AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ ಹಲವು ರಾಜ್ಯಗಳಲ್ಲಿ ಮತ್ತೆ ನಿಧಾನವಾಗಿ ಏರುತ್ತಿದೆ ಕೊರೊನಾ; ಮಾಸ್ಕ್​ ಕಡ್ಡಾಯವಾಗಿ ಬಳಕೆ ಮಾಡೋದು ಒಳಿತು

ಮಹಾರಾಷ್ಟ್ರದಲ್ಲಿ ಗುರುವಾರ 103 ಕೊರೊನಾ ಕೇಸ್​ಗಳು ದಾಖಲಾಗಿವೆ. ಹಾಗೇ, ಐದು ಮಂದಿ ಕೊವಿಡ್​ 19ನಿಂದ ಮೃತಪಟ್ಟಿದ್ದಾರೆ.   ಮುಂಬೈ ನಗರದಲ್ಲಿ ಏಪ್ರಿಲ್​ 14ರಂದು 56 ಹೊಸ ಕೇಸ್​ಗಳು ದಾಖಲಾಗಿದ್ದವು.

ದೇಶದ ಹಲವು ರಾಜ್ಯಗಳಲ್ಲಿ ಮತ್ತೆ ನಿಧಾನವಾಗಿ ಏರುತ್ತಿದೆ ಕೊರೊನಾ; ಮಾಸ್ಕ್​ ಕಡ್ಡಾಯವಾಗಿ ಬಳಕೆ ಮಾಡೋದು ಒಳಿತು
ಕೊವಿಡ್ -19
TV9 Web
| Edited By: |

Updated on: Apr 15, 2022 | 12:37 PM

Share

ದೇಶದಲ್ಲಿ ಏಪ್ರಿಲ್​ 1ರಿಂದ ಕೊರೊನಾ ನಿಯಂತ್ರಣ ನಿರ್ಬಂಧಗಳು ಯಾವವೂ ಇಲ್ಲ. ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್​​ನ್ನು ಕಡ್ಡಾಯವಾಗಿ ಧರಿಸಿ ಎಂದು ಕೇಂದ್ರ ಸರ್ಕಾರ ಹೇಳಿದ್ದರೂ ಕೂಡ ಕೆಲವು ರಾಜ್ಯಗಳಲ್ಲಿ ಮಾಸ್ಕ್​ ಕೂಡ ಕಡ್ಡಾಯವಲ್ಲ. ಧರಿಸದೆ ಇದ್ದರೆ ದಂಡ ವಿಧಿಸುವುದಿಲ್ಲ ಎಂದು ಅಲ್ಲಿನ ಸರ್ಕಾರಗಳು ಹೇಳಿವೆ. ಆದರೆ ಈಗ ಮತ್ತೆ ಕೆಲವು ರಾಜ್ಯಗಳಲ್ಲಿ ಕೊರೊನಾ ಕೇಸ್​ಗಳ ಸಂಖ್ಯೆ ನಿಧಾನಕ್ಕೆ ಏರಿಕೆಯಾಗುತ್ತಿದೆ. ಅದರಲ್ಲಿ ಪ್ರಮುಖವಾಗಿ ದೆಹಲಿ, ಮಹಾರಾಷ್ಟ್ರ ಮತ್ತು ಮಿಜೋರಾಂಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ದೆಹಲಿಯಲ್ಲಿ ಏಪ್ರಿಲ್​ 14ರಂದು 325 ಕೊರೊನಾ ಕೇಸ್​ಗಳು ದಾಖಲಾಗಿದೆ. ಅಲ್ಲಿ ಪಾಸಿಟಿವಿಟಿ ದರವೂ ಕೂಡ ಶೇ. 2.39ರಷ್ಟಿದೆ. ಹಾಗಿದ್ದಾಗ್ಯೂ ಜನರು ಗಾಬರಿಯಾಗುವ ಅಗತ್ಯವಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​, ವೈದ್ಯರು ಧೈರ್ಯ ತುಂಬುತ್ತಿದ್ದಾರೆ.

ಮಹಾರಾಷ್ಟ್ರದಲ್ಲೂ ಹೆಚ್ಚಳ

ಮಹಾರಾಷ್ಟ್ರದಲ್ಲಿ ಗುರುವಾರ 103 ಕೊರೊನಾ ಕೇಸ್​ಗಳು ದಾಖಲಾಗಿವೆ. ಹಾಗೇ, ಐದು ಮಂದಿ ಕೊವಿಡ್​ 19ನಿಂದ ಮೃತಪಟ್ಟಿದ್ದಾರೆ.   ಮುಂಬೈ ನಗರದಲ್ಲಿ ಏಪ್ರಿಲ್​ 14ರಂದು 56 ಹೊಸ ಕೇಸ್​ಗಳು ದಾಖಲಾಗಿದ್ದವು. ಈ ಮೂಲಕ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ ಇಲ್ಲಿ 10,58,623 ಏರಿಕೆಯಾಗಿದೆ. ಸದ್ಯ ಮುಂಬೈನಲ್ಲಿ ಶೇ.98ರಷ್ಟು ಚೇತರಿಕೆ ಪ್ರಮಾಣವಿದ್ದು, 346 ಸಕ್ರಿಯ ಪ್ರಕರಣಗಳಿವೆ.  ಮಿಜೋರಾಂನಲ್ಲಿ ಕೊವಿಡ್​ 19 ಏರಿಕೆ ತುಸು ಏರಿಕೆಯಾಗಿದೆ. ಒಟ್ಟು ಸೋಂಕಿತರ ಸಂಖ್ಯೆ  2,25,901ಕ್ಕೆ ತಲುಪಿದೆ.

ಇನ್ನುಳಿದಂತೆ ತಮಿಳುನಾಡಿನಲ್ಲಿ ನಿನ್ನೆ 25 ಹೊಸ ಕೊರೊನಾ ಕೇಸ್​ಗಳು ದಾಖಲಾಗಿದ್ದವು. ಅದರಲ್ಲಿ ಒಬ್ಬರು ಯುನೈಟೆಡ್ ಅರಬ್​ ಎಮಿರೇಟ್ಸ್​​ನಿಂದ ಭಾರತಕ್ಕೆ ವಾಪಸ್ ಬಂದವರು. ಈ ರಾಜ್ಯದಲ್ಲಿ ಒಟ್ಟು 230 ಕೊರೊನಾ ಸಕ್ರಿಯ ಪ್ರಕರಣಗಳು ಇದ್ದು, ಇಲ್ಲಿಯವರೆಗೆ  34,14,933 ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.  ಇತ್ತೀಚೆಗೆ ಕೊರೊನಾದ ಎಕ್ಸ್​ಇ ರೂಪಾಂತರಿ ವೈರಾಣು ಆತಂಕ ಸೃಷ್ಟಿಸಿರುವ ಬೆನ್ನಲ್ಲೇ,  ದಕ್ಷಿಣ ಆಫ್ರಿಕಾದ ಬೋಟ್ಸ್‌ವಾನಾದಲ್ಲಿ ಒಮಿಕ್ರೋನ್‌ ಬಿಎ.4 ಹಾಗೂ ಬಿಎ.5 ಎಂಬ 2 ಹೊಸ ರೂಪಾಂತರಿಗಳು ಪತ್ತೆಯಾಗಿವೆ. ಇವು ಹೆಚ್ಚು ಅಪಾಯಕಾರಿ ಅಥವಾ ತೀವ್ರವಾಗಿ ಹರಡುವ ಸಾಮರ್ಥ್ಯ ಹೊಂದಿದೆಯೇ ಎಂಬುದು ಇನ್ನೂ ಖಚಿತವಾಗಿಲ್ಲ. ಇದರ ಬಗ್ಗೆ ಅಧ್ಯಯನ ನಡೆಸಲಾಗುವುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ಇದನ್ನೂ ಓದಿ: Viral: ಸ್ಕರ್ಟ್ ಧರಿಸಿ ‘ಸಾಮಿ ಸಾಮಿ’ ಹಾಡಿಗೆ ಯುವಕನ ಭರ್ಜರಿ ಡಾನ್ಸ್; ಏನಿದು ಹೊಸ ಟ್ರೆಂಡ್?

ಆಲಿಯಾ-ರಣಬೀರ್​ ಆಸ್ತಿ ಸೇರಿದರೆ ಆಗಲಿದೆ 840 ಕೋಟಿ ರೂಪಾಯಿ! ಇದರಲ್ಲಿ ಯಾರ ಪಾಲು ಎಷ್ಟು?

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್