AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nepal Prime Minister: 4 ದಿನಗಳ ಭಾರತ ಪ್ರವಾಸ ಕೈಗೊಳ್ಳಲಿರುವ ನೇಪಾಳ ಪ್ರಧಾನಿ, ಉಜ್ಜಯಿನಿ, ಇಂದೋರ್​​ಗೆ ಭೇಟಿ

ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಲ್ ಅಕಾ 'ಪ್ರಚಂಡ' ಅವರು ಭಾರತಕ್ಕೆ ಭೇಟಿ ನೀಡಿದ್ದು, ಮುಂದಿನ 4 ದಿನಗಳ ಕಾಲ ಭಾರತದ ಅನೇಕ ಕಡೆ ಪ್ರವಾಸ ಕೈಗೊಳ್ಳಲಿದ್ದಾರೆ.

Nepal Prime Minister: 4 ದಿನಗಳ ಭಾರತ ಪ್ರವಾಸ ಕೈಗೊಳ್ಳಲಿರುವ ನೇಪಾಳ ಪ್ರಧಾನಿ, ಉಜ್ಜಯಿನಿ, ಇಂದೋರ್​​ಗೆ ಭೇಟಿ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on: May 27, 2023 | 2:11 PM

ದೆಹಲಿ: ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಲ್ ಅಕಾ ‘ಪ್ರಚಂಡ’ ಅವರು ಭಾರತಕ್ಕೆ ಭೇಟಿ ನೀಡಿದ್ದು, ಮುಂದಿನ 4 ದಿನಗಳ ಕಾಲ ಭಾರತದ ಅನೇಕ ಕಡೆ ಪ್ರವಾಸ ಕೈಗೊಳ್ಳಲಿದ್ದಾರೆ. ಇದೀಗ ಪ್ರವಾಸದ ಭಾಗವಾಗಿ ಮಧ್ಯಪ್ರದೇಶದ ಉಜ್ಜಯಿನಿ ಮತ್ತು ಇಂದೋರ್‌ಗೆ ಭೇಟಿ ನೀಡಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಅಧಿಕಾರ ವಹಿಸಿಕೊಂಡ ಪಿಎಂ ದಹಲ್ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನಕ್ಕೆ ಸಂಬಂಧಿಸಿದಂತೆ ಮೇ 31ರಿಂದ ಜೂನ್ 3ರವರೆಗೆ ತಮ್ಮ ಭಾರತ ಪ್ರವಾಸವನ್ನು ಪ್ರಾರಂಭಿಸಲಿದ್ದಾರೆ. ಈ ಸಮಯದಲ್ಲಿ ನೇಪಾಳದ ಪ್ರಧಾನಿ ಅವರು ಅಧ್ಯಕ್ಷ ದ್ರೌಪದಿ ಮುರ್ಮು ಮತ್ತು ಉಪಾಧ್ಯಕ್ಷ ಜಗದೀಪ್ ಧಂಖರ್ ಅವರನ್ನು ಭೇಟಿ ಮಾಡಲಿದ್ದಾರೆ. ಈಗಾಗಲೇ ಪ್ರವಾಸಕ್ಕೆ ಎಲ್ಲ ಸಿದ್ಧತೆಗಳನ್ನು ನಡೆಸಿದ್ದು, ನೇಪಾಳದ ಪ್ರಧಾನಿ ತಮ್ಮ ಭೇಟಿಯ ಭಾಗವಾಗಿ ಉಜ್ಜಯಿನಿ ಮತ್ತು ಇಂದೋರ್‌ಗೆ ಭೇಟಿ ನೀಡಲಿದ್ದಾರೆ ಎಂದು MEA ಅಧಿಕೃತ ಪ್ರಕಟಣೆ ತಿಳಿಸಿದೆ.

ನೇಪಾಳ ಪ್ರಧಾನಿ ದಹಲ್ ಅವರ ಭೇಟಿಯ ಸಂದರ್ಭದಲ್ಲಿ ಉನ್ನತ ಮಟ್ಟದ ನಿಯೋಗ ಕೂಡ ಅವರ ಜೊತೆಗಿರುತ್ತದೆ. ಭಾರತ ಮತ್ತು ನೇಪಾಳ ನಡುವಿನ ದ್ವಿಪಕ್ಷೀಯ ಸಹಭಾಗಿತ್ವದ ವಿವಿಧ ಕ್ಷೇತ್ರಗಳ ಕುರಿತು ಚರ್ಚಿಸಲು ಪ್ರಧಾನಿ ದಹಲ್ ಅವರು ಪ್ರಧಾನಿ ಮೋದಿಯವರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಇತರ ಭಾರತೀಯ ನಾಯಕರು ನೇಪಾಳದ ಪ್ರಧಾನ ಮಂತ್ರಿಯವರನ್ನು ಭೇಟಿ ಮಾಡಲಿದ್ದಾರೆ. ಈ ಭೇಟಿಯು ಭಾರತ ಮತ್ತು ನೇಪಾಳದ ನಡುವಿನ ಉನ್ನತ ಮಟ್ಟದ ವಿನಿಮಯಕ್ಕೆ ಸಂಬಂಧಿಸಿದಂತೆ ‘ನೆರೆಹೊರೆಗೆ ಮೊದಲು ಸಹಕಾರ’ ನೀತಿಯ ಒಂದು ಭಾಗವಾಗಿದೆ.

ಇದನ್ನೂ ಓದಿ:Nepal Citizenship: ಪೌರತ್ವ ಹೋರಾಟದಲ್ಲಿ ನೇಪಾಳದ ಗೃಹ ಸಚಿವರಿಗೆ ಸೋಲು, ಶಾಸಕ ಸ್ಥಾನ ರದ್ದು ಮಾಡಿದ ಸುಪ್ರೀಂ

ಎರಡೂ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳು ಕಳೆದ ಕೆಲವು ವರ್ಷಗಳಲ್ಲಿ ಸಹಕಾರದ ಎಲ್ಲಾ ಕ್ಷೇತ್ರಗಳಲ್ಲಿ ಗಮನಾರ್ಹವಾಗಿ ಬಲಗೊಂಡಿವೆ. ಈ ಭೇಟಿಯು ಎರಡೂ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಪಾಲುದಾರಿಕೆಯನ್ನು ವೇಗಗೊಳಿಸಲು ಸಹಕಾರಿಯಾಗಿದೆ ಎಂದು ಹೇಳಲಾಗಿದೆ.

5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ