AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Atal setu: ಹೊಸದಾಗಿ ನಿರ್ಮಿಸಲಾಗಿದ್ದ ಅಟಲ್ ಸೇತುನಿಂದ ಜಿಗಿದ ಮಹಿಳೆ, ಶೋಧ ಕಾರ್ಯಾಚರಣೆ ಮುಂದುವರೆದಿದೆ

ಮುಂಬೈ, ಮಾ.20: ಪರೇಲ್ ಪ್ರದೇಶದ 43 ವರ್ಷದ ಮಹಿಳೆಯೊಬ್ಬರು ಮುಂಬೈನಲ್ಲಿ ಹೊಸದಾಗಿ ನಿರ್ಮಿಸಲಾದ ಅಟಲ್ ಸೇತು ಮೇಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಮವಾರ ಮಧ್ಯಾಹ್ನ ಸೇತುವೆಯ ರಸ್ತೆಯಿಂದ ಜಿಗಿದಿದ್ದಾರೆ ಎಂದು ಹೇಳಲಾಗಿದೆ. ಇನ್ನು ಈ ಬಗ್ಗೆ ತನಿಖೆ ನಡೆಸಿದ ಪೊಲೀಸರಿಗೆ ಆಕೆಯ ಮನೆಯಲ್ಲಿ ಒಂದು ಪತ್ರ ಸಿಕ್ಕಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆಯನ್ನು ವೈದ್ಯೆ ಕಿಂಜಲ್ ಕಾಂತಿಲಾಲ್ ಶಾ ಎಂದು ಗುರುತಿಸಲಾಗಿದೆ. ಮಹಿಳೆ ಕಳೆದ ಹಲವಾರು ವರ್ಷಗಳಿಂದ ಖಿನ್ನತೆ ಒಳಗಾಗಿದ್ದರು. ಅವರಿಗೆ ಈಗಾಗಲೇ ಚಿಕಿತ್ಸೆ ಮಾಡಲಾಗುತ್ತಿದೆ ಎಂದು ಮನೆಯವರು ಪೊಲೀಸರಿಗೆ ತಿಳಿಸಿದ್ದಾರೆ. ಅಟಲ್ ಸೇತು ಸುತ್ತ ಆಕೆಯ ಪತ್ತೆಗಾಗಿ ಕಾರ್ಯಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

Atal setu: ಹೊಸದಾಗಿ ನಿರ್ಮಿಸಲಾಗಿದ್ದ ಅಟಲ್ ಸೇತುನಿಂದ ಜಿಗಿದ ಮಹಿಳೆ, ಶೋಧ ಕಾರ್ಯಾಚರಣೆ ಮುಂದುವರೆದಿದೆ
ಅಕ್ಷಯ್​ ಪಲ್ಲಮಜಲು​​
|

Updated on: Mar 20, 2024 | 3:55 PM

Share

ಮುಂಬೈ, ಮಾ.20: ಪರೇಲ್ ಪ್ರದೇಶದ 43 ವರ್ಷದ ಮಹಿಳೆಯೊಬ್ಬರು ಮುಂಬೈನಲ್ಲಿ ಹೊಸದಾಗಿ ನಿರ್ಮಿಸಲಾದ ಅಟಲ್ ಸೇತು ಮೇಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಮವಾರ ಮಧ್ಯಾಹ್ನ ಸೇತುವೆಯ ರಸ್ತೆಯಿಂದ ಜಿಗಿದಿದ್ದಾರೆ ಎಂದು ಹೇಳಲಾಗಿದೆ. ಇನ್ನು ಈ ಬಗ್ಗೆ ತನಿಖೆ ನಡೆಸಿದ ಪೊಲೀಸರಿಗೆ ಆಕೆಯ ಮನೆಯಲ್ಲಿ ಒಂದು ಪತ್ರ ಸಿಕ್ಕಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆಯನ್ನು ವೈದ್ಯೆ ಕಿಂಜಲ್ ಕಾಂತಿಲಾಲ್ ಶಾ ಎಂದು ಗುರುತಿಸಲಾಗಿದೆ. ಮಹಿಳೆ ಕಳೆದ ಹಲವಾರು ವರ್ಷಗಳಿಂದ ಖಿನ್ನತೆ ಒಳಗಾಗಿದ್ದರು. ಅವರಿಗೆ ಈಗಾಗಲೇ ಚಿಕಿತ್ಸೆ ಮಾಡಲಾಗುತ್ತಿದೆ ಎಂದು ಮನೆಯವರು ಪೊಲೀಸರಿಗೆ ತಿಳಿಸಿದ್ದಾರೆ. ಅಟಲ್ ಸೇತು ಸುತ್ತ ಆಕೆಯ ಪತ್ತೆಗಾಗಿ ಕಾರ್ಯಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಕಿಂಜಲ್ ಕಾಂತಿಲಾಲ್ ಶಾ ದಾದಾಸಾಹೇಬ್ ಫಾಲ್ಕೆ ರಸ್ತೆಯಲ್ಲಿರುವ ನವೀನ್ ಆಶಾ ಕಟ್ಟಡದಲ್ಲಿ ತನ್ನ ತಂದೆಯೊಂದಿಗೆ ಉಳಿದುಕೊಂಡಿದ್ದಾರೆ ಎಂದು ಹೇಳಿದ್ದಾರೆ. ಸೋಮವಾರ ಮಧ್ಯಾಹ್ನ ಕಿಂಜಲ್ ಪರೇಲ್‌ನಲ್ಲಿರುವ ತನ್ನ ಮನೆಯ ಸಮೀಪದಿಂದ ಟ್ಯಾಕ್ಸಿ ಮಾಡಿಕೊಂಡು ಅಟಲ್ ಸೇತು ಸೇತುವೆ ಬಳಿ ಹೋಗಿದ್ದಾರೆ. ಮುಂಬೈನಿಂದ ಸುಮಾರು 14.3 ಕಿಲೋಮೀಟರ್ ದೂರದಲ್ಲಿ ಈ ಸೇತುವೆ ಬಳಿ ಟ್ಯಾಕ್ಸಿ ನಿಲ್ಲಿಸಲು ಚಾಲಕನ್ನು ಕೇಳಿಕೊಂಡಿದ್ದಾರೆ.

ಆಕೆಯ ವರ್ತನೆಯನ್ನು ಕಂಡು ಚಾಲಕನಿಗೆ ಅನುಮಾನ ಬಂದು ಆಕೆಯನ್ನು ಹಿಂಬಾಲಿಸಿಕೊಂಡು ಹೋಗಿದ್ದಾರೆ. ಚಾಲಕ ಹಿಂಬಾಲಿಸವುದನ್ನು ಕಂಡು ತನ್ನನ್ನೂ ಹಿಂಬಾಲಿಸದಂತೆ ಹೇಳಿದ್ದಾಳೆ. ಆಕೆ ಆತ್ಮಹತ್ಯೆ ಮಾಡಿಕೊಳ್ಳಲು ಬಂದಿದ್ದಾಳೆ ಎಂದು ತಿಳಿದು ಚಾಲಕ ಪೊಲೀಸರಿಗೆ ಕಾಲ್ ಮಾಡಿ ಹೇಳಿದ್ದಾರೆ. ಕರಾವಳಿ ಪೊಲೀಸರು, ಸ್ಥಳೀಯ ಗ್ರಾಮಸ್ಥರು ಮತ್ತು ರಕ್ಷಕರ ಸಹಾಯದಿಂದ ಅವಳನ್ನು ಪತ್ತೆಹಚ್ಚುವ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.

ಇದನ್ನೂ ಓದಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಯುಪಿಎಸ್​​ಸಿ ಪ್ರಿಲಿಮಿನರಿ ಪರೀಕ್ಷೆ ಮುಂದೂಡಿಕೆ

ಸೋಮವಾರ ಬೆಳಿಗ್ಗೆ ನವಿ ಮುಂಬೈ ಪೊಲೀಸರಿಗೆ ಅವಳು ಪರೇಲ್ ಮೂಲದವಳು ಎಂದು ತಿಳಿದುಬಂದಿದೆ. ಹಾಗೂ ಆಕೆಯ ತಂದೆ ಕೂಡ ಪೊಲೀಸ್ ಠಾಣೆ ಮಗಳು ಕಾಣೆಯಾಗಿರುವ ಬಗ್ಗೆ ದೂರ ನೀಡಿದರು. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ತನ್ನ ತಂದೆ ಫೋನ್​​​ ಮಾಡಿ, ನಾನು ಕೆಲಸದ ನಿಮಿತ್ತ ಹೊರಗೆ ಹೋಗುತ್ತಿದ್ದೇನೆ ಎಂದು ಹೇಳಿದ್ದಾರೆ. ಇನ್ನು ಮನೆಯಲ್ಲಿ ಪೊಲೀಸರು ತನಿಖೆ ನಡೆಸಿದಾಗ ನಾನು ಆತ್ಮಹತ್ಯೆ ಮಾಡಿಕೊಳ್ಳಲು ಅಟಲ್ ಸೇತುಗೆ ಹೋಗುತ್ತಿದ್ದೇನೆ ಎಂದು ಹೇಳಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ