AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ ಹಲವು ರಾಜ್ಯಗಳಲ್ಲಿ ಮತ್ತೆ ನಿಧಾನವಾಗಿ ಏರುತ್ತಿದೆ ಕೊರೊನಾ; ಮಾಸ್ಕ್​ ಕಡ್ಡಾಯವಾಗಿ ಬಳಕೆ ಮಾಡೋದು ಒಳಿತು

ಮಹಾರಾಷ್ಟ್ರದಲ್ಲಿ ಗುರುವಾರ 103 ಕೊರೊನಾ ಕೇಸ್​ಗಳು ದಾಖಲಾಗಿವೆ. ಹಾಗೇ, ಐದು ಮಂದಿ ಕೊವಿಡ್​ 19ನಿಂದ ಮೃತಪಟ್ಟಿದ್ದಾರೆ.   ಮುಂಬೈ ನಗರದಲ್ಲಿ ಏಪ್ರಿಲ್​ 14ರಂದು 56 ಹೊಸ ಕೇಸ್​ಗಳು ದಾಖಲಾಗಿದ್ದವು.

ದೇಶದ ಹಲವು ರಾಜ್ಯಗಳಲ್ಲಿ ಮತ್ತೆ ನಿಧಾನವಾಗಿ ಏರುತ್ತಿದೆ ಕೊರೊನಾ; ಮಾಸ್ಕ್​ ಕಡ್ಡಾಯವಾಗಿ ಬಳಕೆ ಮಾಡೋದು ಒಳಿತು
ಕೊವಿಡ್ -19
TV9 Web
| Edited By: |

Updated on: Apr 15, 2022 | 12:37 PM

Share

ದೇಶದಲ್ಲಿ ಏಪ್ರಿಲ್​ 1ರಿಂದ ಕೊರೊನಾ ನಿಯಂತ್ರಣ ನಿರ್ಬಂಧಗಳು ಯಾವವೂ ಇಲ್ಲ. ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್​​ನ್ನು ಕಡ್ಡಾಯವಾಗಿ ಧರಿಸಿ ಎಂದು ಕೇಂದ್ರ ಸರ್ಕಾರ ಹೇಳಿದ್ದರೂ ಕೂಡ ಕೆಲವು ರಾಜ್ಯಗಳಲ್ಲಿ ಮಾಸ್ಕ್​ ಕೂಡ ಕಡ್ಡಾಯವಲ್ಲ. ಧರಿಸದೆ ಇದ್ದರೆ ದಂಡ ವಿಧಿಸುವುದಿಲ್ಲ ಎಂದು ಅಲ್ಲಿನ ಸರ್ಕಾರಗಳು ಹೇಳಿವೆ. ಆದರೆ ಈಗ ಮತ್ತೆ ಕೆಲವು ರಾಜ್ಯಗಳಲ್ಲಿ ಕೊರೊನಾ ಕೇಸ್​ಗಳ ಸಂಖ್ಯೆ ನಿಧಾನಕ್ಕೆ ಏರಿಕೆಯಾಗುತ್ತಿದೆ. ಅದರಲ್ಲಿ ಪ್ರಮುಖವಾಗಿ ದೆಹಲಿ, ಮಹಾರಾಷ್ಟ್ರ ಮತ್ತು ಮಿಜೋರಾಂಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ದೆಹಲಿಯಲ್ಲಿ ಏಪ್ರಿಲ್​ 14ರಂದು 325 ಕೊರೊನಾ ಕೇಸ್​ಗಳು ದಾಖಲಾಗಿದೆ. ಅಲ್ಲಿ ಪಾಸಿಟಿವಿಟಿ ದರವೂ ಕೂಡ ಶೇ. 2.39ರಷ್ಟಿದೆ. ಹಾಗಿದ್ದಾಗ್ಯೂ ಜನರು ಗಾಬರಿಯಾಗುವ ಅಗತ್ಯವಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​, ವೈದ್ಯರು ಧೈರ್ಯ ತುಂಬುತ್ತಿದ್ದಾರೆ.

ಮಹಾರಾಷ್ಟ್ರದಲ್ಲೂ ಹೆಚ್ಚಳ

ಮಹಾರಾಷ್ಟ್ರದಲ್ಲಿ ಗುರುವಾರ 103 ಕೊರೊನಾ ಕೇಸ್​ಗಳು ದಾಖಲಾಗಿವೆ. ಹಾಗೇ, ಐದು ಮಂದಿ ಕೊವಿಡ್​ 19ನಿಂದ ಮೃತಪಟ್ಟಿದ್ದಾರೆ.   ಮುಂಬೈ ನಗರದಲ್ಲಿ ಏಪ್ರಿಲ್​ 14ರಂದು 56 ಹೊಸ ಕೇಸ್​ಗಳು ದಾಖಲಾಗಿದ್ದವು. ಈ ಮೂಲಕ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ ಇಲ್ಲಿ 10,58,623 ಏರಿಕೆಯಾಗಿದೆ. ಸದ್ಯ ಮುಂಬೈನಲ್ಲಿ ಶೇ.98ರಷ್ಟು ಚೇತರಿಕೆ ಪ್ರಮಾಣವಿದ್ದು, 346 ಸಕ್ರಿಯ ಪ್ರಕರಣಗಳಿವೆ.  ಮಿಜೋರಾಂನಲ್ಲಿ ಕೊವಿಡ್​ 19 ಏರಿಕೆ ತುಸು ಏರಿಕೆಯಾಗಿದೆ. ಒಟ್ಟು ಸೋಂಕಿತರ ಸಂಖ್ಯೆ  2,25,901ಕ್ಕೆ ತಲುಪಿದೆ.

ಇನ್ನುಳಿದಂತೆ ತಮಿಳುನಾಡಿನಲ್ಲಿ ನಿನ್ನೆ 25 ಹೊಸ ಕೊರೊನಾ ಕೇಸ್​ಗಳು ದಾಖಲಾಗಿದ್ದವು. ಅದರಲ್ಲಿ ಒಬ್ಬರು ಯುನೈಟೆಡ್ ಅರಬ್​ ಎಮಿರೇಟ್ಸ್​​ನಿಂದ ಭಾರತಕ್ಕೆ ವಾಪಸ್ ಬಂದವರು. ಈ ರಾಜ್ಯದಲ್ಲಿ ಒಟ್ಟು 230 ಕೊರೊನಾ ಸಕ್ರಿಯ ಪ್ರಕರಣಗಳು ಇದ್ದು, ಇಲ್ಲಿಯವರೆಗೆ  34,14,933 ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.  ಇತ್ತೀಚೆಗೆ ಕೊರೊನಾದ ಎಕ್ಸ್​ಇ ರೂಪಾಂತರಿ ವೈರಾಣು ಆತಂಕ ಸೃಷ್ಟಿಸಿರುವ ಬೆನ್ನಲ್ಲೇ,  ದಕ್ಷಿಣ ಆಫ್ರಿಕಾದ ಬೋಟ್ಸ್‌ವಾನಾದಲ್ಲಿ ಒಮಿಕ್ರೋನ್‌ ಬಿಎ.4 ಹಾಗೂ ಬಿಎ.5 ಎಂಬ 2 ಹೊಸ ರೂಪಾಂತರಿಗಳು ಪತ್ತೆಯಾಗಿವೆ. ಇವು ಹೆಚ್ಚು ಅಪಾಯಕಾರಿ ಅಥವಾ ತೀವ್ರವಾಗಿ ಹರಡುವ ಸಾಮರ್ಥ್ಯ ಹೊಂದಿದೆಯೇ ಎಂಬುದು ಇನ್ನೂ ಖಚಿತವಾಗಿಲ್ಲ. ಇದರ ಬಗ್ಗೆ ಅಧ್ಯಯನ ನಡೆಸಲಾಗುವುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ಇದನ್ನೂ ಓದಿ: Viral: ಸ್ಕರ್ಟ್ ಧರಿಸಿ ‘ಸಾಮಿ ಸಾಮಿ’ ಹಾಡಿಗೆ ಯುವಕನ ಭರ್ಜರಿ ಡಾನ್ಸ್; ಏನಿದು ಹೊಸ ಟ್ರೆಂಡ್?

ಆಲಿಯಾ-ರಣಬೀರ್​ ಆಸ್ತಿ ಸೇರಿದರೆ ಆಗಲಿದೆ 840 ಕೋಟಿ ರೂಪಾಯಿ! ಇದರಲ್ಲಿ ಯಾರ ಪಾಲು ಎಷ್ಟು?

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ