AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Rain: ಯಮುನಾ ನದಿಯ ನೀರಿನ ಮಟ್ಟ ಮತ್ತಷ್ಟು ಏರಿಕೆ! ದೆಹಲಿಯ ಹಲವು ಭಾಗ ಜಲಾವೃತ

ರಾಷ್ಟ್ರ ರಾಜಧಾನಿ ಯಮುನಾ ನದಿಯ ನೀರಿನ ಮಟ್ಟದ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ನೆನ್ನೆ (ಸೋಮವಾರ) ರಾತ್ರಿ 11 ಗಂಟೆಗೆ ಸುರಿದ ಭಾರಿ ಮಳೆಗೆ ನದಿಯ ನೀರಿನ ಮಟ್ಟ 2026.01ಕ್ಕೆ ತಲುಪಿದೆ.

Delhi Rain: ಯಮುನಾ ನದಿಯ ನೀರಿನ ಮಟ್ಟ ಮತ್ತಷ್ಟು ಏರಿಕೆ! ದೆಹಲಿಯ ಹಲವು ಭಾಗ ಜಲಾವೃತ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Jul 18, 2023 | 10:11 AM

Share

ದೆಹಲಿ: ರಾಷ್ಟ್ರ ರಾಜಧಾನಿ ಯಮುನಾ ನದಿಯ ನೀರಿನ ಮಟ್ಟದ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ನೆನ್ನೆ (ಸೋಮವಾರ) ರಾತ್ರಿ 11 ಗಂಟೆಗೆ ಸುರಿದ ಭಾರಿ ಮಳೆಗೆ ನದಿಯ ನೀರಿನ ಮಟ್ಟ 2026.01ಕ್ಕೆ ತಲುಪಿದೆ. ಅಧಿಕಾರಿಗಳ ಪ್ರಕಾರ ಇದು ಅಪಾಯದ ಮಟ್ಟ ಎಂದು ಹೇಳಲಾಗಿದೆ. ಈ ಹಿಂದೆ ಅಂದರೆ ಭಾನುವಾರ ನೀರಿನ ಮಟ್ಟ ಇಳಿದಿತ್ತು. ಆದರೆ ಸೋಮವಾರ ರಾತ್ರಿ ಸುರಿದ ಮಳೆಗೆ ನೀರಿನ ಮಟ್ಟ ಹೆಚ್ಚಾಗಿದೆ. ಇದಕ್ಕೂ ಮುನ್ನ ಸೋಮವಾರ ಬೆಳಗ್ಗೆ ಯಮುನೆಯ ನೀರಿನ ಮಟ್ಟ 205.48 ಮೀಟರ್‌ ದಾಟಿತ್ತು. ಇದು ರಾಷ್ಟ್ರ ರಾಜಧಾನಿಯ ಹಲವಾರು ಭಾಗಗಳಲ್ಲಿ ಜಲಾವೃತಗೊಂಡಿತ್ತು. ಕೇಂದ್ರ ಜಲ ಆಯೋಗ 205.33 ನಷ್ಟು ನೀರಿನ ಮಟ್ಟ ಹೆಚ್ಚಾದರೆ ದೆಹಲಿಗೆ ಅಪಾಯ ತಪ್ಪಿದಲ್ಲ ಎಂದು ಹೇಳಿದರು. ಆದರೆ ಇದನ್ನು ಮೀರಿ 205.48ನಷ್ಟು ನೀರಿನ ಮಟ್ಟ ಹೆಚ್ಚಾಗಿತ್ತು.

ಕೇಂದ್ರ ಜಲ ಆಯೋಗದ ಪ್ರಕಾರ, ಅಪಾಯದ ರೇಖೆಯನ್ನು ದಾಟಿ ಬಂದಿದೆ. ದೆಹಲಿಯ ಅನೇಕ ಕಡೆ ಈಗಾಗಲೇ ಮುನ್ನೆಚ್ಚರಿಕೆ ಕ್ರಮವನ್ನು ತೆಗೆದುಕೊಂಡಿದ್ದು, ಭಾನುವಾರ ಕಡಿಮೆ ಇದ್ದ ನೀರಿನ ಮಟ್ಟು ಸೋಮವಾರ ಸುರಿದ ಭಾರಿ ಮಳೆಗೆ ಮತ್ತೆ ಹೆಚ್ಚಾಗಿದೆ.

ಇನ್ನೂ ಹರಿಯಾಣದ ಕೆಲವು ಪ್ರದೇಶಗಳಲ್ಲಿ ಸುರಿದ ಭಾರೀ ಮಳೆಯಿಂದ ಯಮುನಾ ನದಿಯ ನೀರಿನ ಮಟ್ಟದಲ್ಲಿ ಸ್ವಲ್ಪ ಏರಿಕೆ ಕಂಡಿದೆ. ಈ ಕಾರಣದಿಂದ ದೆಹಲಿ ಸರ್ಕಾರವು ಸ್ಥಾಪಿಸಿದ ಪರಿಹಾರ ಶಿಬಿರಗಳಲ್ಲಿ ವಾಸಿಸುವ ಜನರು ಪ್ರವಾಹ ಪೀಡಿತ ಮನೆಗಳಿಗೆ ಹಿಂತಿರುಗದಂತೆ ದೆಹಲಿ ಸಚಿವ ಅತಿಶಿ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಮಳೆ ಕಡಿಮೆ ಇದ್ದರೂ ದೆಹಲಿಯಲ್ಲಿ ಯಮುನೆ‌ ಉಕ್ಕಿ ಹರಿದಿದ್ದಾದರು ಯಾಕೆ?

ಇನ್ನೂ ಯಮುನಾ ನದಿಯ ನೀರಿನ ಮಟ್ಟ ಹೆಚ್ಚಾದ ಕಾರಣ ದೆಹಲಿಯ ಕೆಲವೊಂದು ಕಡೆ ಸಾರಿಗೆ ಸಂಪರ್ಕವನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ ಇದೀಗ ನೀರಿನ ಮಟ್ಟ ಕಡಿಮೆಯಾದ ಕಾರಣ ದೆಹಲಿ ಸರ್ಕಾರದ ಸಾರಿಗೆ ಇಲಾಖೆಯು ತನ್ನ ಕೆಲವು ಪ್ರಯಾಣ ನಿರ್ಬಂಧಗಳನ್ನು ಸಡಿಲಿಸಿದೆ. ಆದರೆ ಭಾರೀ ಸರಕು ವಾಹನಗಳ ಪ್ರವೇಶವನ್ನು ಸಿಂಗು ಗಡಿಯಲ್ಲಿ ನಿರ್ಬಂಧಿಸಲಾಗುತ್ತದೆ.

ಇದಲ್ಲದೆ, ದೆಹಲಿ ಸರ್ಕಾರದ ಸಾರಿಗೆ ಇಲಾಖೆ ಹೊರಡಿಸಿದ ಆದೇಶದಲ್ಲಿ, ಹರಿಯಾಣ, ಹಿಮಾಚಲ ಪ್ರದೇಶ, ಚಂಡೀಗಢ, ಜಮ್ಮು ಮತ್ತು ಕಾಶ್ಮೀರ ಮತ್ತು ಉತ್ತರಾಖಂಡದಿಂದ ದೆಹಲಿಯ ಐಎಸ್‌ಬಿಟಿ ಕಾಶ್ಮೀರಿ ಗೇಟ್‌ಗೆ ಬರುವ ಅಂತಾರಾಜ್ಯ ಬಸ್‌ಗಳು ಸಿಂಗು ಗಡಿಯನ್ನು ಮಾತ್ರ ಬರಲು ಸಾಧ್ಯ ಎಂದು ಹೇಳಲಾಗಿದೆ.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:10 am, Tue, 18 July 23

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ