AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವೈರಾಣು ಕೃತಕವಾಗಿ ಸೃಷ್ಟಿಯಾಗಿದೆ ಎನ್ನಲು ಪುರಾವೆಗಳಿಲ್ಲ: ಐಸಿಎಂಆರ್ ಮಾಜಿ ಮುಖ್ಯ ವಿಜ್ಞಾನಿ

ಸದ್ಯ ಕೊರೊನಾ ಎರಡನೇ ಅಲೆ ಇಳಿಮುಖವಾಗುವ ಹಂತದಲ್ಲಿದೆ. ನಾವೀಗ ಈ ಪರಿಸ್ಥಿತಿಯ ಲಾಭ ಪಡೆದುಕೊಂಡು ವೈದ್ಯಕೀಯ ವ್ಯವಸ್ಥೆ ಬಲಪಡಿಸುವತ್ತ ಹೆಚ್ಚು ಗಮನ ನೀಡಬೇಕಿದೆ. ಆ ಮೂಲಕ ಮೂರನೇ ಅಲೆ ಮಾಡಬಹುದಾದ ಹಾನಿಯನ್ನು ತಡೆಯಲು ಸಿದ್ಧತೆ ಮಾಡಿಕೊಳ್ಳಬೇಕು.

ಕೊರೊನಾ ವೈರಾಣು ಕೃತಕವಾಗಿ ಸೃಷ್ಟಿಯಾಗಿದೆ ಎನ್ನಲು ಪುರಾವೆಗಳಿಲ್ಲ: ಐಸಿಎಂಆರ್ ಮಾಜಿ ಮುಖ್ಯ ವಿಜ್ಞಾನಿ
ಕೊರೊನಾ ವೈರಾಣು ಕೃತಕವಾಗಿ ಸೃಷ್ಟಿಯಾಗಿದೆ ಎನ್ನಲು ಪುರಾವೆಗಳಿಲ್ಲ: ಐಸಿಎಂಆರ್ ಮಾಜಿ ಮುಖ್ಯ ವಿಜ್ಞಾನಿ
Follow us
Skanda
|

Updated on: May 31, 2021 | 1:31 PM

ದೆಹಲಿ: ಕೊರೊನಾ ವೈರಾಣು ಇಡೀ ಜಗತ್ತನ್ನೇ ವ್ಯಾಪಿಸಿ ಸುಮಾರು ಒಂದೂವರೆ ವರ್ಷ ಕಳೆದಿದೆ. ಆದರೆ, ಇದುವರೆಗೂ ಕೊರೊನಾ ಮೂಲ ಯಾವುದೆಂದು ಕಂಡು ಹಿಡಿಯಲು ವಿಜ್ಞಾನಿಗಳಿಗೆ ಸಾಧ್ಯವಾಗುತ್ತಿಲ್ಲ. ಚೀನಾದ ವುಹಾನ್ ಪ್ರಯೋಗಾಲಯದಲ್ಲಿ ಸೃಷ್ಟಿಯಾದ ವೈರಾಣುವೇ ಈ ಅನಾಹುತಗಳಿಗೆ ಕಾರಣವೆಂಬ ಊಹಾಪೋಹಗಳಿದ್ದರೂ ಅದು ದೃಢಪಟ್ಟಿಲ್ಲ. ಅನೇಕ ರಾಷ್ಟ್ರಗಳ ನಿರಂತರ ಅಧ್ಯಯನದ ಹೊರತಾಗಿಯೂ ಕೊರೊನಾದ ಬೇರು ಎಲ್ಲಿದೆ ಎನ್ನುವುದು ಮಾತ್ರ ನಿಗೂಢವಾಗಿಯೇ ಉಳಿದಿದೆ. ಈ ಸಂದರ್ಭದಲ್ಲೇ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಾಜಿ ಮುಖ್ಯ ವಿಜ್ಞಾನಿ ಡಾ.ರಮಣ್ ಆರ್ ಗಂಗಾಖೇದ್ಕರ್ ಸಹ ಕೊರೊನಾ ಕೃತಕವಾಗಿ ಸೃಷ್ಟಿಗೊಂಡ ವೈರಾಣುವೆನ್ನಲು ಪುರಾವೆಗಳಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೊರೊನಾ ವೈರಾಣು ಪ್ರಯೋಗಾಲಯದಲ್ಲಿ ಸೃಷ್ಟಿಯಾಗಿದೆ ಎನ್ನುವುದಕ್ಕಾಗಲೀ, ಪ್ರಾಣಿಗಳಿಂದ ಮನುಷ್ಯರಿಗೆ ಹರಡಿದೆ ಎನ್ನುವುದಕ್ಕಾಗಲೀ ನಿಖರ ಪುರಾವೆಗಳೇ ಲಭ್ಯವಿಲ್ಲ. ಈ ಹಂತದಲ್ಲಿ ವೈರಾಣುವಿನ ಮೂಲದ ಬಗ್ಗೆ ಇದಮಿತ್ತಂ ಎಂದು ತಿಳಿಸಲಾಗದು. ಇನ್ನೂ ಅಧ್ಯಯನ ನಡೆದು ವರದಿ ಕೈ ಸೇರುವ ತನಕ ಕಾಯಬೇಕಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಅಲ್ಲದೇ, ವರ್ಷಂಪ್ರತಿ ಬಿಎಸ್​ಎಲ್​4 ಪ್ರಯೋಗಾಲಯಗಳಿಂದ ಹಿಡಿದು ವಿವಿಧ ಪ್ರಯೋಗ ಶಾಲೆಗಳಲ್ಲಿ ಅನೇಕ ಅವಘಡಗಳು ಘಟಿಸುತ್ತಲೇ ಇರುತ್ತವೆ. ಇದರ ಬಗ್ಗೆ ಜಾಗತಿಕ ಮಟ್ಟದ ಅಂಕಿ ಅಂಶಗಳನ್ನು ಗಮನಿಸಿದರೆ ಸ್ಪಷ್ಟ ಚಿತ್ರಣ ಸಿಗುತ್ತದೆ. ಹಾಗಾಗಿ ಪ್ರಯೋಗಾಲಯದಿಂದ ಹೀಗಾಗಿದ್ದರೂ ಅದು ಹೊಸ ಘಟನೆ ಎಂದೇನೂ ಆಗಲಾರದು ಎಂದು ಹೇಳಿದ್ದಾರೆ.

ಇದೆಲ್ಲದರ ಜತೆಗೆ ಕೊರೊನಾ ಲಸಿಕೆ ಲಭ್ಯತೆ ಬಗ್ಗೆ ಮಾತನಾಡಿರುವ ಅವರು ಭಾರತದಲ್ಲಿ ಕೊರೊನಾ ಲಸಿಕೆ ಅಭಾವ ಸೃಷ್ಟಿಯಾದ ಬೆನ್ನಲ್ಲೇ ಹೊರ ದೇಶಗಳಿಂದ ಲಸಿಕೆ ತರಿಸಿಕೊಳ್ಳುವ ಪ್ರಕ್ರಿಯೆ ಆರಂಭವಾಗಿದೆ. ದೇಶದಲ್ಲಿ ತಯಾರಿಸುವ ಲಸಿಕೆಗಳಿಗೂ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದು ಹೇಳಿರುವ ಅವರು, ಈ ಹಂತದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಹಂಚಲು ಒತ್ತು ನೀಡುವುದು ಸೂಕ್ತ ಎಂದು ಸಲಹೆ ನೀಡಿದ್ದಾರೆ.

ಸದ್ಯ ಕೊರೊನಾ ಎರಡನೇ ಅಲೆ ಇಳಿಮುಖವಾಗುವ ಹಂತದಲ್ಲಿದೆ. ನಾವೀಗ ಈ ಪರಿಸ್ಥಿತಿಯ ಲಾಭ ಪಡೆದುಕೊಂಡು ವೈದ್ಯಕೀಯ ವ್ಯವಸ್ಥೆ ಬಲಪಡಿಸುವತ್ತ ಹೆಚ್ಚು ಗಮನ ನೀಡಬೇಕಿದೆ. ಆ ಮೂಲಕ ಮೂರನೇ ಅಲೆ ಮಾಡಬಹುದಾದ ಹಾನಿಯನ್ನು ತಡೆಯಲು ಸಿದ್ಧತೆ ಮಾಡಿಕೊಳ್ಳಬೇಕು. ಒಂದುವೇಳೆ, ಈಗಿನಿಂದಲೇ ಎಚ್ಚೆತ್ತುಕೊಂಡು ಸಾಕಷ್ಟು ಸುರಕ್ಷತಾ ಕ್ರಮಗಳನ್ನು ಕೈಗೊಂಡರೆ ಮೂರನೇ ಅಲೆಯ ಹಾನಿಯನ್ನು ಯಶಸ್ವಿಯಾಗಿ ತಡೆಯುವುದು ಸಾಧ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಸಾಂಕ್ರಾಮಿಕ ರೋಗದಲ್ಲಿ ವುಹಾನ್​ನ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ ಪಾತ್ರವು ಚೀನಾವನ್ನು ಹೊಣೆಯಾಗಿಸುವ ಮೊದಲ ಹೆಜ್ಜೆ 

ಜಗತ್ತಿನ ವಿರುದ್ಧ ಜೈವಿಕ ಅಸ್ತ್ರವಾಗಿ ಕೊರೊನಾ ವೈರಸ್ ಬಳಕೆ.. ಬಯಲಾಯ್ತು ಚೀನಾದ ಕುತಂತ್ರ!

ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು