AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಲ್ಲಾ’ ಎಂಬ ಪದದ ಮೂಲ ಸಂಸ್ಕೃತ: ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ

ಅಲ್ಲಾ(Allah) ಎಂಬ ಪದವು ಸಂಸ್ಕೃತದಿಂದ ಬಂದಿದೆ ಎಂದು ವಾರಾಣಸಿಯ (Varanasi) ಗೋವರ್ಧನ ಪುರಿ ಮಠದ ಮುಖ್ಯಸ್ಥರಾದ ನಿಶ್ಚಲಾನಂದ ಸರಸ್ವತಿ ಹೇಳಿಕೆ ನೀಡಿದ್ದಾರೆ.

‘ಅಲ್ಲಾ’ ಎಂಬ ಪದದ ಮೂಲ ಸಂಸ್ಕೃತ: ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ
ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ
ನಯನಾ ರಾಜೀವ್
|

Updated on: Feb 23, 2023 | 1:22 PM

Share

ಅಲ್ಲಾ(Allah) ಎಂಬ ಪದವು ಸಂಸ್ಕೃತದಿಂದ ಬಂದಿದೆ ಎಂದು ವಾರಾಣಸಿಯ (Varanasi) ಗೋವರ್ಧನ ಪುರಿ ಮಠದ ಮುಖ್ಯಸ್ಥರಾದ ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ ಹೇಳಿಕೆ ನೀಡಿದ್ದಾರೆ. ಅಲ್ಲಾ ಎಂಬ ಪದ ಹೆಣ್ತನದ ಶಕ್ತಿಯನ್ನು ಸೂಚಿಸುತ್ತದೆ. ಈ ಪದವನ್ನು ದುರ್ಗಾ ಮಾತೆಯನ್ನು ಆವಾಹಿಸಲು ಬಳಸಲಾಗುತ್ತದೆ. ಜಗತ್ತಿನಲ್ಲಿ ಇರುವುದು ಕೇವಲ ಒಂದೇ ಧರ್ಮ. ಅದು ಹಿಂದೂ ಸನಾತನ ಧರ್ಮ. ಉಳಿದ ಎಲ್ಲಾ ಧರ್ಮಗಳು ಕೇವಲ ಪಂಗಡಗಳು. ಧರ್ಮದ ಬಗ್ಗೆ ಪ್ರಶ್ನೆಯನ್ನು ಎತ್ತುವವರು ಮೊದಲು ಸಂಸ್ಕೃತ ವ್ಯಾಕರಣವನ್ನು ಕಲಿತುಕೊಳ್ಳಿ ಎಂದು ಹೇಳಿದರು.

ಸನಾತನ ಧರ್ಮವನ್ನು ಅನುಸರಿಸುವುದರಿಂದ ಮಾತ್ರ ಜೀವನದಲ್ಲಿ ಸಂತೋಷ ಹಾಗೂ ಮರಣಾನಂತರ ಮೋಕ್ಷ ಸಾಧ್ಯ. ಧರ್ಮದ ಪ್ರಶ್ನೆಗಳನ್ನು ಎತ್ತುವವರು ಮೊದಲು ಸಂಸ್ಕೃತದ ವ್ಯಾಕರಣದ ಅಧ್ಯಯನ ಮಾಡಬೇಕು ಎಂದರು.

ಜಮಿಯತ್ ಉಲೇಮಾ-ಎ-ಹಿಂದ್ ಮುಖ್ಯಸ್ಥ ಎಂಡಿ ಸೈಯದ್ ಅರ್ಷದ್ ಮದನಿ, ಅಲ್ಲಾ ಹಾಗೂ ಓಂ ಒಂದೇ ಎಂದಿರುವುದನ್ನು ಸ್ವಾಮೀಜಿ ಖಂಡಿಸಿದ್ದಾರೆ. ಇತರೆ ಧರ್ಮಗಳನ್ನು ಟೀಕಿಸುವ ಧೈರ್ಯ ಅವರಿಗಿಲ್ಲ, ಅಲ್ಲಾ ಎಂಬ ಪದವು ತಾಯಿಯ ಪದ ಮತ್ತು ಶಕ್ತಿಯುತ ಪದವಾಗಿದೆ. ಓಂ ಎಂಬುದು ದೇವರ ನಾಮ.

ಮಾರಿಷಸ್ ಸೇರಿದಂತೆ 15 ದೇಶಗಳು ಭಾರತ ಹಿಂದೂ ರಾಷ್ಟ್ರವಾಗಲು ಕಾಯುತ್ತಿವೆ. ಈ ಔಪಚಾರಿಕತೆ ಪೂರ್ಣಗೊಂಡ ತಕ್ಷಣ, ಏಷ್ಯಾದ ವಿವಿಧ ದೇಶಗಳು ತಮ್ಮನ್ನು ಹಿಂದೂ ರಾಷ್ಟ್ರವೆಂದು ಘೋಷಿಸಿಕೊಳ್ಳುತ್ತವೆ ಎಂದರು.

ದೇಶದಲ್ಲಿ ಕೆಲವು ಹೆಣ್ಣುಮಕ್ಕಳಿಗೆ ಆಗಿರುವ ಘಟನೆಗಳು ಆಧುನಿಕ ಶಿಕ್ಷಣ ವ್ಯವಸ್ಥೆಯ ದಿಕ್ಕು ತೋಚದಂತಿರುವುದನ್ನು ತೋರಿಸುತ್ತದೆ ಎಂದರು . ಮಾತೃಶಕ್ತಿಯನ್ನು ಗೌರವಿಸದಿದ್ದರೆ ಜಗತ್ತಿನಲ್ಲಿ ಏನೂ ಉಳಿಯುವುದಿಲ್ಲ. ಮಾತೃಶಕ್ತಿಯನ್ನು ರಕ್ಷಿಸುವುದು ಸನಾತನ ಸಂಪ್ರದಾಯ ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್