AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಲಿನ ಭೀತಿ ಹಿಂಸೆಗೆ ಕಾರಣ -ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಗೆಲ್ಲುವುದು ಖಚಿತ ಎಂಬುದು ಅರಿವಾಗಿರುವ ವಿರೋಧ ಪಕ್ಷವು ಹಿಂಸಾಚಾರವನ್ನ ಹರಡುತ್ತಿದೆ ಅಂತ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. ಈ ಗಲಭೆಗಳ ಹಿಂದೆ ಯಾರಿದ್ದಾರೆ ಎಂಬುದನ್ನು ಜನರು ಅರ್ಥ ಮಾಡಿಕೊಂಡು, ಚುನಾವಣೆಯಲ್ಲಿ ಪಾಠ ಕಲಿಸಬೇಕು ಎಂದಿದ್ದಾರೆ. ಟೋಲ್​ನಲ್ಲಿ ಪಿಸ್ತೂಲ್​ ತೋರಿಸಿ ದರ್ಪ: ಕಾರು ಚಾಲಕನಿಗೆ ಟೋಲ್ ಕೇಳಿದ್ದಕ್ಕೆ ಪಿಸ್ತೂಲ್ ತೋರಿಸಿ ದುಷ್ಕರ್ಮಿ ದರ್ಪ ಮೆರೆದ ಘಟನೆ ಬಿಹಾರದ ವೈಶಾಲಿ ಎಂಬಲ್ಲಿ ನಡೆದಿದೆ. BR-01, DF – 9142 ನಂಬರಿನ ಕಾರಿನಲ್ಲಿದ್ದ ವ್ಯಕ್ತಿ […]

ಸೋಲಿನ ಭೀತಿ ಹಿಂಸೆಗೆ ಕಾರಣ -ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 19, 2019 | 8:41 AM

Share

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಗೆಲ್ಲುವುದು ಖಚಿತ ಎಂಬುದು ಅರಿವಾಗಿರುವ ವಿರೋಧ ಪಕ್ಷವು ಹಿಂಸಾಚಾರವನ್ನ ಹರಡುತ್ತಿದೆ ಅಂತ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. ಈ ಗಲಭೆಗಳ ಹಿಂದೆ ಯಾರಿದ್ದಾರೆ ಎಂಬುದನ್ನು ಜನರು ಅರ್ಥ ಮಾಡಿಕೊಂಡು, ಚುನಾವಣೆಯಲ್ಲಿ ಪಾಠ ಕಲಿಸಬೇಕು ಎಂದಿದ್ದಾರೆ.

ಟೋಲ್​ನಲ್ಲಿ ಪಿಸ್ತೂಲ್​ ತೋರಿಸಿ ದರ್ಪ: ಕಾರು ಚಾಲಕನಿಗೆ ಟೋಲ್ ಕೇಳಿದ್ದಕ್ಕೆ ಪಿಸ್ತೂಲ್ ತೋರಿಸಿ ದುಷ್ಕರ್ಮಿ ದರ್ಪ ಮೆರೆದ ಘಟನೆ ಬಿಹಾರದ ವೈಶಾಲಿ ಎಂಬಲ್ಲಿ ನಡೆದಿದೆ. BR-01, DF – 9142 ನಂಬರಿನ ಕಾರಿನಲ್ಲಿದ್ದ ವ್ಯಕ್ತಿ ಅಟ್ಟಹಾಸ ಮೆರೆದಿದ್ದು, ಟೋಲ್ ಸಿಸಿ ಕ್ಯಾಮರಾದಲ್ಲಿ ಎಲ್ಲಾ ದೃಶ್ಯ ಸೆರೆಯಾಗಿದೆ.

42 ಆಮೆಗಳು ವಶಕ್ಕೆ: ಪಶ್ಚಿಮಬಂಗಾಳದ ಬುರ್ದ್ವಾನ್​​ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 42ಕ್ಕೂ ಹೆಚ್ಚು ಆಮೆಗಳನ್ನ ವಶಕ್ಕೆ ಪಡೆಯಲಾಗಿದೆ. ರೈಲಿನಲ್ಲಿ ಇಬ್ಬರು ಮಹಿಳೆಯರು ಆಮೆಗಳನ್ನು ಸಾಗಿಸುತ್ತಿದ್ದು ಇಬ್ಬರನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ.

₹43 ಲಕ್ಷ ನಗದು ವಶ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 43 ಲಕ್ಷದ 98 ಸಾವಿರ ರೂಪಾಯಿಯನ್ನ ಹರಿಯಾಣ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹರಿಯಾಣದ ಜಹಾಜರ್​​ನಲ್ಲಿ ಹಣ ಸಾಗಿಸುತ್ತಿದ್ದು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಪೊಲೀಸರು ಹಣ ಸೀಜ್ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ.

ಹಿಮಮಳೆಯಲ್ಲಿ ಮೋಜು-ಮಸ್ತಿ: ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಹಿಮಮಳೆ ಜೋರಾಗಿದೆ. ಹಿಮಮಳೆಯಲ್ಲಿ ಪ್ರವಾಸಿಗರು ಮಿಂದೇಳ್ತಿದ್ದು ಮಸ್ತ್ ಮಸ್ತ್ ಎಂಜಾಯ್​ ಮಾಡ್ತಿದ್ದಾರೆ. ಇನ್ನೊಂದೆಡೆ ಶೀಮ್ಲಾದಲ್ಲೂ ಹಿಮಮಳೆ ಜೋರಾಗಿದ್ದು, ಪ್ರವಾಸಿಗರು ಹಿಮದಲ್ಲಿ ಆಟವಾಡ್ತಿದ್ದಾರೆ.

ಸೈರಸ್‌ ಮಿಸ್ತ್ರಿ ಮರುನೇಮಕಕ್ಕೆ ಆದೇಶ: ಟಾಟಾ ಸನ್ಸ್‌ನ ಕಾರ್ಯನಿರ್ವಾಹಕ ಅಧ್ಯಕ್ಷರನ್ನಾಗಿ ಸೈರಸ್‌ ಮಿಸ್ತ್ರಿ ಅವರನ್ನ ಮರು ನೇಮಕ ಮಾಡುವಂತೆ ರಾಷ್ಟ್ರೀಯ ಕಂಪನಿ ಕಾಯ್ದೆ ಮೇಲ್ಮನವಿ ನ್ಯಾಯಮಂಡಳಿ ಹೇಳಿದೆ. ಅಲ್ಲದೆ ಕಾರ್ಯನಿರ್ವಾಹಕ ಅಧ್ಯಕ್ಷರನ್ನಾಗಿ ನಟರಾಜನ್‌ ಚಂದ್ರಶೇಖರನ್‌ ಅವರ ನೇಮಕವು ಕಾನೂನುಬಾಹಿರ ಅಂತಾನೂ ತಿಳಿಸಿದೆ.

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ