AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nepal Prime Minister: 4 ದಿನಗಳ ಭಾರತ ಪ್ರವಾಸ ಕೈಗೊಳ್ಳಲಿರುವ ನೇಪಾಳ ಪ್ರಧಾನಿ, ಉಜ್ಜಯಿನಿ, ಇಂದೋರ್​​ಗೆ ಭೇಟಿ

ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಲ್ ಅಕಾ 'ಪ್ರಚಂಡ' ಅವರು ಭಾರತಕ್ಕೆ ಭೇಟಿ ನೀಡಿದ್ದು, ಮುಂದಿನ 4 ದಿನಗಳ ಕಾಲ ಭಾರತದ ಅನೇಕ ಕಡೆ ಪ್ರವಾಸ ಕೈಗೊಳ್ಳಲಿದ್ದಾರೆ.

Nepal Prime Minister: 4 ದಿನಗಳ ಭಾರತ ಪ್ರವಾಸ ಕೈಗೊಳ್ಳಲಿರುವ ನೇಪಾಳ ಪ್ರಧಾನಿ, ಉಜ್ಜಯಿನಿ, ಇಂದೋರ್​​ಗೆ ಭೇಟಿ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: May 27, 2023 | 2:11 PM

Share

ದೆಹಲಿ: ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಲ್ ಅಕಾ ‘ಪ್ರಚಂಡ’ ಅವರು ಭಾರತಕ್ಕೆ ಭೇಟಿ ನೀಡಿದ್ದು, ಮುಂದಿನ 4 ದಿನಗಳ ಕಾಲ ಭಾರತದ ಅನೇಕ ಕಡೆ ಪ್ರವಾಸ ಕೈಗೊಳ್ಳಲಿದ್ದಾರೆ. ಇದೀಗ ಪ್ರವಾಸದ ಭಾಗವಾಗಿ ಮಧ್ಯಪ್ರದೇಶದ ಉಜ್ಜಯಿನಿ ಮತ್ತು ಇಂದೋರ್‌ಗೆ ಭೇಟಿ ನೀಡಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಅಧಿಕಾರ ವಹಿಸಿಕೊಂಡ ಪಿಎಂ ದಹಲ್ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನಕ್ಕೆ ಸಂಬಂಧಿಸಿದಂತೆ ಮೇ 31ರಿಂದ ಜೂನ್ 3ರವರೆಗೆ ತಮ್ಮ ಭಾರತ ಪ್ರವಾಸವನ್ನು ಪ್ರಾರಂಭಿಸಲಿದ್ದಾರೆ. ಈ ಸಮಯದಲ್ಲಿ ನೇಪಾಳದ ಪ್ರಧಾನಿ ಅವರು ಅಧ್ಯಕ್ಷ ದ್ರೌಪದಿ ಮುರ್ಮು ಮತ್ತು ಉಪಾಧ್ಯಕ್ಷ ಜಗದೀಪ್ ಧಂಖರ್ ಅವರನ್ನು ಭೇಟಿ ಮಾಡಲಿದ್ದಾರೆ. ಈಗಾಗಲೇ ಪ್ರವಾಸಕ್ಕೆ ಎಲ್ಲ ಸಿದ್ಧತೆಗಳನ್ನು ನಡೆಸಿದ್ದು, ನೇಪಾಳದ ಪ್ರಧಾನಿ ತಮ್ಮ ಭೇಟಿಯ ಭಾಗವಾಗಿ ಉಜ್ಜಯಿನಿ ಮತ್ತು ಇಂದೋರ್‌ಗೆ ಭೇಟಿ ನೀಡಲಿದ್ದಾರೆ ಎಂದು MEA ಅಧಿಕೃತ ಪ್ರಕಟಣೆ ತಿಳಿಸಿದೆ.

ನೇಪಾಳ ಪ್ರಧಾನಿ ದಹಲ್ ಅವರ ಭೇಟಿಯ ಸಂದರ್ಭದಲ್ಲಿ ಉನ್ನತ ಮಟ್ಟದ ನಿಯೋಗ ಕೂಡ ಅವರ ಜೊತೆಗಿರುತ್ತದೆ. ಭಾರತ ಮತ್ತು ನೇಪಾಳ ನಡುವಿನ ದ್ವಿಪಕ್ಷೀಯ ಸಹಭಾಗಿತ್ವದ ವಿವಿಧ ಕ್ಷೇತ್ರಗಳ ಕುರಿತು ಚರ್ಚಿಸಲು ಪ್ರಧಾನಿ ದಹಲ್ ಅವರು ಪ್ರಧಾನಿ ಮೋದಿಯವರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಇತರ ಭಾರತೀಯ ನಾಯಕರು ನೇಪಾಳದ ಪ್ರಧಾನ ಮಂತ್ರಿಯವರನ್ನು ಭೇಟಿ ಮಾಡಲಿದ್ದಾರೆ. ಈ ಭೇಟಿಯು ಭಾರತ ಮತ್ತು ನೇಪಾಳದ ನಡುವಿನ ಉನ್ನತ ಮಟ್ಟದ ವಿನಿಮಯಕ್ಕೆ ಸಂಬಂಧಿಸಿದಂತೆ ‘ನೆರೆಹೊರೆಗೆ ಮೊದಲು ಸಹಕಾರ’ ನೀತಿಯ ಒಂದು ಭಾಗವಾಗಿದೆ.

ಇದನ್ನೂ ಓದಿ:Nepal Citizenship: ಪೌರತ್ವ ಹೋರಾಟದಲ್ಲಿ ನೇಪಾಳದ ಗೃಹ ಸಚಿವರಿಗೆ ಸೋಲು, ಶಾಸಕ ಸ್ಥಾನ ರದ್ದು ಮಾಡಿದ ಸುಪ್ರೀಂ

ಎರಡೂ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳು ಕಳೆದ ಕೆಲವು ವರ್ಷಗಳಲ್ಲಿ ಸಹಕಾರದ ಎಲ್ಲಾ ಕ್ಷೇತ್ರಗಳಲ್ಲಿ ಗಮನಾರ್ಹವಾಗಿ ಬಲಗೊಂಡಿವೆ. ಈ ಭೇಟಿಯು ಎರಡೂ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಪಾಲುದಾರಿಕೆಯನ್ನು ವೇಗಗೊಳಿಸಲು ಸಹಕಾರಿಯಾಗಿದೆ ಎಂದು ಹೇಳಲಾಗಿದೆ.

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!