AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಹಲ್ಗಾಮ್‌ ದಾಳಿ ಹೊಣೆಹೊತ್ತ TRF: ಕನ್ನಡಿಗನ ಬಲಿಪಡೆದ ಈ ಉಗ್ರ ಸಂಘಟನೆ ಹಿನ್ನೆಲೆ ಇಲ್ಲಿದೆ

Pahalgam Terror Attack: ಜಮ್ಮುಕಾಶ್ಮೀರದ ಅನಂತ​ನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಇಂದು (ಏಪ್ರಿಲ್ 22) ಟೆರರ್​ ಅಟ್ಯಾಕ್ ನಡೆದಿದೆ. ಪ್ರವಾಸಿಗರನ್ನು ಗುರಿಯಾಗಿಸಿಕೊಂಡಢ ಉಗ್ರರು ದಾಳಿ ಮಾಡಿದ್ದು, ಸದ್ಯ ಓರ್ವ ಕನ್ನಡಿಗ ಸೇರಿದಂತೆ ದಾಳಿಯಲ್ಲಿ 20ಕ್ಕೂ ಹೆಚ್ಚು ಪ್ರವಾಸಿಗರು ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಇನ್ನು ಲಷ್ಕರ್‌ ಉಗ್ರ ಸಂಘಟನೆಯ ದಿ ರೆಸಿಸ್ಟೆನ್ಸ್ ಫ್ರಂಟ್ (TRF) ಈ ದಾಳಿಯ ಹೊಣೆ ಹೊತ್ತುಕೊಂಡಿದೆ.

ಪಹಲ್ಗಾಮ್‌ ದಾಳಿ ಹೊಣೆಹೊತ್ತ TRF: ಕನ್ನಡಿಗನ ಬಲಿಪಡೆದ ಈ ಉಗ್ರ ಸಂಘಟನೆ ಹಿನ್ನೆಲೆ ಇಲ್ಲಿದೆ
Trf
ರಮೇಶ್ ಬಿ. ಜವಳಗೇರಾ
|

Updated on:Apr 22, 2025 | 8:26 PM

Share

ಶ್ರೀನಗರ, (ಏಪ್ರಿಲ್ 22): ಜಮ್ಮುಕಾಶ್ಮೀರದ (jammu kashmir) ಅನಂತ​ನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ (Pahalgam) ಇಂದು (ಏಪ್ರಿಲ್ 22) ಪ್ರವಾಸಿಗರ ಮೇಲೆ ಟೆರರ್​ ಅಟ್ಯಾಕ್ ನಡೆದಿದೆ. ಹನಿಮೂನ್​​ಗೆ ಹೋದವರ ಮೇಲೂ ಭಯೋತ್ಪಾದಕರು ಮನಸೋ ಇಚ್ಚೆ ಗುಂಡಿನ ದಾಳಿ ಮಾಡಿದ್ದಾರೆ. ಘಟನೆಯಲ್ಲಿ ಈ ವರೆಗೆ ಬಂದ ಮಾಹಿತಿ ಪ್ರಕಾರ ಓರ್ವ ಕನ್ನಡಿಗ ಸೇರಿದಂತೆ 20ಕ್ಕೂ ಹೆಚ್ಚು ಪ್ರವಾಸಿಗರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಲಷ್ಕರ್‌ ಉಗ್ರ ಸಂಘಟನೆಯ ದಿ ರೆಸಿಸ್ಟೆನ್ಸ್ ಫ್ರಂಟ್ (TRF) ಈ ದಾಳಿಯ ಹೊಣೆ ಹೊತ್ತುಕೊಂಡಿದೆ. ಲಷ್ಕರ್-ಎ-ತೊಯ್ಬಾದ ಅಂಗ ಎಂದು ಕರೆಯಲ್ಪಡುವ ಟಿಆರ್​​ಎಫ್ ಅಥವಾ ದಿ ರೆಸಿಸ್ಟೆನ್ಸ್ ಫೋರ್ಸ್ (The Resistance Front) ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿ ರದ್ದು ಬಳಿಕ ಈ ದಿ ರೆಸಿಸ್ಟೆನ್ಸ್ ಫ್ರಂಟ್ ಅಸ್ತಿತ್ವಕ್ಕೆ ಬಂದಿದೆ. ಈ ಭಯೋತ್ಪಾದಕ ಸಂಘಟನೆ ಯಾವುದು? ಏನು? ಎತ್ತ ಎನ್ನುವ ವಿವರ ಈ ಕೆಳಗಿನಂತಿದೆ.

ಟಿಆರ್​​ಎಫ್ ಉಗ್ರ ಸಂಘಟನೆ ಹಿನ್ನೆಲೆ

2023ರ ಸೆಪ್ಟೆಂಬರ್​​ನಲ್ಲಿ ಜಂಟಿ ಸೇನಾ-ಪೊಲೀಸ್ ತಂಡದ ಮೇಲಿ ಇದೇ ಲಷ್ಕರ್‌ನ ರೆಸಿಸ್ಟೆನ್ಸ್ ಫೋರ್ಸ್ ದಾಳಿ ಮಾಡಿತ್ತು.ಈ ಭಯೋತ್ಪಾದಕ ಸಂಘಟನೆಯು 2019 ರಲ್ಲಿ ಅಸ್ತಿತ್ವಕ್ಕೆ ಬಂದಿದ್ದು, ಇದು ಪಾಕಿಸ್ತಾನದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ ಅಂಗ ಸಂಘಟನೆಯಾಗಿದೆ. ಈ ಸಂಘಟನೆಯು ಯುವಕರನ್ನು ದಾರಿತಪ್ಪಿಸಿ ಭಯೋತ್ಪಾದಕ ಸಂಘಟನೆಗಳಲ್ಲಿ ತೊಡಗಿಸುವ ಕೆಲಸ ಮಾಡುತ್ತಾ ಬಂದಿದೆ.

ಸಾಜಿದ್ ಜಟ್, ಸಜ್ಜದ್ ಗುಲ್ ಮತ್ತು ಸಲೀಂ ರೆಹಮಾನಿ ಈ ಸಂಘಟನೆಯ ಪ್ರಮುಖರಾಗಿದ್ದಾರೆ. ಇವರೆಲ್ಲರೂ ಎಲ್‌ಇಟಿ ಜೊತೆ ಸಂಬಂಧ ಹೊಂದಿದ್ದಾರೆ. ಪ್ರಾರಂಭದಿಂದಲೂ, ಲಷ್ಕರ್-ಎ-ತೈಬಾ (ಎಲ್‌ಇಟಿ) ಯ ಪ್ರತಿನಿಧಿ ಎಂದು ಪರಿಗಣಿಸಲಾದ ಟಿಆರ್‌ಎಫ್, ಪ್ರವಾಸಿಗರು, ಅಲ್ಪಸಂಖ್ಯಾತ ಕಾಶ್ಮೀರಿ ಪಂಡಿತರು ಮತ್ತು ಕಣಿವೆಯ ವಲಸೆ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ಹಲವಾರು ಭಯೋತ್ಪಾದಕ ದಾಳಿಗಳಲ್ಲಿ ಭಾಗಿಯಾಗಿದೆ. ಇದೀಗ ಅಮರನಾಥ ಯಾತ್ರೆ ಜುಲೈನಲ್ಲಿ ಪ್ರಾರಂಭವಾಗುವ ಸಮಯದಲ್ಲೇ ಈ ದಾಳಿ ಕೃತ್ಯ ಎಸಗಿದೆ.

ಇದನ್ನೂ ಓದಿ
Image
ಪಹಲ್ಗಾಮ್​ನಲ್ಲಿ ದಾಳಿ ನಡೆಸಿದವರನ್ನು ಸುಮ್ಮನೆ ಬಿಡೋ ಮಾತೇ ಇಲ್ಲ; ಅಮಿತ್ ಶಾ
Image
ಕಾಶ್ಮೀರದಲ್ಲಿ ಉಗ್ರರ ಗುಂಡಿನ ದಾಳಿಗೆ ಶಿವಮೊಗ್ಗ ಉದ್ಯಮಿ ಬಲಿ
Image
ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ; ಶಿವಮೊಗ್ಗದ ಪ್ರವಾಸಿಗ ಸಾವು
Image
TRF Terrorist organization: ಟಿಆರ್​​ಎಫ್ ಸಂಘಟನೆಯನ್ನು ಉಗ್ರ ಸಂಘಟನೆ ಎಂದು ಘೋಷಿಸಿದ ಕೇಂದ್ರ ಸರ್ಕಾರ

ಇದನ್ನೂ ಓದಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ; ಶಿವಮೊಗ್ಗದ ಪ್ರವಾಸಿಗ ಸಾವು

ಈ ಸಂಘಟನೆಯು ಮತ್ತಷ್ಟು ಭಯೋತ್ದಾದಕ ಚಟುವಟಿಕೆಗಳನ್ನು ನಡೆಸುವುದಕ್ಕಾಗಿ ಆನ್​ಲೈನ್​ ಮಾಧ್ಯಮವನ್ನು ಬಳಸಿಕೊಂಡು ಯುವಕರನ್ನು ನೇಮಕ ಮಾಡಿಕೊಳ್ಳುತ್ತಿದೆ. ಜಮ್ಮು ಮತ್ತು ಕಾಶ್ಮೀರದ ಜನರನ್ನು ಅವರ ದೇಶದ ವಿರುದ್ಧ ಭಯೋತ್ಪಾದಕ ಸಂಘಟನೆಗಳಿಗೆ ಸೇರಲು ಪ್ರಚೋದಿಸುವ ಕೆಲಸವನ್ನು ಟಿಆರ್​​ಎಫ್​ ಸಾಮಾಜಿಕ ಮಾಧ್ಯಮಗಳ ಮೂಲಕ ಮಾಡುತ್ತಿದೆ.

ಭದ್ರತಾ ಪಡೆ ಸಿಬ್ಬಂದಿ ಮತ್ತು ಜಮ್ಮು ಕಾಶ್ಮೀರದ ಅಮಾಯಕ ನಾಗರಿಕರ ಹತ್ಯೆ ಯೋಜನೆ, ನಿಷೇಧಿತ ಭಯೋತ್ಪಾದಕ ಸಂಘಟನೆಗಳನ್ನು ಬೆಂಬಲಿಸುವುದಕ್ಕೆ ಶಸ್ತ್ರಾಸ್ತ್ರಗಳ ಸಂಗ್ರಹ ಮತ್ತು ಸಾಗಣೆ ಸೇರಿದಂತೆ ಮುಂತಾದ ವಿಷಯಗಳಲ್ಲಿ ಈ ಟಿಆರ್​​ಎಫ್​ ಸದಸ್ಯರು ಮತ್ತು ಸಹಚರರು ಕೆಲಸ ಭಾಗಿಯಾಗಿದ್ದಾರೆ. ಈ ಸಂಬಂಧ ಹಲವು ಪ್ರಕರಣಗಳಿವೆ ಎಂದು ಭಾರತ ಗೃಹ ಇಲಾಖೆ ತಿಳಿಸಿದೆ.

ಟಿಆರ್​​ಎಫ್​ ಉಗ್ರ ಸಂಘಟನೆ ಎಂದು ಘೋಷಿಸಿದ್ದ ಕೇಂದ್ರ

ಪಾಕಿಸ್ತಾನ ಮೂಲದ ಟಿಆರ್​​ಎಫ್ ಸಂಘಟನೆಯನ್ನು ಉಗ್ರ ಸಂಘಟನೆ ಎಂದು 2023ರಲ್ಲೇ ಕೇಂದ್ರ ಸರ್ಕಾರ ಘೋಷಿಸಿತ್ತು. ಮಾತ್ರವಲ್ಲದೆ, ಈ ಸಂಘಟನೆಯ ಕಮಾಂಡರ್ ಶೇಖ್ ಸಜ್ಜದ್ ಗುಲ್‌ನನ್ನು ಉಗ್ರನೆಂದು ಕೇಂದ್ರ ಗೃಹ ಇಲಾಖೆ ಘೋಷಿಸಿತ್ತು. ಗೃಹ ವ್ಯವಹಾರಗಳ ಸಚಿವಾಲಯ (MHA) ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ (Lashkar-e-Taiba) ನಿಷೇಧಿತ ಭಯೋತ್ಪಾದಕ ಸಂಘಟನೆಯ ಶಾಖೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (TRF) ಮತ್ತು ಅದರ ಅಡಿ ಇರುವ ಇತರೆ ಸಂಘಟನೆಗಳನ್ನು ನಿಷೇಧಿಸಿತ್ತು. ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ 1967 ರ ಅಡಿಯಲ್ಲಿ ಸಚಿವಾಲಯವು ಅವುಗಳನ್ನು ಭಯೋತ್ಪಾದಕ ಸಂಘಟನೆಗಳೆಂದು ಘೋಷಿಸಿತ್ತು. ಕಾಶ್ಮೀರ ಪಂಡಿತರ ಹತ್ಯೆಗೆ ಟಿಆರ್​ಎಫ್​ ಉಗ್ರ ಸಂಘಟನೆ ಬೆದರಿಕೆ ಹಾಕಿತ್ತು.ಈ ಸಂಘಟನೆ ಒಂದಲ್ಲ ಒಂದು ದುಷ್ಕೃತ್ಯ ಎಸಗುತ್ತಲೇ ಇದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:07 pm, Tue, 22 April 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ