ಕೊವಿಡ್ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆಂಬುದಕ್ಕೆ ಸಾಕಷ್ಟು ಪುರಾವೆಗಳಿಲ್ಲ: ಲ್ಯಾನ್ಸೆಟ್ ವರದಿ

ಕೊವಿಡ್​ 19 ದೃಢಪಟ್ಟ ಹೆಚ್ಚಿನ ಮಕ್ಕಳಲ್ಲಿ ಯಾವುದೇ ತೀವ್ರವಾದ ರೋಗಲಕ್ಷಣಗಳು ಕಂಡುಬರುವುದಿಲ್ಲ. ಜ್ವರ ಮತ್ತು ಉಸಿರಾಟಕ್ಕೆ ಸಂಬಂಧಿಸಿದ ಸೌಮ್ಯ ಸೋಂಕಿನ ಲಕ್ಷಣಗಳು  ಮಕ್ಕಳಲ್ಲಿ ಕಾಣಿಸಿಕೊಳ್ಳಬಹುದು. ಜತೆಗೆ ವಾಂತಿ, ಹೊಟ್ಟೆನೋವು ಕಾಣಿಸಿಕೊಳ್ಳಬಹುದು ಎಂದು ವರದಿಯಲ್ಲಿ ತಿಳಿಸಲಾಗಿದೆ.

ಕೊವಿಡ್ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆಂಬುದಕ್ಕೆ ಸಾಕಷ್ಟು ಪುರಾವೆಗಳಿಲ್ಲ: ಲ್ಯಾನ್ಸೆಟ್ ವರದಿ
ಪಿಟಿಐ ಚಿತ್ರ
Follow us
| Edited By: shruti hegde

Updated on:Jun 13, 2021 | 11:57 AM

ದೆಹಲಿ: ಕೊವಿಡ್​ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ ಎಂಬುದರ ಕುರಿತಾಗಿ ಸಾಕಷ್ಟು ಪುರಾವೆಗಳಿಲ್ಲ ಎಂದು ಹೊಸ ವರದಿಯಿಂದ ತಿಳಿದು ಬಂದಿದೆ. ಲ್ಯಾನ್ಸೆಟ್​ ಕೊವಿಡ್​ 19 ಆಯೋಗದ ಭಾರತೀಯ ಕಾರ್ಯಪಡೆ ಈ ವರದಿಯನ್ನು ತಯಾರಿಸಿದೆ. ದೇಶದ ಪ್ರಮುಖ ಶಿಶುವೈದ್ಯರನ್ನು ಒಳಗೊಂಡಂತೆ ವಿಷಯ ತಜ್ಞರೊಂದಿಗೆ ಸಮಾಲೋಚಿಸಿ ಲ್ಯಾನ್ಸೆಟ್​ ವರದಿ ಸಿದ್ಧಪಡಿಸಿದೆ.

ಕೊವಿಡ್​ 19 ದೃಢಪಟ್ಟ ಹೆಚ್ಚಿನ ಮಕ್ಕಳಲ್ಲಿ ಯಾವುದೇ ತೀವ್ರವಾದ ರೋಗಲಕ್ಷಣಗಳು ಕಂಡುಬರುವುದಿಲ್ಲ. ಜ್ವರ ಮತ್ತು ಉಸಿರಾಟಕ್ಕೆ ಸಂಬಂಧಿಸಿದ ಸೌಮ್ಯ ಸೋಂಕಿನ ಲಕ್ಷಣಗಳು  ಮಕ್ಕಳಲ್ಲಿ ಕಾಣಿಸಿಕೊಳ್ಳಬಹುದು. ಜತೆಗೆ ವಾಂತಿ, ಹೊಟ್ಟೆನೋವು ಕಾಣಿಸಿಕೊಳ್ಳಬಹುದು ಎಂದು ವರದಿಯಲ್ಲಿ ತಿಳಿಸಲಾಗಿದೆ.

ವರದಿಯ ಪ್ರಕಾರ, ಆಸ್ಪತ್ರೆಗೆ ದಾಖಲಾದ 10 ವರ್ಷದ ಒಳಗಿನ ಸುಮಾರು 2,600 ಮಕ್ಕಳ ಅಧ್ಯಯನ ನಡೆಸಲಾಯಿತು. ದೆಹಲಿ, ತಮಿಳುನಾಡು, ಕೇರಳ, ಮಹಾರಾಷ್ಟ್ರದ 10 ಸಾರ್ವಜನಿಕ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾದ ಮಕ್ಕಳನ್ನು ಅಧ್ಯಯನಕ್ಕೆ ಒಳಪಡಿಸಲಾಯಿತು.

ವರದಿಯಲ್ಲಿ ತಿಳಿದು ಬಂದಂತೆ 10 ವರ್ಷದ ಮಕ್ಕಳಲ್ಲಿ ಶೇ. 2.4ರಷ್ಟು ಸಾವಿಗೀಡಾಗಿದ್ದಾರೆ. ಮರಣ ಹೊಂದಿದ ಮಕ್ಕಳು ವಿವಿಧ ಕಾಯಿಲೆಯಿಂದ ಬಳಲುತ್ತಿದ್ದರು. ಕೊರೊನಾ ಸೋಂಕಿಗೆ ಒಳಗಾದ ಶೇ. 9ರಷ್ಟು ಮಕ್ಕಳು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಎರಡನೇ ಅಲೆಯ ಸಂದರ್ಭದಲ್ಲಿ ಇದೇ ರೀತಿಯ ರೋಗ ಲಕ್ಷಣಗಳಿದ್ದವು ಎಂದು ವರದಿಯಾಗಿದೆ.

ಶೇ. 5ಕ್ಕಿಂತ ಕಡಿಮೆ ಮಕ್ಕಳಿಗೆ ಆಸ್ಪತ್ರೆ ಅಗತ್ಯ ಕೊವಿಡ್​ 19 ಸೋಂಕಿನಿಂದ ಬಳಲುತ್ತಿದ್ದ ಶೇ. 5ಕ್ಕಿಂತ ಕಡಿಮೆ ಮಕ್ಕಳಲ್ಲಿ ಆಸ್ಪತ್ರೆ ಪ್ರವೇಶದ ಅಗತ್ಯವಿರುತ್ತದೆ. ಅವರಲ್ಲಿ ಮರಣ ಪ್ರಮಾಣವು ಶೇ. 2ರಷ್ಟಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಕೊವಿಡ್​ ನಿಯಂತ್ರಣಕ್ಕೆ ಲಸಿಕೆಗಳು ಕಾರ್ಯತಂತ್ರದ ಒಂದು ಭಾಗ. ಮಕ್ಕಳಿಗೆ ಮತ್ತು ವಯಸ್ಕರಿಗೆ ಲಸಿಕೆ ನೀಡುವ ಕುರಿತಾಗಿ ಹೆಚ್ಚಿನ ಗಮನ ಬೇಕು ಎಂದು ವರದಿಯಲ್ಲಿ ಉಲ್ಲೆಖಿಸಲಾಗಿದೆ. ಮಕ್ಕಳ ಜೀವನದಲ್ಲಿ ಸಾಧ್ಯವಾದಷ್ಟು ಬೇಗ ಸಹಜತೆಯನ್ನು ಮರಳಿ ತರುವ ಸಂಕಲ್ಪದೊಂದಿಗೆ, ಆನ್​ಲೈನ್​ ಪ್ರವೇಶದ ಆಯ್ಕೆಗಳೊಂದಿಗೆ ಹೆಚ್ಚು ಜಾಗರೂಕತೆಯಿಂದ ಶಾಲೆಗಳನ್ನು ಪುನಃ ತೆರೆಯುವ ಕುರಿತಾಗಿ ಯೋಚಿಸಬೇಕಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ:

ಕೊರೊನಾ ಸಂಕಷ್ಟ: ತಂದೆ ಅಂತ್ಯಸಂಸ್ಕಾರದ ವೇಳೆ ಮಗನೂ ಸಾವು; ಮತ್ತೊಂದೆಡೆ ತಂದೆ-ತಾಯಿ ಕಳೆದುಕೊಂಡ 8 ಮಕ್ಕಳು

Suresh Kumar PC LIVE: ದ್ವಿತೀಯ ಪಿಯುಸಿ ಮಕ್ಕಳು ಪರೀಕ್ಷೆ ಇಲ್ಲದೇ ಪಾಸ್: ಎಸ್​ಎಸ್​ಎಲ್​ಸಿ ಮಕ್ಕಳಿಗೆ ಪರೀಕ್ಷೆ ಇದ್ದರೂ ಫೇಲ್​ ಮಾಡಲ್ಲ

Published On - 11:55 am, Sun, 13 June 21

ತಾಜಾ ಸುದ್ದಿ
ಇಬ್ರಾಹಿಂ ಕಾಂಗ್ರೆಸ್ ಸೇರುವ ಬಗ್ಗೆ ಹೇಳಿಕೆಯೇನೂ ನೀಡಿಲ್ಲ: ಜಿ ಪರಮೇಶ್ವರ್
ಇಬ್ರಾಹಿಂ ಕಾಂಗ್ರೆಸ್ ಸೇರುವ ಬಗ್ಗೆ ಹೇಳಿಕೆಯೇನೂ ನೀಡಿಲ್ಲ: ಜಿ ಪರಮೇಶ್ವರ್
ಕರ್ನಾಟಕ ಬಂದ್ ಗೆ ನಮ್ಮ ನೈತಿಕ ಬೆಂಬಲವಿದೆ: ಶಶಿಕುಮಾರ್-ಕಾಮ್ಸ್ ಅಧ್ಯಕ್ಷ
ಕರ್ನಾಟಕ ಬಂದ್ ಗೆ ನಮ್ಮ ನೈತಿಕ ಬೆಂಬಲವಿದೆ: ಶಶಿಕುಮಾರ್-ಕಾಮ್ಸ್ ಅಧ್ಯಕ್ಷ
ಕಾವೇರಿ ಹೋರಾಟವನ್ನು ವಿಭಿನ್ನವಾಗಿ ಬೆಂಬಲಿಸಿದ ಮೈಸೂರು ಮೂಲದ ವೈದ್ಯ
ಕಾವೇರಿ ಹೋರಾಟವನ್ನು ವಿಭಿನ್ನವಾಗಿ ಬೆಂಬಲಿಸಿದ ಮೈಸೂರು ಮೂಲದ ವೈದ್ಯ
ರಾಜ್ಯದ ಸಂಸದರೆಲ್ಲ ರಣಹೇಡಿಗಳು: ಟಿಎ ನಾರಾಯಣಗೌಡ, ಕರವೇ-ಅಧ್ಯಕ್ಷ
ರಾಜ್ಯದ ಸಂಸದರೆಲ್ಲ ರಣಹೇಡಿಗಳು: ಟಿಎ ನಾರಾಯಣಗೌಡ, ಕರವೇ-ಅಧ್ಯಕ್ಷ
ವ್ಯವಸಾಯ ಮಾಡಲು ಲಕ್ಷಾಂತರ ಎಕರೆ ಜಮೀನು ವಶಪಡಿಸಿಕೊಂಡ ಪಾಕಿಸ್ತಾನ ಸೇನ
ವ್ಯವಸಾಯ ಮಾಡಲು ಲಕ್ಷಾಂತರ ಎಕರೆ ಜಮೀನು ವಶಪಡಿಸಿಕೊಂಡ ಪಾಕಿಸ್ತಾನ ಸೇನ
ನಾಳೆ ಓಲಾ-ಊಬರ್ ಕ್ಯಾಬ್​ಗಳು ರಸ್ತೆಗಿಳಿಯಲ್ಲ; ಕ್ಯಾಬ್ ಚಾಲಕರ ಸಂಘದ ಅಧ್ಯಕ್ಷ
ನಾಳೆ ಓಲಾ-ಊಬರ್ ಕ್ಯಾಬ್​ಗಳು ರಸ್ತೆಗಿಳಿಯಲ್ಲ; ಕ್ಯಾಬ್ ಚಾಲಕರ ಸಂಘದ ಅಧ್ಯಕ್ಷ
ಬ್ರಿಟಿಷರು ಭಾರತ ಬಿಟ್ಟು ಹೋಗಿದ್ದು ನೇತಾಜಿ ಭಯದಿಂದ: ಬಸನಗೌಡ ಯತ್ನಾಳ್
ಬ್ರಿಟಿಷರು ಭಾರತ ಬಿಟ್ಟು ಹೋಗಿದ್ದು ನೇತಾಜಿ ಭಯದಿಂದ: ಬಸನಗೌಡ ಯತ್ನಾಳ್
ಚಿರಂಜೀವಿ ಕೊನೆಯ ಸಿನಿಮಾ ‘ರಾಜಮಾರ್ತಂಡ’ಕ್ಕೆ ಭರ್ಜರಿ ಪ್ರಚಾರ
ಚಿರಂಜೀವಿ ಕೊನೆಯ ಸಿನಿಮಾ ‘ರಾಜಮಾರ್ತಂಡ’ಕ್ಕೆ ಭರ್ಜರಿ ಪ್ರಚಾರ
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್