AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವೇಶ ನಿರಾಕರಿಸಿದ್ದಕ್ಕೆ ತಿರುಪತಿ ಏರ್​ಪೋರ್ಟ್​ಗೆ ನೀರು ಪೂರೈಕೆ ಸ್ಥಗಿತಗೊಳಿಸಿದ ಆಂಧ್ರ ಶಾಸಕನ ಪುತ್ರ?!-ಆರೋಪಕ್ಕಿಲ್ಲ ಪ್ರತಿಕ್ರಿಯೆ

ವೈಎಸ್​ಆರ್​ಸಿಪಿ ಮುಖಂಡರು ರೇಣಿಗುಂಟಾ ಏರ್​ಪೋರ್ಟ್ ಅಧಿಕಾರಿಗಳ ವಿರುದ್ಧ ಕಿಡಿಕಾರುತ್ತಿದ್ದಾರೆ. ವಿಮಾನ ನಿಲ್ದಾಣದ ಅಧಿಕಾರಿಗಳು ತುಂಬ ಅಹಂಕಾರದಿಂದ ವರ್ತಿಸುತ್ತಿದ್ದಾರೆ. ಯಾವುದೇ ಶಿಷ್ಟಾಚಾರಗಳನ್ನೂ ಪಾಲನೆ ಮಾಡುತ್ತಿಲ್ಲ ಎಂದಿದ್ದಾರೆ.

ಪ್ರವೇಶ ನಿರಾಕರಿಸಿದ್ದಕ್ಕೆ ತಿರುಪತಿ ಏರ್​ಪೋರ್ಟ್​ಗೆ ನೀರು ಪೂರೈಕೆ ಸ್ಥಗಿತಗೊಳಿಸಿದ ಆಂಧ್ರ ಶಾಸಕನ ಪುತ್ರ?!-ಆರೋಪಕ್ಕಿಲ್ಲ ಪ್ರತಿಕ್ರಿಯೆ
ತಿರುಪತಿ ಏರ್​ಪೋರ್ಟ್
TV9 Web
| Edited By: |

Updated on: Jan 13, 2022 | 1:01 PM

Share

ತಿರುಪತಿ ಏರ್​ಪೋರ್ಟ್​​ನೊಳಗೆ ಹೋಗಲು ತಮಗೆ ಅಲ್ಲಿನ ಸಿಬ್ಬಂದಿ ಅವಕಾಶ ಕೊಡಲಿಲ್ಲ ಎಂಬ ಕಾರಣಕ್ಕೆ ಶಾಸಕನ ಪುತ್ರನೊಬ್ಬ ವಿಭಿನ್ನ ರೀತಿಯಲ್ಲಿ ಸೇಡುತೀರಿಸಿಕೊಂಡ ಆರೋಪ ಕೇಳಿಬಂದಿದೆ. ಆಂಧ್ರಪ್ರದೇಶದ ಶಾಸಕ ಬಿ.ಕರುಣಾಕರ್​ ರೆಡ್ಡಿ ಪುತ್ರ ಅಭಿನಯ್​ ರೆಡ್ಡಿ ತಿರುಪತಿಯ ಡೆಪ್ಯೂಟಿ ಮೇಯರ್​. ಇವರು ಹಾಗೂ ತಿರುಪತಿ ಏರ್​ಪೋರ್ಟ್ ಮ್ಯಾನೇಜರ್​ ಸುನಿಲ್​ ನಡುವೆ ವಾಗ್ವಾದ ನಡೆದಿತ್ತು. ಅದರ ಮರುದಿನ ತಿರುಪತಿ ಏರ್​ಪೋರ್ಟ್​ ಮತ್ತು ಅಲ್ಲಿನ ಸಿಬ್ಬಂದಿಯ ವಸತಿ ಗೃಹಗಳಿಗೆ ನೀರು ಪೂರೈಕೆ ಸ್ಥಗಿತಗೊಂಡಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.  ತನ್ನನ್ನು ಏರ್​ಪೋರ್ಟ್​​ನೊಳಗೆ ಬಿಡಲಿಲ್ಲ ಎಂಬ ಕಾರಣಕ್ಕೆ ನೀರು ಪೂರೈಕೆಯನ್ನು ಅಭಿನಯ್​ ರೆಡ್ಡಿಯೇ ಕಡಿತಗೊಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆದರೆ ಈ ಬಗ್ಗೆ ಅಧಿಕೃತವಾಗಿ ಯಾರದ್ದೇ ಹೇಳಿಕೆಯೂ ಲಭ್ಯವಾಗಿಲ್ಲ ಎಂದು ಇಂಡಿಯಾ ಟುಡೆ ವರದಿಯಲ್ಲಿ ಉಲ್ಲೇಖಿಸಿದೆ. 

ತಿರುಪತಿಯ ರೇಣಿಗುಂಟಾ ವಿಮಾನ ನಿಲ್ದಾಣವನ್ನು ಭಾರತದ ಏರ್​ಪೋರ್ಟ್ ಪ್ರಾಧಿಕಾರ ನಿರ್ವಹಿಸುತ್ತಿದೆ. ಅಭಿನಯ್​ ರೆಡ್ಡಿ ಆಂಧ್ರಪ್ರದೇಶದ ಸಚಿವ ಬೋತ್ಸಾ ಸತ್ಯನಾರಾಯಣರ್​​ರನ್ನು ಸ್ವಾಗತಿಸಲು ವಿಮಾನ ನಿಲ್ದಾಣಕ್ಕೆ ಹೋಗಿದ್ದರು. ತಿರುಪತಿಯಲ್ಲಿ ನಡೆಯುತ್ತಿದ್ದ ರಾಷ್ಟ್ರೀಯಮಟ್ಟದ ಕಬಡ್ಡಿ ಪಂದ್ಯಾವಳಿಯ ಸಮಾರೋಪ ಸಮಾರಂಭಕ್ಕೆ ಈ ಸಚಿವರು ಬಂದಿದ್ದರು. ಸಚಿವರೊಟ್ಟಿಗೆ ತಿರುಪಲ ತಿರುಪತಿ ದೇವಸ್ಥಾನಂ (TTD)ಯ ಅಧ್ಯಕ್ಷ ವೈ.ವಿ.ಸುಬ್ಬಾ ರೆಡ್ಡಿ ಕೂಡ ಇದ್ದರು. ಇವರಿಬ್ಬರನ್ನೂ ಸ್ವಾಗತಿಸಿ, ಕರೆದುಕೊಂಡು ಬರಲು ಅಭಿನಯ್​ ರೆಡ್ಡಿ, ತನ್ನ ಸಹಾಯಕರೊಂದಿಗೆ ಅಲ್ಲಿಗೆ ತೆರಳಿದ್ದರು.

ಆದರೆ ವಿಮಾನ ನಿಲ್ದಾಣ ಪ್ರಾಧಿಕಾರದ ಮ್ಯಾನೇಜರ್​ ಸುನೀಲ್​, ಅಭಿನಯ್​ ಮತ್ತು ಅವರ ಸಹಾಯಕರಿಗೆ ಪ್ರವೇಶ ನಿರಾಕರಿಸಿದ್ದಾರೆ. ಇದರಿಂದಾಗಿ ಅಲ್ಲಿ ಜಗಳವೂ ನಡೆಯಿತು. ಅಭಿನಯ್​ ರೆಡ್ಡಿ ಮತ್ತು ಏರ್​ಪೋರ್ಟ್ ಅಧಿಕಾರಿಗಳ ಮಧ್ಯೆ ವಾಗ್ವಾದ ನಡೆದ ಕೆಲವೇ ಹೊತ್ತಲ್ಲಿ, ಏರ್​ಪೋರ್ಟ್ ಮತ್ತು ಅಲ್ಲಿನ ಸಿಬ್ಬಂದಿ ವಾಸವಾಗಿರುವ ವಸತಿ ಗೃಹಕ್ಕೆ ನೀರಿನ ಪೂರೈಕೆ ಸ್ಥಗಿತಗೊಂಡಿದೆ. ಇದಕ್ಕೆ ಅಭಿನಯ್​ ರೆಡ್ಡಿಯೇ ಕಾರಣ ಎಂದು ಅಲ್ಲಿನವರು ಆರೋಪಿಸಿದ್ದಾರೆ. ಆದರೆ ಮುನ್ಸಿಪಲ್ ಆಡಳಿತ ಇದನ್ನು ನಿರಾಕರಿಸಿದ್ದು, ನೀರಿನ ಪೈಪ್​ಲೈನ್​ ಬ್ಲಾಕ್​ ಆಗಿದ್ದರಿಂದ ನೀರು ಪೂರೈಕೆ ಸ್ಥಗಿತಗೊಂಡಿದೆ ಎಂದು ಹೇಳಿದೆ.

ಇನ್ನೊಂದೆಡೆ ವೈಎಸ್​ಆರ್​ಸಿಪಿ ಮುಖಂಡರು ರೇಣಿಗುಂಟಾ ಏರ್​ಪೋರ್ಟ್ ಅಧಿಕಾರಿಗಳ ವಿರುದ್ಧ ಕಿಡಿಕಾರುತ್ತಿದ್ದಾರೆ. ವಿಮಾನ ನಿಲ್ದಾಣದ ಅಧಿಕಾರಿಗಳು ತುಂಬ ಅಹಂಕಾರದಿಂದ ವರ್ತಿಸುತ್ತಿದ್ದಾರೆ. ಯಾವುದೇ ಶಿಷ್ಟಾಚಾರಗಳನ್ನೂ ಪಾಲನೆ ಮಾಡುತ್ತಿಲ್ಲ ಎಂದಿದ್ದಾರೆ. ಇದೇ ವೇಳೆ ಟ್ವೀಟ್ ಮಾಡಿರುವ ಆಂಧ್ರ ಪ್ರತಿಪಕ್ಷ ನಾಯಕ ತೆಲುಗು ದೇಸಂ ಪಾರ್ಟಿ (TDP) ಪ್ರಧಾನ ಕಾರ್ಯದರ್ಶಿ ನರ ಲೋಕೇಶ್​, ವಿಮಾನ ನಿಲ್ದಾಣ ಹಾಗೂ ಸಿಬ್ಬಂದಿ ವಸತಿ ಗೃಹಗಳಿಗೆ ನೀರು ಪೂರೈಕೆ ಸ್ಥಗಿತಗೊಳಿಸಿರುವುದು ವೈಎಸ್ ಆರ್ ಸಿಪಿಯ ಅರಾಜಕ ಆಡಳಿತವನ್ನು ಎತ್ತಿ ತೋರಿಸುತ್ತದೆ ಎಂದು ಹೇಳಿದ್ದಾರೆ. ಆದರೆ ಸದ್ಯ ಏರ್​ಪೋರ್ಟ್ ಅಧಿಕಾರಿಗಳಾಗಲಿ, ಮುನ್ಸಿಪಲ್​ ಆಡಳಿತದ ಅಧಿಕಾರಿಗಳಾಗಲೀ ಮೌನವಾಗಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ರಾಜೀನಾಮೆ ನೀಡಿದ ಮತ್ತೊಬ್ಬ ಶಾಸಕ; ಮೂರು ದಿನಗಳಲ್ಲಿ ಕಮಲ ಪಕ್ಷ ಕಳೆದುಕೊಂಡಿದ್ದು 7, ಗಳಿಸಿದ್ದು 2 !

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್