AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಲಿನ ಭೀತಿ ಹಿಂಸೆಗೆ ಕಾರಣ -ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಗೆಲ್ಲುವುದು ಖಚಿತ ಎಂಬುದು ಅರಿವಾಗಿರುವ ವಿರೋಧ ಪಕ್ಷವು ಹಿಂಸಾಚಾರವನ್ನ ಹರಡುತ್ತಿದೆ ಅಂತ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. ಈ ಗಲಭೆಗಳ ಹಿಂದೆ ಯಾರಿದ್ದಾರೆ ಎಂಬುದನ್ನು ಜನರು ಅರ್ಥ ಮಾಡಿಕೊಂಡು, ಚುನಾವಣೆಯಲ್ಲಿ ಪಾಠ ಕಲಿಸಬೇಕು ಎಂದಿದ್ದಾರೆ. ಟೋಲ್​ನಲ್ಲಿ ಪಿಸ್ತೂಲ್​ ತೋರಿಸಿ ದರ್ಪ: ಕಾರು ಚಾಲಕನಿಗೆ ಟೋಲ್ ಕೇಳಿದ್ದಕ್ಕೆ ಪಿಸ್ತೂಲ್ ತೋರಿಸಿ ದುಷ್ಕರ್ಮಿ ದರ್ಪ ಮೆರೆದ ಘಟನೆ ಬಿಹಾರದ ವೈಶಾಲಿ ಎಂಬಲ್ಲಿ ನಡೆದಿದೆ. BR-01, DF – 9142 ನಂಬರಿನ ಕಾರಿನಲ್ಲಿದ್ದ ವ್ಯಕ್ತಿ […]

ಸೋಲಿನ ಭೀತಿ ಹಿಂಸೆಗೆ ಕಾರಣ -ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್
Follow us
ಸಾಧು ಶ್ರೀನಾಥ್​
|

Updated on: Dec 19, 2019 | 8:41 AM

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಗೆಲ್ಲುವುದು ಖಚಿತ ಎಂಬುದು ಅರಿವಾಗಿರುವ ವಿರೋಧ ಪಕ್ಷವು ಹಿಂಸಾಚಾರವನ್ನ ಹರಡುತ್ತಿದೆ ಅಂತ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. ಈ ಗಲಭೆಗಳ ಹಿಂದೆ ಯಾರಿದ್ದಾರೆ ಎಂಬುದನ್ನು ಜನರು ಅರ್ಥ ಮಾಡಿಕೊಂಡು, ಚುನಾವಣೆಯಲ್ಲಿ ಪಾಠ ಕಲಿಸಬೇಕು ಎಂದಿದ್ದಾರೆ.

ಟೋಲ್​ನಲ್ಲಿ ಪಿಸ್ತೂಲ್​ ತೋರಿಸಿ ದರ್ಪ: ಕಾರು ಚಾಲಕನಿಗೆ ಟೋಲ್ ಕೇಳಿದ್ದಕ್ಕೆ ಪಿಸ್ತೂಲ್ ತೋರಿಸಿ ದುಷ್ಕರ್ಮಿ ದರ್ಪ ಮೆರೆದ ಘಟನೆ ಬಿಹಾರದ ವೈಶಾಲಿ ಎಂಬಲ್ಲಿ ನಡೆದಿದೆ. BR-01, DF – 9142 ನಂಬರಿನ ಕಾರಿನಲ್ಲಿದ್ದ ವ್ಯಕ್ತಿ ಅಟ್ಟಹಾಸ ಮೆರೆದಿದ್ದು, ಟೋಲ್ ಸಿಸಿ ಕ್ಯಾಮರಾದಲ್ಲಿ ಎಲ್ಲಾ ದೃಶ್ಯ ಸೆರೆಯಾಗಿದೆ.

42 ಆಮೆಗಳು ವಶಕ್ಕೆ: ಪಶ್ಚಿಮಬಂಗಾಳದ ಬುರ್ದ್ವಾನ್​​ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 42ಕ್ಕೂ ಹೆಚ್ಚು ಆಮೆಗಳನ್ನ ವಶಕ್ಕೆ ಪಡೆಯಲಾಗಿದೆ. ರೈಲಿನಲ್ಲಿ ಇಬ್ಬರು ಮಹಿಳೆಯರು ಆಮೆಗಳನ್ನು ಸಾಗಿಸುತ್ತಿದ್ದು ಇಬ್ಬರನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ.

₹43 ಲಕ್ಷ ನಗದು ವಶ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 43 ಲಕ್ಷದ 98 ಸಾವಿರ ರೂಪಾಯಿಯನ್ನ ಹರಿಯಾಣ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹರಿಯಾಣದ ಜಹಾಜರ್​​ನಲ್ಲಿ ಹಣ ಸಾಗಿಸುತ್ತಿದ್ದು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಪೊಲೀಸರು ಹಣ ಸೀಜ್ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ.

ಹಿಮಮಳೆಯಲ್ಲಿ ಮೋಜು-ಮಸ್ತಿ: ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಹಿಮಮಳೆ ಜೋರಾಗಿದೆ. ಹಿಮಮಳೆಯಲ್ಲಿ ಪ್ರವಾಸಿಗರು ಮಿಂದೇಳ್ತಿದ್ದು ಮಸ್ತ್ ಮಸ್ತ್ ಎಂಜಾಯ್​ ಮಾಡ್ತಿದ್ದಾರೆ. ಇನ್ನೊಂದೆಡೆ ಶೀಮ್ಲಾದಲ್ಲೂ ಹಿಮಮಳೆ ಜೋರಾಗಿದ್ದು, ಪ್ರವಾಸಿಗರು ಹಿಮದಲ್ಲಿ ಆಟವಾಡ್ತಿದ್ದಾರೆ.

ಸೈರಸ್‌ ಮಿಸ್ತ್ರಿ ಮರುನೇಮಕಕ್ಕೆ ಆದೇಶ: ಟಾಟಾ ಸನ್ಸ್‌ನ ಕಾರ್ಯನಿರ್ವಾಹಕ ಅಧ್ಯಕ್ಷರನ್ನಾಗಿ ಸೈರಸ್‌ ಮಿಸ್ತ್ರಿ ಅವರನ್ನ ಮರು ನೇಮಕ ಮಾಡುವಂತೆ ರಾಷ್ಟ್ರೀಯ ಕಂಪನಿ ಕಾಯ್ದೆ ಮೇಲ್ಮನವಿ ನ್ಯಾಯಮಂಡಳಿ ಹೇಳಿದೆ. ಅಲ್ಲದೆ ಕಾರ್ಯನಿರ್ವಾಹಕ ಅಧ್ಯಕ್ಷರನ್ನಾಗಿ ನಟರಾಜನ್‌ ಚಂದ್ರಶೇಖರನ್‌ ಅವರ ನೇಮಕವು ಕಾನೂನುಬಾಹಿರ ಅಂತಾನೂ ತಿಳಿಸಿದೆ.

ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ