AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮರಿಂದರ್​ ಸಿಂಗ್​ರನ್ನು ಪಂಜಾಬ್​ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಪ್ರಿಯಾಂಕಾ ಗಾಂಧಿ ವಾದ್ರಾ

2021ರ ಸೆಪ್ಟೆಂಬರ್​ನಲ್ಲಿ ಪಂಜಾಬ್​​ನಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡಲಾಗಿದೆ. ಕ್ಯಾಪ್ಟನ್​ ಅಮರಿಂದರ್ ಸಿಂಗ್​​ರನ್ನು ಸ್ಥಾನದಿಂದ ಕೆಳಗಿಳಿಸಿ, ಚರಣಜಿತ್ ಸಿಂಗ್ ಛನ್ನಿಯವರನ್ನು ಮುಖ್ಯಮಂತ್ರಿ ಮಾಡಲಾಗಿದೆ.

ಅಮರಿಂದರ್​ ಸಿಂಗ್​ರನ್ನು ಪಂಜಾಬ್​ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಿಯಾಂಕಾ ಗಾಂಧಿ ವಾದ್ರಾ
TV9 Web
| Edited By: |

Updated on:Feb 13, 2022 | 6:09 PM

Share

ಕೊಟ್ಕಾಪುರ: ಪಂಜಾಬ್​​ನಲ್ಲಿಈ ಹಿಂದೆ ಇದ್ದ ಮುಖ್ಯಮಂತ್ರಿ ಅಮರಿಂದರ್ ಸಿಂಗ್​ ನೇತೃತ್ವದ ಸರ್ಕಾರವನ್ನು ದೆಹಲಿಯಿಂದ ಬಿಜೆಪಿ ಕೇಂದ್ರ ಸರ್ಕಾರ ನಿಯಂತ್ರಣ ಮಾಡುತ್ತಿತ್ತು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತಿಳಿಸಿದ್ದಾರೆ. ಕೋಟ್ಕಾಪುರದಲ್ಲಿ ಇಂದು ನವಿ ಸೋಚ್​, ನವ ಪಂಜಾಬ್​ ರ್ಯಾಲಿಯಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ ವಾದ್ರಾ, ಪಂಜಾಬ್​​ನಲ್ಲಿ ಅಮರಿಂದರ್ ಸಿಂಗ್ (Amarinder Singh) ನೇತೃತ್ವದ ಕಾಂಗ್ರೆಸ್ ಸರ್ಕಾರವಿದ್ದಾಗ ಅಲ್ಲಿ ಅನೇಕ ಕುಂದುಕೊರತೆಗಳಿದ್ದವು. ಆಡಳಿತ ವಿಫಲವಾಗುತ್ತಿತ್ತು. ಕೇಂದ್ರದಲ್ಲಿದ್ದ ಬಿಜೆಪಿ ಸರ್ಕಾರ ಅಮರಿಂದರ್​ ಸಿಂಗ್​ರನ್ನು ನಿಯಂತ್ರಿಸುತ್ತಿತ್ತು. ಹಾಗಾಗಿಯೇ ಅವರನ್ನು ಬದಲಿಸಿ, ಚರಣಜಿತ್​ ಸಿಂಗ್ ಛನ್ನಿಯವರನ್ನು ಮುಖ್ಯಮಂತ್ರಿಯನ್ನಾಗಿ ನೇಮಕ ಮಾಡಲಾಯಿತು ಎಂದು ತಿಳಿಸಿದ್ದಾರೆ.

ಪ್ರಿಯಾಂಕಾ ಗಾಂಧಿ ಅಮರಿಂದರ್​ ಸಿಂಗ್​ ಹೆಸರನ್ನು ಹೇಳದೆ ಇಷ್ಟು ಮಾತುಗಳನ್ನಾಡಿದ್ದಾರೆ. ಹಿಂದಿನ ಮುಖ್ಯಮಂತ್ರಿ ಎಂದು ಉಲ್ಲೇಖಿಸಿದ್ದಾರೆ. ನಮ್ಮ ಸರ್ಕಾರ ದೆಹಲಿಯಿಂದ ನಿಯಂತ್ರಿಸುತ್ತಿರುವುದು ಗೊತ್ತಾಗಿದ್ದಕ್ಕೆ ಈ ಕ್ರಮ ತೆಗೆದುಕೊಳ್ಳಬೇಕಾಯಿತು ಎಂದಿದ್ದಾರೆ. ಹಾಗೇ, ಪಂಜಾಬ್​​ನಲ್ಲಿ ಇದೀಗ ಅಮರಿಂದರ್​ ಸಿಂಗ್​ ಅವರ ನೂತನ ಪಕ್ಷ ಪಂಜಾಬ್​ ಲೋಕ್​ ಕಾಂಗ್ರೆಸ್​ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿದ್ದರ ಬಗ್ಗೆಯೂ ಕೂಡ ಪ್ರಿಯಾಂಕಾ ಗಾಂಧಿ ಇದೇ ವೇಳೆ  ಮಾತನಾಡಿದ್ದಾರೆ.

2021ರ ಸೆಪ್ಟೆಂಬರ್​ನಲ್ಲಿ ಪಂಜಾಬ್​​ನಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡಲಾಗಿದೆ. ಕ್ಯಾಪ್ಟನ್​ ಅಮರಿಂದರ್ ಸಿಂಗ್​​ರನ್ನು ಸ್ಥಾನದಿಂದ ಕೆಳಗಿಳಿಸಿ, ಚರಣಜಿತ್ ಸಿಂಗ್ ಛನ್ನಿಯವರನ್ನು ಮುಖ್ಯಮಂತ್ರಿ ಮಾಡಲಾಗಿದೆ. ಅಲ್ಲಿಂದ ಇಲ್ಲಿಯವರೆಗೂ ಕಾಂಗ್ರೆಸ್​​ನ ವರಿಷ್ಠರು, ಅದರಲ್ಲೂ ಗಾಂಧಿ ಕುಟುಂಬದ ಯಾರೂ ಕೂಡ ಈ ಬಗ್ಗೆ ಮಾತನಾಡಿರಲಿಲ್ಲ. ಕಾಂಗ್ರೆಸ್​ ನ ಪಂಜಾಬ್​ ಪ್ರದೇಶ ಸಮಿತಿ ಅಧ್ಯಕ್ಷ ನವಜೋತ್​ ಸಿಂಗ್ ಸಿಧು ಮತ್ತು ಅಮರಿಂದರ್​ ಸಿಂಗ್​ ನಡುವಿನ ಮನಸ್ತಾಪ ಹೆಚ್ಚಾದ ಬೆನ್ನಲ್ಲೇ, ಅವರನ್ನು ಹುದ್ದೆಯಿಂದ ಕೆಳಗಿಳಿಸಲಾಗಿತ್ತು. ಹೀಗಾಗಿ ಅಮರಿಂದರ್​ ಸಿಎಂ ಸ್ಥಾನ ಕಳೆದುಕೊಳ್ಳಲು ನವಜೋತ್​ ಸಿಂಗ್ ಸಿಧು​ ಕಾರಣ ಎಂದು ಹೇಳಲಾಗಿತ್ತು. ಅದಾದ ಮೇಲೆ ಕೂಡ ಕಾಂಗ್ರೆಸ್ ಸಧುರನ್ನು ಸಿಎಂ ಮಾಡದೆ, ಛನ್ನಿಯವರಿಗೆ ಆ ಸ್ಥಾನ ನೀಡಿತ್ತು. ಹಾಗೇ, ಮುಂದಿನ ಅವಧಿಗೂ ಕೂಡ ಛನ್ನಿಯವರೇ ಸಿಎಂ ಅಭ್ಯರ್ಥಿ.

ಇದನ್ನೂ ಓದಿ: ಮಹೇಶ್​ ಬಾಬು ದಿನವನ್ನು ಹಾಳು ಮಾಡಿದ ಮಗಳು ಸಿತಾರಾ; ವೈರಲ್​ ಆಯ್ತು ಫೋಟೋ

Published On - 5:57 pm, Sun, 13 February 22

Follow Us
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು