AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ -ಸೆರಮ್​ ನಡುವೆ ಲಸಿಕೆ ಬೆಲೆ ಒಪ್ಪಂದದಲ್ಲಿ ಯಾವುದೇ ಬಿರುಕು ಇಲ್ಲ; ಚೌಕಾಸಿ ನಡೆದಿಲ್ಲ: ಪೂನಾವಾಲಾ

ಸೆರಮ್​ ಮತ್ತು ಕೇಂದ್ರ ಸರ್ಕಾರದ ನಡುವೆ ಕೊರೊನಾ ಲಸಿಕೆ ದರಕ್ಕೆ ಸಂಬಂಧಿಸಿದಂತೆ ಭಿನ್ನಾಭಿಪ್ರಾಯ ಮೂಡಿದೆ ಎಂಬ ಮಾತುಗಳನ್ನು ಸ್ಪಷ್ಟವಾಗಿ ನಿರಾಕರಿಸಿರುವ ಸೆರಮ್​ ಮುಖ್ಯಸ್ಥ ಅದರ್​ ಪೂನಾವಾಲಾ ಒಪ್ಪಂದದ ವಿಚಾರದಲ್ಲಿ ಯಾವುದೇ ಬಿರುಕುಗಳಿಲ್ಲ ಸೋಮವಾರದ ನಂತರ ಲಸಿಕೆ ತಲುಪಿಸುವ ಪ್ರಯತ್ನ ಆಗಲಿದೆ ಎಂದು ಹೇಳಿದ್ದಾರೆ.

ಸರ್ಕಾರ -ಸೆರಮ್​ ನಡುವೆ ಲಸಿಕೆ ಬೆಲೆ ಒಪ್ಪಂದದಲ್ಲಿ ಯಾವುದೇ ಬಿರುಕು ಇಲ್ಲ; ಚೌಕಾಸಿ ನಡೆದಿಲ್ಲ: ಪೂನಾವಾಲಾ
ಕೊವಿಶೀಲ್ಡ್​ ಲಸಿಕೆ
Skanda
| Edited By: |

Updated on: Jan 09, 2021 | 10:40 AM

Share

ಪುಣೆ: ದೇಶದಲ್ಲಿ ಕೊರೊನಾ ಲಸಿಕೆ ವಿತರಣೆಗೆ ಕ್ಷಣಗಣನೆ ಆರಂಭವಾಗಿದೆ. ಇಂದು ಅಥವಾ ನಾಳೆ ಎಲ್ಲಾ ರಾಜ್ಯಗಳಿಗೆ ಲಸಿಕೆ ತಲುಪಲಿದೆ ಎಂಬ ಮಾತು ಕೇಳಿಬರುತ್ತಿರುವಾಗಲೇ ಲಸಿಕೆ ವಿತರಣೆ ಕೊಂಚ ತಡವಾಗಲಿದೆ ಎಂದು ಸೆರಮ್​ ಸಂಸ್ಥೆ ಹೇಳಿದೆ. ವಿಮಾನಗಳ ಮೂಲಕ ಕೊರೊನಾ ಲಸಿಕೆ ಸಾಗಿಸುವ ಮುನ್ನ ಕೆಲ ಪ್ರಕ್ರಿಯೆಗಳನ್ನು ಪಾಲಿಸಬೇಕಿದೆ. ಆದ್ದರಿಂದ ಲಸಿಕೆಗಳ ಸಾಗಣೆ 48 ಗಂಟೆಗಳ ಕಾಲ ಮುಂದೆ ಹೋಗಬಹುದು ಎಂದು ಸೆರಮ್​ ಅಭಿಪ್ರಾಯಪಟ್ಟಿದೆ.

ಈ ನಡುವೆ, ಸೆರಮ್​ ಮತ್ತು ಕೇಂದ್ರ ಸರ್ಕಾರದ ನಡುವೆ ಕೊರೊನಾ ಲಸಿಕೆ ದರಕ್ಕೆ ಸಂಬಂಧಿಸಿದಂತೆ ಭಿನ್ನಾಭಿಪ್ರಾಯ ಮೂಡಿದೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ, ಅದನ್ನು ಸ್ಪಷ್ಟವಾಗಿ ನಿರಾಕರಿಸಿರುವ ಸೆರಮ್​ ಮುಖ್ಯಸ್ಥ ಅದರ್​ ಪೂನಾವಾಲಾ ಒಪ್ಪಂದದ ವಿಚಾರದಲ್ಲಿ ಯಾವುದೇ ಬಿರುಕುಗಳಿಲ್ಲ. ತಾಂತ್ರಿಕ ಕಾರಣಗಳಿಗಾಗಿ ಪೂರೈಕೆ ವಿಳಂಬವಾಗುತ್ತಿದೆಯಷ್ಟೇ. ಅದಾಗ್ಯೂ ಸೋಮವಾರದ ನಂತರ ಲಸಿಕೆ ತಲುಪಿಸುವ ಪ್ರಯತ್ನ ಆಗಲಿದೆ ಎಂದು ಹೇಳಿದ್ದಾರೆ.

ಕೊರೊನಾ ಲಸಿಕೆ ದರಕ್ಕೆ ಸಂಬಂಧಿಸಿದಂತೆ ಸೆರಮ್​ ಸಂಸ್ಥೆ ಕೆಲ ದಿನಗಳ ಹಿಂದೆಯಷ್ಟೇ ವಿವರಣೆ ನೀಡಿತ್ತು. ಮೊದಲ 10 ಕೋಟಿ ಕೊರೊನಾ ಲಸಿಕೆ ಡೋಸ್​ಗಳನ್ನು ಒಂದು ಡೋಸ್​ಗೆ ₹200ರಂತೆ ರಿಯಾಯಿತಿ ದರದಲ್ಲಿ ಸರ್ಕಾರಕ್ಕೆ ನೀಡುತ್ತೇವೆ. ನಂತರ ಖಾಸಗಿ ಮಾರುಕಟ್ಟೆಯಲ್ಲಿ ಒಂದು ಡೋಸ್​ಗೆ ₹1000ದಷ್ಟು ದರ ನಿಗದಿಪಡಿಸಲಾಗುವುದು ಎಂದು ತಿಳಿಸಿತ್ತು.

ಈಗಾಗಲೇ ಪುಣೆಯ ಮಂಜರಿ ಕೇಂದ್ರದಲ್ಲಿ 5ಕೋಟಿ ಡೋಸ್​ ಲಸಿಕೆ ಸಿದ್ಧವಿದೆ. ಸದ್ಯ ತಿಂಗಳಿಗೆ 5ರಿಂದ 6ಕೋಟಿ ಡೋಸ್​ ಲಸಿಕೆಯನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಪೂನಾವಾಲಾ ಹೇಳಿದ್ದಾರೆ. ಇತ್ತ ವಿಮಾನ ನಿಲ್ದಾಣಗಳಲ್ಲಿ ಲಸಿಕೆ ಸಾಗಾಟ ಮಾಡಲು ಸಕಲ ಸಿದ್ಧತೆಗಳೂ ಆಗಿವೆ. ಯಾವ ಕ್ಷಣದಲ್ಲಿ ಆದೇಶ ಬಂದರೂ ನಾವು ಸಿದ್ಧರಿದ್ದೇವೆ ಎಂದು ಪುಣೆ ವಿಮಾನ ನಿಲ್ದಾಣದ ನಿರ್ದೇಶಕ ಕುಲ್​ದೀಪ್ ಸಿಂಗ್ ತಿಳಿಸಿದ್ದಾರೆ. ಹೀಗಾಗಿ ಇನ್ನೊಂದು ವಾರದಲ್ಲಿ ಲಸಿಕೆ ವಿತರಣೆ ಆರಂಭವಾಗುವ ಸಾಧ್ಯತೆ ಇದೆ.

ಕರ್ನಾಟಕಕ್ಕೆ ಯಾವ ಕಂಪೆನಿಯ ಲಸಿಕೆ ಬರಲಿದೆ.. ಕೊವ್ಯಾಕ್ಸಿನ್​ ಅಥವಾ ಕೊವಿಶೀಲ್ಡ್​?

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು