ಹರ್ಯಾಣದಲ್ಲಿ ಕಾಂಗ್ರೆಸ್ ರೈತರ ಭೂಮಿಯನ್ನು ಕಿತ್ತುಕೊಂಡಿದೆ: ರಾಜನಾಥ್ ಸಿಂಗ್

"ಕಾಂಗ್ರೆಸ್ ಮತ್ತು ಎನ್‌ಸಿ ಮೈತ್ರಿ ಮಾಡಿಕೊಂಡಿವೆ ಮತ್ತು 370 ನೇ ವಿಧಿಯನ್ನು ಮರಳಿ ತರುತ್ತೇವೆ ಎಂದು ಹೇಳಿವೆ. 370 ನೇ ವಿಧಿಯನ್ನು ರದ್ದುಗೊಳಿಸುವುದು ಮುಖ್ಯವಾಗಿದೆ. 370 ನೇ ವಿಧಿಯನ್ನು ರದ್ದುಗೊಳಿಸಿದ್ದು ಮೋದಿ ಜಿ. ಕೇಂದ್ರ ಸರ್ಕಾರಕ್ಕೆ ಮಾತ್ರ 370 ನೇ ವಿಧಿಯನ್ನು ಜಾರಿಗೊಳಿಸುವ ಅಥವಾ ರದ್ದುಗೊಳಿಸುವ ಅಧಿಕಾರವಿದೆ, ರಾಜ್ಯ ಸರ್ಕಾರಕ್ಕಲ್ಲ" ಎಂದು ರಾಜನಾಥ್ ಸಿಂಗ್ ಹೇಳಿದರು.

ಹರ್ಯಾಣದಲ್ಲಿ ಕಾಂಗ್ರೆಸ್ ರೈತರ ಭೂಮಿಯನ್ನು ಕಿತ್ತುಕೊಂಡಿದೆ: ರಾಜನಾಥ್ ಸಿಂಗ್
ರಾಜನಾಥ್ ಸಿಂಗ್
ರಶ್ಮಿ ಕಲ್ಲಕಟ್ಟ

Updated on: Oct 02, 2024 | 8:40 PM

ಚಂಡೀಗಢ ಅಕ್ಟೋಬರ್ 02: ಹರ್ಯಾಣದಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಬುಧವಾರ ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ರೈತರ ಭೂಮಿಯನ್ನು ಕಿತ್ತುಕೊಂಡವರು ಮತ್ತು ಅಭಿವೃದ್ಧಿ ಮತ್ತು ನೀತಿಗಳ ಬಗ್ಗೆ ನೀಡಿದ ಭರವಸೆಗಳನ್ನು ಈಡೇರಿಸಲು ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರನ್ನು ಉಲ್ಲೇಖಿಸಿದ ರಾಜನಾಥ್ ಸಿಂಗ್, ಹರ್ಯಾಣದಲ್ಲಿ ರೈತರ ಭೂಮಿಯನ್ನು ಕಾಂಗ್ರೆಸ್ ಕಿತ್ತುಕೊಂಡಿದೆ ಎಂದು ಆರೋಪಿಸಿದರು. ರೈತರ ಭೂಮಿಯನ್ನು ಕಬಳಿಸಿದವರು ಅವರ ‘ದಾಮಾದ್ ಜೀ’ (ಅಳಿಯ), ಬಿಜೆಪಿಯ ಸಂಬಂಧಿಕರಲ್ಲ.


“ಅವರು ಭರವಸೆಗಳನ್ನು ನೀಡುತ್ತಾರೆ ಮತ್ತು ಸಾರ್ವಜನಿಕರನ್ನು ದಾರಿ ತಪ್ಪಿಸುತ್ತಾರೆ. ಆ ಭರವಸೆಗಳು ಎಂದಿಗೂ ಈಡೇರುವುದಿಲ್ಲ. ಅವರು ಉಳಿಸಿಕೊಳ್ಳಲು ಸಾಧ್ಯವಾಗದ ಭರವಸೆಗಳನ್ನು ಅವರು ನೀಡಬಾರದು” ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ನಡುವಿನ ಮೈತ್ರಿ ಕುರಿತು ಮಾತನಾಡಿದ ಸಿಂಗ್, 370 ನೇ ವಿಧಿಯನ್ನು ಮರುಸ್ಥಾಪಿಸುವ ಭರವಸೆಯನ್ನು ಪ್ರಸ್ತಾಪಿಸಿದ್ದು ಅಂತಹ ನಿರ್ಧಾರವನ್ನು ತೆಗೆದುಕೊಳ್ಳುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರ ಇದೆಯೇ ಹೊರತು ರಾಜ್ಯ ಸರ್ಕಾರಕ್ಕಲ್ಲ ಎಂದು ಪ್ರತಿಪಾದಿಸಿದರು.

“ಕಾಂಗ್ರೆಸ್ ಮತ್ತು ಎನ್‌ಸಿ ಮೈತ್ರಿ ಮಾಡಿಕೊಂಡಿವೆ ಮತ್ತು 370 ನೇ ವಿಧಿಯನ್ನು ಮರಳಿ ತರುತ್ತೇವೆ ಎಂದು ಹೇಳಿವೆ. 370 ನೇ ವಿಧಿಯನ್ನು ರದ್ದುಗೊಳಿಸುವುದು ಮುಖ್ಯವಾಗಿದೆ. 370 ನೇ ವಿಧಿಯನ್ನು ರದ್ದುಗೊಳಿಸಿದ್ದು ಮೋದಿ ಜಿ. ಕೇಂದ್ರ ಸರ್ಕಾರಕ್ಕೆ ಮಾತ್ರ 370 ನೇ ವಿಧಿಯನ್ನು ಜಾರಿಗೊಳಿಸುವ ಅಥವಾ ರದ್ದುಗೊಳಿಸುವ ಅಧಿಕಾರವಿದೆ, ರಾಜ್ಯ ಸರ್ಕಾರಕ್ಕಲ್ಲ” ಎಂದು ರಾಜನಾಥ್ ಸಿಂಗ್ ಹೇಳಿದರು.

ಅಗ್ನಿವೀರರಿಗೆ ಯಾವುದೇ ಅನ್ಯಾಯವಾಗುವುದಿಲ್ಲ ಎಂದು ಭರವಸೆ ನೀಡಿದ ಅವರು, ನಮಗೆ ಸಶಸ್ತ್ರ ಪಡೆಗಳಲ್ಲಿ ಯುವಕರ ಅಗತ್ಯವಿದೆ. ಚೀನಾ, ಅಮೆರಿಕ ಮತ್ತು ಫ್ರಾನ್ಸ್‌ನಂತಹ ದೇಶಗಳು ಯುವಕರನ್ನು ಅಲ್ಪಾವಧಿಯ ಮಿಲಿಟರಿ ಸೇವೆಗಳಲ್ಲಿ ತೊಡಗಿಸಿಕೊಳ್ಳುತ್ತವೆ. ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳು ಒಂದಾಗಬೇಕು.

ಇದನ್ನೂ ಓದಿ: ಸೌಂದರ್ಯವುಳ್ಳ ಯುವತಿಯರು ರೈತರ ಮಗನನ್ನು ಮದುವೆಯಾಗುವುದಿಲ್ಲ: ಮಹಾರಾಷ್ಟ್ರ ಶಾಸಕ

“ನಮ್ಮ ಸೈನಿಕರು ಸರ್ಜಿಕಲ್ ಸ್ಟ್ರೈಕ್ ಮತ್ತು ವೈಮಾನಿಕ ದಾಳಿಗಳನ್ನು ನಡೆಸಿದಾಗ, ಕಾಂಗ್ರೆಸ್ ಅದರ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತದೆ. ಭಾರತವು ತನ್ನ ಗಡಿಯಲ್ಲಿ ತನ್ನನ್ನು ತಾನು ರಕ್ಷಿಸಿಕೊಳ್ಳಬಲ್ಲದು ಆದರೆ ಅಗತ್ಯವಿದ್ದರೆ ಗಡಿಯುದ್ದಕ್ಕೂ ಕಾರ್ಯಾಚರಣೆಯನ್ನು ನಡೆಸಬಲ್ಲದು ಎಂಬುದನ್ನು ನಮ್ಮ ಸೇನೆಯು ತೋರಿಸಿದೆ” ಎಂದು ಅವರು ಹೇಳಿದರು.

ಹರ್ಯಾಣದಲ್ಲಿ ಅಕ್ಟೋಬರ್ 5 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 8 ರಂದು ಮತ ಎಣಿಕೆ ನಡೆಯಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Follow Us