AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಲ್ಲಾ’ ಎಂಬ ಪದದ ಮೂಲ ಸಂಸ್ಕೃತ: ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ

ಅಲ್ಲಾ(Allah) ಎಂಬ ಪದವು ಸಂಸ್ಕೃತದಿಂದ ಬಂದಿದೆ ಎಂದು ವಾರಾಣಸಿಯ (Varanasi) ಗೋವರ್ಧನ ಪುರಿ ಮಠದ ಮುಖ್ಯಸ್ಥರಾದ ನಿಶ್ಚಲಾನಂದ ಸರಸ್ವತಿ ಹೇಳಿಕೆ ನೀಡಿದ್ದಾರೆ.

‘ಅಲ್ಲಾ’ ಎಂಬ ಪದದ ಮೂಲ ಸಂಸ್ಕೃತ: ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ
ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ
ನಯನಾ ರಾಜೀವ್
|

Updated on: Feb 23, 2023 | 1:22 PM

Share

ಅಲ್ಲಾ(Allah) ಎಂಬ ಪದವು ಸಂಸ್ಕೃತದಿಂದ ಬಂದಿದೆ ಎಂದು ವಾರಾಣಸಿಯ (Varanasi) ಗೋವರ್ಧನ ಪುರಿ ಮಠದ ಮುಖ್ಯಸ್ಥರಾದ ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ ಹೇಳಿಕೆ ನೀಡಿದ್ದಾರೆ. ಅಲ್ಲಾ ಎಂಬ ಪದ ಹೆಣ್ತನದ ಶಕ್ತಿಯನ್ನು ಸೂಚಿಸುತ್ತದೆ. ಈ ಪದವನ್ನು ದುರ್ಗಾ ಮಾತೆಯನ್ನು ಆವಾಹಿಸಲು ಬಳಸಲಾಗುತ್ತದೆ. ಜಗತ್ತಿನಲ್ಲಿ ಇರುವುದು ಕೇವಲ ಒಂದೇ ಧರ್ಮ. ಅದು ಹಿಂದೂ ಸನಾತನ ಧರ್ಮ. ಉಳಿದ ಎಲ್ಲಾ ಧರ್ಮಗಳು ಕೇವಲ ಪಂಗಡಗಳು. ಧರ್ಮದ ಬಗ್ಗೆ ಪ್ರಶ್ನೆಯನ್ನು ಎತ್ತುವವರು ಮೊದಲು ಸಂಸ್ಕೃತ ವ್ಯಾಕರಣವನ್ನು ಕಲಿತುಕೊಳ್ಳಿ ಎಂದು ಹೇಳಿದರು.

ಸನಾತನ ಧರ್ಮವನ್ನು ಅನುಸರಿಸುವುದರಿಂದ ಮಾತ್ರ ಜೀವನದಲ್ಲಿ ಸಂತೋಷ ಹಾಗೂ ಮರಣಾನಂತರ ಮೋಕ್ಷ ಸಾಧ್ಯ. ಧರ್ಮದ ಪ್ರಶ್ನೆಗಳನ್ನು ಎತ್ತುವವರು ಮೊದಲು ಸಂಸ್ಕೃತದ ವ್ಯಾಕರಣದ ಅಧ್ಯಯನ ಮಾಡಬೇಕು ಎಂದರು.

ಜಮಿಯತ್ ಉಲೇಮಾ-ಎ-ಹಿಂದ್ ಮುಖ್ಯಸ್ಥ ಎಂಡಿ ಸೈಯದ್ ಅರ್ಷದ್ ಮದನಿ, ಅಲ್ಲಾ ಹಾಗೂ ಓಂ ಒಂದೇ ಎಂದಿರುವುದನ್ನು ಸ್ವಾಮೀಜಿ ಖಂಡಿಸಿದ್ದಾರೆ. ಇತರೆ ಧರ್ಮಗಳನ್ನು ಟೀಕಿಸುವ ಧೈರ್ಯ ಅವರಿಗಿಲ್ಲ, ಅಲ್ಲಾ ಎಂಬ ಪದವು ತಾಯಿಯ ಪದ ಮತ್ತು ಶಕ್ತಿಯುತ ಪದವಾಗಿದೆ. ಓಂ ಎಂಬುದು ದೇವರ ನಾಮ.

ಮಾರಿಷಸ್ ಸೇರಿದಂತೆ 15 ದೇಶಗಳು ಭಾರತ ಹಿಂದೂ ರಾಷ್ಟ್ರವಾಗಲು ಕಾಯುತ್ತಿವೆ. ಈ ಔಪಚಾರಿಕತೆ ಪೂರ್ಣಗೊಂಡ ತಕ್ಷಣ, ಏಷ್ಯಾದ ವಿವಿಧ ದೇಶಗಳು ತಮ್ಮನ್ನು ಹಿಂದೂ ರಾಷ್ಟ್ರವೆಂದು ಘೋಷಿಸಿಕೊಳ್ಳುತ್ತವೆ ಎಂದರು.

ದೇಶದಲ್ಲಿ ಕೆಲವು ಹೆಣ್ಣುಮಕ್ಕಳಿಗೆ ಆಗಿರುವ ಘಟನೆಗಳು ಆಧುನಿಕ ಶಿಕ್ಷಣ ವ್ಯವಸ್ಥೆಯ ದಿಕ್ಕು ತೋಚದಂತಿರುವುದನ್ನು ತೋರಿಸುತ್ತದೆ ಎಂದರು . ಮಾತೃಶಕ್ತಿಯನ್ನು ಗೌರವಿಸದಿದ್ದರೆ ಜಗತ್ತಿನಲ್ಲಿ ಏನೂ ಉಳಿಯುವುದಿಲ್ಲ. ಮಾತೃಶಕ್ತಿಯನ್ನು ರಕ್ಷಿಸುವುದು ಸನಾತನ ಸಂಪ್ರದಾಯ ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!