AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಕೊರೊನಾ ವೈರಸ್ ಸೋಂಕಿನ ಲಕ್ಷಣಗಳೇನು? ಇಲ್ಲಿದೆ ಮಾಹಿತಿ

ಹಳೆಯ ಕೊರೊನಾ ವೈರಸ್​ಗೆ ಹೋಲಿಸಿದರೆ, ಬ್ರಿಟನ್​ನ ರೂಪಾಂತರಗೊಂಡ ಕೊರೊನಾ ವೈರಸ್ ಶೇ.70 ರಷ್ಟು ವೇಗವಾಗಿ ಹರಡುತ್ತೆ ಎನ್ನುವುದು ಈಗ ಆತಂಕಕ್ಕೆ ಕಾರಣವಾಗಿದೆ. ಈ ಮಧ್ಯೆ ಎರಡೂ ವೈರಸ್​ಗಳ ನಡುವಿನ ಲಕ್ಷಣವೇನು ಎನ್ನುವುದಕ್ಕೆ ಇಲ್ಲಿದೆ ಮಾಹಿತಿ.

ಹೊಸ ಕೊರೊನಾ ವೈರಸ್ ಸೋಂಕಿನ ಲಕ್ಷಣಗಳೇನು? ಇಲ್ಲಿದೆ ಮಾಹಿತಿ
ಪ್ರಾತಿನಿಧಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 29, 2020 | 9:50 PM

ನವದೆಹಲಿ: ಇಂಗ್ಲೆಂಡ್‌ನ ರೂಪಾಂತರಗೊಂಡ ಕೊರೊನಾ ವೈರಸ್ ಭಾರತಕ್ಕೂ ಎಂಟ್ರಿ ಕೊಟ್ಟಿರುವುದು ಮಂಗಳವಾರ ಬೆಳಗ್ಗೆ ಖಚಿತವಾಗಿದೆ. ಭಾರತದಲ್ಲಿ ಆರು ಮಂದಿಗೆ ಬ್ರಿಟನ್​ನ ರೂಪಾಂತರಗೊಂಡ ಕೊರೊನಾ ಸೋಂಕು ತಗುಲಿರುವುದನ್ನು ಇಂದು ಬೆಳಿಗ್ಗೆ ಕೇಂದ್ರ ಸರ್ಕಾರ ದೃಢಪಡಿಸಿದೆ. ಹಳೆಯ ಕೊರೊನಾ ವೈರಸ್​ಗೆ ಹೋಲಿಸಿದರೆ, ಬ್ರಿಟನ್​ನ ರೂಪಾಂತರಗೊಂಡ ಕೊರೊನಾ ವೈರಸ್ ಶೇ.70 ರಷ್ಟು ವೇಗವಾಗಿ ಹರಡುತ್ತೆ ಎನ್ನುವುದು ಈಗ ಆತಂಕಕ್ಕೆ ಕಾರಣವಾಗಿದೆ. ಈ ಮಧ್ಯೆ ಎರಡೂ ವೈರಸ್​ಗಳ ನಡುವಿನ ಲಕ್ಷಣವೇನು ಎನ್ನುವುದಕ್ಕೆ ಇಲ್ಲಿದೆ ಮಾಹಿತಿ.

ಈ ಮೊದಲು ಭಾರತಕ್ಕೆ ಬಂದಿದ್ದ ಕೊರೊನಾ ದೇಹ ಪ್ರವೇಶಿಸಿದರೆ, ಜ್ವರ, ನೆಗಡಿ, ಕೆಮ್ಮು, ಶೀತ, ಸ್ನಾಯು ನೋವು ಕಾಣಿಸಿಕೊಳ್ಳುತ್ತದೆ. ನಾಲಗೆ ರುಚಿ ಕಂಡು ಹಿಡಿಯುವುದಿಲ್ಲ. ಗಂಟಲು ಒಣಗುವುದು, ಒಣ ಕಫ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಇದರ ಜೊತೆಗೆ ಉಸಿರಾಟದ ಸಮಸ್ಯೆ ಕೂಡ ಕಾಣಿಸಿಕೊಳ್ಳುತ್ತದೆ.

ಇನ್ನು, ರೂಪಾಂತರಗೊಂಡ ಕೊರೊನಾದ ಲಕ್ಷಣಗಳೆಂದರೆ, ಉಸಿರಾಟದ ತೊಂದರೆ ಕಾಣಿಸಿಕೊಳ್ಳುತ್ತದೆ. ನಿರಂತರವಾಗಿ ಎದೆನೋವು ಕಾಣಿಸಿಕೊಳ್ಳುತ್ತದೆ. ವಿಪರೀತವಾಗಿ ಸುಸ್ತಾಗುತ್ತದೆ ಎಂದು ತಜ್ಞರು ತಿಳಿಸಿದ್ದಾರೆ.

6 ಮಂದಿಗೆ ರೂಪಾಂತರಿ ಕೊರೊನಾ ಕಳೆದ ಎಂಟು ಹತ್ತು ದಿನಗಳಿಂದ ಭಾರತದಲ್ಲಿ ಬ್ರಿಟನ್​ನ ರೂಪಾಂತರಗೊಂಡ ಕೊರೊನಾ ವೈರಸ್ ಸಾಕಷ್ಟು ಆತಂಕ ಸೃಷ್ಟಿಸಿದೆ . ಬ್ರಿಟನ್ ರೂಪಾಂತರಗೊಂಡ ಕೊರೊನಾ ವೈರಸ್ ಭಾರತಕ್ಕೆ ಎಂಟ್ರಿ ಕೊಡದಂತೆ ತಡೆಯಲು ಕೇಂದ್ರ ಸರ್ಕಾರ ಸಾಕಷ್ಟು ಕ್ರಮಗಳನ್ನ ತೆಗೆದುಕೊಂಡಿದೆ. ಬ್ರಿಟನ್​ನೊಂದಿಗಿನ ವಿಮಾನ ಸಂಚಾರ ಸ್ಥಗಿತಗೊಳಿಸಿದೆ. ನವೆಂಬರ್ 23 ರಿಂದ ಬ್ರಿಟನ್ ನಿಂದ ಬಂದವರನ್ನೆಲ್ಲಾ ಪತ್ತೆ ಹಚ್ಚಿ ಆರ್‌ಟಿ-ಪಿಸಿಆರ್ ಪರೀಕ್ಷೆಗೊಳಪಡಿಸುತ್ತಿದೆ. ಜತೆಗೇ ಐಸೋಲೇಷನ್​​ನಲ್ಲಿರಲು ಸೂಚಿಸಿದೆ. ಆದರೂ, ಬ್ರಿಟನ್ ನ ರೂಪಾಂತರಗೊಂಡ ಕೊರೊನಾ ವೈರಸ್ ಭಾರತಕ್ಕೆ ಪ್ರವೇಶಿಸಲು ತಡೆಯಲು ಸಾಧ್ಯವಾಗಿಲ್ಲ.

ಬ್ರಿಟನ್​ನಿಂದ ಭಾರತಕ್ಕೆ ಬಂದಿರುವ ಆರು ಮಂದಿಯಲ್ಲಿ ರೂಪಾಂತರಗೊಂಡ ಕೊರೊನಾ ಸೋಂಕು ಇರುವುದು ಇಂದು ದೃಢಪಟ್ಟಿದೆ. ಇಂದು ಬೆಳಿಗ್ಗೆ ಕೇಂದ್ರ ಸರ್ಕಾರವೇ ಅಧಿಕೃತವಾಗಿ ಭಾರತದಲ್ಲಿ ಆರು ಮಂದಿಯಲ್ಲಿ ಬ್ರಿಟನ್ ನ ರೂಪಾಂತರಗೊಂಡ ಕೊರೊನಾ ಸೋಂಕು ತಗುಲಿದೆ ಎನ್ನುವುದು ಜೆನೋಮಿಕ್ ಸಿಕ್ವೇನ್ಸ್ ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ಪ್ರಕಟಿಸಿತು. ಆರು ಮಂದಿಯಲ್ಲಿ ಮೂವರು ಬೆಂಗಳೂರಿನವರು. ತಮಿಳುನಾಡಿನ ರಾಜಧಾನಿ ಚೆನ್ನೈನ ಓರ್ವ ವ್ಯಕ್ತಿ, ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಓರ್ವ ವ್ಯಕ್ತಿ ಹಾಗೂ ತೆಲಂಗಾಣದ ವಾರಂಗಲ್ ಜಿಲ್ಲೆಯ ಓರ್ವ ವ್ಯಕ್ತಿಯಲ್ಲಿ ಬ್ರಿಟನ್ ನ ರೂಪಾಂತರಗೊಂಡ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಆರು ಮಂದಿಯೂ ದಕ್ಷಿಣ ಭಾರತದವರಾಗಿರುವುದು ವಿಶೇಷ. ಆರು ಮಂದಿಯನ್ನು ಪ್ರತೇಕವಾಗಿ ಐಸೋಲೇಷನ್ ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬ್ರಿಟನ್ ನ ರೂಪಾಂತರಗೊಂಡ ಕೊರೊನಾ ವೈರಸ್ ವಿರುದ್ಧ ಈಗಾಗಲೇ ಸಿದ್ದವಾಗಿರುವ ಲಸಿಕೆಗಳು ಕೆಲಸ ಮಾಡಲಿವೆ ಎಂದು ಇಂದು ಸಂಜೆ ಪತ್ರಿಕಾಗೋಷ್ಠಿ ನಡೆಸಿದ ಕೇಂದ್ರ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರ ಡಾಕ್ಟರ್ ವಿಜಯ ರಾಘವನ್ ಹೇಳಿದ್ದಾರೆ.

ನವಂಬರ್ 25 ರಿಂದ ಡಿಸೆಂಬರ್ 23 ರವರೆಗೆ ಬ್ರಿಟನ್ ನಿಂದ ಸುಮಾರು 30 ಸಾವಿರ ಜನರು ಭಾರತಕ್ಕೆ ಬಂದಿದ್ದಾರೆ. ಈಗ 30 ಸಾವಿರ ಜನರ ಮೇಲೆ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳು ನಿಗಾವಹಿಸಿವೆ . ಹಳೆಯ ಕೊರೊನಾ ವೈರಸ್ ಗೆ ನೀಡಿದ ಚಿಕಿತ್ಸೆಯನ್ನೇ ಹೊಸ ಕೊರೊನಾ ವೈರಸ್​​ಗೂ ನೀಡಬೇಕು. ಜೆನೋಮಿಕ್ ಸ್ವೀಕ್ವೇನ್ಸ್ ಪರೀಕ್ಷೆಗಾಗಿ ದೇಶದಲ್ಲಿ ಹತ್ತು ಲ್ಯಾಬ್ ಸ್ಥಾಪಿಸಲಾಗಿದೆ .

ಈಗಾಗಲೇ ಸಂಶೋಧನೆಯಿಂದ ಇಂಗ್ಲೆಂಡ್, ಆಮೆರಿಕಾ ದೇಶಗಳಲ್ಲಿ ಮಾರುಕಟ್ಟೆಗೆ ಬಂದಿರುವ ಫೈಜರ್, ಮಾಡೆರ್ನಾ ಕಂಪನಿಯ ಲಸಿಕೆಗಳು ಹೊಸ ಪ್ರಭೇದದ ವಿರುದ್ಧವೂ ಕೆಲಸ ಮಾಡಲಿವೆ ಎಂದಿರುವುದು ಸಮಾಧಾನಕರ. ಭಾರತಕ್ಕೆ ಇಂಗ್ಲೆಂಡ್‌ನ ಹೊಸ ಪ್ರಭೇದದ ಕೊರೊನಾ ವೈರಸ್ ಎಂಟ್ರಿ ನಿರೀಕ್ಷಿತ . ಏಕೆಂದರೇ, ವೈರಸ್ ರೂಪಾಂತರ ಸಹಜ. ನಾವು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನೀತಿ ಆಯೋಗದ ಸದಸ್ಯ ವಿನೋದ್ ಕುಮಾರ್ ಪೌಲ್ ಹೇಳಿದ್ದಾರೆ.

ರೂಪಾಂತರಿ ಕೊರೊನಾ ವೈರಸ್​ ಬಗ್ಗೆ ಅತಿ ಭಯ ಬೇಡ: ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ

ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ