AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Cares ಮೇಲೆ ಸರ್ಕಾರದ ನಿಯಂತ್ರಣವಿಲ್ಲ; ಕೇಂದ್ರದ ಸ್ಪಷ್ಟನೆ

ಪಿಎಂ ಕೇರ್ಸ್​ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ ಎನ್ನುವ ಆರೋಪವನ್ನು ವಿಪಕ್ಷಗಳು ಮಾಡಿದ್ದವು. ಅಲ್ಲದೆ, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲೂ ಸಾಕಷ್ಟು ಪರ ವಿರೋಧ ಚರ್ಚೆಗಳು ನಡೆದಿದ್ದವು.

PM Cares ಮೇಲೆ ಸರ್ಕಾರದ ನಿಯಂತ್ರಣವಿಲ್ಲ; ಕೇಂದ್ರದ ಸ್ಪಷ್ಟನೆ
ಪ್ರಧಾನಿ ನರೇಂದ್ರ ಮೋದಿ
ರಾಜೇಶ್ ದುಗ್ಗುಮನೆ
| Edited By: |

Updated on: Dec 16, 2020 | 9:46 PM

Share

ನವದೆಹಲಿ: ಪಿಎಂ ಕೇರ್ಸ್​ ಹಣ ಸೋರಿಕೆ ಆಗುತ್ತಿದೆ ಎನ್ನುವ ಆರೋಪವನ್ನು ಪ್ರತಿಪಕ್ಷಗಳು ಈ ಮೊದಲಿನಿಂದಲೂ ಮಾಡುತ್ತಲೇ ಬಂದಿವೆ. ಈವರೆಗೆ ಕೇಂದ್ರ ಸರ್ಕಾರ ಈ ಬಗ್ಗೆ ಮೌನ ತಾಳುತ್ತಲೇ ಬಂದಿತ್ತು. ಆದರೆ, ಈಗ ಪ್ರತಿಪಕ್ಷಗಳ ಆರೋಪಕ್ಕೆ ಸ್ಪಷ್ಟನೆ ನೀಡಿರುವ ಕೇಂದ್ರ ಸರ್ಕಾರ, ಪಿಎಂ ಕೇರ್ಸ್​ ಮೇಲೆ ನಮ್ಮ ನಿಯಂತ್ರಣ ಇಲ್ಲ ಎಂದಿದೆ.

ಪಿಎಂ ಕೇರ್ಸ್​ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ ಎನ್ನುವ ಆರೋಪವನ್ನು ವಿಪಕ್ಷಗಳು ಮಾಡಿದ್ದವು. ಅಲ್ಲದೆ, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲೂ ಸಾಕಷ್ಟು ಪರ ವಿರೋಧ ಚರ್ಚೆಗಳು ನಡೆದಿದ್ದವು. ಈ ಎಲ್ಲ ಚರ್ಚೆಗಳಿಗೆ ಕೇಂದ್ರ ಸರ್ಕಾರ ಇತಿಶ್ರೀ ಹಾಡಿದೆ.

ಪಿಎಂ ಕೇರ್ಸ್​ ಮೇಲೆ ಕೇಂದ್ರ, ರಾಜ್ಯ ಸರ್ಕಾರಗಳ ನೇರ ಅಥವಾ ಪರೋಕ್ಷ ನಿಯಂತ್ರಣವಿರುವುದಿಲ್ಲ. ಈ ಹಣವನ್ನು ಸಾಂಕ್ರಾಮಿಕ ರೋಗ, ನೈಸರ್ಗಿಕ ವಿಪತ್ತುಗಳ ಸಂದರ್ಭದಲ್ಲಿ ಪರಿಹಾರ ಕಾಮಗಾರಿಗಳಿಗೆ ಬಳಕೆ ಮಾಡಲಾಗುತ್ತದೆ. ಟ್ರಸ್ಟ್‌ನ ಸದಸ್ಯರು ಕೂಡ ಟ್ರಸ್ಟ್‌ಗೆ ಹಣ ದೇಣಿಗೆ ನೀಡಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಪ್ರಧಾನಿ‌ ನರೇಂದ್ರ ಮೋದಿ ಪಿಎಂ ಕೇರ್ಸ್ ಟ್ರಸ್ಟ್‌ನ ಅಧ್ಯಕ್ಷರಾಗಿರುತ್ತಾರೆ. ಪ್ರಧಾನಿಯವರು ಟ್ರಸ್ಟ್‌ನ ಉಪಾಧ್ಯಕ್ಷರನ್ನೂ ನೇಮಿಸಬಹುದು. ಗೃಹ, ರಕ್ಷಣಾ, ಹಣಕಾಸು ಖಾತೆ ಸಚಿವರು ಈ ಟ್ರಸ್ಟ್​ನ ಸದಸ್ಯರಾಗಿರುತ್ತಾರೆ, ಎಂದು ತಿಳಿಸಿದೆ.

ಪಿಎಂ ಕೇರ್ಸ್ ನಿಧಿಯಲ್ಲಿ ಪಾರದರ್ಶಕತೆಯಿಲ್ಲವೆಂದು ಟೀಕೆಗಳು ಕೇಳಿ ಬಂದಿದ್ದವು. ಆಪರೇಷನ್​ ಕಮಲಕ್ಕೆ ಪಿಎಂ ಕೇರ್ಸ್​ ಹಣ ಬಳಕೆ ಮಾಡಿಕೊಳ್ಳಲಾಗಿತ್ತು ಎನ್ನುವ ಗಂಭೀರ ಆರೋಪವನ್ನು ವಿಪಕ್ಷಗಳು ಮಾಡಿದ್ದವು.

PM CARES Fund ‌ನಿಂದ 100 ಕೋಟಿ ರೂ ರಿಲೀಸ್, ಯಾವುದಕ್ಕೆ ಗೊತ್ತಾ?

ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ