AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಸಕ್ರಿಯ ಕೊರೊನಾ ಪ್ರಕರಣಗಳು 3.05ಲಕ್ಷ; ಚೇತರಿಕೆ ಪ್ರಮಾಣದಲ್ಲಿ ಗಣನೀಯ ಏರಿಕೆ

ಹೊಸದಾಗಿ ಪತ್ತೆಯಾದ ಪ್ರಕರಣಕ್ಕಿಂತ, ಗುಣಮುಖರಾದವರ ಪ್ರಮಾಣವೇ ಹೆಚ್ಚಾಗಿದ್ದು ತುಸು ಸಮಾಧಾನ ತಂದಿದೆ.

ದೇಶದಲ್ಲಿ ಸಕ್ರಿಯ ಕೊರೊನಾ ಪ್ರಕರಣಗಳು 3.05ಲಕ್ಷ; ಚೇತರಿಕೆ ಪ್ರಮಾಣದಲ್ಲಿ ಗಣನೀಯ ಏರಿಕೆ
ಪ್ರಾತಿನಿಧಿಕ ಚಿತ್ರ
Lakshmi Hegde
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Dec 20, 2020 | 6:11 PM

Share

ದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದ ವಿವಿಧೆಡೆ 26,624 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ ಒಂದು ಕೋಟಿ ದಾಟಿದೆ (1,00,31,223). 29,690 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆಗಿದ್ದಾರೆ. ಹೊಸದಾಗಿ ಪತ್ತೆಯಾದ ಪ್ರಕರಣಕ್ಕಿಂತ, ಗುಣಮುಖರಾದವರ ಪ್ರಮಾಣವೇ ಹೆಚ್ಚಾಗಿದ್ದು ತುಸು ಸಮಾಧಾನ ತಂದಿದೆ.

ನಿನ್ನೆ (ಡಿ.19) ಒಟ್ಟು 25,152 ಹೊಸ ಕೇಸ್​​ಗಳು ಪತ್ತೆಯಾಗಿದ್ದವು. ಈ ಪ್ರಮಾಣಕ್ಕೆ ಹೋಲಿಸಿದರೆ ಇಂದು ಶೇ.5.8ರಷ್ಟು ಏರಿಕೆಯಾಗಿದೆ. ಆದರೆ ಕಳೆದ ಒಂದೂವರೆ ತಿಂಗಳಿಂದಲೂ ಪ್ರತಿದಿನ 40 ಸಾವಿರಕ್ಕಿಂತಲೂ ಕಡಿಮೆ ಪ್ರಕರಣಗಳು ಪತ್ತೆಯಾಗುತ್ತಿವೆ. ಸದ್ಯ ದೇಶದಲ್ಲಿ ಒಟ್ಟು ಕೊರೊನಾ ಸಕ್ರಿಯ ಪ್ರಕರಣ ಕೇವಲ 3,05,344 (3.05ಲಕ್ಷ) ಆಗಿದ್ದು, ಇದುವರೆಗೆ ಒಟ್ಟಾರೆ ಕೊವಿಡ್​-19 ಸೋಂಕಿನಿಂದ ಗುಣಮುಖರಾದವರು 95,80,402 ಮಂದಿ.

ಚೇತರಿಕೆ ಪ್ರಮಾಣ ಶೇ.95.51ಕ್ಕೆ ಏರಿಕೆಯಾಗಿದ್ದು ಒಂದು ಖುಷಿಯಾದರೆ ಇನ್ನೊಂದು ಕೊರೊನಾ ಸೋಂಕಿತರ ಸಂಖ್ಯೆ 1 ಕೋಟಿ ದಾಟಿದ್ದರೂ ಸಕ್ರಿಯ ಪ್ರಕರಣಗಳು ತೀವ್ರ ಇಳಿಮುಖವಾಗಿದ್ದು ಸಂತಸದ ಸಂಗತಿ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಇನ್ನು 24ಗಂಟೆಯಲ್ಲಿ 341 ಮಂದಿ ಕೊರೊನಾದಿಂದ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 1,45,477ಕ್ಕೆ ಏರಿಕೆಯಾಗಿದೆ.

ಹೊಸದಾಗಿ ಪತ್ತೆಯಾಗಿರುವ ಸೋಂಕಿನ ಪ್ರಕರಣದ ಪ್ರಮಾಣದಲ್ಲಿ ಶೇ.76.62ರಷ್ಟು 10ರಾಜ್ಯಗಳಿಗೆ ಸಂಬಂಧಪಟ್ಟಿದ್ದು, ಅವು ಹೀಗಿವೆ..

(ಚಿತ್ರಕೃಪೆ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ)

ಹಾಗೇ ಹೊಸದಾಗಿ ದಾಖಲಾದ ಮರಣದ ಪ್ರಮಾಣದಲ್ಲಿ ಶೇ.81.23ರಷ್ಟು ಈ 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದಿಂದ ವರದಿಯಾಗಿವೆ..

ಇಂದಿನ ಚೇತರಿಕೆ ಪ್ರಮಾಣದಲ್ಲಿ ಶೇ.74.68ರಷ್ಟು ಈ 10 ರಾಜ್ಯಗಳ ಪಾಲು..  

ಗಂಭೀರವಾಗಿ ಗಾಯಗೊಂಡು ಅರ್ಧಕ್ಕೆ ಬ್ಯಾಟಿಂಗ್‌ ನಿಲ್ಲಿಸಿದ ರಿಷಭ್ ಪಂತ್
ಗಂಭೀರವಾಗಿ ಗಾಯಗೊಂಡು ಅರ್ಧಕ್ಕೆ ಬ್ಯಾಟಿಂಗ್‌ ನಿಲ್ಲಿಸಿದ ರಿಷಭ್ ಪಂತ್
8 ವರ್ಷಗಳ ನಂತರ ವಿಕೆಟ್ ಪಡೆದ ಇಂಗ್ಲೆಂಡ್ ಬೌಲರ್
8 ವರ್ಷಗಳ ನಂತರ ವಿಕೆಟ್ ಪಡೆದ ಇಂಗ್ಲೆಂಡ್ ಬೌಲರ್
ಮೊದಲು ನನಗೆ ಬಾಸ್ ಅಂತಿದ್ರು, ಈಗ ಯಶ್​ಗೆ ಬಾಸ್ ಅಂತಾರೆ: ಪುಷ್ಪ
ಮೊದಲು ನನಗೆ ಬಾಸ್ ಅಂತಿದ್ರು, ಈಗ ಯಶ್​ಗೆ ಬಾಸ್ ಅಂತಾರೆ: ಪುಷ್ಪ
ಇಂದು ಅರಂಭಿಸಿದ್ದ ಪ್ರತಿಭಟನೆಯನ್ನು ವಾಪಸ್ಸು ಪಡೆದ ಸಣ್ಣ ವ್ಯಾಪಾರಿಗಳು
ಇಂದು ಅರಂಭಿಸಿದ್ದ ಪ್ರತಿಭಟನೆಯನ್ನು ವಾಪಸ್ಸು ಪಡೆದ ಸಣ್ಣ ವ್ಯಾಪಾರಿಗಳು
ಶೌಚಾಲಯದ ಸಿಬ್ಬಂದಿ ನೀಡುವ ಮಾಹಿತಿ ನಿಖರವಾಗಿಲ್ಲ, ಅಸ್ಪಷ್ಟ
ಶೌಚಾಲಯದ ಸಿಬ್ಬಂದಿ ನೀಡುವ ಮಾಹಿತಿ ನಿಖರವಾಗಿಲ್ಲ, ಅಸ್ಪಷ್ಟ
ಆಂಧ್ರದ ಅಮಲಾಪುರಂನಲ್ಲಿ 4 ಕೋಳಿಗಳನ್ನು ನುಂಗಿದ 6 ಅಡಿ ಉದ್ದದ ನಾಗರಹಾವು
ಆಂಧ್ರದ ಅಮಲಾಪುರಂನಲ್ಲಿ 4 ಕೋಳಿಗಳನ್ನು ನುಂಗಿದ 6 ಅಡಿ ಉದ್ದದ ನಾಗರಹಾವು
ಯಡಿಯೂರಪ್ಪ, ವಿಜಯೇಂದ್ರ ರೈತನ ಮಕ್ಕಳಾದ್ರೆ ನಾವು ಎಮ್ಮೆಯ ಮಕ್ಕಳೇ? ಯತ್ನಾಳ್
ಯಡಿಯೂರಪ್ಪ, ವಿಜಯೇಂದ್ರ ರೈತನ ಮಕ್ಕಳಾದ್ರೆ ನಾವು ಎಮ್ಮೆಯ ಮಕ್ಕಳೇ? ಯತ್ನಾಳ್
ಸಣ್ಣ ವ್ಯಾಪಾರಿಗಳಿಂದ ತೆರಿಗೆ ವಸೂಲಿ ಮಾಡಲ್ಲ: ಸಿಎಂ ಸ್ಪಷ್ಟನೆ
ಸಣ್ಣ ವ್ಯಾಪಾರಿಗಳಿಂದ ತೆರಿಗೆ ವಸೂಲಿ ಮಾಡಲ್ಲ: ಸಿಎಂ ಸ್ಪಷ್ಟನೆ
ಫೋಟೋ ತೆಗೆಸಿಕೊಂಡವರ ಹಿನ್ನೆಲೆ ನನಗೆ ಹೇಗೆ ಗೊತ್ತಾಗುತ್ತದೆ: ಬಸವರಾಜ
ಫೋಟೋ ತೆಗೆಸಿಕೊಂಡವರ ಹಿನ್ನೆಲೆ ನನಗೆ ಹೇಗೆ ಗೊತ್ತಾಗುತ್ತದೆ: ಬಸವರಾಜ
‘ಕೊತ್ತಲವಾಡಿ’ ಬಜೆಟ್ ಎಷ್ಟು? ಕಾಟನ್ ಸೀರೆ ಉದಾಹರಣೆ ಕೊಟ್ಟ ಯಶ್ ತಾಯಿ
‘ಕೊತ್ತಲವಾಡಿ’ ಬಜೆಟ್ ಎಷ್ಟು? ಕಾಟನ್ ಸೀರೆ ಉದಾಹರಣೆ ಕೊಟ್ಟ ಯಶ್ ತಾಯಿ