ಇದಕ್ಕಿಂತ ದೊಡ್ಡ ಸುಳ್ಳು ಇಲ್ಲ: ಸಂಸತ್​​ನಲ್ಲಿ ಮೈಕ್ ಆಫ್ ಮಾಡಲಾಗುತ್ತದೆ ಎಂಬ ರಾಹುಲ್ ಗಾಂಧಿ ಹೇಳಿಕೆ ಬಗ್ಗೆ ಜಗದೀಪ್ ಧನ್ಖರ್

"ಭಾರತೀಯ ಸಂಸತ್ತಿನಲ್ಲಿ ಇದು ಎಂದಿಗೂ ಸಂಭವಿಸುವುದಿಲ್ಲ ಎಂದು ಜಗತ್ತಿಗೆ ಹೇಳಲು ನಾನು ಈ ಸಾಂವಿಧಾನಿಕ ಕರ್ತವ್ಯವನ್ನು ಹೊಂದಿದ್ದೇನೆ. ಹೌದು, ತುರ್ತು ಪರಿಸ್ಥಿತಿ ಎಂದು ಕರೆಯಲ್ಪಡುವ ಕಪ್ಪು ಅವಧಿ ಇತ್ತು. ಆದರೆ ಈಗ ಅದು ಸಾಧ್ಯವಿಲ್ಲ

ಇದಕ್ಕಿಂತ ದೊಡ್ಡ ಸುಳ್ಳು ಇಲ್ಲ: ಸಂಸತ್​​ನಲ್ಲಿ ಮೈಕ್ ಆಫ್ ಮಾಡಲಾಗುತ್ತದೆ ಎಂಬ ರಾಹುಲ್ ಗಾಂಧಿ ಹೇಳಿಕೆ ಬಗ್ಗೆ ಜಗದೀಪ್ ಧನ್ಖರ್
ಜಗದೀಪ್ ಧನ್ಖರ್
ರಶ್ಮಿ ಕಲ್ಲಕಟ್ಟ

Updated on: Mar 11, 2023 | 9:11 PM

ಉಪ ರಾಷ್ಟ್ರಪತಿ ಜಗದೀಪ್ ಧನ್ಖರ್ (Jagdeep Dhankhar) ಅವರು ಶನಿವಾರ ರಾಹುಲ್ ಗಾಂಧಿಯವರ (Rahul Gandhi) ಹೆಸರು ಉಲ್ಲೇಖಿಸದೆಯೇ ಅವರ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.ಯಾರೋ ದೇಶದಿಂದ ಹೊರಗೆ ಹೋಗುತ್ತಾರೆ. ಅಲ್ಲಿ ಅವರು ಸಂಸತ್ತಿನಲ್ಲಿ ಮೈಕ್‌ಗಳನ್ನು ಆಫ್ ಮಾಡಲಾಗಿದೆ ಎಂದು ಹೇಳುತ್ತಾರೆ. ಇದಕ್ಕಿಂತ ದೊಡ್ಡ ಸುಳ್ಳು ಮತ್ತೊಂದಿಲ್ಲ. “ಭಾರತೀಯ ಸಂಸತ್ತಿನಲ್ಲಿ ಇದು ಎಂದಿಗೂ ಸಂಭವಿಸುವುದಿಲ್ಲ ಎಂದು ಜಗತ್ತಿಗೆ ಹೇಳಲು ನಾನು ಈ ಸಾಂವಿಧಾನಿಕ ಕರ್ತವ್ಯವನ್ನು ಹೊಂದಿದ್ದೇನೆ. ಹೌದು, ತುರ್ತು ಪರಿಸ್ಥಿತಿ ಎಂದು ಕರೆಯಲ್ಪಡುವ ಕಪ್ಪು ಅವಧಿ ಇತ್ತು. ಆದರೆ ಈಗ ಅದು ಸಾಧ್ಯವಿಲ್ಲ ಎಂದು ಮೀರತ್‌ನ ವಿಶ್ವವಿದ್ಯಾನಿಲಯದಲ್ಲಿ ಆಯುರ್ವೇದ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಜಗದೀಪ್ ಧನ್ಖರ್ ಹೇಳಿದ್ದಾರೆ. ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ಸಂಸತ್ತಿನ ಘನತೆಯನ್ನು ಮರುಸ್ಥಾಪಿಸುವ ಮದ್ದು ಬೇಕು ಎಂದು ಹೇಳಿದ್ದಾರೆ.

ಪ್ರಜಾಪ್ರಭುತ್ವದ ದೇವಾಲಯಗಳು ಆಕ್ರೋಶಗೊಳ್ಳಲು ನಾವು ಅನುಮತಿಸುವುದಿಲ್ಲ ಏಕೆಂದರೆ ನಾವು ಅತಿದೊಡ್ಡ ಪ್ರಜಾಪ್ರಭುತ್ವ ಮಾತ್ರವಲ್ಲದೆ ಪ್ರಜಾಪ್ರಭುತ್ವದ ತಾಯಿಯೂ ಆಗಿದ್ದೇವೆ ಎಂದು ಉಪರಾಷ್ಟ್ರಪತಿ ಹೇಳಿದರು. ರಾಹುಲ್ ಗಾಂಧಿಯವರ ಮೈಕ್ ಆಫ್ ಹೇಳಿಕೆಗೆ ಧನ್ಖರ್ ಆಕ್ಷೇಪ ಎತ್ತಿದ್ದು ಇದೇ ಮೊದಲಲ್ಲ. ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ಹಲವಾರು ಬಾರಿ ಈ ಹೇಳಿಕೆಯನ್ನು ಪುನರಾವರ್ತಿಸಿದರೂ, ಯುಕೆಯಲ್ಲಿ ಅವರ ಹೇಳಿಕೆಯು ಹೆಚ್ಚಿನ ಗಮನ ಸೆಳೆದಿತ್ತು. ದೇಶದ ಹೊರಗೆ ಸಂಸದರ ಈ ಟೀಕೆಗೆ ನಾನು ಮೌನವಾಗಿದ್ದರೆ, ನಾನು ಸಂವಿಧಾನದ ತಪ್ಪು ಭಾಗದಲ್ಲಿರುತ್ತೇನೆ. ಭಾರತದ ಸಂಸತ್ ನಲ್ಲಿ ಮೈಕ್ ಆಫ್ ಮಾಡಲಾಗುತ್ತದೆ ಎಂಬುದನ್ನು ನಾನು ಹೇಗೆ ಒಪ್ಪಿಕೊಳ್ಳಲಿ? ಎಂದು ಧನ್ಖರ್ ಈ ಹಿಂದೆ ಹೇಳಿದ್ದರು.

ಇದನ್ನೂ ಓದಿ:Pulwama widows protest: ಜೈಪುರ: ಪುಲ್ವಾಮಾ ಹುತಾತ್ಮ ಯೋಧರ ವಿಧವೆಯರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಕಲ್ಲು ತೂರಾಟ; ಲಾಠಿ ಪ್ರಹಾರ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿಕೆಯನ್ನು ಟೀಕಿಸಿದ್ದು ಧನ್ಖರ್ ರಾಜ್ಯಸಭಾ ಅಧ್ಯಕ್ಷರಾಗಿರುವುದರಿಂದ ಯಾವುದೇ ಆಡಳಿತದ ಪಕ್ಷಕ್ಕೆ ಚಿಯರ್ ಲೀಡರ್” ಆಗಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ತಮ್ಮ ಇತ್ತೀಚಿನ ಯುಕೆ ಪ್ರವಾಸದಲ್ಲಿ, ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿಯವರ ಮೇಲೆ ವಾಗ್ದಾಳಿ ನಡೆಸಿದರು ಮತ್ತು ಅವರು ಭಾರತದ ವಾಸ್ತುಶಿಲ್ಪವನ್ನು ನಾಶಪಡಿಸುತ್ತಿದ್ದಾರೆ ಎಂದು ಹೇಳಿದರು. ವಿರೋಧ ಪಕ್ಷದ ನಾಯಕರು ಭಾರತದಲ್ಲಿ ಬಾಯಿ ಮುಚ್ಚಿಕೊಂಡಿದ್ದಾರೆ ಮತ್ತು ಸಂಸತ್ತಿನಲ್ಲಿ ಏನಾದರೂ ಹೇಳಿದಾಗ ಮೈಕ್‌ಗಳನ್ನು ಸ್ವಿಚ್ ಆಫ್ ಮಾಡಲಾಗುತ್ತದೆ ಎಂದು ಕಾಂಗ್ರೆಸ್ ನಾಯಕ ಹೇಳಿದರು. ಸಂಸ್ಥೆಗಳ ಮೇಲೆ ದಾಳಿ ನಡೆಯುತ್ತಿದೆ ಎಂದು ರಾಹುಲ್ ಗಾಂಧಿ ಅವರು ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಯ ಮೂಲವನ್ನು ವಿವರಿಸಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Follow Us