಯಾವ ಕಾಲದ್ದು ಗೊತ್ತಾ?
2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ