Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ ಹಲವು ರಾಜ್ಯಗಳಲ್ಲಿ ಮತ್ತೆ ನಿಧಾನವಾಗಿ ಏರುತ್ತಿದೆ ಕೊರೊನಾ; ಮಾಸ್ಕ್​ ಕಡ್ಡಾಯವಾಗಿ ಬಳಕೆ ಮಾಡೋದು ಒಳಿತು

ಮಹಾರಾಷ್ಟ್ರದಲ್ಲಿ ಗುರುವಾರ 103 ಕೊರೊನಾ ಕೇಸ್​ಗಳು ದಾಖಲಾಗಿವೆ. ಹಾಗೇ, ಐದು ಮಂದಿ ಕೊವಿಡ್​ 19ನಿಂದ ಮೃತಪಟ್ಟಿದ್ದಾರೆ.   ಮುಂಬೈ ನಗರದಲ್ಲಿ ಏಪ್ರಿಲ್​ 14ರಂದು 56 ಹೊಸ ಕೇಸ್​ಗಳು ದಾಖಲಾಗಿದ್ದವು.

ದೇಶದ ಹಲವು ರಾಜ್ಯಗಳಲ್ಲಿ ಮತ್ತೆ ನಿಧಾನವಾಗಿ ಏರುತ್ತಿದೆ ಕೊರೊನಾ; ಮಾಸ್ಕ್​ ಕಡ್ಡಾಯವಾಗಿ ಬಳಕೆ ಮಾಡೋದು ಒಳಿತು
ಕೊವಿಡ್ -19
Follow us
TV9 Web
| Updated By: Lakshmi Hegde

Updated on: Apr 15, 2022 | 12:37 PM

ದೇಶದಲ್ಲಿ ಏಪ್ರಿಲ್​ 1ರಿಂದ ಕೊರೊನಾ ನಿಯಂತ್ರಣ ನಿರ್ಬಂಧಗಳು ಯಾವವೂ ಇಲ್ಲ. ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್​​ನ್ನು ಕಡ್ಡಾಯವಾಗಿ ಧರಿಸಿ ಎಂದು ಕೇಂದ್ರ ಸರ್ಕಾರ ಹೇಳಿದ್ದರೂ ಕೂಡ ಕೆಲವು ರಾಜ್ಯಗಳಲ್ಲಿ ಮಾಸ್ಕ್​ ಕೂಡ ಕಡ್ಡಾಯವಲ್ಲ. ಧರಿಸದೆ ಇದ್ದರೆ ದಂಡ ವಿಧಿಸುವುದಿಲ್ಲ ಎಂದು ಅಲ್ಲಿನ ಸರ್ಕಾರಗಳು ಹೇಳಿವೆ. ಆದರೆ ಈಗ ಮತ್ತೆ ಕೆಲವು ರಾಜ್ಯಗಳಲ್ಲಿ ಕೊರೊನಾ ಕೇಸ್​ಗಳ ಸಂಖ್ಯೆ ನಿಧಾನಕ್ಕೆ ಏರಿಕೆಯಾಗುತ್ತಿದೆ. ಅದರಲ್ಲಿ ಪ್ರಮುಖವಾಗಿ ದೆಹಲಿ, ಮಹಾರಾಷ್ಟ್ರ ಮತ್ತು ಮಿಜೋರಾಂಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ದೆಹಲಿಯಲ್ಲಿ ಏಪ್ರಿಲ್​ 14ರಂದು 325 ಕೊರೊನಾ ಕೇಸ್​ಗಳು ದಾಖಲಾಗಿದೆ. ಅಲ್ಲಿ ಪಾಸಿಟಿವಿಟಿ ದರವೂ ಕೂಡ ಶೇ. 2.39ರಷ್ಟಿದೆ. ಹಾಗಿದ್ದಾಗ್ಯೂ ಜನರು ಗಾಬರಿಯಾಗುವ ಅಗತ್ಯವಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​, ವೈದ್ಯರು ಧೈರ್ಯ ತುಂಬುತ್ತಿದ್ದಾರೆ.

ಮಹಾರಾಷ್ಟ್ರದಲ್ಲೂ ಹೆಚ್ಚಳ

ಮಹಾರಾಷ್ಟ್ರದಲ್ಲಿ ಗುರುವಾರ 103 ಕೊರೊನಾ ಕೇಸ್​ಗಳು ದಾಖಲಾಗಿವೆ. ಹಾಗೇ, ಐದು ಮಂದಿ ಕೊವಿಡ್​ 19ನಿಂದ ಮೃತಪಟ್ಟಿದ್ದಾರೆ.   ಮುಂಬೈ ನಗರದಲ್ಲಿ ಏಪ್ರಿಲ್​ 14ರಂದು 56 ಹೊಸ ಕೇಸ್​ಗಳು ದಾಖಲಾಗಿದ್ದವು. ಈ ಮೂಲಕ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ ಇಲ್ಲಿ 10,58,623 ಏರಿಕೆಯಾಗಿದೆ. ಸದ್ಯ ಮುಂಬೈನಲ್ಲಿ ಶೇ.98ರಷ್ಟು ಚೇತರಿಕೆ ಪ್ರಮಾಣವಿದ್ದು, 346 ಸಕ್ರಿಯ ಪ್ರಕರಣಗಳಿವೆ.  ಮಿಜೋರಾಂನಲ್ಲಿ ಕೊವಿಡ್​ 19 ಏರಿಕೆ ತುಸು ಏರಿಕೆಯಾಗಿದೆ. ಒಟ್ಟು ಸೋಂಕಿತರ ಸಂಖ್ಯೆ  2,25,901ಕ್ಕೆ ತಲುಪಿದೆ.

ಇನ್ನುಳಿದಂತೆ ತಮಿಳುನಾಡಿನಲ್ಲಿ ನಿನ್ನೆ 25 ಹೊಸ ಕೊರೊನಾ ಕೇಸ್​ಗಳು ದಾಖಲಾಗಿದ್ದವು. ಅದರಲ್ಲಿ ಒಬ್ಬರು ಯುನೈಟೆಡ್ ಅರಬ್​ ಎಮಿರೇಟ್ಸ್​​ನಿಂದ ಭಾರತಕ್ಕೆ ವಾಪಸ್ ಬಂದವರು. ಈ ರಾಜ್ಯದಲ್ಲಿ ಒಟ್ಟು 230 ಕೊರೊನಾ ಸಕ್ರಿಯ ಪ್ರಕರಣಗಳು ಇದ್ದು, ಇಲ್ಲಿಯವರೆಗೆ  34,14,933 ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.  ಇತ್ತೀಚೆಗೆ ಕೊರೊನಾದ ಎಕ್ಸ್​ಇ ರೂಪಾಂತರಿ ವೈರಾಣು ಆತಂಕ ಸೃಷ್ಟಿಸಿರುವ ಬೆನ್ನಲ್ಲೇ,  ದಕ್ಷಿಣ ಆಫ್ರಿಕಾದ ಬೋಟ್ಸ್‌ವಾನಾದಲ್ಲಿ ಒಮಿಕ್ರೋನ್‌ ಬಿಎ.4 ಹಾಗೂ ಬಿಎ.5 ಎಂಬ 2 ಹೊಸ ರೂಪಾಂತರಿಗಳು ಪತ್ತೆಯಾಗಿವೆ. ಇವು ಹೆಚ್ಚು ಅಪಾಯಕಾರಿ ಅಥವಾ ತೀವ್ರವಾಗಿ ಹರಡುವ ಸಾಮರ್ಥ್ಯ ಹೊಂದಿದೆಯೇ ಎಂಬುದು ಇನ್ನೂ ಖಚಿತವಾಗಿಲ್ಲ. ಇದರ ಬಗ್ಗೆ ಅಧ್ಯಯನ ನಡೆಸಲಾಗುವುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ಇದನ್ನೂ ಓದಿ: Viral: ಸ್ಕರ್ಟ್ ಧರಿಸಿ ‘ಸಾಮಿ ಸಾಮಿ’ ಹಾಡಿಗೆ ಯುವಕನ ಭರ್ಜರಿ ಡಾನ್ಸ್; ಏನಿದು ಹೊಸ ಟ್ರೆಂಡ್?

ಆಲಿಯಾ-ರಣಬೀರ್​ ಆಸ್ತಿ ಸೇರಿದರೆ ಆಗಲಿದೆ 840 ಕೋಟಿ ರೂಪಾಯಿ! ಇದರಲ್ಲಿ ಯಾರ ಪಾಲು ಎಷ್ಟು?

Daily Horoscope: ಸಿಂಹ ರಾಶಿಯವರಿಗೆ ಇಂದು ಧನಯೋಗ ಮತ್ತು ಆರ್ಥಿಕ ಪ್ರಗತಿ
Daily Horoscope: ಸಿಂಹ ರಾಶಿಯವರಿಗೆ ಇಂದು ಧನಯೋಗ ಮತ್ತು ಆರ್ಥಿಕ ಪ್ರಗತಿ
ಫ್ರೀಡ್​​ಮ್ಯಾನ್ ಪೋಡ್​ಕ್ಯಾಸ್ಟ್​​​: ಆಡಳಿತ ಸುಧಾರಣೆ ಬಗ್ಗೆ ಮೋದಿ ಮಾತು
ಫ್ರೀಡ್​​ಮ್ಯಾನ್ ಪೋಡ್​ಕ್ಯಾಸ್ಟ್​​​: ಆಡಳಿತ ಸುಧಾರಣೆ ಬಗ್ಗೆ ಮೋದಿ ಮಾತು
ಹೊಸ ನಟರು ಬಂದರೂ ಪುನೀತ್ ಫ್ಯಾನ್ಸ್ ನಿಯತ್ತು ಬದಲಾಗಲ್ಲ: ರಮ್ಯಾ ಮೆಚ್ಚುಗೆ
ಹೊಸ ನಟರು ಬಂದರೂ ಪುನೀತ್ ಫ್ಯಾನ್ಸ್ ನಿಯತ್ತು ಬದಲಾಗಲ್ಲ: ರಮ್ಯಾ ಮೆಚ್ಚುಗೆ
ಹಾಸನ: ಸತತ ನಾಲ್ಕು ಗಂಟೆಗಳ ಬಳಿಕ ಕಾಡಾನೆ ಸೆರೆ
ಹಾಸನ: ಸತತ ನಾಲ್ಕು ಗಂಟೆಗಳ ಬಳಿಕ ಕಾಡಾನೆ ಸೆರೆ
ಅಂಬಿ ಮೊಮ್ಮಗನ ನಾಮಕರಣ: ವಿಶೇಷ ಗಿಫ್ಟ್ ನೀಡಿದ ಕಿಚ್ಚ ಸುದೀಪ್
ಅಂಬಿ ಮೊಮ್ಮಗನ ನಾಮಕರಣ: ವಿಶೇಷ ಗಿಫ್ಟ್ ನೀಡಿದ ಕಿಚ್ಚ ಸುದೀಪ್
ಮಹಾರಾಷ್ಟ್ರ: ಚಾಲಕನಿಗೆ ಹೃದಯಾಘಾತ, 10 ವಾಹನಗಳಿಗೆ ಡಿಕ್ಕಿ ಹೊಡೆದ ಕಾರು
ಮಹಾರಾಷ್ಟ್ರ: ಚಾಲಕನಿಗೆ ಹೃದಯಾಘಾತ, 10 ವಾಹನಗಳಿಗೆ ಡಿಕ್ಕಿ ಹೊಡೆದ ಕಾರು
ಮಲ್ಲಿಕಾರ್ಜುನ ಖರ್ಗೆ ಜತೆ ಡಿಕೆ ಶಿವಕುಮಾರ್ ದಿಢೀರ್ ಪಯಣ!
ಮಲ್ಲಿಕಾರ್ಜುನ ಖರ್ಗೆ ಜತೆ ಡಿಕೆ ಶಿವಕುಮಾರ್ ದಿಢೀರ್ ಪಯಣ!
ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಬಗ್ಗೆ ಗಣೇಶ್ ಆಚಾರ್ಯ ಮಾತು
ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಬಗ್ಗೆ ಗಣೇಶ್ ಆಚಾರ್ಯ ಮಾತು
ಮಧ್ಯಪ್ರದೇಶದ ಸರ್ಕಾರಿ ಆಸ್ಪತ್ರೆಯ ಹೆರಿಗೆ ವಾರ್ಡ್​ನಲ್ಲಿ ಅಗ್ನಿ ಅವಘಡ
ಮಧ್ಯಪ್ರದೇಶದ ಸರ್ಕಾರಿ ಆಸ್ಪತ್ರೆಯ ಹೆರಿಗೆ ವಾರ್ಡ್​ನಲ್ಲಿ ಅಗ್ನಿ ಅವಘಡ
ಒಂದೇ ಓವರ್​ನಲ್ಲಿ 6 ಸಿಕ್ಸ್​: ಏಕದಿನ ಕ್ರಿಕೆಟ್​ನ ಮೊದಲ ವಿಶ್ವ ದಾಖಲೆ
ಒಂದೇ ಓವರ್​ನಲ್ಲಿ 6 ಸಿಕ್ಸ್​: ಏಕದಿನ ಕ್ರಿಕೆಟ್​ನ ಮೊದಲ ವಿಶ್ವ ದಾಖಲೆ