AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol Diesel Rate Today: ರಷ್ಯಾ-ಉಕ್ರೇನ್​ ಸಂಘರ್ಷದಿಂದ ಕಚ್ಚಾತೈಲದ ಬೆಲೆ ಏರಿಕೆ; ಭಾರತದ ಮಹಾನಗರಗಳಲ್ಲಿ ಎಷ್ಟಿದೆ ಪೆಟ್ರೋಲ್​-ಡೀಸೆಲ್​ ದರ?

ಭಾರತದ ಯಾವುದೇ ನಗರಗಳಲ್ಲೂ ಇಂದು ತೈಲಬೆಲೆಯಲ್ಲಿ ಬದಲಾವಣೆಯಾಗಿಲ್ಲ. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್​ ಬೆಲೆ 100.58 ರೂ. ಮತ್ತು ಡೀಸೆಲ್​ ಬೆಲೆ 85.01 ರೂ. ಇದ್ದರೆ, ಮೈಸೂರಿನಲ್ಲಿ ಪೆಟ್ರೋಲ್​ ದರ 100.08 ರೂ., ಡೀಸೆಲ್​ ದರ 84.56 ರೂ. ಆಗಿದೆ. ಹಾಗೇ ಮಂಗಳೂರಿನಲ್ಲಿ ಪೆಟ್ರೋಲ್​ 99.76 ರೂ. ಮತ್ತು ಡೀಸೆಲ್​ 84.24 ರೂ.ಗೆ ಮಾರಾಟವಾಗುತ್ತಿದೆ.

Petrol Diesel Rate Today: ರಷ್ಯಾ-ಉಕ್ರೇನ್​ ಸಂಘರ್ಷದಿಂದ ಕಚ್ಚಾತೈಲದ ಬೆಲೆ ಏರಿಕೆ; ಭಾರತದ ಮಹಾನಗರಗಳಲ್ಲಿ ಎಷ್ಟಿದೆ ಪೆಟ್ರೋಲ್​-ಡೀಸೆಲ್​ ದರ?
ಸಾಂಕೇತಿಕ ಚಿತ್ರ
TV9 Web
| Edited By: |

Updated on: Feb 17, 2022 | 9:32 AM

Share

Petrol Diesel Price Today| ರಷ್ಯಾ ಮತ್ತು ಉಕ್ರೇನ್​ ನಡುವಿನ ಉದ್ವಿಗ್ನತೆಯಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಕಳೆದ ಏಳುವರ್ಷಗಳಲ್ಲೇ ಗರಿಷ್ಠಮಟ್ಟಕ್ಕೆ ತಲುಪಿದೆ. ಈ ಕಾರಣಕ್ಕೆ ಅಮೆರಿಕ-ಪಾಕಿಸ್ತಾನ ಸೇರಿ ವಿಶ್ವದ ಹಲವು ದೇಶಗಳಲ್ಲಿ ಪೆಟ್ರೋಲ್​ ಬೆಲೆಯೂ ಹೆಚ್ಚಾಗಿದೆ. ಆದರೆ ಭಾರತದಲ್ಲಿ 2021ರ ನವೆಂಬರ್​ ತಿಂಗಳಿಂದಲೂ ಪೆಟ್ರೋಲ್​-ಡೀಸೆಲ್​ ಬೆಲೆಯಲ್ಲಿ ಯಾವುದೇ ಏರಿಳಿತ ಆಗಲಿಲ್ಲ. ಈಗಂತೂ ಪಂಚರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ಸದ್ಯ ಏರಿಕೆಯಾಗುವುದೂ ಇಲ್ಲ ಎಂದು ಹೇಳಲಾಗಿದೆ.  ಆದರೆ ಮಾರ್ಚ್​ ತಿಂಗಳಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ಏರಿಕೆಯಾಗಬಹುದು ಎಂಬ ನಿರೀಕ್ಷೆಯೂ ಇದೆ.

ಭಾರತದಲ್ಲಿ 2021ರ ನವೆಂಬರ್​​ವರೆಗೆ ಪೆಟ್ರೋಲ್​ ರೇಟ್​ ಹೆಚ್ಚುತ್ತಲೇ ಇತ್ತು. ಆದರೆ ನವೆಂಬರ್ 3ರಂದು ದೇಶದ ಜನರಿಗೆ ದೀಪಾವಳಿ ಉಡುಗೊರೆಯೆಂಬಂತೆ ಕೇಂದ್ರ ಸರ್ಕಾರ ಪೆಟ್ರೋಲ್​-ಡೇಸೆಲ್​ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿತು. ಪೆಟ್ರೋಲ್​ ಮೇಲೆ 5 ರೂಪಾಯಿ ಮತ್ತು ಡೀಸೆಲ್​ ಮೇಲೆ 10 ರೂಪಾಯಿ ಅಬಕಾರಿ ಸುಂಕ ಕಡಿಮೆ ಮಾಡಿದ ಹಿನ್ನೆಲೆಯಲ್ಲಿ ಇಂಧನ ಬೆಲೆಯಲ್ಲಿ ಇಳಿಕೆಯಾಗಿ, ವಾಹನ ಬಳಕೆದಾರರು ಸ್ವಲ್ಪ ಮಟ್ಟಿಗೆ ನಿಟ್ಟುಸಿರುಬಿಡುವಂತಾಯ್ತು. ಇನ್ನು ಕೇಂದ್ರ ಸರ್ಕಾರ ಅಬಕಾರಿ ಸುಂಕ ಕಡಿತಗೊಳಿಸುತ್ತಿದ್ದಂತೆಯೇ, ಹಲವು ರಾಜ್ಯಸರ್ಕಾರಗಳೂ ಕೂಡ ಇಂಧನಗಳ ಮೇಲಿನ ವ್ಯಾಟ್​ (VAT) ಕಡಿತಗೊಳಿಸಿವೆ. ಹೀಗಾಗಿ ಅಂದಿನಿಂದಲೂ ಪೆಟ್ರೋಲ್​-ಡೀಸೆಲ್​ ಬೆಲೆ ಮಹಾನಗರಗಳಲ್ಲಿ ಸ್ಥಿರವಾಗಿಯೇ ಇವೆ.  ಹಾಗಿದ್ದಾಗ್ಯೂ ಕೂಡ ದೇಶದ 25ಕ್ಕೂ ಪ್ರಮುಖ ನಗರಗಳಲ್ಲಿ ಪೆಟ್ರೋಲ್​ ಬೆಲೆ 100 ರೂಪಾಯಿ ಮೇಲೆ ಇದೆ.

ಎಷ್ಟಿದೆ ಮಹಾನಗರಗಳಲ್ಲಿ ಇಂದು ಇಂಧನ ದರ?

ಭಾರತದ ಯಾವುದೇ ನಗರಗಳಲ್ಲೂ ಇಂದು ತೈಲಬೆಲೆಯಲ್ಲಿ ಬದಲಾವಣೆಯಾಗಿಲ್ಲ. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್​ ಬೆಲೆ 100.58 ರೂ. ಮತ್ತು ಡೀಸೆಲ್​ ಬೆಲೆ 85.01 ರೂ. ಇದ್ದರೆ, ಮೈಸೂರಿನಲ್ಲಿ ಪೆಟ್ರೋಲ್​ ದರ 100.08 ರೂ., ಡೀಸೆಲ್​ ದರ 84.56 ರೂ. ಆಗಿದೆ. ಹಾಗೇ ಮಂಗಳೂರಿನಲ್ಲಿ ಪೆಟ್ರೋಲ್​ 99.76 ರೂ. ಮತ್ತು ಡೀಸೆಲ್​ 84.24 ರೂ.ಗೆ ಮಾರಾಟವಾಗುತ್ತಿದೆ. ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಡೀಸೆಲ್​ ಬೆಲೆ ಪ್ರತಿ ಲೀಟರ್​ಗೆ 86.67 ರೂ. ಇದ್ದರೆ, ಪೆಟ್ರೋಲ್​ ದರ 95.41 ರೂ.ಆಗಿದೆ. ಮುಂಬೈ ಮಹಾನಗರಿಯಲ್ಲೂ ಸಹ ಯಾವುದೇ ಬದಲಾವಣೆಯಾಗಿಲ್ಲ. ಇಲ್ಲಿ ಪೆಟ್ರೋಲ್​ ದರ 109.98 ರೂ. ಮತ್ತು ಡೀಸೆಲ್​ ದರ 94.14 ರೂ. ಆಗಿದೆ. ಹಾಗೇ, ಚೆನ್ನೈನಲ್ಲಿ ಪೆಟ್ರೋಲ್​ ದರ 101.40 ರೂ. ಇದೆ.  ಡೀಸೆಲ್​ ದರ 91.43 ರೂ. ಆಗಿದೆ. ರಾಷ್ಟ್ರದ ಸುಮಾರು 27 ಮಹಾನಗರಗಳಲ್ಲಿ ಪೆಟ್ರೋಲ್​ ದರ 100 ರೂ.ಗಡಿ ದಾಟಿದೆ.

ನೀವೇ ಚೆಕ್​ ಮಾಡಿಕೊಳ್ಳಬಹುದು

ನಿಮ್ಮ ನಗರದಲ್ಲಿರುವ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಗ್ರಾಹಕರೇ ಎಸ್​ಎಂಎಸ್ ಮೂಲಕ ಪಡೆದುಕೊಳ್ಳಬಹುದು. ಇಂಡಿಯನ್ ಆಯ್ಲ್​ ಕಂಪನಿ ಗ್ರಾಹಕರು RSP <space> (Dealer Code of Petrol Pump -ಡೀಲರ್ ಕೋಡ್​ ಹಾಕಿ ) ಎಂದು  9224992249 ನಂಬರ್​ಗೆ ಎಸ್​ಎಂಎಸ್​ ಕಳಿಸಬೇಕು. ನಂತರ ಬಿಪಿಸಿಎಲ್​ ಗ್ರಾಹಕರು ಇದೇ ಮಾದರಿಯಲ್ಲಿ 9223112222 ಕ್ಕೆ ಮತ್ತು ಎಚ್​ಪಿಸಿಎಲ್​ ಗ್ರಾಹಕರು HPPrice ಎಂದು ಬರೆದು, ಕೋಡ್ ಹಾಕಿ 9222201122ಕ್ಕೆ ಕಳಿಸಬೇಕು.

ಪ್ರತಿ ಬೆಳಿಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಇದನ್ನೂ ಓದಿ:

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

ಇದನ್ನೂ ಓದಿ: Rohit Sharma: ರೋಚಕ ಗೆಲುವಿನ ಬಳಿಕ ರೋಹಿತ್ ಶರ್ಮಾ ಹೊಗಳಿದ್ದು ಮಾತ್ರ ಈ ಒಬ್ಬ ಆಟಗಾರನನ್ನು

Follow Us
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ