AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಗಾಳ ಹಿಂಸಾಚಾರ ಬಿಜೆಪಿ ಗಿಮಿಕ್, ಟ್ವಿಟರ್ ಮೇಲಿನ ಕೇಂದ್ರದ ನಿಯಂತ್ರಣ ಖಂಡಿಸಿದ ಮಮತಾ ಬ್ಯಾನರ್ಜಿ

Bengal violence: "ಇದೀಗ ರಾಜ್ಯದಲ್ಲಿ ಯಾವುದೇ ರಾಜಕೀಯ ಹಿಂಸಾಚಾರ ನಡೆಯುತ್ತಿಲ್ಲ. ಒಂದು ಅಥವಾ ಎರಡು ಅಪರೂಪದ ಘಟನೆಗಳು ನಡೆದಿರಬಹುದು, ಆದರೆ ಅವುಗಳನ್ನು ರಾಜಕೀಯ ಹಿಂಸಾಚಾರದ ಘಟನೆಗಳು ಎಂದು ಲೇಬಲ್ ಮಾಡಲು ಸಾಧ್ಯವಿಲ್ಲ, ” ಎಂದಿದ್ದಾರೆ ಮಮತಾ.

ಬಂಗಾಳ ಹಿಂಸಾಚಾರ ಬಿಜೆಪಿ ಗಿಮಿಕ್, ಟ್ವಿಟರ್ ಮೇಲಿನ ಕೇಂದ್ರದ ನಿಯಂತ್ರಣ ಖಂಡಿಸಿದ ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jun 17, 2021 | 6:12 PM

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣೋತ್ತರ ಹಿಂಸಾಚಾರ ಬಗ್ಗೆ ಮೌನ ವಹಿಸಿರುವುದನ್ನು ಪ್ರಶ್ನಿಸಿ ರಾಜ್ಯಪಾಲ ಜಗದೀಪ್ ಧನ್ಕರ್ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಪತ್ರ ಬರೆದ ಬೆನ್ನಲ್ಲೇ ಮಮತಾ ಕೇಂದ್ರ ಸರ್ಕಾರ ವಿರುದ್ಧ ಹರಿಹಾಯ್ದಿದ್ದಾರೆ. ಬಂಗಾಳದಲ್ಲಿ ಎಲ್ಲಿಯೂ ರಾಜಕೀಯ ಹಿಂಸಾಚಾರ ನಡೆದಿಲ್ಲ. ಅದು ಬಿಜೆಪಿ ಗಿಮಿಕ್. ನಮ್ಮ ಮೇಲಿನ ಆರೋಪಗಳೆಲ್ಲವೂ ನಿರಾಧಾರ ಎಂದು ಮಮತಾ ಹೇಳಿದ್ದಾರೆ.

“ಇದೀಗ ರಾಜ್ಯದಲ್ಲಿ ಯಾವುದೇ ರಾಜಕೀಯ ಹಿಂಸಾಚಾರ ನಡೆಯುತ್ತಿಲ್ಲ. ಒಂದು ಅಥವಾ ಎರಡು ಅಪರೂಪದ ಘಟನೆಗಳು ನಡೆದಿರಬಹುದು, ಆದರೆ ಅವುಗಳನ್ನು ರಾಜಕೀಯ ಹಿಂಸಾಚಾರದ ಘಟನೆಗಳು ಎಂದು ಲೇಬಲ್ ಮಾಡಲು ಸಾಧ್ಯವಿಲ್ಲ, ” ಎಂದಿದ್ದಾರೆ ಮಮತಾ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ ಎಂದು ಚರ್ಚಿಸಲು ಪ್ರತಿಪಕ್ಷದ ನಾಯಕ ಸುವೇಂದು ಅಧಿಕಾರಿಯ ನೇತೃತ್ವದ ಬಿಜೆಪಿ ಶಾಸಕರ ನಿಯೋಗ ರಾಜ್ಯಪಾಲರನ್ನು ಅವರನ್ನು ಭೇಟಿಯಾದ ಒಂದು ದಿನದ ನಂತರ ರಾಜ್ಯಪಾಲರು ಮಮತಾ ಅವರನ್ನು ಪ್ರಶ್ನಿಸಿದ್ದರು. ಧನ್ಕರ್ ಪ್ರಸ್ತುತ ದೆಹಲಿಯಲ್ಲಿದ್ದು, ಜೂನ್ 18 ರಂದು ಹಿಂದಿರುಗಲಿದ್ದಾರೆ.

ಚುನಾವಣೋತ್ತರ ಹಿಂಸಾಚಾರದಲ್ಲಿ ರಕ್ತಪಾತ, ಮಾನವ ಹಕ್ಕುಗಳ ಉಲ್ಲಂಘನೆ, ಮಹಿಳೆಯರ ಘನತೆಯ ಮೇಲೆ ಅತಿರೇಕದ ಹಲ್ಲೆ, ಆಸ್ತಿಯನ್ನು ನಾಶಮಾಡುವುದು, ರಾಜಕೀಯ ವಿರೋಧಿಗಳ ಮೇಲೆ ದಾಳಿ ಇವು ಕೆಟ್ಟದು ಮತ್ತು ಇದು ಪ್ರಜಾಪ್ರಭುತ್ವಕ್ಕೆ ಕೆಟ್ಟದ್ದಾಗಿದೆ ಎಂದು ನಿಮ್ಮ ನಿರಂತರ ಮೌನ ಮತ್ತು ನಿಷ್ಕ್ರಿಯತೆಯನ್ನು ಗಮನಿಸಲು ನಾನು ನಿರ್ಬಂಧಿತನಾಗಿದ್ದೇನೆ ಎಂದು ಧನ್ಕರ್ ಹೇಳಿದ್ದಾರೆ. ಈ ಪತ್ರವವನ್ನು ಅವರು ಟ್ವಿಟರ್ನಲ್ಲಿ ಶೇರ್ ಮಾಡಿದ್ದಾರೆ. ನಿಮ್ಮ ಮೌನ, ಜೊತೆಗೆ ಜನರ ದುಃಖವನ್ನು ನಿವಾರಿಸಲು ಪುನರ್ವಸತಿ ಮತ್ತು ಪರಿಹಾರದಲ್ಲಿ ತೊಡಗಿಸಿಕೊಳ್ಳಲು ಯಾವುದೇ ಕ್ರಮಗಳಿಲ್ಲದಿರುವುದು ನೋಡಿದರೆ ಇದೆಲ್ಲವೂ ರಾಜ್ಯದಿಂದ ಪ್ರೇರಿತ ಎಂಬ ನಿರ್ಧಾರಕ್ಕೆ ಬರಬೇಕಾಗುತ್ತದೆ ಎಂದು ಧನ್ಕರ್ ಆರೋಪಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ “ವಿಷಕಾರಿ ಮತ್ತು ಆಧಾರರಹಿತ ಕಾಮೆಂಟ್ ಮಾಡುತ್ತಿದ್ದೀರಿ ಎಂದು ವಾಗ್ದಾಳಿ ನಡೆಸಿದೆ.

ಟ್ವಿಟ್ಟರ್ ಅನ್ನು “ನಿಯಂತ್ರಿಸುವ ಪ್ರಯತ್ನಗಳು” ಎಂದು ಬ್ಯಾನರ್ಜಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ದೂಷಿಸಿದರು ಮತ್ತು ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಮೇಲೆ ಪ್ರಭಾವ ಬೀರಲು ಕೇಂದ್ರವು ವಿಫಲವಾಗಿದೆ ಎಂದು ಮಮತಾ ಹೇಳಿದ್ದಾರೆ.

ಟ್ವಿಟರ್ ವರ್ತನೆ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್, ಸರ್ಕಾರ ರೂಪಿಸಿರುವ ಮಾರ್ಗಸೂಚಿಗಳನ್ನು ಟ್ವಿಟರ್ ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸುತ್ತಿದೆ ಎಂದು ಬುಧವಾರ ಹೇಳಿದ್ದರು.

ತಮ್ಮ ಸರ್ಕಾರ ಜತೆಯೂ ಕೇಂದ್ರ ಸರ್ಕಾರ ಇದೇ ರೀತಿ ವರ್ತಿಸುತ್ತಿದೆ ಎಂದಿದ್ದಾರೆ ಮಮತಾ. “ನಾನು ಅದನ್ನು ಖಂಡಿಸುತ್ತೇನೆ; ಅವರು ಟ್ವಿಟರ್ ಅನ್ನು ನಿಯಂತ್ರಿಸಲು ಸಾಧ್ಯವಿಲ್ಲ, ಆದ್ದರಿಂದ ಅವರು ಅದನ್ನು ಸದೆಬಡಿಯಲು ಪ್ರಯತ್ನಿಸುತ್ತಿದ್ದಾರೆ. ಅವರು (ಕೇಂದ್ರ) ಅವರು ನಿರ್ವಹಿಸಲು ಸಾಧ್ಯವಾಗದ ಪ್ರತಿಯೊಬ್ಬರೊಂದಿಗೆ ಹಾಗೆ ಮಾಡಲು ಪ್ರಯತ್ನಿಸುತ್ತಿದ್ದಾರೆ. ಅವರು ನನ್ನನ್ನು ನಿಯಂತ್ರಿಸಲು ಸಾಧ್ಯವಿಲ್ಲ, ಮತ್ತು ಅದಕ್ಕಾಗಿಯೇ ಅವರು ನನ್ನ ಸರ್ಕಾರವನ್ನು ಸದೆಬಡಿಯಲುಲು ಪ್ರಯತ್ನಿಸುತ್ತಿದ್ದಾರೆ ”ಎಂದು ಕೋಲ್ಕತ್ತಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬ್ಯಾನರ್ಜಿ ಹೇಳಿದರು.

ಈ ವಾರದ ಆರಂಭದಲ್ಲಿ ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣಾ ಫಲಿತಾಂಶ ಘೋಷಣೆಯಾದ ಹಿಂಸಾಚಾರದ ಹಿನ್ನೆಲೆಯಲ್ಲಿ ಜನರು ತಮ್ಮ ಮನೆಗಳಿಂದ ಸ್ಥಳಾಂತರಗೊಂಡಿದ್ದಾರೆ ಎಂಬ ವರದಿಗಳನ್ನು ಟಿಎಂಸಿ ಸರ್ಕಾರ ಒಪ್ಪಿಕೊಂಡಿದ್ದರೂ ಹಿಂಸಾಚಾರ ಆರೋಪದಲ್ಲಿ “ಸುಳ್ಳು” ಮತ್ತು “ದಾರಿತಪ್ಪಿಸುವ” ಅಂಶಗಳಿವೆ ಎಂದು ಬಂಗಾಳ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಹೇಳಿತ್ತು.

ಚುನಾವಣೋತ್ತರ ಹಿಂಸಾಚಾರವನ್ನ ನಿಲ್ಲಿಸಲು, ಆಪಾದಿತ ಅಪರಾಧಗಳ ಬಗ್ಗೆ ಎಸ್‌ಐಟಿ ತನಿಖೆ ಮತ್ತು “ಆಂತರಿಕವಾಗಿ ಸ್ಥಳಾಂತರಗೊಂಡವರಿಗೆ” ಪರಿಹಾರ ಮತ್ತು ಪುನರ್ವಸತಿ ಕಲ್ಪಿಸಲು ಸಲ್ಲಿಸಿದ ಪಿಐಎಲ್ ಮೇಲೆ ಉನ್ನತ ನ್ಯಾಯಾಲಯವು ನೋಟಿಸ್ ನೀಡಿತ್ತು.

ಇಂತಹ ಆರೋಪಗಳು “ಕ್ಷುಲ್ಲಕ ಮತ್ತು ರಾಜಕೀಯ ಪ್ರೇರಿತವಾಗಿವೆ” ಎಂದು ರಾಜ್ಯ ಪ್ರತಿಕ್ರಿಯಿಸಿತ್ತು. ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ಮತದಾನದ ನಂತರದ ಹಿಂಸಾಚಾರದ ಸನ್ನಿವೇಶಕ್ಕೆ ಸಂಬಂಧಿಸಿದಂತೆ ನಕಲಿ ಸುದ್ದಿಗಳು ಮತ್ತು ಮಾರ್ಫಿಂಗ್ ವೀಡಿಯೊಗಳು ಬಂದಿವೆ ಎಂದು ರಾಜ್ಯ ಸರ್ಕಾರ ಹೇಳಿಕೊಂಡಿದೆ.

ಇದನ್ನೂ ಓದಿ: ಬಂಗಾಳದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳನ್ನು ರಾಜ್ಯಪಾಲ ಧನ್ಕರ್ ಇಸ್ರೇಲ್- ಪ್ಯಾಲೆಸ್ತೀನ್ ಯುದ್ಧದಂತೆ ಬಿಂಬಿಸುತ್ತಿದ್ದಾರೆ: ಟಿಎಂಸಿ

ಇದನ್ನೂ ಓದಿಅಭಿವ್ಯಕ್ತಿ​ ಸ್ವಾತಂತ್ರ್ಯದ ವಕ್ತಾರನಂತೆ ವರ್ತಿಸುತ್ತಿರುವ ಟ್ವಿಟರ್​ನಿಂದ ಸರ್ಕಾರದ ಮಾರ್ಗಸೂಚಿ ಉಲ್ಲಂಘನೆ: ರವಿಶಂಕರ್ ಪ್ರಸಾದ್

ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌..!
ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌..!
ಇಂದ್ರಯಾಣಿ ಸೇತುವೆ ಶಿಥಿಲವಾಗಿತ್ತು; ಸಿಎಂ ಫಡ್ನವೀಸ್
ಇಂದ್ರಯಾಣಿ ಸೇತುವೆ ಶಿಥಿಲವಾಗಿತ್ತು; ಸಿಎಂ ಫಡ್ನವೀಸ್
ನಮ್ಮ ಸರ್ಕಾರ ಕೇವಲ ಒಂದು ತಿಂಗಳಲ್ಲಿ ಗ್ಯಾರಂಟಿ ಯೋಜನೆ ಜಾರಿಮಾಡಿತು: ಸಚಿವ
ನಮ್ಮ ಸರ್ಕಾರ ಕೇವಲ ಒಂದು ತಿಂಗಳಲ್ಲಿ ಗ್ಯಾರಂಟಿ ಯೋಜನೆ ಜಾರಿಮಾಡಿತು: ಸಚಿವ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡುತ್ತೇವೆ ಅಂತ ಕೇಂದ್ರ ಹೇಳಿಲ್ಲ: ಸಿಎಂ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡುತ್ತೇವೆ ಅಂತ ಕೇಂದ್ರ ಹೇಳಿಲ್ಲ: ಸಿಎಂ