AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಕೊವಿಡ್ -19 ರೂಪಾಂತರಿ ಒಮಿಕ್ರಾನ್​​ನ ಯಾವುದೇ ಪ್ರಕರಣಗಳಿಲ್ಲ: ಕೇಂದ್ರ ಆರೋಗ್ಯ ಸಚಿವ ಮಾಂಡವಿಯಾ

Omicron ಭಾರತದಲ್ಲಿ ಇಲ್ಲಿಯವರೆಗೆ ಒಮಿಕ್ರಾನ್ ಕೊವಿಡ್ -19 ರೂಪಾಂತರದ ಯಾವುದೇ ಪ್ರಕರಣಗಳು ವರದಿಯಾಗಿಲ್ಲ ಎಂದು ಸಚಿವರು ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡುತ್ತಾ ಹೇಳಿದರು.

ಭಾರತದಲ್ಲಿ ಕೊವಿಡ್ -19 ರೂಪಾಂತರಿ ಒಮಿಕ್ರಾನ್​​ನ ಯಾವುದೇ ಪ್ರಕರಣಗಳಿಲ್ಲ: ಕೇಂದ್ರ ಆರೋಗ್ಯ ಸಚಿವ ಮಾಂಡವಿಯಾ
ಮನ್ಸುಖ್ ಮಾಂಡವಿಯಾ
TV9 Web
| Edited By: |

Updated on: Nov 30, 2021 | 4:17 PM

Share

ಕೊವಿಡ್ -19 (Covid-19) ಹೊಸ ರೂಪಾಂತರಿ ಒಮಿಕ್ರಾನ್ (Omicron) ಅಥವಾ B.1.1.529 ರೂಪಾಂತರದ ಅಪಾಯದ ಬಗ್ಗೆ ಕಳವಳದ ನಡುವೆ ಕೇಂದ್ರ ಸರ್ಕಾರವು ಮಂಗಳವಾರ ದೇಶದಲ್ಲಿ ಈ ರೂಪಾಂತರದ ಯಾವುದೇ ಪ್ರಕರಣಗಳು ವರದಿಯಾಗಿಲ್ಲ ಎಂದು ಹೇಳಿದೆ. ಸಂಸತ್​​ನ ಚಳಿಗಾಲದ ಅಧಿವೇಶನದಲ್ಲಿ(Parliament’s Winter Session) ರಾಜ್ಯಸಭೆಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸುಖ್ ಮಾಂಡವಿಯಾ (Mansukh Mandaviya) ಅವರು ಈ ಹೇಳಿಕೆ ನೀಡಿದ್ದಾರೆ. ಭಾರತದಲ್ಲಿ ಇಲ್ಲಿಯವರೆಗೆ ಒಮಿಕ್ರಾನ್ ಕೊವಿಡ್ -19 ರೂಪಾಂತರದ ಯಾವುದೇ ಪ್ರಕರಣಗಳು ವರದಿಯಾಗಿಲ್ಲ ಎಂದು ಸಚಿವರು ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡುತ್ತಾ ಹೇಳಿದರು. “ನಾವು ತಕ್ಷಣ ಅನುಮಾನಾಸ್ಪದ ಪ್ರಕರಣಗಳನ್ನು ಪರಿಶೀಲಿಸುತ್ತಿದ್ದೇವೆ ಮತ್ತು ಜೀನೋಮ್ ಅನುಕ್ರಮವನ್ನು ನಡೆಸುತ್ತಿದ್ದೇವೆ. ಕೊವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ನಾವು ಸಾಕಷ್ಟು ಕಲಿತಿದ್ದೇವೆ. ಇಂದು ನಮ್ಮಲ್ಲಿ ಸಾಕಷ್ಟು ಸಂಪನ್ಮೂಲಗಳು ಮತ್ತು ಪ್ರಯೋಗಾಲಯಗಳಿವೆ. ನಾವು ಯಾವುದೇ ಪರಿಸ್ಥಿತಿಯನ್ನು ನಿಭಾಯಿಸಬಹುದು ಎಂದು ಸಚಿವರು ಹೇಳಿದರು. ಸೋಮವಾರದಂದು ಹಿರಿಯ ಸರ್ಕಾರಿ ಅಧಿಕಾರಿಗಳು ಭಾರತದಲ್ಲಿ ರೂಪಾಂತರಿಯ ಯಾವುದೇ ಪ್ರಕರಣಗಳಿಲ್ಲ ಎಂದು ವರದಿ ಮಾಡಿದ ಒಂದು ದಿನದ ನಂತರ ಸಚಿವರ ಹೇಳಿಕೆ ಬಂದಿವೆ. ಆದಾಗ್ಯೂ, ಇತ್ತೀಚೆಗೆ ಭಾರತಕ್ಕೆ ಆಗಮಿಸಿದ ಅಂತರರಾಷ್ಟ್ರೀಯ ಪ್ರಯಾಣಿಕರ ಜೀನೋಮಿಕ್ ವಿಶ್ಲೇಷಣೆಯ ಫಲಿತಾಂಶಗಳನ್ನು ತ್ವರಿತಗೊಳಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಏತನ್ಮಧ್ಯೆ ಕೇಂದ್ರದ ‘ಹರ್ ಘರ್ ದಸ್ತಕ್’ ಮನೆ-ಮನೆಗೆ ಲಸಿಕೆ ಅಭಿಯಾನವನ್ನು ವಿಸ್ತರಿಸಲಾಗಿದೆ ಮತ್ತು ಡಿಸೆಂಬರ್ 31 ರವರೆಗೆ ದೇಶದ ಎಲ್ಲಾ ಅರ್ಹ ಜನಸಂಖ್ಯೆಗೆ ಮೊದಲ ಡೋಸ್ ಚುಚ್ಚುಮದ್ದನ್ನು ಕೇಂದ್ರೀಕರಿಸಿ ಮತ್ತು ಎರಡನೇ ಡೋಸ್ ನೀಡುವಲ್ಲಿ ಹಿನ್ನಡೆಯನ್ನು ಪೂರ್ಣಗೊಳಿಸಲು ಕಾರ್ಯವೆಸಗುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಮಂಗಳವಾರ ಕೇಂದ್ರ ಗೃಹ ಸಚಿವಾಲಯವು ದೇಶದಲ್ಲಿ ಕೊವಿಡ್ -19 ಗೆ ಸಂಬಂಧಿಸಿದ ಅಸ್ತಿತ್ವದಲ್ಲಿರುವ ನಿರ್ಬಂಧಗಳನ್ನು ವರ್ಷಾಂತ್ಯದವರೆಗೆ (ಡಿಸೆಂಬರ್ 31) ವಿಸ್ತರಿಸಲಾಗುವುದು ಎಂದು ಘೋಷಿಸಿತು. ಒಮಿಕ್ರಾನ್ ರೂಪಾಂತರದ ಹೊರಹೊಮ್ಮುವಿಕೆಯ ಬೆಳಕಿನಲ್ಲಿ ಕೇಂದ್ರ ಆರೋಗ್ಯ ಸಚಿವಾಲಯವು ನೀಡಿದ ಸಲಹೆಯನ್ನು ಕಟ್ಟುನಿಟ್ಟಾಗಿ ಅನುಸರಿಸುವ ಅಗತ್ಯವನ್ನು ಸಚಿವಾಲಯ ಒತ್ತಿಹೇಳಿದೆ.

ಹಿಂದಿನ ದಿನ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು. ಈ ಸಮಯದಲ್ಲಿ ಅಂತರರಾಷ್ಟ್ರೀಯ ಪ್ರಯಾಣಿಕರ ಕೊವಿಡ್ ಪರೀಕ್ಷೆಯನ್ನು ಹೆಚ್ಚಿಸಲು ಪರೀಕ್ಷಾ ಮೂಲಸೌಕರ್ಯವನ್ನು ಬಲಪಡಿಸಲು ಮತ್ತು ಅವರ ಸಂಪರ್ಕಗಳನ್ನು ಪತ್ತೆಹಚ್ಚಲು ಸಲಹೆ ನೀಡಲಾಯಿತು.

“ಕೇಂದ್ರ ಆರೋಗ್ಯ ಕಾರ್ಯದರ್ಶಿಗಳು ತಮ್ಮ ಎಚ್ಚರಿಕೆಗಳನ್ನು ಕಡಿಮೆಗೊಳಿಸದಂತೆ ರಾಜ್ಯಗಳಿಗೆ ಸಲಹೆ ನೀಡಿದರು. ವಿವಿಧ ವಿಮಾನ ನಿಲ್ದಾಣಗಳು, ಬಂದರುಗಳು ಮತ್ತು ಭೂ ಗಡಿ ದಾಟುವಿಕೆಗಳ ಮೂಲಕ ದೇಶಕ್ಕೆ ಬರುವ ಅಂತರಾಷ್ಟ್ರೀಯ ಪ್ರಯಾಣಿಕರ ಮೇಲೆ ಕಟ್ಟುನಿಟ್ಟಾದ ಜಾಗರೂಕರಾಗಿರಿ” ಎಂದು ಆರೋಗ್ಯ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಒಮಿಕ್ರಾನ್​ ವಿರುದ್ಧ ಹೋರಾಟಕ್ಕೆ ಆಫ್ರಿಕಾದ ದೇಶಗಳಿಗೆ ನೆರವು ನೀಡಲು ಸಿದ್ಧವೆಂದ ಭಾರತ; ಪ್ರಧಾನಿ ಮೋದಿಗೆ ಕೈ ಮುಗಿದ ಮಾಜಿ ಕ್ರಿಕೆಟರ್​ ಕೆವಿನ್​​ ಪೀಟರ್ಸನ್​

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ