AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಟುಂಬದ ಒಪ್ಪಿಗೆ ಇದ್ದರೂ ಅಂತರ್​​ಧರ್ಮೀಯ ವಿವಾಹಕ್ಕೆ ಪೊಲೀಸರ ತಡೆ

ಹಿಂದೂ ಯುವ ವಾಹಿನಿಯ ಪ್ರತಿನಿಧಿಗಳು ಮದುವೆಗೆ ಆಕ್ಷೇಪ ವ್ಯಕ್ತಪಡಿಸಿದ ಕಾರಣ ಮದುವೆ ನಿಲ್ಲಿಸಿದ್ದೇವೆ. ಹೊಸ ಮತಾಂತರ ಕಾನೂನಿನ ಪ್ರಕಾರ, ಜಿಲ್ಲಾಧಿಕಾರಿಗೆ ಅನುಮತಿ ಅಗತ್ಯ.

ಕುಟುಂಬದ ಒಪ್ಪಿಗೆ ಇದ್ದರೂ ಅಂತರ್​​ಧರ್ಮೀಯ ವಿವಾಹಕ್ಕೆ ಪೊಲೀಸರ ತಡೆ
ಸಾಂದರ್ಭಿಕ ಚಿತ್ರ
shruti hegde
| Edited By: |

Updated on: Dec 04, 2020 | 3:23 PM

Share

ಲಖನೌ: ಎರಡೂ ಕುಟುಂಬಗಳ ಒಪ್ಪಿಗೆಯಿಂದ ನಡೆಯುತ್ತಿದ್ದ ಅಂತರ್​ಧರ್ಮೀಯ ವಿವಾಹವನ್ನು ಉತ್ತರ ಪ್ರದೇಶ ಪೊಲೀಸರು ತಡೆದಿದ್ದಾರೆ. ನೂತನ ಮತಾಂತರ ನಿಷೇಧ ಕಾನೂನಿನ ಅನ್ವಯ ಇಂಥ ಮದುವೆಗಳಿಗೆ ಜಿಲ್ಲಾಧಿಕಾರಿ ಅನುಮತಿ ಅಗತ್ಯ ಎಂದು ಹೇಳಿದ್ದಾರೆ.

ಈ ಮದುವೆಯ ವಧು ಹಿಂದೂ ಧರ್ಮಕ್ಕೆ ಸೇರಿದವರು, ವರ ಮುಸ್ಲಿಂ ಧರ್ಮೀಯ. ಯಾರ ಒತ್ತಡವೂ ಇಲ್ಲದೆ, ಹಿಂದೂ ಸಂಪ್ರದಾಯದಂತೆ ಮದುವೆ ನಡೆಯುತ್ತಿತ್ತು ಎಂದು ಕುಟುಂಬಗಳ ಸದಸ್ಯರು ಪೊಲೀಸರಿಗೆ ಮನವರಿಕೆ ಮಾಡಿಕೊಡಲು ಯತ್ನಿಸಿದರು.

ವಿವಾಹವು ಲಖನೌ ನಗರದ ದುಡಾ ಕಾಲೋನಿಯಲ್ಲಿ ಬುಧವಾರ ನಡೆಯಬೇಕಿತ್ತು. ಮದುವೆಯ ಅಂತಿಮ ಸಿದ್ಧತೆಗಳು ನಡೆಯುತ್ತಿದ್ದಂತೆ ಪ್ಯಾರಾ ಪೊಲೀಸ್ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ, ಹೊಸದಾಗಿ ಜಾರಿಯಾಗಿರುವ ಕಾನೂನಿನ ಬಗ್ಗೆ ಮಾಹಿತಿ ನೀಡಿದರು. ಇಂಥ ಮದುವೆಗಳಿಗೆ ಜಿಲ್ಲಾಧಿಕಾರಿ ಅನುಮತಿ ಅಗತ್ಯ ಎಂದು ಪೊಲೀಸರು ವಧು-ವರರ ಕುಟುಂಬಗಳಿಗೆ ತಿಳಿಹೇಳಿದರು. ಎರಡೂ ಕುಟುಂಬಗಳು ಜಿಲ್ಲಾಧಿಕಾರಿ ಅನುಮತಿ ಪಡೆದ ನಂತರವೇ ವಿವಾಹ ವಿಧಿವಿಧಾನ ಪೂರ್ಣಗೊಳಿಸಲು ಒಪ್ಪಿಕೊಂಡರು.

ಪರಸ್ಪರ ಪ್ರೀತಿಸುತ್ತಿದ್ದ ಯುವಕ-ಯುವತಿ ಯಾರ ಬಲವಂತವೂ ಇಲ್ಲದೆ ಮದುವೆಯಾಗುತ್ತಿದ್ದರು. ಹಿಂದೂ ಯುವ ವಾಹಿನಿಯ ಪ್ರತಿನಿಧಿಗಳು ಮದುವೆಗೆ ಆಕ್ಷೇಪ ವ್ಯಕ್ತಪಡಿಸಿದ ಕಾರಣ ಮದುವೆ ನಿಲ್ಲಿಸಿದ್ದೇವೆ. ಹೊಸ ಮತಾಂತರ ಕಾನೂನಿನ ಪ್ರಕಾರ, ಜಿಲ್ಲಾಧಿಕಾರಿಗೆ ಅನುಮತಿ ನೀಡಿದರೆ ಮಾತ್ರ ಅಂತರಧರ್ಮೀಯ ವಿವಾಹಕ್ಕೆ ಅವಕಾಶ ಸಿಗುತ್ತದೆ ಪೊಲೀಸ್ ಅಧಿಕಾರಿ ತ್ರಿಲೋಕಿ ಸಿಂಗ್ ಹೇಳಿದರು.

ವಧು-ವರರ ಕುಟುಂಬಗಳಿಗೆ ಮತಾಂತರ ನಿಷೇಧ ಸುಗ್ರಿವಾಜ್ಞೆಯ ಪ್ರತಿಯನ್ನು ಹಸ್ತಾಂತರಿಸಲಾಗಿದೆ. ಜಿಲ್ಲಾಧಿಕಾರಿಗಳ ಅನುಮತಿ ಪಡೆಯುವವರೆಗೆ ಅವರು ಮದುವೆಯಾಗಲು ಸಾಧ್ಯವಿಲ್ಲ. ಎರಡೂ ಕುಟುಂಬಗಳಿಗೆ ಅವರ ವಕೀಲರ ಸಮ್ಮುಖದಲ್ಲಿ ನಿಬಂಧನೆಗಳ ಬಗ್ಗೆ ತಿಳಿ ಹೇಳಲಾಗಿದೆ. ಜಿಲ್ಲಾಧಿಕಾರಿಯಿಂದ ಅನುಮತಿ ಪಡೆದು ನಂತರವೇ ಮದುವೆ ಮಾಡುವ ಬಗ್ಗೆ ಅವರಿಂದ ಪತ್ರ ಪಡೆದುಕೊಳ್ಳಲಾಗಿದೆ ಎಂದು ಲಖನೌ ಡಿಸಿಪಿ ರವಿಕುಮಾರ್ ಹೇಳಿದರು.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ