AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾದಲ್ಲಿ ಅವಧಿಗೂ ಪೂರ್ವ ವಿಧಾನಸಭೆ ಚುನಾವಣೆ?!-ಮುಖ್ಯಮಂತ್ರಿ ಪ್ರಮೋದ್​ ಸಾವಂತ್​ ಹೇಳಿದ್ದೇನು?

40 ಸದಸ್ಯರ ಬಲ ಇರುವ ಗೋವಾ ವಿಧಾನಸಭೆಯಲ್ಲಿ, ಸದ್ಯ ಬಿಜೆಪಿ 27 ಶಾಸಕರು ಇದ್ದಾರೆ. ಕಾಂಗ್ರೆಸ್​ನ ಐವರು ಶಾಸಕರಿದ್ದಾರೆ. ಇನ್ನುಳಿದಂತೆ ಗೋವಾ ಫಾರ್ವರ್ಡ್​ ಪಾರ್ಟಿ (GFP)ಯ ಮೂವರು ಶಾಸಕರಿದ್ದಾರೆ.

ಗೋವಾದಲ್ಲಿ ಅವಧಿಗೂ ಪೂರ್ವ ವಿಧಾನಸಭೆ ಚುನಾವಣೆ?!-ಮುಖ್ಯಮಂತ್ರಿ ಪ್ರಮೋದ್​ ಸಾವಂತ್​ ಹೇಳಿದ್ದೇನು?
ಪ್ರಮೋದ್ ಸಾವಂತ್​
TV9 Web
| Updated By: Lakshmi Hegde|

Updated on: Aug 12, 2021 | 2:36 PM

Share

ಗೋವಾದಲ್ಲಿ ಅವಧಿಗೂ ಮೊದಲೇ ವಿಧಾನಸಭೆ ಚುನಾವಣೆ (Goa Assembly elections) ನಡೆಯಲಿದೆ ಎಂಬ ಮಾತುಗಳು ಕೇಳಿಬರುತ್ತಿದ್ದವು. ಗೋವಾದಾದ್ಯಂತ ಬಿಜೆಪಿ ನಾಯಕರು ಮಂಗಳವಾರದಿಂದಲೇ ಚುನಾವಣಾ ಪ್ರಚಾರ (Election Campaign) ನಡೆಸುತ್ತಿರುವ ಕಾರಣ, ಅಲ್ಲಿ ಅವಧಿ ಪೂರ್ವ ಚುನಾವಣೆ ಪಕ್ಕಾ ಎಂದೇ ಹೇಳಲಾಗುತ್ತಿತ್ತು. ಈ ಮಧ್ಯೆ ಒಂದೆರಡು ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಕೂಡ ಗೋವಾ ಪ್ರವಾಸ ಕೈಗೊಂಡಿದ್ದರು. ಆದರೆ ಈಗ ಗೋವಾ ಮುಖ್ಯಮಂತ್ರಿ ಪ್ರಮೋದ್​ ಸಾವಂತ್ (Pramod Sawant​ ಎಲ್ಲ ಊಹಾಪೋಹಗಳಿಗೆ ತೆರೆಎಳೆದಿದ್ದಾರೆ. ಗೋವಾದಲ್ಲಿ ವಿಧಾನಸಭೆ ಚುನಾವಣೆ ಅವಧಿ ಪೂರ್ವವಾಗಿ ನಡೆಯುವುದಿಲ್ಲ ಎಂದು ಹೇಳಿದ್ದಾರೆ.

ಗೋವಾದಲ್ಲಿ 2022ರ ಫೆಬ್ರವರಿಯಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಆದರೆ ಈಗಿನಿಂದಲೇ ಬಿಜೆಪಿ ನಾಯಕರು ಪ್ರಚಾರ ಶುರು ಮಾಡಿದ್ದನ್ನು ನೋಡಿ, ಫೆಬ್ರವರಿಗೂ ಮೊದಲೇ ಚುನಾವಣೆ ನಡೆಯುವ ಬಗ್ಗೆ ಬಲವಾದ ಚರ್ಚೆ ಶುರುವಾಗಿತ್ತು. ಆದರೆ ಮುಖ್ಯಮಂತ್ರಿಯೀಗ ಅದನ್ನು ಅಲ್ಲಗಳೆದಿದ್ದಾರೆ. ಮುಂಚಿತವಾಗಿ ಚುನಾವಣೆ ನಡೆಯುವ ಸಾಧ್ಯತೆಯೇ ಇಲ್ಲ ಎಂದಿದ್ದಾರೆ. ಹಾಗೇ, ಮುಖ್ಯಮಂತ್ರಿ ಪ್ರಮೋದ್​ ಸಾವಂತ್ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಸದಾನಂದ ಶೇಟ್ ತನವಡೆ ಮುಂದಿನ 15 ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

40 ಸದಸ್ಯರ ಬಲ ಇರುವ ಗೋವಾ ವಿಧಾನಸಭೆಯಲ್ಲಿ, ಸದ್ಯ ಬಿಜೆಪಿ 27 ಶಾಸಕರು ಇದ್ದಾರೆ. ಕಾಂಗ್ರೆಸ್​ನ ಐವರು ಶಾಸಕರಿದ್ದಾರೆ. ಇನ್ನುಳಿದಂತೆ ಗೋವಾ ಫಾರ್ವರ್ಡ್​ ಪಾರ್ಟಿ (GFP)ಯ ಮೂವರು, ಮಹಾರಾಷ್ಟ್ರವಾದಿ ಗೋಮಂತಕ ಪಕ್ಷ ಮತ್ತು ಎನ್‌ಸಿಪಿಯ ತಲಾ ಒಂದು ಸದಸ್ಯರಿದ್ದು, ಇನ್ನುಳಿದಂತೆ ಮೂವರು ಸ್ವತಂತ್ರ ಶಾಸಕರಿದ್ದಾರೆ.

ಇದನ್ನೂ ಓದಿ: World Elephant Day 2021: ವಾವ್​! ತಮ್ಮ ದಿನವನ್ನು ಆಚರಿಸಲು 1300 ಕಿ.ಮೀ ನಡೆದು ತವರಿಗೆ ಬಂದ ಆನೆಗಳು

ಬಿಎಸ್​ವೈ ಮಾರ್ಗದರ್ಶನದಲ್ಲಿ ಸರ್ಕಾರ ನಡೆಸಿ, ನನ್ನಿಂದ ನಿಮಗೆ ಏನೂ ತೊಂದರೆ ಆಗುವುದಿಲ್ಲ: ಹೆಚ್​.ಡಿ.ದೇವೇಗೌಡ

(There in no possibility of Early Assembly Election in Goa said Cm Pramod Sawant)

ಸಾಂಪ್ರದಾಯಿಕ ಡ್ರೆಸ್ ತೊಟ್ಟು ಓಣಂ ಹಬ್ಬದೂಟ ಮಾಡಿದ ಮುದ್ದು ನಾಯಿ
ಸಾಂಪ್ರದಾಯಿಕ ಡ್ರೆಸ್ ತೊಟ್ಟು ಓಣಂ ಹಬ್ಬದೂಟ ಮಾಡಿದ ಮುದ್ದು ನಾಯಿ
ಗಂಡನನ್ನು ನಿಮಗೆ ಒಪ್ಪಿಸಿದ್ದೇನೆ, 4 ತಿಂಗಳು ಲಾಕ್ ಮಾಡಿಕೊಳ್ಳಿ: ಹರ್ಷಿಕಾ
ಗಂಡನನ್ನು ನಿಮಗೆ ಒಪ್ಪಿಸಿದ್ದೇನೆ, 4 ತಿಂಗಳು ಲಾಕ್ ಮಾಡಿಕೊಳ್ಳಿ: ಹರ್ಷಿಕಾ
ದರ್ಶನ್ ಆ ರೀತಿ ವ್ಯಕ್ತಿ ಅಲ್ಲ, ಯಾಕೆ ಹೀಗಾಯ್ತೋ ಗೊತ್ತಿಲ್ಲ: ಎಂಡಿ ಶ್ರೀಧರ್
ದರ್ಶನ್ ಆ ರೀತಿ ವ್ಯಕ್ತಿ ಅಲ್ಲ, ಯಾಕೆ ಹೀಗಾಯ್ತೋ ಗೊತ್ತಿಲ್ಲ: ಎಂಡಿ ಶ್ರೀಧರ್
ಗಣೇಶ ವಿಸರ್ಜನೆ ವೇಳೆ DJ ಬಂದ್ ಮಾಡಿಸಿದ ಪೊಲೀಸರು, ಗ್ರಾಮಸ್ಥರು ಮಾಡಿದ್ದೇನು
ಗಣೇಶ ವಿಸರ್ಜನೆ ವೇಳೆ DJ ಬಂದ್ ಮಾಡಿಸಿದ ಪೊಲೀಸರು, ಗ್ರಾಮಸ್ಥರು ಮಾಡಿದ್ದೇನು
ಅಭಿಮಾನ್ ಸ್ಟುಡಿಯೋ ಜಾಗ ಮಾರಾಟ, ರಾಜಕಾರಣಿಗೂ ಲಾಭ: ಗೀತಾ ಬಾಲಿ
ಅಭಿಮಾನ್ ಸ್ಟುಡಿಯೋ ಜಾಗ ಮಾರಾಟ, ರಾಜಕಾರಣಿಗೂ ಲಾಭ: ಗೀತಾ ಬಾಲಿ
ಅಭಿಮಾನ್ ಸ್ಟುಡಿಯೋ 10 ಎಕರೆ ಮಾರಾಟ ಆಗಿದ್ದರಲ್ಲಿ ಸರ್ಕಾರದ್ದೇ ಕೈವಾಡ: ಗೀತಾ
ಅಭಿಮಾನ್ ಸ್ಟುಡಿಯೋ 10 ಎಕರೆ ಮಾರಾಟ ಆಗಿದ್ದರಲ್ಲಿ ಸರ್ಕಾರದ್ದೇ ಕೈವಾಡ: ಗೀತಾ
EVM ಬದಲಿಗೆ ಬ್ಯಾಲೆಟ್ ಪೇಪರ್: ಚುನಾವಣಾ ಆಯುಕ್ತರು ಹೇಳಿದ್ದೇನು?
EVM ಬದಲಿಗೆ ಬ್ಯಾಲೆಟ್ ಪೇಪರ್: ಚುನಾವಣಾ ಆಯುಕ್ತರು ಹೇಳಿದ್ದೇನು?
ರಾಜಕೀಯ ನಿವೃತ್ತಿ ಬಗ್ಗೆ ವಿ ಸೋಮಣ್ಣ ಮತ್ತೆ ಸ್ಪಷ್ಟನೆ: ಹೇಳಿದ್ದೇನು ನೋಡಿ
ರಾಜಕೀಯ ನಿವೃತ್ತಿ ಬಗ್ಗೆ ವಿ ಸೋಮಣ್ಣ ಮತ್ತೆ ಸ್ಪಷ್ಟನೆ: ಹೇಳಿದ್ದೇನು ನೋಡಿ
ಉಚಿತವಾಗಿ ಊಟ ವಿತರಿಸುವಾಗ ದುಡ್ಡು ಕೊಟ್ಟು ಊಟ ಪಡೆದ ಸ್ವಾಭಿಮಾನಿ ಬಾಲಕ
ಉಚಿತವಾಗಿ ಊಟ ವಿತರಿಸುವಾಗ ದುಡ್ಡು ಕೊಟ್ಟು ಊಟ ಪಡೆದ ಸ್ವಾಭಿಮಾನಿ ಬಾಲಕ
ಪ್ರಿಯತಮನಿಗೋಸ್ಕರ ಮನೆ ಬಿಟ್ಟು ಓಡಿಹೋದ ಮೂರು ಮಕ್ಕಳ ತಾಯಿ: ಗೋಳಾಡಿದ ಪತಿ
ಪ್ರಿಯತಮನಿಗೋಸ್ಕರ ಮನೆ ಬಿಟ್ಟು ಓಡಿಹೋದ ಮೂರು ಮಕ್ಕಳ ತಾಯಿ: ಗೋಳಾಡಿದ ಪತಿ