AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bank Holidays in April 2021: ಕರ್ನಾಟಕದಲ್ಲಿ ಬ್ಯಾಂಕ್​ಗಳಿಗೆ ಏಪ್ರಿಲ್​ನಲ್ಲಿ 9 ದಿನ ರಜಾ; ಯಾವ್ಯಾವಾಗ?.. ಪಟ್ಟಿ ಇಲ್ಲಿದೆ ನೋಡಿ

ಕರ್ನಾಟಕದಲ್ಲಿ ಇಂದೂ ಕೂಡ ಬ್ಯಾಂಕ್​ಗಳಿಗೆ ವಾರ್ಷಿಕ ವ್ಯವಹಾರ ಕ್ಲೋಸ್​ ದಿನದ ನಿಮಿತ್ತ ರಜಾ ಇತ್ತು. ಇನ್ನು ನಾಲ್ಕು ಭಾನುವಾರಗಳಿವೆ. ಉಳಿದಂತೆ ಯುಗಾದಿ ಹಬ್ಬ, ಅಂಬೇಡ್ಕರ್ ಜಯಂತಿ, ಮಹಾವೀರ್ ಜಯಂತಿಗಳ ನಿಮಿತ್ತ ರಜಾ ಇರಲಿದೆ.

Bank Holidays in April 2021: ಕರ್ನಾಟಕದಲ್ಲಿ ಬ್ಯಾಂಕ್​ಗಳಿಗೆ ಏಪ್ರಿಲ್​ನಲ್ಲಿ 9 ದಿನ ರಜಾ; ಯಾವ್ಯಾವಾಗ?.. ಪಟ್ಟಿ ಇಲ್ಲಿದೆ ನೋಡಿ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: Apr 01, 2021 | 12:59 PM

Share

ವಿವಿಧ ಹಬ್ಬ-ಆಚರಣೆಗಳ ನಿಮಿತ್ತ ಏಪ್ರಿಲ್ ತಿಂಗಳಲ್ಲಿ ಬ್ಯಾಂಕ್​ಗಳಿಗೆ ಭರ್ಜರಿ ರಜಾದಿನಗಳಿವೆ. ಒಟ್ಟು 15ದಿನ ಬ್ಯಾಂಕ್​ಗಳು ಕಾರ್ಯನಿರ್ವಹಿಸುವುದಿಲ್ಲ. ಆದರೆ ಈ ಹದಿನೈದೂ ದಿನಗಳು ದೇಶದ ಎಲ್ಲ ಭಾಗಗಳಲ್ಲೂ ಅನ್ವಯ ಆಗುವುದಿಲ್ಲ. ಇನ್ನು ಕರ್ನಾಟಕದಲ್ಲಿ ಏಪ್ರಿಲ್​ನಲ್ಲಿ ಒಟ್ಟು 9 ರಜಾದಿನಗಳಿವೆ. ಇಂದೂ ಕೂಡ ವಾರ್ಷಿಕ ವ್ಯವಹಾರ ಕ್ಲೋಸ್​ ದಿನದ ನಿಮಿತ್ತ ರಜಾ ಇತ್ತು. ಇನ್ನು ನಾಲ್ಕು ಭಾನುವಾರಗಳಿವೆ. ಉಳಿದಂತೆ ಯುಗಾದಿ ಹಬ್ಬ, ಅಂಬೇಡ್ಕರ್ ಜಯಂತಿ, ಮಹಾವೀರ್ ಜಯಂತಿಗಳ ನಿಮಿತ್ತ ರಜಾ ಇರಲಿದೆ. ಇಲ್ಲಿದೆ ನೋಡಿ, ಕರ್ನಾಟಕದಲ್ಲಿ ಬ್ಯಾಂಕ್​ಗಳಿಗೆ ಏಪ್ರಿಲ್​ನಲ್ಲಿ ಇರುವ ರಜಾದಿನಗಳ ಸಮಗ್ರ ವಿವರ..

  • ಏಪ್ರಿಲ್​ 2, ಶುಕ್ರವಾರ- ಗುಡ್​ ಫ್ರೈಡೇ: ಯೇಸುಕ್ರಿಸ್ತ ಶಿಲುಬೆಗೆ ಏರಿದ ದಿನದ ಸ್ಮರಣಾರ್ಥ ಈ ಹಬ್ಬವನ್ನು ಕ್ರಿಶ್ಚಿಯನ್ ಸಮುದಾಯದವರು ಆಚರಿಸುತ್ತಾರೆ. ಪ್ರತಿವರ್ಷವೂ ಗುಡ್​ ಫ್ರೈಡೇ ದಿನ ರಾಷ್ಟ್ರಾದ್ಯಂತ ಬ್ಯಾಂಕ್​ಗಳು ಕಾರ್ಯನಿರ್ವಹಿಸುವುದಿಲ್ಲ. ಕರ್ನಾಟಕದಲ್ಲೂ ಸಹ ನಾಳೆ (ಏಪ್ರಿಲ್​ 2) ಬ್ಯಾಂಕ್​ಗಳಿಗೆ ರಜಾ ಇರುತ್ತದೆ.
  • ಏಪ್ರಿಲ್​ 4, ಭಾನುವಾರ
  • ಏಪ್ರಿಲ್​ 10, ಎರಡನೇ ಶನಿವಾರದ ರಜಾ
  • ಏಪ್ರಿಲ್​ 11, ಭಾನುವಾರ
  • ಏಪ್ರಿಲ್ 13, ಮಂಗಳವಾರ-ಯುಗಾದಿ: ಏಪ್ರಿಲ್​ 13ರಂದು ಯುಗಾದಿ ನಿಮಿತ್ತ ರಾಜ್ಯದಲ್ಲಿ ಯಾವ ಬ್ಯಾಂಕ್​ಗಳು ಕಾರ್ಯನಿರ್ವಹಿಸುವುದಿಲ್ಲ. ಹಿಂದುಗಳ ಹೊಸವರ್ಷದ ಹಬ್ಬ ಇದಾಗಿದ್ದು, ಚೈತ್ರ ಮಾಸದ ಮೊದಲ ದಿನವಾಗಿದೆ. ಈ ಹಬ್ಬದಂದು ಜನರು ಬೇಗ ಎದ್ದು ಸ್ನಾನ ಮಾಡಿ ಪೂಜೆ ಮಾಡುತ್ತಾರೆ. ಮನೆಗೆಲ್ಲ ತೋರಣ ಕಟ್ಟಿ, ಹೊಸ ಬಟ್ಟೆ ತೊಟ್ಟು, ಸಿಹಿ ಹೋಳಿಗೆ ಮಾಡಿ ಹಬ್ಬದೂಟ ಮಾಡುತ್ತಾರೆ.
  • ಏಪ್ರಿಲ್ 14, ಬುಧವಾರ-ಅಂಬೇಡ್ಕರ್ ಜಯಂತಿ: ಸಂವಿಧಾನ ಶಿಲ್ಪಿ ಅಂಬೇಡ್ಕರ್​ ಹುಟ್ಟಿದ ದಿನದ ನಿಮಿತ್ತ ರಾಷ್ಟ್ರಾದ್ಯಂತ ಬ್ಯಾಂಕ್​ಗಳಿಗೆ ರಜೆ ಇರುತ್ತದೆ. ಕರ್ನಾಟಕದಲ್ಲೂ ಸಹ ಎಲ್ಲ ಬ್ಯಾಂಕ್​ಗಳಿಗೂ ರಜಾ.
  • ಏಪ್ರಿಲ್​ 18, ಭಾನುವಾರ
  • ಏಪ್ರಿಲ್​ 24, ನಾಲ್ಕನೇ ಶನಿವಾರದ ರಜಾ
  • ಏಪ್ರಿಲ್​ 25, ಭಾನುವಾರ: ಈ ದಿನ ಭಾನುವಾರದ ರಜಾವೂ ಹೌದು, ಮಹಾವೀರ ಜಯಂತಿ ನಿಮಿತ್ತದ ರಜೆಯೂ ಹೌದು.

ಇದನ್ನೂ ಓದಿ:  Bank Holidays In April 2021: ವ್ಯವಹಾರಕ್ಕೆ ಹೋಗುವ ಮುನ್ನ ಗ್ರಾಹಕರೇ ಗಮನಿಸಿ- ಏಪ್ರಿಲ್​ನಲ್ಲಿ ಬ್ಯಾಂಕ್​ಗಳಿಗೆ 15 ದಿನ ರಜಾ..

ಆಟೊ ಪೇಮೆಂಟ್​ ಗಡುವು ವಿಸ್ತರಿಸಿದ ರಿಸರ್ವ್​ ಬ್ಯಾಂಕ್​: ಕ್ರೆಡಿಟ್ ಕಾರ್ಡ್​, ಮೊಬೈಲ್ ವ್ಯಾಲೆಟ್​ ಕಂಪನಿಗಳು ಸದ್ಯಕ್ಕೆ ನಿರಾಳ

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!