AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾದಲ್ಲಿ ಅವಧಿಗೂ ಪೂರ್ವ ವಿಧಾನಸಭೆ ಚುನಾವಣೆ?!-ಮುಖ್ಯಮಂತ್ರಿ ಪ್ರಮೋದ್​ ಸಾವಂತ್​ ಹೇಳಿದ್ದೇನು?

40 ಸದಸ್ಯರ ಬಲ ಇರುವ ಗೋವಾ ವಿಧಾನಸಭೆಯಲ್ಲಿ, ಸದ್ಯ ಬಿಜೆಪಿ 27 ಶಾಸಕರು ಇದ್ದಾರೆ. ಕಾಂಗ್ರೆಸ್​ನ ಐವರು ಶಾಸಕರಿದ್ದಾರೆ. ಇನ್ನುಳಿದಂತೆ ಗೋವಾ ಫಾರ್ವರ್ಡ್​ ಪಾರ್ಟಿ (GFP)ಯ ಮೂವರು ಶಾಸಕರಿದ್ದಾರೆ.

ಗೋವಾದಲ್ಲಿ ಅವಧಿಗೂ ಪೂರ್ವ ವಿಧಾನಸಭೆ ಚುನಾವಣೆ?!-ಮುಖ್ಯಮಂತ್ರಿ ಪ್ರಮೋದ್​ ಸಾವಂತ್​ ಹೇಳಿದ್ದೇನು?
ಪ್ರಮೋದ್ ಸಾವಂತ್​
TV9 Web
| Edited By: |

Updated on: Aug 12, 2021 | 2:36 PM

Share

ಗೋವಾದಲ್ಲಿ ಅವಧಿಗೂ ಮೊದಲೇ ವಿಧಾನಸಭೆ ಚುನಾವಣೆ (Goa Assembly elections) ನಡೆಯಲಿದೆ ಎಂಬ ಮಾತುಗಳು ಕೇಳಿಬರುತ್ತಿದ್ದವು. ಗೋವಾದಾದ್ಯಂತ ಬಿಜೆಪಿ ನಾಯಕರು ಮಂಗಳವಾರದಿಂದಲೇ ಚುನಾವಣಾ ಪ್ರಚಾರ (Election Campaign) ನಡೆಸುತ್ತಿರುವ ಕಾರಣ, ಅಲ್ಲಿ ಅವಧಿ ಪೂರ್ವ ಚುನಾವಣೆ ಪಕ್ಕಾ ಎಂದೇ ಹೇಳಲಾಗುತ್ತಿತ್ತು. ಈ ಮಧ್ಯೆ ಒಂದೆರಡು ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಕೂಡ ಗೋವಾ ಪ್ರವಾಸ ಕೈಗೊಂಡಿದ್ದರು. ಆದರೆ ಈಗ ಗೋವಾ ಮುಖ್ಯಮಂತ್ರಿ ಪ್ರಮೋದ್​ ಸಾವಂತ್ (Pramod Sawant​ ಎಲ್ಲ ಊಹಾಪೋಹಗಳಿಗೆ ತೆರೆಎಳೆದಿದ್ದಾರೆ. ಗೋವಾದಲ್ಲಿ ವಿಧಾನಸಭೆ ಚುನಾವಣೆ ಅವಧಿ ಪೂರ್ವವಾಗಿ ನಡೆಯುವುದಿಲ್ಲ ಎಂದು ಹೇಳಿದ್ದಾರೆ.

ಗೋವಾದಲ್ಲಿ 2022ರ ಫೆಬ್ರವರಿಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಆದರೆ ಈಗಿನಿಂದಲೇ ಬಿಜೆಪಿ ನಾಯಕರು ಪ್ರಚಾರ ಶುರು ಮಾಡಿದ್ದನ್ನು ನೋಡಿ, ಫೆಬ್ರವರಿಗೂ ಮೊದಲೇ ಚುನಾವಣೆ ನಡೆಯುವ ಬಗ್ಗೆ ಬಲವಾದ ಚರ್ಚೆ ಶುರುವಾಗಿತ್ತು. ಆದರೆ ಮುಖ್ಯಮಂತ್ರಿಯೀಗ ಅದನ್ನು ಅಲ್ಲಗಳೆದಿದ್ದಾರೆ. ಮುಂಚಿತವಾಗಿ ಚುನಾವಣೆ ನಡೆಯುವ ಸಾಧ್ಯತೆಯೇ ಇಲ್ಲ ಎಂದಿದ್ದಾರೆ. ಹಾಗೇ, ಮುಖ್ಯಮಂತ್ರಿ ಪ್ರಮೋದ್​ ಸಾವಂತ್ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಸದಾನಂದ ಶೇಟ್ ತನವಡೆ ಮುಂದಿನ 15 ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

40 ಸದಸ್ಯರ ಬಲ ಇರುವ ಗೋವಾ ವಿಧಾನಸಭೆಯಲ್ಲಿ, ಸದ್ಯ ಬಿಜೆಪಿ 27 ಶಾಸಕರು ಇದ್ದಾರೆ. ಕಾಂಗ್ರೆಸ್​ನ ಐವರು ಶಾಸಕರಿದ್ದಾರೆ. ಇನ್ನುಳಿದಂತೆ ಗೋವಾ ಫಾರ್ವರ್ಡ್​ ಪಾರ್ಟಿ (GFP)ಯ ಮೂವರು, ಮಹಾರಾಷ್ಟ್ರವಾದಿ ಗೋಮಂತಕ ಪಕ್ಷ ಮತ್ತು ಎನ್‌ಸಿಪಿಯ ತಲಾ ಒಂದು ಸದಸ್ಯರಿದ್ದು, ಇನ್ನುಳಿದಂತೆ ಮೂವರು ಸ್ವತಂತ್ರ ಶಾಸಕರಿದ್ದಾರೆ.

ಇದನ್ನೂ ಓದಿ: World Elephant Day 2021: ವಾವ್​! ತಮ್ಮ ದಿನವನ್ನು ಆಚರಿಸಲು 1300 ಕಿ.ಮೀ ನಡೆದು ತವರಿಗೆ ಬಂದ ಆನೆಗಳು

ಬಿಎಸ್​ವೈ ಮಾರ್ಗದರ್ಶನದಲ್ಲಿ ಸರ್ಕಾರ ನಡೆಸಿ, ನನ್ನಿಂದ ನಿಮಗೆ ಏನೂ ತೊಂದರೆ ಆಗುವುದಿಲ್ಲ: ಹೆಚ್​.ಡಿ.ದೇವೇಗೌಡ

(There in no possibility of Early Assembly Election in Goa said Cm Pramod Sawant)

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ