AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಕೊರೊನಾ ವೈರಸ್ ಸೋಂಕಿನ ಲಕ್ಷಣಗಳೇನು? ಇಲ್ಲಿದೆ ಮಾಹಿತಿ

ಹಳೆಯ ಕೊರೊನಾ ವೈರಸ್​ಗೆ ಹೋಲಿಸಿದರೆ, ಬ್ರಿಟನ್​ನ ರೂಪಾಂತರಗೊಂಡ ಕೊರೊನಾ ವೈರಸ್ ಶೇ.70 ರಷ್ಟು ವೇಗವಾಗಿ ಹರಡುತ್ತೆ ಎನ್ನುವುದು ಈಗ ಆತಂಕಕ್ಕೆ ಕಾರಣವಾಗಿದೆ. ಈ ಮಧ್ಯೆ ಎರಡೂ ವೈರಸ್​ಗಳ ನಡುವಿನ ಲಕ್ಷಣವೇನು ಎನ್ನುವುದಕ್ಕೆ ಇಲ್ಲಿದೆ ಮಾಹಿತಿ.

ಹೊಸ ಕೊರೊನಾ ವೈರಸ್ ಸೋಂಕಿನ ಲಕ್ಷಣಗಳೇನು? ಇಲ್ಲಿದೆ ಮಾಹಿತಿ
ಪ್ರಾತಿನಿಧಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 29, 2020 | 9:50 PM

Share

ನವದೆಹಲಿ: ಇಂಗ್ಲೆಂಡ್‌ನ ರೂಪಾಂತರಗೊಂಡ ಕೊರೊನಾ ವೈರಸ್ ಭಾರತಕ್ಕೂ ಎಂಟ್ರಿ ಕೊಟ್ಟಿರುವುದು ಮಂಗಳವಾರ ಬೆಳಗ್ಗೆ ಖಚಿತವಾಗಿದೆ. ಭಾರತದಲ್ಲಿ ಆರು ಮಂದಿಗೆ ಬ್ರಿಟನ್​ನ ರೂಪಾಂತರಗೊಂಡ ಕೊರೊನಾ ಸೋಂಕು ತಗುಲಿರುವುದನ್ನು ಇಂದು ಬೆಳಿಗ್ಗೆ ಕೇಂದ್ರ ಸರ್ಕಾರ ದೃಢಪಡಿಸಿದೆ. ಹಳೆಯ ಕೊರೊನಾ ವೈರಸ್​ಗೆ ಹೋಲಿಸಿದರೆ, ಬ್ರಿಟನ್​ನ ರೂಪಾಂತರಗೊಂಡ ಕೊರೊನಾ ವೈರಸ್ ಶೇ.70 ರಷ್ಟು ವೇಗವಾಗಿ ಹರಡುತ್ತೆ ಎನ್ನುವುದು ಈಗ ಆತಂಕಕ್ಕೆ ಕಾರಣವಾಗಿದೆ. ಈ ಮಧ್ಯೆ ಎರಡೂ ವೈರಸ್​ಗಳ ನಡುವಿನ ಲಕ್ಷಣವೇನು ಎನ್ನುವುದಕ್ಕೆ ಇಲ್ಲಿದೆ ಮಾಹಿತಿ.

ಈ ಮೊದಲು ಭಾರತಕ್ಕೆ ಬಂದಿದ್ದ ಕೊರೊನಾ ದೇಹ ಪ್ರವೇಶಿಸಿದರೆ, ಜ್ವರ, ನೆಗಡಿ, ಕೆಮ್ಮು, ಶೀತ, ಸ್ನಾಯು ನೋವು ಕಾಣಿಸಿಕೊಳ್ಳುತ್ತದೆ. ನಾಲಗೆ ರುಚಿ ಕಂಡು ಹಿಡಿಯುವುದಿಲ್ಲ. ಗಂಟಲು ಒಣಗುವುದು, ಒಣ ಕಫ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಇದರ ಜೊತೆಗೆ ಉಸಿರಾಟದ ಸಮಸ್ಯೆ ಕೂಡ ಕಾಣಿಸಿಕೊಳ್ಳುತ್ತದೆ.

ಇನ್ನು, ರೂಪಾಂತರಗೊಂಡ ಕೊರೊನಾದ ಲಕ್ಷಣಗಳೆಂದರೆ, ಉಸಿರಾಟದ ತೊಂದರೆ ಕಾಣಿಸಿಕೊಳ್ಳುತ್ತದೆ. ನಿರಂತರವಾಗಿ ಎದೆನೋವು ಕಾಣಿಸಿಕೊಳ್ಳುತ್ತದೆ. ವಿಪರೀತವಾಗಿ ಸುಸ್ತಾಗುತ್ತದೆ ಎಂದು ತಜ್ಞರು ತಿಳಿಸಿದ್ದಾರೆ.

6 ಮಂದಿಗೆ ರೂಪಾಂತರಿ ಕೊರೊನಾ ಕಳೆದ ಎಂಟು ಹತ್ತು ದಿನಗಳಿಂದ ಭಾರತದಲ್ಲಿ ಬ್ರಿಟನ್​ನ ರೂಪಾಂತರಗೊಂಡ ಕೊರೊನಾ ವೈರಸ್ ಸಾಕಷ್ಟು ಆತಂಕ ಸೃಷ್ಟಿಸಿದೆ . ಬ್ರಿಟನ್ ರೂಪಾಂತರಗೊಂಡ ಕೊರೊನಾ ವೈರಸ್ ಭಾರತಕ್ಕೆ ಎಂಟ್ರಿ ಕೊಡದಂತೆ ತಡೆಯಲು ಕೇಂದ್ರ ಸರ್ಕಾರ ಸಾಕಷ್ಟು ಕ್ರಮಗಳನ್ನ ತೆಗೆದುಕೊಂಡಿದೆ. ಬ್ರಿಟನ್​ನೊಂದಿಗಿನ ವಿಮಾನ ಸಂಚಾರ ಸ್ಥಗಿತಗೊಳಿಸಿದೆ. ನವೆಂಬರ್ 23 ರಿಂದ ಬ್ರಿಟನ್ ನಿಂದ ಬಂದವರನ್ನೆಲ್ಲಾ ಪತ್ತೆ ಹಚ್ಚಿ ಆರ್‌ಟಿ-ಪಿಸಿಆರ್ ಪರೀಕ್ಷೆಗೊಳಪಡಿಸುತ್ತಿದೆ. ಜತೆಗೇ ಐಸೋಲೇಷನ್​​ನಲ್ಲಿರಲು ಸೂಚಿಸಿದೆ. ಆದರೂ, ಬ್ರಿಟನ್ ನ ರೂಪಾಂತರಗೊಂಡ ಕೊರೊನಾ ವೈರಸ್ ಭಾರತಕ್ಕೆ ಪ್ರವೇಶಿಸಲು ತಡೆಯಲು ಸಾಧ್ಯವಾಗಿಲ್ಲ.

ಬ್ರಿಟನ್​ನಿಂದ ಭಾರತಕ್ಕೆ ಬಂದಿರುವ ಆರು ಮಂದಿಯಲ್ಲಿ ರೂಪಾಂತರಗೊಂಡ ಕೊರೊನಾ ಸೋಂಕು ಇರುವುದು ಇಂದು ದೃಢಪಟ್ಟಿದೆ. ಇಂದು ಬೆಳಿಗ್ಗೆ ಕೇಂದ್ರ ಸರ್ಕಾರವೇ ಅಧಿಕೃತವಾಗಿ ಭಾರತದಲ್ಲಿ ಆರು ಮಂದಿಯಲ್ಲಿ ಬ್ರಿಟನ್ ನ ರೂಪಾಂತರಗೊಂಡ ಕೊರೊನಾ ಸೋಂಕು ತಗುಲಿದೆ ಎನ್ನುವುದು ಜೆನೋಮಿಕ್ ಸಿಕ್ವೇನ್ಸ್ ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ಪ್ರಕಟಿಸಿತು. ಆರು ಮಂದಿಯಲ್ಲಿ ಮೂವರು ಬೆಂಗಳೂರಿನವರು. ತಮಿಳುನಾಡಿನ ರಾಜಧಾನಿ ಚೆನ್ನೈನ ಓರ್ವ ವ್ಯಕ್ತಿ, ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಓರ್ವ ವ್ಯಕ್ತಿ ಹಾಗೂ ತೆಲಂಗಾಣದ ವಾರಂಗಲ್ ಜಿಲ್ಲೆಯ ಓರ್ವ ವ್ಯಕ್ತಿಯಲ್ಲಿ ಬ್ರಿಟನ್ ನ ರೂಪಾಂತರಗೊಂಡ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಆರು ಮಂದಿಯೂ ದಕ್ಷಿಣ ಭಾರತದವರಾಗಿರುವುದು ವಿಶೇಷ. ಆರು ಮಂದಿಯನ್ನು ಪ್ರತೇಕವಾಗಿ ಐಸೋಲೇಷನ್ ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬ್ರಿಟನ್ ನ ರೂಪಾಂತರಗೊಂಡ ಕೊರೊನಾ ವೈರಸ್ ವಿರುದ್ಧ ಈಗಾಗಲೇ ಸಿದ್ದವಾಗಿರುವ ಲಸಿಕೆಗಳು ಕೆಲಸ ಮಾಡಲಿವೆ ಎಂದು ಇಂದು ಸಂಜೆ ಪತ್ರಿಕಾಗೋಷ್ಠಿ ನಡೆಸಿದ ಕೇಂದ್ರ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರ ಡಾಕ್ಟರ್ ವಿಜಯ ರಾಘವನ್ ಹೇಳಿದ್ದಾರೆ.

ನವಂಬರ್ 25 ರಿಂದ ಡಿಸೆಂಬರ್ 23 ರವರೆಗೆ ಬ್ರಿಟನ್ ನಿಂದ ಸುಮಾರು 30 ಸಾವಿರ ಜನರು ಭಾರತಕ್ಕೆ ಬಂದಿದ್ದಾರೆ. ಈಗ 30 ಸಾವಿರ ಜನರ ಮೇಲೆ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳು ನಿಗಾವಹಿಸಿವೆ . ಹಳೆಯ ಕೊರೊನಾ ವೈರಸ್ ಗೆ ನೀಡಿದ ಚಿಕಿತ್ಸೆಯನ್ನೇ ಹೊಸ ಕೊರೊನಾ ವೈರಸ್​​ಗೂ ನೀಡಬೇಕು. ಜೆನೋಮಿಕ್ ಸ್ವೀಕ್ವೇನ್ಸ್ ಪರೀಕ್ಷೆಗಾಗಿ ದೇಶದಲ್ಲಿ ಹತ್ತು ಲ್ಯಾಬ್ ಸ್ಥಾಪಿಸಲಾಗಿದೆ .

ಈಗಾಗಲೇ ಸಂಶೋಧನೆಯಿಂದ ಇಂಗ್ಲೆಂಡ್, ಆಮೆರಿಕಾ ದೇಶಗಳಲ್ಲಿ ಮಾರುಕಟ್ಟೆಗೆ ಬಂದಿರುವ ಫೈಜರ್, ಮಾಡೆರ್ನಾ ಕಂಪನಿಯ ಲಸಿಕೆಗಳು ಹೊಸ ಪ್ರಭೇದದ ವಿರುದ್ಧವೂ ಕೆಲಸ ಮಾಡಲಿವೆ ಎಂದಿರುವುದು ಸಮಾಧಾನಕರ. ಭಾರತಕ್ಕೆ ಇಂಗ್ಲೆಂಡ್‌ನ ಹೊಸ ಪ್ರಭೇದದ ಕೊರೊನಾ ವೈರಸ್ ಎಂಟ್ರಿ ನಿರೀಕ್ಷಿತ . ಏಕೆಂದರೇ, ವೈರಸ್ ರೂಪಾಂತರ ಸಹಜ. ನಾವು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನೀತಿ ಆಯೋಗದ ಸದಸ್ಯ ವಿನೋದ್ ಕುಮಾರ್ ಪೌಲ್ ಹೇಳಿದ್ದಾರೆ.

ರೂಪಾಂತರಿ ಕೊರೊನಾ ವೈರಸ್​ ಬಗ್ಗೆ ಅತಿ ಭಯ ಬೇಡ: ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ