AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ -ಸೆರಮ್​ ನಡುವೆ ಲಸಿಕೆ ಬೆಲೆ ಒಪ್ಪಂದದಲ್ಲಿ ಯಾವುದೇ ಬಿರುಕು ಇಲ್ಲ; ಚೌಕಾಸಿ ನಡೆದಿಲ್ಲ: ಪೂನಾವಾಲಾ

ಸೆರಮ್​ ಮತ್ತು ಕೇಂದ್ರ ಸರ್ಕಾರದ ನಡುವೆ ಕೊರೊನಾ ಲಸಿಕೆ ದರಕ್ಕೆ ಸಂಬಂಧಿಸಿದಂತೆ ಭಿನ್ನಾಭಿಪ್ರಾಯ ಮೂಡಿದೆ ಎಂಬ ಮಾತುಗಳನ್ನು ಸ್ಪಷ್ಟವಾಗಿ ನಿರಾಕರಿಸಿರುವ ಸೆರಮ್​ ಮುಖ್ಯಸ್ಥ ಅದರ್​ ಪೂನಾವಾಲಾ ಒಪ್ಪಂದದ ವಿಚಾರದಲ್ಲಿ ಯಾವುದೇ ಬಿರುಕುಗಳಿಲ್ಲ ಸೋಮವಾರದ ನಂತರ ಲಸಿಕೆ ತಲುಪಿಸುವ ಪ್ರಯತ್ನ ಆಗಲಿದೆ ಎಂದು ಹೇಳಿದ್ದಾರೆ.

ಸರ್ಕಾರ -ಸೆರಮ್​ ನಡುವೆ ಲಸಿಕೆ ಬೆಲೆ ಒಪ್ಪಂದದಲ್ಲಿ ಯಾವುದೇ ಬಿರುಕು ಇಲ್ಲ; ಚೌಕಾಸಿ ನಡೆದಿಲ್ಲ: ಪೂನಾವಾಲಾ
ಕೊವಿಶೀಲ್ಡ್​ ಲಸಿಕೆ
Skanda
| Edited By: |

Updated on: Jan 09, 2021 | 10:40 AM

Share

ಪುಣೆ: ದೇಶದಲ್ಲಿ ಕೊರೊನಾ ಲಸಿಕೆ ವಿತರಣೆಗೆ ಕ್ಷಣಗಣನೆ ಆರಂಭವಾಗಿದೆ. ಇಂದು ಅಥವಾ ನಾಳೆ ಎಲ್ಲಾ ರಾಜ್ಯಗಳಿಗೆ ಲಸಿಕೆ ತಲುಪಲಿದೆ ಎಂಬ ಮಾತು ಕೇಳಿಬರುತ್ತಿರುವಾಗಲೇ ಲಸಿಕೆ ವಿತರಣೆ ಕೊಂಚ ತಡವಾಗಲಿದೆ ಎಂದು ಸೆರಮ್​ ಸಂಸ್ಥೆ ಹೇಳಿದೆ. ವಿಮಾನಗಳ ಮೂಲಕ ಕೊರೊನಾ ಲಸಿಕೆ ಸಾಗಿಸುವ ಮುನ್ನ ಕೆಲ ಪ್ರಕ್ರಿಯೆಗಳನ್ನು ಪಾಲಿಸಬೇಕಿದೆ. ಆದ್ದರಿಂದ ಲಸಿಕೆಗಳ ಸಾಗಣೆ 48 ಗಂಟೆಗಳ ಕಾಲ ಮುಂದೆ ಹೋಗಬಹುದು ಎಂದು ಸೆರಮ್​ ಅಭಿಪ್ರಾಯಪಟ್ಟಿದೆ.

ಈ ನಡುವೆ, ಸೆರಮ್​ ಮತ್ತು ಕೇಂದ್ರ ಸರ್ಕಾರದ ನಡುವೆ ಕೊರೊನಾ ಲಸಿಕೆ ದರಕ್ಕೆ ಸಂಬಂಧಿಸಿದಂತೆ ಭಿನ್ನಾಭಿಪ್ರಾಯ ಮೂಡಿದೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ, ಅದನ್ನು ಸ್ಪಷ್ಟವಾಗಿ ನಿರಾಕರಿಸಿರುವ ಸೆರಮ್​ ಮುಖ್ಯಸ್ಥ ಅದರ್​ ಪೂನಾವಾಲಾ ಒಪ್ಪಂದದ ವಿಚಾರದಲ್ಲಿ ಯಾವುದೇ ಬಿರುಕುಗಳಿಲ್ಲ. ತಾಂತ್ರಿಕ ಕಾರಣಗಳಿಗಾಗಿ ಪೂರೈಕೆ ವಿಳಂಬವಾಗುತ್ತಿದೆಯಷ್ಟೇ. ಅದಾಗ್ಯೂ ಸೋಮವಾರದ ನಂತರ ಲಸಿಕೆ ತಲುಪಿಸುವ ಪ್ರಯತ್ನ ಆಗಲಿದೆ ಎಂದು ಹೇಳಿದ್ದಾರೆ.

ಕೊರೊನಾ ಲಸಿಕೆ ದರಕ್ಕೆ ಸಂಬಂಧಿಸಿದಂತೆ ಸೆರಮ್​ ಸಂಸ್ಥೆ ಕೆಲ ದಿನಗಳ ಹಿಂದೆಯಷ್ಟೇ ವಿವರಣೆ ನೀಡಿತ್ತು. ಮೊದಲ 10 ಕೋಟಿ ಕೊರೊನಾ ಲಸಿಕೆ ಡೋಸ್​ಗಳನ್ನು ಒಂದು ಡೋಸ್​ಗೆ ₹200ರಂತೆ ರಿಯಾಯಿತಿ ದರದಲ್ಲಿ ಸರ್ಕಾರಕ್ಕೆ ನೀಡುತ್ತೇವೆ. ನಂತರ ಖಾಸಗಿ ಮಾರುಕಟ್ಟೆಯಲ್ಲಿ ಒಂದು ಡೋಸ್​ಗೆ ₹1000ದಷ್ಟು ದರ ನಿಗದಿಪಡಿಸಲಾಗುವುದು ಎಂದು ತಿಳಿಸಿತ್ತು.

ಈಗಾಗಲೇ ಪುಣೆಯ ಮಂಜರಿ ಕೇಂದ್ರದಲ್ಲಿ 5ಕೋಟಿ ಡೋಸ್​ ಲಸಿಕೆ ಸಿದ್ಧವಿದೆ. ಸದ್ಯ ತಿಂಗಳಿಗೆ 5ರಿಂದ 6ಕೋಟಿ ಡೋಸ್​ ಲಸಿಕೆಯನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಪೂನಾವಾಲಾ ಹೇಳಿದ್ದಾರೆ. ಇತ್ತ ವಿಮಾನ ನಿಲ್ದಾಣಗಳಲ್ಲಿ ಲಸಿಕೆ ಸಾಗಾಟ ಮಾಡಲು ಸಕಲ ಸಿದ್ಧತೆಗಳೂ ಆಗಿವೆ. ಯಾವ ಕ್ಷಣದಲ್ಲಿ ಆದೇಶ ಬಂದರೂ ನಾವು ಸಿದ್ಧರಿದ್ದೇವೆ ಎಂದು ಪುಣೆ ವಿಮಾನ ನಿಲ್ದಾಣದ ನಿರ್ದೇಶಕ ಕುಲ್​ದೀಪ್ ಸಿಂಗ್ ತಿಳಿಸಿದ್ದಾರೆ. ಹೀಗಾಗಿ ಇನ್ನೊಂದು ವಾರದಲ್ಲಿ ಲಸಿಕೆ ವಿತರಣೆ ಆರಂಭವಾಗುವ ಸಾಧ್ಯತೆ ಇದೆ.

ಕರ್ನಾಟಕಕ್ಕೆ ಯಾವ ಕಂಪೆನಿಯ ಲಸಿಕೆ ಬರಲಿದೆ.. ಕೊವ್ಯಾಕ್ಸಿನ್​ ಅಥವಾ ಕೊವಿಶೀಲ್ಡ್​?

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ