AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Rain: ಯಮುನಾ ನದಿಯ ನೀರಿನ ಮಟ್ಟ ಮತ್ತಷ್ಟು ಏರಿಕೆ! ದೆಹಲಿಯ ಹಲವು ಭಾಗ ಜಲಾವೃತ

ರಾಷ್ಟ್ರ ರಾಜಧಾನಿ ಯಮುನಾ ನದಿಯ ನೀರಿನ ಮಟ್ಟದ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ನೆನ್ನೆ (ಸೋಮವಾರ) ರಾತ್ರಿ 11 ಗಂಟೆಗೆ ಸುರಿದ ಭಾರಿ ಮಳೆಗೆ ನದಿಯ ನೀರಿನ ಮಟ್ಟ 2026.01ಕ್ಕೆ ತಲುಪಿದೆ.

Delhi Rain: ಯಮುನಾ ನದಿಯ ನೀರಿನ ಮಟ್ಟ ಮತ್ತಷ್ಟು ಏರಿಕೆ! ದೆಹಲಿಯ ಹಲವು ಭಾಗ ಜಲಾವೃತ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Jul 18, 2023 | 10:11 AM

Share

ದೆಹಲಿ: ರಾಷ್ಟ್ರ ರಾಜಧಾನಿ ಯಮುನಾ ನದಿಯ ನೀರಿನ ಮಟ್ಟದ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ನೆನ್ನೆ (ಸೋಮವಾರ) ರಾತ್ರಿ 11 ಗಂಟೆಗೆ ಸುರಿದ ಭಾರಿ ಮಳೆಗೆ ನದಿಯ ನೀರಿನ ಮಟ್ಟ 2026.01ಕ್ಕೆ ತಲುಪಿದೆ. ಅಧಿಕಾರಿಗಳ ಪ್ರಕಾರ ಇದು ಅಪಾಯದ ಮಟ್ಟ ಎಂದು ಹೇಳಲಾಗಿದೆ. ಈ ಹಿಂದೆ ಅಂದರೆ ಭಾನುವಾರ ನೀರಿನ ಮಟ್ಟ ಇಳಿದಿತ್ತು. ಆದರೆ ಸೋಮವಾರ ರಾತ್ರಿ ಸುರಿದ ಮಳೆಗೆ ನೀರಿನ ಮಟ್ಟ ಹೆಚ್ಚಾಗಿದೆ. ಇದಕ್ಕೂ ಮುನ್ನ ಸೋಮವಾರ ಬೆಳಗ್ಗೆ ಯಮುನೆಯ ನೀರಿನ ಮಟ್ಟ 205.48 ಮೀಟರ್‌ ದಾಟಿತ್ತು. ಇದು ರಾಷ್ಟ್ರ ರಾಜಧಾನಿಯ ಹಲವಾರು ಭಾಗಗಳಲ್ಲಿ ಜಲಾವೃತಗೊಂಡಿತ್ತು. ಕೇಂದ್ರ ಜಲ ಆಯೋಗ 205.33 ನಷ್ಟು ನೀರಿನ ಮಟ್ಟ ಹೆಚ್ಚಾದರೆ ದೆಹಲಿಗೆ ಅಪಾಯ ತಪ್ಪಿದಲ್ಲ ಎಂದು ಹೇಳಿದರು. ಆದರೆ ಇದನ್ನು ಮೀರಿ 205.48ನಷ್ಟು ನೀರಿನ ಮಟ್ಟ ಹೆಚ್ಚಾಗಿತ್ತು.

ಕೇಂದ್ರ ಜಲ ಆಯೋಗದ ಪ್ರಕಾರ, ಅಪಾಯದ ರೇಖೆಯನ್ನು ದಾಟಿ ಬಂದಿದೆ. ದೆಹಲಿಯ ಅನೇಕ ಕಡೆ ಈಗಾಗಲೇ ಮುನ್ನೆಚ್ಚರಿಕೆ ಕ್ರಮವನ್ನು ತೆಗೆದುಕೊಂಡಿದ್ದು, ಭಾನುವಾರ ಕಡಿಮೆ ಇದ್ದ ನೀರಿನ ಮಟ್ಟು ಸೋಮವಾರ ಸುರಿದ ಭಾರಿ ಮಳೆಗೆ ಮತ್ತೆ ಹೆಚ್ಚಾಗಿದೆ.

ಇನ್ನೂ ಹರಿಯಾಣದ ಕೆಲವು ಪ್ರದೇಶಗಳಲ್ಲಿ ಸುರಿದ ಭಾರೀ ಮಳೆಯಿಂದ ಯಮುನಾ ನದಿಯ ನೀರಿನ ಮಟ್ಟದಲ್ಲಿ ಸ್ವಲ್ಪ ಏರಿಕೆ ಕಂಡಿದೆ. ಈ ಕಾರಣದಿಂದ ದೆಹಲಿ ಸರ್ಕಾರವು ಸ್ಥಾಪಿಸಿದ ಪರಿಹಾರ ಶಿಬಿರಗಳಲ್ಲಿ ವಾಸಿಸುವ ಜನರು ಪ್ರವಾಹ ಪೀಡಿತ ಮನೆಗಳಿಗೆ ಹಿಂತಿರುಗದಂತೆ ದೆಹಲಿ ಸಚಿವ ಅತಿಶಿ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಮಳೆ ಕಡಿಮೆ ಇದ್ದರೂ ದೆಹಲಿಯಲ್ಲಿ ಯಮುನೆ‌ ಉಕ್ಕಿ ಹರಿದಿದ್ದಾದರು ಯಾಕೆ?

ಇನ್ನೂ ಯಮುನಾ ನದಿಯ ನೀರಿನ ಮಟ್ಟ ಹೆಚ್ಚಾದ ಕಾರಣ ದೆಹಲಿಯ ಕೆಲವೊಂದು ಕಡೆ ಸಾರಿಗೆ ಸಂಪರ್ಕವನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ ಇದೀಗ ನೀರಿನ ಮಟ್ಟ ಕಡಿಮೆಯಾದ ಕಾರಣ ದೆಹಲಿ ಸರ್ಕಾರದ ಸಾರಿಗೆ ಇಲಾಖೆಯು ತನ್ನ ಕೆಲವು ಪ್ರಯಾಣ ನಿರ್ಬಂಧಗಳನ್ನು ಸಡಿಲಿಸಿದೆ. ಆದರೆ ಭಾರೀ ಸರಕು ವಾಹನಗಳ ಪ್ರವೇಶವನ್ನು ಸಿಂಗು ಗಡಿಯಲ್ಲಿ ನಿರ್ಬಂಧಿಸಲಾಗುತ್ತದೆ.

ಇದಲ್ಲದೆ, ದೆಹಲಿ ಸರ್ಕಾರದ ಸಾರಿಗೆ ಇಲಾಖೆ ಹೊರಡಿಸಿದ ಆದೇಶದಲ್ಲಿ, ಹರಿಯಾಣ, ಹಿಮಾಚಲ ಪ್ರದೇಶ, ಚಂಡೀಗಢ, ಜಮ್ಮು ಮತ್ತು ಕಾಶ್ಮೀರ ಮತ್ತು ಉತ್ತರಾಖಂಡದಿಂದ ದೆಹಲಿಯ ಐಎಸ್‌ಬಿಟಿ ಕಾಶ್ಮೀರಿ ಗೇಟ್‌ಗೆ ಬರುವ ಅಂತಾರಾಜ್ಯ ಬಸ್‌ಗಳು ಸಿಂಗು ಗಡಿಯನ್ನು ಮಾತ್ರ ಬರಲು ಸಾಧ್ಯ ಎಂದು ಹೇಳಲಾಗಿದೆ.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:10 am, Tue, 18 July 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ