AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mohan Bhagwat: ನಮ್ಮ ಸಮಾಜದ ಜನರನ್ನು ವಂಚನೆ ಮಾಡುತ್ತಿದೆ ಈ ಮಿಷನರಿಗಳು: ಮೋಹನ್ ಭಾಗವತ್

100 ವರ್ಷಗಳ ಅವಧಿಯಲ್ಲಿ, ಈ ಮಿಷನರಿ ಜನರು ಎಲ್ಲವನ್ನೂ ಬದಲಾಯಿಸಲು ಭಾರತಕ್ಕೆ ಬಂದರು ಎಂದು ಅವರು ಹೇಳುತ್ತಾರೆ. ನಮ್ಮ ದೇಶದಲ್ಲಿ ಅವರು ಶತಮಾನಗಳಿಂದ ಕೆಲಸ ಮಾಡುತ್ತಿದ್ದಾರೆ. ಆದರೆ ನಮ್ಮ ಪೂರ್ವಜರ ಪ್ರಯತ್ನದಿಂದ ನಮ್ಮ ಬೇರುಗಳು ಗಟ್ಟಿಯಾಗಿ ಉಳಿದಿದ್ದರಿಂದ ನಮ್ಮ ಸಂಸ್ಕೃತಿ, ಆಚರಣೆ, ತತ್ವಗಳನ್ನು ಎಂದಿಗೂ ಬದಲಾವಣೆ ಮಾಡಲು ಸಾಧ್ಯವಾಗಿಲ್ಲ ಎಂದು ಮೋಹನ್ ಭಾಗವತ್ ಹೇಳಿದರು.

Mohan Bhagwat: ನಮ್ಮ ಸಮಾಜದ ಜನರನ್ನು ವಂಚನೆ ಮಾಡುತ್ತಿದೆ ಈ ಮಿಷನರಿಗಳು: ಮೋಹನ್ ಭಾಗವತ್
ಮೋಹನ್ ಭಾಗವತ್
ಅಕ್ಷಯ್​ ಪಲ್ಲಮಜಲು​​
| Edited By: Rakesh Nayak Manchi|

Updated on:Apr 21, 2023 | 8:43 PM

Share

ಬುರ್ಹಾನ್ಪುರ್: ನಮ್ಮ ಜತೆಗೆ ಈ ಸಮಾಜ ಇಲ್ಲ, ನಮ್ಮನ್ನು ಗೌರವದಿಂದ ಕಾಣುತ್ತಿಲ್ಲ ಎಂದು ಹೇಳುವ ಜನರನ್ನು ತನ್ನತ್ತ ಸೆಳೆಯುವ ಮೂಲಕ ಮಿಷನರಿಗಳು ಲಾಭವನ್ನು ಪಡೆದುಕೊಳ್ಳುತ್ತಿದ್ದಾರೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದರು. ಗೋವಿಂದನಾಥ ಮಹಾರಾಜರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಜನರು ನಮ್ಮ ಸಮಾಜ ಜನರ ಬಳಿ ಹೋಗುವುದಿಲ್ಲ, ಅವರ ಬಳಿ ಸಹಾಯ ಕೇಳುವುದಿಲ್ಲ, ಎಲ್ಲಿಂದಲೋ ಬಂದ ಈ ಮಿಷನರಿಗಳು ಜನರ ಬಳಿ ಹೋಗಿ ಸಹಾಯ ಕೇಳುತ್ತಾರೆ. ಹೀಗೆ ನಮ್ಮ ದೇಶಕ್ಕೆ ಬರುವ ಮಿಷನರಿಗಳೊಂದಿಗೆ ನಮ್ಮವರು ಅವರ ಭಾಷೆ ಮಾತನಾಡಲು ಆರಂಭಿಸುತ್ತಾರೆ, ಅವರ ಆಹಾರ ಕ್ರಮಗಳನ್ನು ಅನುಸರಿಸುತ್ತಾರೆ. ಇದನ್ನೇ ಲಾಭವನ್ನಾಗಿ ಮಾಡಿಕೊಳ್ಳುವ ಮಿಷನರಿಗಳು ಅಂತಹವರನ್ನು ಮತಾಂತರಿಸುತ್ತಾರೆ ಎಂದು ಹೇಳಿದರು.

100 ವರ್ಷಗಳ ಅವಧಿಯಲ್ಲಿ, ಈ ಮಿಷನರಿ ಜನರು ಎಲ್ಲವನ್ನೂ ಬದಲಾಯಿಸಲು ಭಾರತಕ್ಕೆ ಬಂದರು ಎಂದು ಅವರು ಹೇಳುತ್ತಾರೆ. ನಮ್ಮ ದೇಶದಲ್ಲಿ ಅವರು ಶತಮಾನಗಳಿಂದ ಕೆಲಸ ಮಾಡುತ್ತಿದ್ದಾರೆ. ಆದರೆ ನಮ್ಮ ಪೂರ್ವಜರ ಪ್ರಯತ್ನದಿಂದ ನಮ್ಮ ಬೇರುಗಳು ಗಟ್ಟಿಯಾಗಿ ಉಳಿದಿದ್ದರಿಂದ ನಮ್ಮ ಸಂಸ್ಕೃತಿ, ಆಚರಣೆ, ತತ್ವಗಳನ್ನು ಎಂದಿಗೂ ಬದಲಾವಣೆ ಮಾಡಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ. ಅವರನ್ನು ಬೇರು ಸಮೇತ ಕಿತ್ತೊಗೆಯುವ ಪ್ರಯತ್ನಗಳು ನಡೆಯುತ್ತಿವೆ. ಆದ್ದರಿಂದ ಸಮಾಜ ಜನರು ಈ ಮೋಸವನ್ನು ಅರ್ಥ ಮಾಡಿಕೊಳ್ಳಬೇಕು. ನಂಬಿಕೆಯನ್ನು ಗಟ್ಟಿಗೊಳಿಸಬೇಕು ಎಂದರು.

ನಮ್ಮ ಸಮಾಜದ ಜನರನ್ನು ವಂಚನೆ ಮಾಡಿ. ಜನರು ನಂಬಿಕೆಯನ್ನು ಹಾಳು ಮಾಡುತ್ತಿದ್ದಾರೆ. ನಮ್ಮ ಧರ್ಮದ ಬಗ್ಗೆ ಈ ಮಿಷನರಿ ಜನರು ಕೆಲವು ಪ್ರಶ್ನೆಗಳನ್ನು ಕೇಳುತ್ತಾರೆ. ನಮ್ಮ ಸಮಾಜವು ಅಂತಹ ಜನರನ್ನು ಹಿಂದೆಂದೂ ಎದುರಿಸಲಿಲ್ಲ, ಆ ಕಾರಣದಿಂದ ನಮ್ಮ ಜನರನ್ನು ಹಾಗೂ ನಮ್ಮ ಧರ್ಮವನ್ನು ಅವಮಾನ ಮಾಡುತ್ತಿದ್ದಾರೆ. ನಾವು ಈ ದೌರ್ಬಲ್ಯವನ್ನು ತೊಡೆದುಹಾಕಬೇಕು ಎಂದು ಅವರು ಹೇಳಿದರು. ನಾವು ದೃಢವಾಗಿ ನಿಂತರೆ ಯಾರು ನಮ್ಮ ಸಮಾಜವನ್ನು ಅಲುಗಾಡಿಸುವುದಿಲ್ಲ. ಆದರೆ ನಂಬಿಕೆ ಕಳೆದುಕೊಂಡಾಗ ಮತ್ತು ಸಮಾಜವು ತಮ್ಮೊಂದಿಗೆ ಇಲ್ಲ ಎಂದು ಭಾವಿಸಿದಾಗ ಜನರು ಬದಲಾಗುತ್ತಾರೆ ಎಂದು ಭಾಗವತ್ ಹೇಳಿದರು.

ಇದನ್ನೂ ಓದಿ:Mohan Bhagwat: ನಾವು ನಮಗಾಗಿ ಮಾತ್ರ ಬದುಕುವವರಲ್ಲ, ದೇಶದ ಶಿಕ್ಷಣ, ಆರೋಗ್ಯ ವ್ಯವಸ್ಥೆ ನಾಶ ಮಾಡಿದ್ದು ಬ್ರಿಟಿಷರು

ಕಲ್ಯಾಣ ಆಶ್ರಮದಿಂದ (ಆರ್‌ಎಸ್‌ಎಸ್ ಬೆಂಬಲಿತ ಸ್ವಯಂಸೇವಾ ಸಂಸ್ಥೆ) ಸಹಾಯ ಪಡೆದು ಸ್ಥಳೀಯರು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ 150 ವರ್ಷಗಳ ನಂತರ ಮಧ್ಯಪ್ರದೇಶದ ಇಡೀ ಗ್ರಾಮವು ಹಿಂದೂ ಧರ್ಮಕ್ಕೆ ಸೇರಿದೆ ಎಂದು ಹೇಳಿದ್ದಾರೆ.

ಮೋಹನ್ ಭಾಗವತ್ ಗುರುದ್ವಾರ ಬಡಿ ಸಂಗತ್‌ಗೆ ಪೂಜೆ ಸಲ್ಲಿಸಲು ಭೇಟಿ ನೀಡಿದರು. ಗುರುದ್ವಾರಕ್ಕೆ ಭೇಟಿ ನೀಡಿದ ನಂತರ ಮಾತನಾಡಿದ ಅವರು, ಗುರು ಗ್ರಂಥ ಸಾಹಿಬ್ ಹಿಂದೂಗಳಿಗೆ ಸ್ಫೂರ್ತಿಯ ಮೂಲವಾಗಿದೆ. ಸೋಮವಾರ, ಭಾಗವತ್ ಅವರು ಸರಸ್ವತಿ ನಗರದಲ್ಲಿ ಡಾ ಹೆಡ್ಗೆವಾರ್ ಸ್ಮಾರಕ ಸಮಿತಿಯ ಕಚೇರಿ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ ಮತ್ತು ಬುರ್ಹಾನ್‌ಪುರದಲ್ಲಿ ಸಂಘದ ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:17 am, Mon, 17 April 23

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ