AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Atal setu: ಹೊಸದಾಗಿ ನಿರ್ಮಿಸಲಾಗಿದ್ದ ಅಟಲ್ ಸೇತುನಿಂದ ಜಿಗಿದ ಮಹಿಳೆ, ಶೋಧ ಕಾರ್ಯಾಚರಣೆ ಮುಂದುವರೆದಿದೆ

ಮುಂಬೈ, ಮಾ.20: ಪರೇಲ್ ಪ್ರದೇಶದ 43 ವರ್ಷದ ಮಹಿಳೆಯೊಬ್ಬರು ಮುಂಬೈನಲ್ಲಿ ಹೊಸದಾಗಿ ನಿರ್ಮಿಸಲಾದ ಅಟಲ್ ಸೇತು ಮೇಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಮವಾರ ಮಧ್ಯಾಹ್ನ ಸೇತುವೆಯ ರಸ್ತೆಯಿಂದ ಜಿಗಿದಿದ್ದಾರೆ ಎಂದು ಹೇಳಲಾಗಿದೆ. ಇನ್ನು ಈ ಬಗ್ಗೆ ತನಿಖೆ ನಡೆಸಿದ ಪೊಲೀಸರಿಗೆ ಆಕೆಯ ಮನೆಯಲ್ಲಿ ಒಂದು ಪತ್ರ ಸಿಕ್ಕಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆಯನ್ನು ವೈದ್ಯೆ ಕಿಂಜಲ್ ಕಾಂತಿಲಾಲ್ ಶಾ ಎಂದು ಗುರುತಿಸಲಾಗಿದೆ. ಮಹಿಳೆ ಕಳೆದ ಹಲವಾರು ವರ್ಷಗಳಿಂದ ಖಿನ್ನತೆ ಒಳಗಾಗಿದ್ದರು. ಅವರಿಗೆ ಈಗಾಗಲೇ ಚಿಕಿತ್ಸೆ ಮಾಡಲಾಗುತ್ತಿದೆ ಎಂದು ಮನೆಯವರು ಪೊಲೀಸರಿಗೆ ತಿಳಿಸಿದ್ದಾರೆ. ಅಟಲ್ ಸೇತು ಸುತ್ತ ಆಕೆಯ ಪತ್ತೆಗಾಗಿ ಕಾರ್ಯಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

Atal setu: ಹೊಸದಾಗಿ ನಿರ್ಮಿಸಲಾಗಿದ್ದ ಅಟಲ್ ಸೇತುನಿಂದ ಜಿಗಿದ ಮಹಿಳೆ, ಶೋಧ ಕಾರ್ಯಾಚರಣೆ ಮುಂದುವರೆದಿದೆ
ಅಕ್ಷಯ್​ ಪಲ್ಲಮಜಲು​​
|

Updated on: Mar 20, 2024 | 3:55 PM

Share

ಮುಂಬೈ, ಮಾ.20: ಪರೇಲ್ ಪ್ರದೇಶದ 43 ವರ್ಷದ ಮಹಿಳೆಯೊಬ್ಬರು ಮುಂಬೈನಲ್ಲಿ ಹೊಸದಾಗಿ ನಿರ್ಮಿಸಲಾದ ಅಟಲ್ ಸೇತು ಮೇಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಮವಾರ ಮಧ್ಯಾಹ್ನ ಸೇತುವೆಯ ರಸ್ತೆಯಿಂದ ಜಿಗಿದಿದ್ದಾರೆ ಎಂದು ಹೇಳಲಾಗಿದೆ. ಇನ್ನು ಈ ಬಗ್ಗೆ ತನಿಖೆ ನಡೆಸಿದ ಪೊಲೀಸರಿಗೆ ಆಕೆಯ ಮನೆಯಲ್ಲಿ ಒಂದು ಪತ್ರ ಸಿಕ್ಕಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆಯನ್ನು ವೈದ್ಯೆ ಕಿಂಜಲ್ ಕಾಂತಿಲಾಲ್ ಶಾ ಎಂದು ಗುರುತಿಸಲಾಗಿದೆ. ಮಹಿಳೆ ಕಳೆದ ಹಲವಾರು ವರ್ಷಗಳಿಂದ ಖಿನ್ನತೆ ಒಳಗಾಗಿದ್ದರು. ಅವರಿಗೆ ಈಗಾಗಲೇ ಚಿಕಿತ್ಸೆ ಮಾಡಲಾಗುತ್ತಿದೆ ಎಂದು ಮನೆಯವರು ಪೊಲೀಸರಿಗೆ ತಿಳಿಸಿದ್ದಾರೆ. ಅಟಲ್ ಸೇತು ಸುತ್ತ ಆಕೆಯ ಪತ್ತೆಗಾಗಿ ಕಾರ್ಯಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಕಿಂಜಲ್ ಕಾಂತಿಲಾಲ್ ಶಾ ದಾದಾಸಾಹೇಬ್ ಫಾಲ್ಕೆ ರಸ್ತೆಯಲ್ಲಿರುವ ನವೀನ್ ಆಶಾ ಕಟ್ಟಡದಲ್ಲಿ ತನ್ನ ತಂದೆಯೊಂದಿಗೆ ಉಳಿದುಕೊಂಡಿದ್ದಾರೆ ಎಂದು ಹೇಳಿದ್ದಾರೆ. ಸೋಮವಾರ ಮಧ್ಯಾಹ್ನ ಕಿಂಜಲ್ ಪರೇಲ್‌ನಲ್ಲಿರುವ ತನ್ನ ಮನೆಯ ಸಮೀಪದಿಂದ ಟ್ಯಾಕ್ಸಿ ಮಾಡಿಕೊಂಡು ಅಟಲ್ ಸೇತು ಸೇತುವೆ ಬಳಿ ಹೋಗಿದ್ದಾರೆ. ಮುಂಬೈನಿಂದ ಸುಮಾರು 14.3 ಕಿಲೋಮೀಟರ್ ದೂರದಲ್ಲಿ ಈ ಸೇತುವೆ ಬಳಿ ಟ್ಯಾಕ್ಸಿ ನಿಲ್ಲಿಸಲು ಚಾಲಕನ್ನು ಕೇಳಿಕೊಂಡಿದ್ದಾರೆ.

ಆಕೆಯ ವರ್ತನೆಯನ್ನು ಕಂಡು ಚಾಲಕನಿಗೆ ಅನುಮಾನ ಬಂದು ಆಕೆಯನ್ನು ಹಿಂಬಾಲಿಸಿಕೊಂಡು ಹೋಗಿದ್ದಾರೆ. ಚಾಲಕ ಹಿಂಬಾಲಿಸವುದನ್ನು ಕಂಡು ತನ್ನನ್ನೂ ಹಿಂಬಾಲಿಸದಂತೆ ಹೇಳಿದ್ದಾಳೆ. ಆಕೆ ಆತ್ಮಹತ್ಯೆ ಮಾಡಿಕೊಳ್ಳಲು ಬಂದಿದ್ದಾಳೆ ಎಂದು ತಿಳಿದು ಚಾಲಕ ಪೊಲೀಸರಿಗೆ ಕಾಲ್ ಮಾಡಿ ಹೇಳಿದ್ದಾರೆ. ಕರಾವಳಿ ಪೊಲೀಸರು, ಸ್ಥಳೀಯ ಗ್ರಾಮಸ್ಥರು ಮತ್ತು ರಕ್ಷಕರ ಸಹಾಯದಿಂದ ಅವಳನ್ನು ಪತ್ತೆಹಚ್ಚುವ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.

ಇದನ್ನೂ ಓದಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಯುಪಿಎಸ್​​ಸಿ ಪ್ರಿಲಿಮಿನರಿ ಪರೀಕ್ಷೆ ಮುಂದೂಡಿಕೆ

ಸೋಮವಾರ ಬೆಳಿಗ್ಗೆ ನವಿ ಮುಂಬೈ ಪೊಲೀಸರಿಗೆ ಅವಳು ಪರೇಲ್ ಮೂಲದವಳು ಎಂದು ತಿಳಿದುಬಂದಿದೆ. ಹಾಗೂ ಆಕೆಯ ತಂದೆ ಕೂಡ ಪೊಲೀಸ್ ಠಾಣೆ ಮಗಳು ಕಾಣೆಯಾಗಿರುವ ಬಗ್ಗೆ ದೂರ ನೀಡಿದರು. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ತನ್ನ ತಂದೆ ಫೋನ್​​​ ಮಾಡಿ, ನಾನು ಕೆಲಸದ ನಿಮಿತ್ತ ಹೊರಗೆ ಹೋಗುತ್ತಿದ್ದೇನೆ ಎಂದು ಹೇಳಿದ್ದಾರೆ. ಇನ್ನು ಮನೆಯಲ್ಲಿ ಪೊಲೀಸರು ತನಿಖೆ ನಡೆಸಿದಾಗ ನಾನು ಆತ್ಮಹತ್ಯೆ ಮಾಡಿಕೊಳ್ಳಲು ಅಟಲ್ ಸೇತುಗೆ ಹೋಗುತ್ತಿದ್ದೇನೆ ಎಂದು ಹೇಳಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!