AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಇಲ್ಲಿ ಸಾಕು ಪ್ರಾಣಿಗಳಿಗೂ ಸ್ಮಶಾನ, ಮಾಲಿನ್ಯ ನಿಯಂತ್ರಣಕ್ಕೆ ಹೊಸ ಪ್ಲಾನ್

ಹೈದರಾಬಾದ್‌ನಲ್ಲಿ ಸಾಕುಪ್ರಾಣಿಗಳಿಗಾಗಿ ಪ್ರತ್ಯೇಕ ಸ್ಮಶಾನವನ್ನು ನಿರ್ಮಾಣ ಮಾಡಲಾಗಿದೆ. ಈ ಸೌಲಭ್ಯವು ಎಲ್‌ಬಿ ನಗರ ವಲಯದ ಫತುಲ್ಲಗುಡದಲ್ಲಿದೆ. ಮಾಲಿನ್ಯ ನಿಯಂತ್ರಣ ಮಂಡಳಿ (ಪಿಸಿಬಿ) ಮಾನದಂಡಗಳ ಪ್ರಕಾರ ವೈಜ್ಞಾನಿಕ ರೀತಿಯಲ್ಲಿ ಸಾಕುಪ್ರಾಣಿಗಳಿಗೆ ಘನತೆ ಮತ್ತು ಗೌರವಾನ್ವಿತ ಅಂತಿಮ ವಿದಾಯ ನೀಡಲು ಇದನ್ನು ಸ್ಥಾಪಿಸಲಾಗಿದೆ.

Viral News: ಇಲ್ಲಿ ಸಾಕು ಪ್ರಾಣಿಗಳಿಗೂ ಸ್ಮಶಾನ, ಮಾಲಿನ್ಯ ನಿಯಂತ್ರಣಕ್ಕೆ ಹೊಸ ಪ್ಲಾನ್
There is a crematorium for pets here, a new plan for pollution control
TV9 Web
| Edited By: |

Updated on: Dec 06, 2022 | 12:11 PM

Share

ಫತುಲ್ಲಗುಡ: ಹೈದರಾಬಾದ್‌ನಲ್ಲಿ ಸಾಕುಪ್ರಾಣಿಗಳಿಗಾಗಿ ಪ್ರತ್ಯೇಕ ಸ್ಮಶಾನವನ್ನು ನಿರ್ಮಾಣ ಮಾಡಲಾಗಿದೆ. ಈ ಸೌಲಭ್ಯವು ಎಲ್‌ಬಿ ನಗರ ವಲಯದ ಫತುಲ್ಲಗುಡದಲ್ಲಿದೆ. ಮಾಲಿನ್ಯ ನಿಯಂತ್ರಣ ಮಂಡಳಿ (ಪಿಸಿಬಿ) ಮಾನದಂಡಗಳ ಪ್ರಕಾರ ವೈಜ್ಞಾನಿಕ ರೀತಿಯಲ್ಲಿ ಸಾಕುಪ್ರಾಣಿಗಳಿಗೆ ಘನತೆ ಮತ್ತು ಗೌರವಾನ್ವಿತ ಅಂತಿಮ ವಿದಾಯ ನೀಡಲು ಇದನ್ನು ಸ್ಥಾಪಿಸಲಾಗಿದೆ.

ಸಾಕು ಪ್ರಾಣಿಗಳನ್ನು ಸಾರ್ವಜನಿಕ ಪ್ರದೇಶದಲ್ಲಿ ಎಸೆಯುತ್ತಾರೆ. ಈ ಕಾರಣದಿಂದ ಪರಿಸರದ ಮಾಲಿನ್ಯಕ್ಕೆ ತೊಂದರೆಯಾಗಬಾರದು ಎಂದು PCB ಮಾನದಂಡಗಳ ಪ್ರಕಾರ, ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (GHMC) ಸಾಕು ಪ್ರಾಣಿಗಳಿಗಾಗಿ ಸ್ಮಶಾನ ಭೂಮಿಯನ್ನು ಮಂಜೂರು ಮಾಡಿದೆ ಮತ್ತು ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯಿಂದ ಗುರುತಿಸಲ್ಪಟ್ಟ ಪ್ರಾಣಿ ಕಲ್ಯಾಣ ಸಂಸ್ಥೆಯಾದ ಪೀಪಲ್ ಫಾರ್ ಅನಿಮಲ್ಸ್ (PFA) ಗೆ ವಿಶ್ವ ದರ್ಜೆಯ ಸಣ್ಣ ಸಂಸ್ಥೆಯನ್ನು ಸ್ಥಾಪಿಸಲು ಅನುಮತಿ ನೀಡಿದೆ. Fathullahgudaದಲ್ಲಿರುವ GHMC ಪ್ರಾಣಿ ಸಂರಕ್ಷಣಾ ಕೇಂದ್ರದಲ್ಲಿ LPG ಅನಿಲ ದಹನದೊಂದಿಗೆ ಪ್ರಾಣಿಗಳ ಸ್ಮಶಾನ ನಿರ್ಮಾಣ ಮಾಡಲಾಗಿದೆ.

ಜಿಎಚ್‌ಎಂಸಿ ಅಂದಾಜು 1 ಕೋಟಿ ವೆಚ್ಚದಲ್ಲಿ, ಸಿವಿಲ್ ರಚನೆಯ ನಿರ್ಮಾಣ ಮತ್ತು ಯಂತ್ರೋಪಕರಣಗಳ ಖರೀದಿ, ಅಳವಡಿಕೆ ಇತ್ಯಾದಿಗಳನ್ನು ಪಿಎಫ್‌ಎ ಸ್ವಂತ ವೆಚ್ಚದಲ್ಲಿ ತೆಗೆದುಕೊಳ್ಳಲಾಗಿದೆ. ಸ್ಮಶಾನವು ಸುಮಾರು ಎರಡು ಗಂಟೆಗಳ ಸಂಪೂರ್ಣ ಶವಸಂಸ್ಕಾರದ ಸಮಯದೊಂದಿಗೆ ಪ್ರತಿ ಸೈಕಲ್‌ಗೆ ಸುಮಾರು ನಾಲ್ಕು ನಾಯಿಗಳನ್ನು ಸುಡುವ ಸಾಮರ್ಥ್ಯವನ್ನು ಹೊಂದಿದೆ.

ಇದನ್ನು ಓದಿ;Gold ATM: ಹೈದರಾಬಾದ್​ನ ಎಟಿಎಂನಲ್ಲಿ ಸಿಗುತ್ತೆ ಚಿನ್ನ! ಹೀಗೆ ವಿತ್​​ಡ್ರಾ ಮಾಡಬಹುದು ನೋಡಿ

ತೆಲಂಗಾಣ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (TSPCB) ಅದರ ಸ್ಥಾಪನೆ ಮತ್ತು ಕಾರ್ಯಾಚರಣೆಗೆ ಒಪ್ಪಿಗೆಯ ಆದೇಶವನ್ನು ನೀಡಿದೆ. ಗಾಳಿ, ನೀರು, ಮಣ್ಣು ಮತ್ತು ಶಬ್ದ ಮಾಲಿನ್ಯದ ಮಟ್ಟದಲ್ಲಿ ನಿಯಂತ್ರಿಸಲು ಈ ಆದೇಶವು ಸಂಪೂರ್ಣ ಷರತ್ತುಗಳನ್ನು ವಿಧಿಸುತ್ತದೆ. ಪಿಸಿಬಿ ನಿರ್ದಿಷ್ಟಪಡಿಸಿದ ಎಲ್ಲಾ ನಿಬಂಧನೆಗಳನ್ನು ಅನುಸರಿಸಲು ಸೌಲಭ್ಯವನ್ನು ಕೈಗೊಂಡಿದೆ.

ಜಿಎಚ್‌ಎಂಸಿ ಮತ್ತು ಪಿಎಫ್‌ಎ ನಡುವೆ ಎಂಒಯು ಸಹಿ ಮಾಡಲಾಗಿದೆ, ಇದರಲ್ಲಿ ಪಿಎಫ್‌ಎ ತಮ್ಮ ಪ್ರೀತಿಯ ಸಾಕುಪ್ರಾಣಿಗಳನ್ನು ದಹನ ಮಾಡಲು ಮಾಲೀಕರಿಂದ ಬಳಕೆದಾರರ ಶುಲ್ಕವನ್ನು ಸಂಗ್ರಹಿಸುತ್ತದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ