Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡನ್ನು ವಿಭಜಿಸುವ ಯಾವುದೇ ಪ್ರಸ್ತಾಪವಿಲ್ಲ: ಕೇಂದ್ರ ಸರ್ಕಾರ

"ಹೊಸ ರಾಜ್ಯಗಳ ರಚನೆಗೆ ಕಾಲಕಾಲಕ್ಕೆ ವಿವಿಧ ವ್ಯಕ್ತಿಗಳು ಮತ್ತು ಸಂಸ್ಥೆಗಳಿಂದ ಬೇಡಿಕೆಗಳು ಮತ್ತು ಪ್ರಾತಿನಿಧ್ಯಗಳನ್ನು ಸ್ವೀಕರಿಸಲಾಗುತ್ತದೆ. ಹೊಸ ರಾಜ್ಯದ ರಚನೆಯು ನಮ್ಮ ದೇಶದ ಒಕ್ಕೂಟದ ರಾಜಕೀಯದ ಮೇಲೆ ವ್ಯಾಪಕ ಪರಿಣಾಮಗಳನ್ನು ಮತ್ತು ನೇರ ಪ್ರಭಾವವನ್ನು ಹೊಂದಿದೆ. ಪ್ರಸ್ತುತ ಅಂತಹ ಯಾವುದೇ ಪ್ರಸ್ತಾಪವು ಪರಿಗಣನೆಯಲ್ಲಿ ಇಲ್ಲ ಎಂದು ನಿತ್ಯಾನಂದ ರೈ ಹೇಳಿದರು.

ತಮಿಳುನಾಡನ್ನು ವಿಭಜಿಸುವ ಯಾವುದೇ ಪ್ರಸ್ತಾಪವಿಲ್ಲ: ಕೇಂದ್ರ ಸರ್ಕಾರ
ನಿತ್ಯಾನಂದ ರಾಯ್
Follow us
ರಶ್ಮಿ ಕಲ್ಲಕಟ್ಟ
|

Updated on:Aug 03, 2021 | 3:40 PM

ದೆಹಲಿ: ತಮಿಳುನಾಡನ್ನು ವಿಭಜಿಸುವ ಯಾವುದೇ ಪ್ರಸ್ತಾಪವಿಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ ನಲ್ಲಿ ಹೇಳಿದೆ. ಪಶ್ಚಿಮ ತಮಿಳುನಾಡಿನಲ್ಲಿರುವ ‘ಕೊಂಗು ನಾಡು’ ಪ್ರದೇಶವನ್ನು ಪ್ರತ್ಯೇಕ ಪ್ರದೇಶವನ್ನಾಗಿ ರೂಪಿಸುವ ಚರ್ಚೆಯ ನಡುವೆಯೇ ಸರ್ಕಾರವು ಸ್ಪಷ್ಟೀಕರಣ ನೀಡಿದೆ. ತಮಿಳುನಾಡು ಸಂಸದರಾದ ಟಿ.ಆರ್.ಪರಿವಂದರ್ ಮತ್ತು ರಾಮಲಿಂಗಂ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ, “ಎಲ್ಲಾ ಸಂಬಂಧಿತ ಅಂಶಗಳನ್ನು ಪರಿಗಣಿಸಿದ ನಂತರ ಹೊಸ ರಾಜ್ಯಗಳ ರಚನೆಯ ವಿಷಯದಲ್ಲಿ ಸರ್ಕಾರ ತೀರ್ಮಾನ ಕೈಗೊಳ್ಳುತ್ತದೆ” ಎಂದು ಹೇಳಿದರು.

“ಹೊಸ ರಾಜ್ಯಗಳ ರಚನೆಗೆ ಕಾಲಕಾಲಕ್ಕೆ ವಿವಿಧ ವ್ಯಕ್ತಿಗಳು ಮತ್ತು ಸಂಸ್ಥೆಗಳಿಂದ ಬೇಡಿಕೆಗಳು ಮತ್ತು ಪ್ರಾತಿನಿಧ್ಯಗಳನ್ನು ಸ್ವೀಕರಿಸಲಾಗುತ್ತದೆ. ಹೊಸ ರಾಜ್ಯದ ರಚನೆಯು ನಮ್ಮ ದೇಶದ ಒಕ್ಕೂಟದ ರಾಜಕೀಯದ ಮೇಲೆ ವ್ಯಾಪಕ ಪರಿಣಾಮಗಳನ್ನು ಮತ್ತು ನೇರ ಪ್ರಭಾವವನ್ನು ಹೊಂದಿದೆ. ಪ್ರಸ್ತುತ ಅಂತಹ ಯಾವುದೇ ಪ್ರಸ್ತಾಪವು ಪರಿಗಣನೆಯಲ್ಲಿ ಇಲ್ಲ ಎಂದು ನಿತ್ಯಾನಂದ ರೈ ಹೇಳಿದರು.

ಕೊಂಗು ನಾಡು ಅಥವಾ ಕೊಂಗು ಮಂಡಲವನ್ನು ತಮಿಳುನಾಡಿನ ಪಳನಿ, ಕರೂರ್, ಧಾರಪುರ, ತಿರುಚೆಂಗೋಡು, ಈರೋಡ್, ಪೊಲ್ಲಾಚಿ, ನಾಮಕ್ಕಲ್, ಸೇಲಂ, ಧರ್ಮಪುರಿ, ನೀಲಗಿರಿ, ಅವಿನಾಶಿ, ಸತ್ಯಮಂಗಲಂ, ಕೊಯಮತ್ತೂರು ಮತ್ತು ಉಡುಮಲೈಪೇಟೆ ಜಿಲ್ಲೆಗಳನ್ನು ಒಳಗೊಂಡಿರುವ ಪ್ರದೇಶಕ್ಕೆ ಉಲ್ಲೇಖಿಸಲಾಗಿದೆ.

ಹೊಸದಾಗಿ ನೇಮಕಗೊಂಡ ಕೇಂದ್ರ ಸಚಿವರ ಖಾತೆ ವಿವರವನ್ನು ಬಿಜೆಪಿ ಕಳೆದ ತಿಂಗಳು ಬಿಡುಗಡೆ ಮಾಡಿದ್ದು ಅದರಲ್ಲಿ ಪಕ್ಷದ ತಮಿಳುನಾಡು ಮುಖ್ಯಸ್ಥ ಎಲ್ ಮುರುಗನ್ ಅವರ ಹುಟ್ಟೂರು ನಾಮಕ್ಕಲ್ ಬದಲಿಗೆ ಕೊಂಗು ನಾಡಿನವರು ಎಂದು ಉಲ್ಲೇಖಿಸಿದ್ದು ವಿವಾದಕ್ಕೆ ಕಾರಣವಾಗಿತ್ತು.

ಆದಾಗ್ಯೂ, ಮುರುಗನ್ ನಂತರ ಈ ವಿಷಯವನ್ನು ತಳ್ಳಿ ಹಾಕಿದರು. ಇದು ಜನರಿಗೆ ಒಂದು ಗುರುತು ನೀಡುವ ಬಗ್ಗೆ ಮತ್ತು ಬಿಜೆಪಿ ರಾಜ್ಯವನ್ನು ವಿಭಜಿಸುವುದನ್ನು ವಿರೋಧಿಸುತ್ತದೆ ಎಂಬ ದನಿ ಕೇಳಿ ಬಂದಾಗ ಅದು ಬರೆಯುವಾಗ ಆದ ತಪ್ಪು ಎಂದು ಮುರುಗನ್ ಹೇಳಿದ್ದರು.

ಇದನ್ನೂ ಓದಿ: ಕೊವಿಡ್ ನಡುವೆ ಲಕ್ಷಾಂತರ ಬಡವರಿಗೆ ಉಚಿತ ಪಡಿತರ ನೆರವಿಗೆ ಬಂದಿದೆ: ನರೇಂದ್ರ ಮೋದಿ

ಇದನ್ನೂ ಓದಿ: IND vs ENG: ಕೆ.ಎಲ್ ರಾಹುಲ್ ಓಪನರ್.. ಆರ್​ಸಿಬಿ ವೇಗಿ ಇನ್, ಜಡೇಜಾ ಔಟ್? ಮೊದಲ ಟೆಸ್ಟ್​ಗೆ ಭಾರತದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್

(There was no proposal under consideration to bifurcate Tamil Nadu MHA informs Parliament)

Published On - 3:40 pm, Tue, 3 August 21

VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ಕೆಟ್ಟು ಹೋದ ಸಾರಿಗೆ ಬಸ್​ ವೈಪರ್: ಮಳೆಯಲ್ಲಿ ಚಲಾಯಿಸಲು ಪರದಾಡಿದ ಚಾಲಕ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಸಿಎಂ ನೀಡಿರುವ ಸ್ಪಷ್ಟನೆ ರಾಜ್ಯದ ಜನತೆಗೆ ನೆಮ್ಮದಿ ನೀಡಿದೆ: ಸ್ಪೀಕರ್
ಸಿಎಂ ನೀಡಿರುವ ಸ್ಪಷ್ಟನೆ ರಾಜ್ಯದ ಜನತೆಗೆ ನೆಮ್ಮದಿ ನೀಡಿದೆ: ಸ್ಪೀಕರ್