AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರಯಾನ-3 ರ ಯಶಸ್ಸು ಅಮೃತಕಾಲದ ಆರಂಭದ ಅವಿಸ್ಮರಣೀಯ ಸಾಧನೆ; ಧರ್ಮೇಂದ್ರ ಪ್ರಧಾನ್ ಬಣ್ಣನೆ

Chandrayaan-3 success; ಚಂದ್ರನ ದಕ್ಷಿಣ ಧ್ರುವದ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡುವ ಮೂಲಕ ಇತಿಹಾಸವನ್ನು ನಿರ್ಮಿಸಿದ್ದಕ್ಕಾಗಿ ಇಸ್ರೋವನ್ನು ಅಭಿನಂದಿಸುತ್ತೇನೆ. ಚಂದ್ರನ ದಕ್ಷಿಣ ಧ್ರುವ ಇದುವರೆಗೆ ಯಾವುದೇ ದೇಶ ತಲುಪದ ತಾಣವಾಗಿದೆ. ಚಂದ್ರನಲ್ಲಿ ಯಶಸ್ವಿಯಾಗಿ ಲ್ಯಾಂಡ್​ ಮಾಡಿದ್ದಕ್ಕಾಗಿ ವಿಜಯೋತ್ಸವವನ್ನು ಆಚರಿಸುವ 140 ಕೋಟಿಗೂ ಹೆಚ್ಚು ಮಂದಿ ಭಾರತೀಯರ ಜತೆ ನಾನೂ ಸೇರಿದ್ದೇನೆ ಎಂದು ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಚಂದ್ರಯಾನ-3 ರ ಯಶಸ್ಸು ಅಮೃತಕಾಲದ ಆರಂಭದ ಅವಿಸ್ಮರಣೀಯ ಸಾಧನೆ; ಧರ್ಮೇಂದ್ರ ಪ್ರಧಾನ್ ಬಣ್ಣನೆ
ಧರ್ಮೇಂದ್ರ ಪ್ರಧಾನ್ Image Credit source: PTI
ಗಣಪತಿ ಶರ್ಮಾ
|

Updated on:Aug 23, 2023 | 9:40 PM

Share

ನವದೆಹಲಿ, ಆಗಸ್ಟ್ 13: ಚಂದ್ರಯಾನ-3 ರ (Chandrayaan-3) ಲ್ಯಾಂಡರ್ ವಿಕ್ರಂ ಅನ್ನು ಚಂದ್ರನ ಮೇಲ್ಮೈಯಲ್ಲಿ ಬುಧವಾರ ಸಂಜೆ ಯಶಸ್ವಿಯಾಗಿ ಇಳಿಸಿದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವನ್ನು ಕೇಂದ್ರ ಶಿಕ್ಷಣ ಮತ್ತು ಕೌಶಲ ಅಭಿವೃದ್ಧಿ, ಉದ್ಯಮಶೀಲತೆ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಅಭಿನಂದಿಸಿದ್ದಾರೆ. ಅಮೃತಕಾಲದ ಆರಂಭದ ಈ ಅವಿಸ್ಮರಣೀಯ ಸಾಧನೆಗೆ ಇಡೀ ದೇಶದ ಪರವಾಗಿ ನಾನು ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ಚಂದ್ರಯಾನ-3 ಅಮೃತ ಕಾಲದ ಬಹುದೊಡ್ಡ ಸಾಧನೆ ಎಂದ ಅವರು, ಚಂದ ಮಾಮ ಈಗ ನಮ್ಮದು ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಚಂದ್ರನ ದಕ್ಷಿಣ ಧ್ರುವದ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡುವ ಮೂಲಕ ಇತಿಹಾಸವನ್ನು ನಿರ್ಮಿಸಿದ್ದಕ್ಕಾಗಿ ಇಸ್ರೋವನ್ನು ಅಭಿನಂದಿಸುತ್ತೇನೆ. ಚಂದ್ರನ ದಕ್ಷಿಣ ಧ್ರುವ ಇದುವರೆಗೆ ಯಾವುದೇ ದೇಶ ತಲುಪದ ತಾಣವಾಗಿದೆ. ಚಂದ್ರನಲ್ಲಿ ಯಶಸ್ವಿಯಾಗಿ ಲ್ಯಾಂಡ್​ ಮಾಡಿದ್ದಕ್ಕಾಗಿ ವಿಜಯೋತ್ಸವವನ್ನು ಆಚರಿಸುವ 140 ಕೋಟಿಗೂ ಹೆಚ್ಚು ಮಂದಿ ಭಾರತೀಯರ ಜತೆ ನಾನೂ ಸೇರಿದ್ದೇನೆ. ಇದು ನಮಗೆಲ್ಲರಿಗೂ ಹೆಮ್ಮೆಯ ಕ್ಷಣ. ಭಾರತೀಯ ತಂತ್ರಜ್ಞಾನದ ನಿಜವಾದ ಶಕ್ತಿಯು ಬಾಹ್ಯಾಕಾಶ ಪರಿಶೋಧನೆಯ ಗಡಿಗಳನ್ನು ದಾಟಿ ಹೊರಟಿದೆ ಎಂದು ಸಚಿವರು ಮತ್ತೊಂದು ಟ್ವೀಟ್​​ನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಚಂದ್ರನಲ್ಲಿಳಿದ ವಿಕ್ರಂ ಲ್ಯಾಂಡರ್, ಪ್ರಗ್ಯಾನ್ ರೋವರ್ ಮುಂದಿನ 14 ದಿನಗಳಲ್ಲಿ ಏನು ಮಾಡಲಿವೆ?

ಜುಲೈ 14 ರಂದು ಉಡಾವಣೆಗೊಂಡ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಚಂದ್ರಯಾನ-3 ರ ಲ್ಯಾಂಡರ್ ವಿಕ್ರಂ ಬುಧವಾರ ಸಂಜೆ (ಆಗಸ್ಟ್ 23) ಸುಮಾರು 6.04 ಕ್ಕೆ ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದೆ. ಇದರೊಂದಿಗೆ ಬಾಹ್ಯಾಕಾಶ ಸಂಶೋಧನೆ ಕ್ಷೇತ್ರದಲ್ಲಿ ಭಾರತವು ಮಹತ್ವದ ಮೈಲಿಗಲ್ಲು ಸ್ಥಾಪಿಸಿದಂತಾಗಿದೆ. ಈ ಮೂಲಕ ಚಂದ್ರನ ದಕ್ಷಿಣ ಧ್ರುವ ಪ್ರದೇಶವನ್ನು ಅನ್ವೇಷಿಸುವ ಮೊದಲ ದೇಶವಾಗಿ ಭಾರತ ಹೊರಹೊಮ್ಮಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:38 pm, Wed, 23 August 23

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ