AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bank Holidays in April 2021: ಕರ್ನಾಟಕದಲ್ಲಿ ಬ್ಯಾಂಕ್​ಗಳಿಗೆ ಏಪ್ರಿಲ್​ನಲ್ಲಿ 9 ದಿನ ರಜಾ; ಯಾವ್ಯಾವಾಗ?.. ಪಟ್ಟಿ ಇಲ್ಲಿದೆ ನೋಡಿ

ಕರ್ನಾಟಕದಲ್ಲಿ ಇಂದೂ ಕೂಡ ಬ್ಯಾಂಕ್​ಗಳಿಗೆ ವಾರ್ಷಿಕ ವ್ಯವಹಾರ ಕ್ಲೋಸ್​ ದಿನದ ನಿಮಿತ್ತ ರಜಾ ಇತ್ತು. ಇನ್ನು ನಾಲ್ಕು ಭಾನುವಾರಗಳಿವೆ. ಉಳಿದಂತೆ ಯುಗಾದಿ ಹಬ್ಬ, ಅಂಬೇಡ್ಕರ್ ಜಯಂತಿ, ಮಹಾವೀರ್ ಜಯಂತಿಗಳ ನಿಮಿತ್ತ ರಜಾ ಇರಲಿದೆ.

Bank Holidays in April 2021: ಕರ್ನಾಟಕದಲ್ಲಿ ಬ್ಯಾಂಕ್​ಗಳಿಗೆ ಏಪ್ರಿಲ್​ನಲ್ಲಿ 9 ದಿನ ರಜಾ; ಯಾವ್ಯಾವಾಗ?.. ಪಟ್ಟಿ ಇಲ್ಲಿದೆ ನೋಡಿ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: Apr 01, 2021 | 12:59 PM

Share

ವಿವಿಧ ಹಬ್ಬ-ಆಚರಣೆಗಳ ನಿಮಿತ್ತ ಏಪ್ರಿಲ್ ತಿಂಗಳಲ್ಲಿ ಬ್ಯಾಂಕ್​ಗಳಿಗೆ ಭರ್ಜರಿ ರಜಾದಿನಗಳಿವೆ. ಒಟ್ಟು 15ದಿನ ಬ್ಯಾಂಕ್​ಗಳು ಕಾರ್ಯನಿರ್ವಹಿಸುವುದಿಲ್ಲ. ಆದರೆ ಈ ಹದಿನೈದೂ ದಿನಗಳು ದೇಶದ ಎಲ್ಲ ಭಾಗಗಳಲ್ಲೂ ಅನ್ವಯ ಆಗುವುದಿಲ್ಲ. ಇನ್ನು ಕರ್ನಾಟಕದಲ್ಲಿ ಏಪ್ರಿಲ್​ನಲ್ಲಿ ಒಟ್ಟು 9 ರಜಾದಿನಗಳಿವೆ. ಇಂದೂ ಕೂಡ ವಾರ್ಷಿಕ ವ್ಯವಹಾರ ಕ್ಲೋಸ್​ ದಿನದ ನಿಮಿತ್ತ ರಜಾ ಇತ್ತು. ಇನ್ನು ನಾಲ್ಕು ಭಾನುವಾರಗಳಿವೆ. ಉಳಿದಂತೆ ಯುಗಾದಿ ಹಬ್ಬ, ಅಂಬೇಡ್ಕರ್ ಜಯಂತಿ, ಮಹಾವೀರ್ ಜಯಂತಿಗಳ ನಿಮಿತ್ತ ರಜಾ ಇರಲಿದೆ. ಇಲ್ಲಿದೆ ನೋಡಿ, ಕರ್ನಾಟಕದಲ್ಲಿ ಬ್ಯಾಂಕ್​ಗಳಿಗೆ ಏಪ್ರಿಲ್​ನಲ್ಲಿ ಇರುವ ರಜಾದಿನಗಳ ಸಮಗ್ರ ವಿವರ..

  • ಏಪ್ರಿಲ್​ 2, ಶುಕ್ರವಾರ- ಗುಡ್​ ಫ್ರೈಡೇ: ಯೇಸುಕ್ರಿಸ್ತ ಶಿಲುಬೆಗೆ ಏರಿದ ದಿನದ ಸ್ಮರಣಾರ್ಥ ಈ ಹಬ್ಬವನ್ನು ಕ್ರಿಶ್ಚಿಯನ್ ಸಮುದಾಯದವರು ಆಚರಿಸುತ್ತಾರೆ. ಪ್ರತಿವರ್ಷವೂ ಗುಡ್​ ಫ್ರೈಡೇ ದಿನ ರಾಷ್ಟ್ರಾದ್ಯಂತ ಬ್ಯಾಂಕ್​ಗಳು ಕಾರ್ಯನಿರ್ವಹಿಸುವುದಿಲ್ಲ. ಕರ್ನಾಟಕದಲ್ಲೂ ಸಹ ನಾಳೆ (ಏಪ್ರಿಲ್​ 2) ಬ್ಯಾಂಕ್​ಗಳಿಗೆ ರಜಾ ಇರುತ್ತದೆ.
  • ಏಪ್ರಿಲ್​ 4, ಭಾನುವಾರ
  • ಏಪ್ರಿಲ್​ 10, ಎರಡನೇ ಶನಿವಾರದ ರಜಾ
  • ಏಪ್ರಿಲ್​ 11, ಭಾನುವಾರ
  • ಏಪ್ರಿಲ್ 13, ಮಂಗಳವಾರ-ಯುಗಾದಿ: ಏಪ್ರಿಲ್​ 13ರಂದು ಯುಗಾದಿ ನಿಮಿತ್ತ ರಾಜ್ಯದಲ್ಲಿ ಯಾವ ಬ್ಯಾಂಕ್​ಗಳು ಕಾರ್ಯನಿರ್ವಹಿಸುವುದಿಲ್ಲ. ಹಿಂದುಗಳ ಹೊಸವರ್ಷದ ಹಬ್ಬ ಇದಾಗಿದ್ದು, ಚೈತ್ರ ಮಾಸದ ಮೊದಲ ದಿನವಾಗಿದೆ. ಈ ಹಬ್ಬದಂದು ಜನರು ಬೇಗ ಎದ್ದು ಸ್ನಾನ ಮಾಡಿ ಪೂಜೆ ಮಾಡುತ್ತಾರೆ. ಮನೆಗೆಲ್ಲ ತೋರಣ ಕಟ್ಟಿ, ಹೊಸ ಬಟ್ಟೆ ತೊಟ್ಟು, ಸಿಹಿ ಹೋಳಿಗೆ ಮಾಡಿ ಹಬ್ಬದೂಟ ಮಾಡುತ್ತಾರೆ.
  • ಏಪ್ರಿಲ್ 14, ಬುಧವಾರ-ಅಂಬೇಡ್ಕರ್ ಜಯಂತಿ: ಸಂವಿಧಾನ ಶಿಲ್ಪಿ ಅಂಬೇಡ್ಕರ್​ ಹುಟ್ಟಿದ ದಿನದ ನಿಮಿತ್ತ ರಾಷ್ಟ್ರಾದ್ಯಂತ ಬ್ಯಾಂಕ್​ಗಳಿಗೆ ರಜೆ ಇರುತ್ತದೆ. ಕರ್ನಾಟಕದಲ್ಲೂ ಸಹ ಎಲ್ಲ ಬ್ಯಾಂಕ್​ಗಳಿಗೂ ರಜಾ.
  • ಏಪ್ರಿಲ್​ 18, ಭಾನುವಾರ
  • ಏಪ್ರಿಲ್​ 24, ನಾಲ್ಕನೇ ಶನಿವಾರದ ರಜಾ
  • ಏಪ್ರಿಲ್​ 25, ಭಾನುವಾರ: ಈ ದಿನ ಭಾನುವಾರದ ರಜಾವೂ ಹೌದು, ಮಹಾವೀರ ಜಯಂತಿ ನಿಮಿತ್ತದ ರಜೆಯೂ ಹೌದು.

ಇದನ್ನೂ ಓದಿ:  Bank Holidays In April 2021: ವ್ಯವಹಾರಕ್ಕೆ ಹೋಗುವ ಮುನ್ನ ಗ್ರಾಹಕರೇ ಗಮನಿಸಿ- ಏಪ್ರಿಲ್​ನಲ್ಲಿ ಬ್ಯಾಂಕ್​ಗಳಿಗೆ 15 ದಿನ ರಜಾ..

ಆಟೊ ಪೇಮೆಂಟ್​ ಗಡುವು ವಿಸ್ತರಿಸಿದ ರಿಸರ್ವ್​ ಬ್ಯಾಂಕ್​: ಕ್ರೆಡಿಟ್ ಕಾರ್ಡ್​, ಮೊಬೈಲ್ ವ್ಯಾಲೆಟ್​ ಕಂಪನಿಗಳು ಸದ್ಯಕ್ಕೆ ನಿರಾಳ

ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ