Telangana: ಮಾಟ ಮಂತ್ರ ಮಾಡುವ ದಂಪತಿಯನ್ನು ಮರಕ್ಕೆ ನೇತಾಡಿಸಿ ಬೆತ್ತದಲ್ಲಿ ಹೊಡೆದ ಗ್ರಾಮಸ್ಥರು

ವಾಮಾಚಾರ ಮಾಡುತ್ತಿದ್ದಾರೆ ಎಂಬ ಶಂಕಿಸಿ ಗ್ರಾಮಸ್ಥರು ದಂಪತಿಗಳಿಗೆ ಥಳಿಸಿ, ಮರಕ್ಕೆ ಕಟ್ಟಿ ಹಾಕಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.

Telangana: ಮಾಟ ಮಂತ್ರ ಮಾಡುವ ದಂಪತಿಯನ್ನು ಮರಕ್ಕೆ ನೇತಾಡಿಸಿ ಬೆತ್ತದಲ್ಲಿ ಹೊಡೆದ ಗ್ರಾಮಸ್ಥರು
ದಂಪತಿಯನ್ನು ಮರಕ್ಕೆ ನೇತಾಡಿಸಿ ಬೆತ್ತದಲ್ಲಿ ಹೊಡೆದ ಗ್ರಾಮಸ್ಥರು

Updated on: Jun 20, 2023 | 2:48 PM

ಹೈದರಾಬಾದ್: ವಾಮಾಚಾರ ಮಾಡುತ್ತಿದ್ದಾರೆ ಎಂಬ ಶಂಕಿಸಿ ಗ್ರಾಮಸ್ಥರು ದಂಪತಿಗಳಿಗೆ ಥಳಿಸಿ, ಮರಕ್ಕೆ ಕಟ್ಟಿ ಹಾಕಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. ದಂಪತಿಯನ್ನು ಮರಕ್ಕೆ ನೇತುಹಾಕಿ ಗ್ರಾಮಸ್ಥರು ಬೆತ್ತದಿಂದ ಹೊಡೆದಿದ್ದಾರೆ. ದಂಪತಿಯನ್ನು ಶ್ಯಾಮಮ್ಮ ಮತ್ತು ಯಾದಯ್ಯ ಎಂದು ಗುರುತಿಸಲಾಗಿದೆ. ಇವರನ್ನು ಜಿಲ್ಲೆಯ ಕೋಲ್ಕೂರು ಗ್ರಾಮದವರು ಎಂದು ಹೇಳಲಾಗಿದೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಅವರನ್ನು ರಕ್ಷಿಸಿದ್ದಾರೆ. ದಂಪತಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: Telangana: MP LADS ನಿಧಿಯನ್ನು ಸ್ವಂತ ಕೆಲಸಕ್ಕೆ ಬಳಸಿಕೊಂಡ ತೆಲಂಗಾಣ ಬಿಜೆಪಿ ಸಂಸದ

ಗ್ರಾಮಸ್ಥರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:46 pm, Tue, 20 June 23

Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Follow Us