AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಲ್ಲಾ’ ಎಂಬ ಪದದ ಮೂಲ ಸಂಸ್ಕೃತ: ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ

ಅಲ್ಲಾ(Allah) ಎಂಬ ಪದವು ಸಂಸ್ಕೃತದಿಂದ ಬಂದಿದೆ ಎಂದು ವಾರಾಣಸಿಯ (Varanasi) ಗೋವರ್ಧನ ಪುರಿ ಮಠದ ಮುಖ್ಯಸ್ಥರಾದ ನಿಶ್ಚಲಾನಂದ ಸರಸ್ವತಿ ಹೇಳಿಕೆ ನೀಡಿದ್ದಾರೆ.

‘ಅಲ್ಲಾ’ ಎಂಬ ಪದದ ಮೂಲ ಸಂಸ್ಕೃತ: ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ
ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ
ನಯನಾ ರಾಜೀವ್
|

Updated on: Feb 23, 2023 | 1:22 PM

Share

ಅಲ್ಲಾ(Allah) ಎಂಬ ಪದವು ಸಂಸ್ಕೃತದಿಂದ ಬಂದಿದೆ ಎಂದು ವಾರಾಣಸಿಯ (Varanasi) ಗೋವರ್ಧನ ಪುರಿ ಮಠದ ಮುಖ್ಯಸ್ಥರಾದ ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ ಹೇಳಿಕೆ ನೀಡಿದ್ದಾರೆ. ಅಲ್ಲಾ ಎಂಬ ಪದ ಹೆಣ್ತನದ ಶಕ್ತಿಯನ್ನು ಸೂಚಿಸುತ್ತದೆ. ಈ ಪದವನ್ನು ದುರ್ಗಾ ಮಾತೆಯನ್ನು ಆವಾಹಿಸಲು ಬಳಸಲಾಗುತ್ತದೆ. ಜಗತ್ತಿನಲ್ಲಿ ಇರುವುದು ಕೇವಲ ಒಂದೇ ಧರ್ಮ. ಅದು ಹಿಂದೂ ಸನಾತನ ಧರ್ಮ. ಉಳಿದ ಎಲ್ಲಾ ಧರ್ಮಗಳು ಕೇವಲ ಪಂಗಡಗಳು. ಧರ್ಮದ ಬಗ್ಗೆ ಪ್ರಶ್ನೆಯನ್ನು ಎತ್ತುವವರು ಮೊದಲು ಸಂಸ್ಕೃತ ವ್ಯಾಕರಣವನ್ನು ಕಲಿತುಕೊಳ್ಳಿ ಎಂದು ಹೇಳಿದರು.

ಸನಾತನ ಧರ್ಮವನ್ನು ಅನುಸರಿಸುವುದರಿಂದ ಮಾತ್ರ ಜೀವನದಲ್ಲಿ ಸಂತೋಷ ಹಾಗೂ ಮರಣಾನಂತರ ಮೋಕ್ಷ ಸಾಧ್ಯ. ಧರ್ಮದ ಪ್ರಶ್ನೆಗಳನ್ನು ಎತ್ತುವವರು ಮೊದಲು ಸಂಸ್ಕೃತದ ವ್ಯಾಕರಣದ ಅಧ್ಯಯನ ಮಾಡಬೇಕು ಎಂದರು.

ಜಮಿಯತ್ ಉಲೇಮಾ-ಎ-ಹಿಂದ್ ಮುಖ್ಯಸ್ಥ ಎಂಡಿ ಸೈಯದ್ ಅರ್ಷದ್ ಮದನಿ, ಅಲ್ಲಾ ಹಾಗೂ ಓಂ ಒಂದೇ ಎಂದಿರುವುದನ್ನು ಸ್ವಾಮೀಜಿ ಖಂಡಿಸಿದ್ದಾರೆ. ಇತರೆ ಧರ್ಮಗಳನ್ನು ಟೀಕಿಸುವ ಧೈರ್ಯ ಅವರಿಗಿಲ್ಲ, ಅಲ್ಲಾ ಎಂಬ ಪದವು ತಾಯಿಯ ಪದ ಮತ್ತು ಶಕ್ತಿಯುತ ಪದವಾಗಿದೆ. ಓಂ ಎಂಬುದು ದೇವರ ನಾಮ.

ಮಾರಿಷಸ್ ಸೇರಿದಂತೆ 15 ದೇಶಗಳು ಭಾರತ ಹಿಂದೂ ರಾಷ್ಟ್ರವಾಗಲು ಕಾಯುತ್ತಿವೆ. ಈ ಔಪಚಾರಿಕತೆ ಪೂರ್ಣಗೊಂಡ ತಕ್ಷಣ, ಏಷ್ಯಾದ ವಿವಿಧ ದೇಶಗಳು ತಮ್ಮನ್ನು ಹಿಂದೂ ರಾಷ್ಟ್ರವೆಂದು ಘೋಷಿಸಿಕೊಳ್ಳುತ್ತವೆ ಎಂದರು.

ದೇಶದಲ್ಲಿ ಕೆಲವು ಹೆಣ್ಣುಮಕ್ಕಳಿಗೆ ಆಗಿರುವ ಘಟನೆಗಳು ಆಧುನಿಕ ಶಿಕ್ಷಣ ವ್ಯವಸ್ಥೆಯ ದಿಕ್ಕು ತೋಚದಂತಿರುವುದನ್ನು ತೋರಿಸುತ್ತದೆ ಎಂದರು . ಮಾತೃಶಕ್ತಿಯನ್ನು ಗೌರವಿಸದಿದ್ದರೆ ಜಗತ್ತಿನಲ್ಲಿ ಏನೂ ಉಳಿಯುವುದಿಲ್ಲ. ಮಾತೃಶಕ್ತಿಯನ್ನು ರಕ್ಷಿಸುವುದು ಸನಾತನ ಸಂಪ್ರದಾಯ ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್