AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಮಲ ತಿರುಪತಿಯಲ್ಲಿ ದೇವರ ದರ್ಶನ ಸಮಯ ವಿಸ್ತರಣೆ; ರಾತ್ರಿ 11ಗಂಟೆವರೆಗೂ ಭಕ್ತರಿಗೆ ಅವಕಾಶ

ತಿರುಪತಿ:  ತಿರುಮಲ ದೇವಸ್ಥಾನದಲ್ಲಿ ದೇವರ ದರ್ಶನದ ಸಮಯವನ್ನು ವಿಸ್ತರಿಸಲಾಗಿದ್ದು, ಸೆಪ್ಟೆಂಬರ್​ 19ರಿಂದ ರಾತ್ರಿ 11ಗಂಟೆವರೆಗೆ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ. ಹಿಂದೆ ದೇವಸ್ಥಾನದಲ್ಲಿ ರಾತ್ರಿ 10 ಗಂಟೆವರೆಗೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗುತ್ತಿತ್ತು. ಅದನ್ನೀಗ ತಿರುಮಲ ತಿರುಪತಿ ದೇವಸ್ಥಾನ ಆಡಳಿತ ಮಂಡಳಿ ಹೆಚ್ಚು ಮಾಡಿದೆ. ಇನ್ನುಮುಂದೆ ಯಾತ್ರಾರ್ಥಿಗಳು ರಾತ್ರಿ 11-11.30ರವರೆಗೂ ದೇವರ ದರ್ಶನ ಪಡೆಯಬಹುದು. ರಾತ್ರಿ 12ಗಂಟೆಗೆ ದೇಗುಲದ ಬಾಗಿಲು ಮುಚ್ಚಲಿದ್ದು, ಅದಕ್ಕೂ ಮುನ್ನ ಸಮಾರೋಪ ಕಾರ್ಯಕ್ರಮ ಏಕಾಂತ ಸೇವೆ ನಡೆಯಲಿದೆ.  ತಿರುಮಲ ದೇವಸ್ಥಾನಕ್ಕೆ ಪ್ರತಿನಿತ್ಯ […]

ತಿರುಮಲ ತಿರುಪತಿಯಲ್ಲಿ ದೇವರ ದರ್ಶನ ಸಮಯ ವಿಸ್ತರಣೆ; ರಾತ್ರಿ 11ಗಂಟೆವರೆಗೂ ಭಕ್ತರಿಗೆ ಅವಕಾಶ
ತಿರುಮಲ ದೇಗುಲ
Follow us
TV9 Web
| Updated By: Lakshmi Hegde

Updated on:Sep 21, 2021 | 1:19 PM

ತಿರುಪತಿ:  ತಿರುಮಲ ದೇವಸ್ಥಾನದಲ್ಲಿ ದೇವರ ದರ್ಶನದ ಸಮಯವನ್ನು ವಿಸ್ತರಿಸಲಾಗಿದ್ದು, ಸೆಪ್ಟೆಂಬರ್​ 19ರಿಂದ ರಾತ್ರಿ 11ಗಂಟೆವರೆಗೆ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ. ಹಿಂದೆ ದೇವಸ್ಥಾನದಲ್ಲಿ ರಾತ್ರಿ 10 ಗಂಟೆವರೆಗೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗುತ್ತಿತ್ತು. ಅದನ್ನೀಗ ತಿರುಮಲ ತಿರುಪತಿ ದೇವಸ್ಥಾನ ಆಡಳಿತ ಮಂಡಳಿ ಹೆಚ್ಚು ಮಾಡಿದೆ. ಇನ್ನುಮುಂದೆ ಯಾತ್ರಾರ್ಥಿಗಳು ರಾತ್ರಿ 11-11.30ರವರೆಗೂ ದೇವರ ದರ್ಶನ ಪಡೆಯಬಹುದು. ರಾತ್ರಿ 12ಗಂಟೆಗೆ ದೇಗುಲದ ಬಾಗಿಲು ಮುಚ್ಚಲಿದ್ದು, ಅದಕ್ಕೂ ಮುನ್ನ ಸಮಾರೋಪ ಕಾರ್ಯಕ್ರಮ ಏಕಾಂತ ಸೇವೆ ನಡೆಯಲಿದೆ. 

ತಿರುಮಲ ದೇವಸ್ಥಾನಕ್ಕೆ ಪ್ರತಿನಿತ್ಯ ಬರುವ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ. ದಿನವೊಂದಕ್ಕೆ ಸರಾಸರಿ 25 ಸಾವಿರ ಭಕ್ತರು ದೇಗುಲಕ್ಕೆ ಆಗಮಿಸುತ್ತಿದ್ದಾರೆ. ಹೀಗಾಗಿ ದರ್ಶನ ಸಮಯವನ್ನು ವಿಸ್ತರಿಸುವ ಅನಿವಾರ್ಯತೆಯೂ ಇರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಶನಿವಾರ ಒಂದೇ ದಿನ 29,621 ಭಕ್ತರು ತಿರುಪತಿ ತಿಮ್ಮಪ್ಪನ ದರ್ಶನಕ್ಕೆಂದು ಆಗಮಿಸಿದ್ದರು. ತಿರುಮಲ ಶನಿವಾರದ ನಿಮಿತ್ತ ದೇವಸ್ಥಾನ ಹೆಚ್ಚುವರಿಯಾಗಿ 800 ಟೈಂ ಸ್ಲಾಟೆಡ್​ ಸರ್ವ ದರ್ಶನ ಟೋಕನ್​ ಬಿಡುಗಡೆ ಮಾಡಿದ್ದರಿಂದ ಅಂದು ಅಷ್ಟುಪ್ರಮಾಣದ ಜನರು ಆಗಮಿಸಿದ್ದರು ಎನ್ನಲಾಗಿದೆ.

ಇನ್ನು ಈ ಬಗ್ಗೆ ಟಿಟಿಡಿ ಅಧ್ಯಕ್ಷ ವೈ.ವಿ.ಸುಬ್ಬಾರೆಡ್ಡಿ ಇತ್ತೀಚೆಗೆ ಪ್ರತಿಕ್ರಿಯೆ ನೀಡಿದ್ದು, ಉಚಿತ ದರ್ಶನ ಟೋಕನ್​ಗಳ​ ಸಂಖ್ಯೆಯನ್ನು ಶೀಘ್ರದಲ್ಲೇ ಏರಿಸಲಾಗುವುದು ಎಂದಿದ್ದಾರೆ. ಹಾಗೇ 300 ರೂ.ಬೆಲೆಯ ಟಿಕೆಟ್​ಗಳ ಅಕ್ಟೋಬರ್​ ಕೋಟಾವನ್ನು ಅಕ್ಟೋಬರ್​ 23ರಂದು ಬಿಡುಗಡೆ ಮಾಡಲಾಗುವುದು ಎಂದು ಹೇಳಲಾಗಿದೆ.  ಭಕ್ತರು ಟಿಟಿಡಿ ವೆಬ್​ಸೈಟ್​ನಲ್ಲಿ ಮುಂಚಿತವಾಗಿಯೇ ಟಿಕೆಟ್​ ಕಾಯ್ದಿರಿಸಿಕೊಳ್ಳಬಹುದು ಎಂದೂ ದೇಗುಲ ಆಡಳಿತ ಮಂಡಳಿ ತಿಳಿಸಿದೆ. ಸರ್ವದರ್ಶನ ಟೋಕನ್​​ಗಳು ಆನ್​ಲೈನ್​ನಲ್ಲಿ ಅಕ್ಟೋಬರ್​ 24ರ ಬೆಳಗ್ಗೆ 9ಗಂಟೆಯಿಂದ ಲಭ್ಯವಾಗಲಿವೆ. ಒಂದು ದಿನದಲ್ಲಿ ಉಚಿತ ದರ್ಶನಕ್ಕೆ 2000 ಟೋಕನ್​ಗಳನ್ನು ಮಾತ್ರ ಮೀಸಲಿಡಲಾಗಿತ್ತು. ಅದನ್ನೀಗ 8000ಕ್ಕೆ ಏರಿಸಲು ಟಿಟಿಡಿ ನಿರ್ಧರಿಸಿದೆ.

ಇದನ್ನೂ ಓದಿ: ಬೊಮ್ಮಾಯಿ ಸಂಘ ಪರಿವಾರದಿಂದ ಬಂದಿಲ್ಲ, ಕಮ್ಯುನಿಸ್ಟ್ ಪಕ್ಷದಿಂದ ಬಂದಿದವರು; ಸಿಎಂ ವಿರುದ್ಧ ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಆಕ್ರೋಶ

ವಿವಾಹಿತ ಗ್ರಾಮ ಲೆಕ್ಕಿಗನೊಂದಿಗೆ ತಹಶೀಲ್ದಾರ್ ಮದುವೆ; ಚಿಕ್ಕಮಗಳೂರು ಡಿಸಿಯಿಂದ ಗೀತಾಗೆ ನೋಟಿಸ್

Published On - 1:09 pm, Tue, 21 September 21

ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ
VIDEO: ಕಮಿಂದು ಕಮಾಲ್... ವಾಟ್ ಎ ಕ್ಯಾಚ್
VIDEO: ಕಮಿಂದು ಕಮಾಲ್... ವಾಟ್ ಎ ಕ್ಯಾಚ್