AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವುದೇ ಕಾರಣಕ್ಕೂ ಗೃಹ ಸಚಿವ ಅನಿಲ್ ದೇಶ್​ಮುಖ್ ರಾಜೀನಾಮೆ ಪಡೆಯಲ್ಲ; ಎನ್​ಸಿಪಿ ನಾಯಕ ಜಯಂತ್ ಪಾಟೀಲ್

Parambir Singhs Letter: ಅನಿಲ್ ದೇಶ್​ಮುಖ್ ವಿರುದ್ಧ ಕೇಳಿಬಂದಿರುವ ಆರೋಪದ ಬೆನ್ನಲ್ಲೇ ಎನ್​ಸಿಪಿ ವರಿಷ್ಠ ಶರದ್ ಪವಾರ್, ಪಕ್ಷದ ಮಹಾರಾಷ್ಟ್ರದ ಘಟಕದ ನಾಯಕರಾದ ಅಜಿತ್ ಪವಾರ್ ಮತ್ತು ಜಯಂತ್ ಪಾಟೀಲ್ ಅವರುಗಳನ್ನು ದೆಹಲಿಗೆ ಬರುವಂತೆ ಬುಲಾವ್ ನೀಡಿದ್ದಾರೆ.

ಯಾವುದೇ ಕಾರಣಕ್ಕೂ ಗೃಹ ಸಚಿವ ಅನಿಲ್ ದೇಶ್​ಮುಖ್ ರಾಜೀನಾಮೆ ಪಡೆಯಲ್ಲ; ಎನ್​ಸಿಪಿ ನಾಯಕ ಜಯಂತ್ ಪಾಟೀಲ್
ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಗೃಹ ಸಚಿವ ಅನಿಲ್ ದೇಶ್​ಮುಖ್
guruganesh bhat
|

Updated on:Mar 21, 2021 | 12:34 PM

Share

ಮುಂಬೈ: ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್​ಮುಖ್​ರ ರಾಜೀನಾಮೆ ಪಡೆಯುವುದಿಲ್ಲ. ಅವರನ್ನು ಸ್ಥಾನದಿಂದ ವಜಾಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ಎನ್​ಸಿಪಿ ಪಕ್ಷದ ಮಹಾರಾಷ್ಟ್ರ ಘಟಕದ ಅಧ್ಯಕ್ಷ ಜಯಂತ್ ಪಾಟೀಲ್ ತಿಳಿಸಿದ್ದಾರೆ. ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ 100 ಕೋಟಿ ವಸೂಲಿಗೆ ಒತ್ತಡ ಆರೋಪದಡಿ ಅನಿಲ್ ದೇಶ್​ಮುಖ್​ರ ರಾಜೀನಾಮೆಗೆ ಒತ್ತಾಯಿಸಿದ ಬೆನ್ನಲ್ಲೇ ಜಯಂತ್ ಪಾಟೀಲ್ ಈ ಹೇಳಿಕೆ ನೀಡಿದ್ದಾರೆ.

ಅಲ್ಲದೇ ಅನಿಲ್ ದೇಶ್​ಮುಖ್ ವಿರುದ್ಧ ಕೇಳಿಬಂದಿರುವ ಆರೋಪದ ಬೆನ್ನಲ್ಲೇ ಎನ್​ಸಿಪಿ ವರಿಷ್ಠ ಶರದ್ ಪವಾರ್, ಪಕ್ಷದ ಮಹಾರಾಷ್ಟ್ರದ ಘಟಕದ ನಾಯಕರಾದ ಅಜಿತ್ ಪವಾರ್ ಮತ್ತು ಜಯಂತ್ ಪಾಟೀಲ್ ಅವರುಗಳನ್ನು ದೆಹಲಿಗೆ ಬುಲಾವ್ ನೀಡಿದ್ದಾರೆ. ಶರದ್ ಪವಾರ್ ಜತೆಗಿನ ಸಭೆಯ ನಂತರ ಎನ್​ಸಿಪಿ ಪಕ್ಷದ ಅಧಿಕೃತ ನಿರ್ಣಯ ಹೊರಬರಬೇಕಿದೆ.

ಆತ್ಮಾವಲೋಕನ ಕಾಲ ಈ ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಶಿವಸೇನಾ ಸಂಸದ ಸಂಜಯ್ ರೌತ್ ‘ ಇದು ಆತ್ಮಾವಕಲೋಕನದ ಕಾಲ’ ಎಂದಿದ್ದಾರೆ.

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಗೃಹ ಸಚಿವ ಅನಿಲ್ ದೇಶ್​ಮುಖ್ ವಿರುದ್ಧ ಪತ್ರ ಬರೆದಿದ್ದಾಗಿ ಪರಮ್​ವೀರ್ ಸಿಂಗ್ ಖಚಿತಪಡಿಸಿದ್ದಾರೆ. ಅನಿಲ್ ದೇಶ್​ಮುಖ್ ಮುಂಬೈನ ಬಾರ್ ಮತ್ತು ರೆಸ್ಟೊರೆಂಟ್​ಗಳಿಂದ 100 ಕೋಟಿ ಹಣವನ್ನು ವಸೂಲು ಮಾಡಬೇಕೆಂದು ಸಸ್ಪೆಂಡ್ ಆಗಿರುವ ಪೊಲಿಸ್ ಅಧಿಕಾರಿ ಸಚಿನ್ ವಾಜೆ ಮೇಲೆ ಒತ್ತಡ ಹೇರಿದ್ದರು ಎಂದು ಪರಮ್​ವೀರ್ ಸಿಂಗ್ ಪತ್ರದಲ್ಲಿ ಉಲ್ಲೇಖಿಸಿದ್ದರು. ನಂತರ ತಡರಾತ್ರಿ ಮಹಾರಾಷ್ಟ್ರ ಸರ್ಕಾರ ಮತ್ತು ಶಿವಸೇನೆ ‘ಅದು ಪರಮ್​ವೀರ್ ಸಿಂಗ್ ಬರೆದ ಪತ್ರವಲ್ಲ. ಪತ್ರದ ಮೂಲದ ಕುರಿತು ಅಧಿಕೃತತೆಯಿಲ್ಲ’ ಎಂದು ಹೇಳಿತ್ತು. ಆದರೆ ಇಂದು (ಮಾರ್ಚ್ 21) ಬೆಳಗ್ಗೆ ಪರಮ್​ವೀರ್ ಸಿಂಗ್ ಸ್ವತಃ ತಾವೇ ಪತ್ರ ಬರೆದಿದ್ದಾಗಿ ಖಚಿತಪಡಿಸಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕಚೇರಿಗೆ ಸಹಿ ಮಾಡಿದ ಪತ್ರವನ್ನು ಕಳಿಸಿದ್ದಾಗಿ ಅವರು ತಿಳಿಸಿದ್ದಾರೆ.

ಶಿವಸೇನೆಯ ಉದ್ಧವ್ ಠಾಕ್ರೆ  ಮಹಾರಾಷ್ಟ್ರದ ಮುಖ್ಯಮಂತ್ರಿಯಾದರೂ ಮೈತ್ರಿಕೂಟದ ಎನ್​ಸಿಪಿ ಪಕ್ಷದ ಅನಿಲ್ ದೇಶ್​ಮುಖ್ ಗೃಹ ಸಚಿವರಾಗಿದ್ದಾರೆ.  ಸರ್ಕಾರದ ಚುಕ್ಕಾಣಿಯಲ್ಲಿ ಕುಳಿತಿರುವ ಇಬ್ಬರ ನಡುವೆ ಅಭಿಪ್ರಾಯ ಬೇಧ, ಸಣ್ಣಪುಟ್ಟ ವೈಮನಸ್ಸು ಉದ್ಭವಿಸಿದ ಉದಾಹರಣೆಗಳಿವೆ. ಗೃಹ ಸಚಿವ ಅನಿಲ್ ದೇಶ್​ಮುಖ್ ಮೇಲೆ ಪರಮ್​ವೀರ್ ಸಿಂಗ್ ಮಾಡಿರುವ ಪ್ರತಿ ತಿಂಗಳು 100 ಕೋಟಿ ಸಂಗ್ರಹಿಸುವ ಆರೋಪ ಮಹಾರಾಷ್ಟ್ರ ಸರ್ಕಾರಕ್ಕೆ ಕುತ್ತು ತರುವ ಶಕ್ತಿ ಹೊಂದಿದೆ. ಪರಮ್​ವೀರ್ ಸಿಂಗ್ ಗೃಹ ಸಚಿವರ ಮೇಲೇ ಆರೋಪ ಮಾಡಿರುವುದು ಶಿವಸೇನೆ-ಎನ್​ಸಿಪಿಯ ದೋಸ್ತಿ ಸರ್ಕಾರದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ.

ಗೃಹ ಸಚಿವರ ರಾಜೀನಾಮೆಗೆ ಆಗ್ರಹ ಈ ಸಂಬಂಧ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ವಿರೋಧ ಪಕ್ಷದ ನಾಯಕರೂ ಆಗಿರುವ ದೇವೇಂದ್ರ ಫಡ್ನವಿಸ್, ಗೃಹ ಸಚಿವರು ರಾಜೀನಾಮೆ ನೀಡಬೇಕು. ಒಂದುವೇಳೆ ಅನಿಲ್ ದೇಶ್​ಮುಖ್ ರಾಜೀನಾಮೆ ನೀಡದಿದ್ದರೆ ಖುದ್ದು ಮುಖ್ಯಮಂತ್ರಿ ಅವರು ಗೃಹ ಸಚಿವರನ್ನು ತೆಗೆದುಹಾಕಬೇಕು. ಘಟನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ. ಈ ಎಲ್ಲಾ ದುಷ್ಕೃತ್ಯಗಳ ಬಗ್ಗೆ ಮುಖ್ಯಮಂತ್ರಿಗೆ ಅರಿವಿತ್ತು ಎಂದೂ ಪತ್ರದಲ್ಲಿ ಹೇಳಲಾಗಿದೆ. ಹಾಗಾಗ್ಯೂ ಯಾಕೆ ಅವರು ಏನೂ ಕ್ರಮ ಕೈಗೊಂಡಿಲ್ಲ ಎಂದು ಕೇಳಿದ್ದಾರೆ.

ತನ್ನ ಮೇಲಿನ ಆರೋಪ ಸುಳ್ಳು ಎಂದ ಅನಿಲ್ ದೇಶ್​ಮುಖ್ ಆದರೆ, ಪರಮ್​ವೀರ್ ಸಿಂಗ್ ಮಾಡಿರುವ ಆರೋಪಗಳನ್ನು ಗೃಹ ಸಚಿವ ಅನಿಲ್ ದೇಶ್​ಮುಖ್ ತಳ್ಳಿ ಹಾಕಿದ್ದಾರೆ. ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್​ವೀರ್ ಸಿಂಗ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಅವರು ಹೇಳಿದ್ದಾರೆ.

ಪರಮ್​ವೀರ್ ಸಿಂಗ್ ಮಾಡಿರುವ ಆರೋಪಗಳು ಸಂಪೂರ್ಣ ಸುಳ್ಳು. ಹಾಗೂ ನಾನು ಮಾನಹಾನಿ ಪ್ರಕರಣ ದಾಖಲಿಸುತ್ತಿರುವ ಕಾರಣ ಅವರು ಮಾಡಿರುವ ಆರೋಪಗಳನ್ನು ಸಾಕ್ಷೀಕರಿಸಬೇಕು ಎಂದು ಅನಿಲ್ ದೇಶ್​ಮುಖ್ ತಿಳಿಸಿದ್ದಾರೆ.

ಇದನ್ನೂ ಓದಿ: ಗೃಹ ಸಚಿವ ಅನಿಲ್ ದೇಶ್​ಮುಖ್ ಪ್ರತಿ ತಿಂಗಳು 100 ಕೋಟಿ ಸಂಗ್ರಹಿಸಲು ಸಚಿನ್ ವಾಜೆ ಮೇಲೆ ಒತ್ತಡ ಹೇರಿದ್ದರು; ಉದ್ಧವ್ ಠಾಕ್ರೆಗೆ ಪತ್ರ ಬರೆದ ಪರಮ್​ವೀರ್ ಸಿಂಗ್

100 ಕೋಟಿ ವಸೂಲಿ ಮಾಡುವಂತೆ ಒತ್ತಡ ಹೇರಿದ್ದರು ಎಂಬ ಪತ್ರ ಬರೆದದ್ದು ನಾನೇ‘; ಖಚಿತಪಡಿಸಿದ ಪರಮ್​ವೀರ್ ಸಿಂಗ್

ಮುಕೇಶ್ ಅಂಬಾನಿ ಮನೆ ಮುಂದೆ ಜಿಲೆಟಿನ್ ಪತ್ತೆ ಪ್ರಕರಣ ; ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಸಸ್ಪೆಂಡ್

ಮುಂಬೈ ಪೊಲೀಸ್ ಕಮಿಷನರ್ ಹುದ್ದೆ ಕಳೆದುಕೊಂಡ ಪರಮ್​ವೀರ್ ಸಿಂಗ್​ ಮೈಮೇಲೆ ಎಳೆದುಕೊಂಡಿದ್ದ ವಿವಾದಗಳು ಒಂದೆರೆಡಲ್ಲ..

Published On - 12:11 pm, Sun, 21 March 21

ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು