AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಳಿಗಾಲ ಬಂದರೂ ಮುಗಿದಿಲ್ಲ ಮಳೆ; ಜ.11ರಿಂದ ಈ ರಾಜ್ಯಗಳಲ್ಲಿ ಭರ್ಜರಿ ಮಳೆಯಾಗುವ ಸಾಧ್ಯತೆ, ಯೆಲ್ಲೋ ಅಲರ್ಟ್​ ಘೋಷಿಸಿದ ಐಎಂಡಿ

ಪಂಜಾಬ್​, ರಾಜಸ್ಥಾನ, ಹರ್ಯಾಣ ರಾಜ್ಯಗಳಲ್ಲಿ ಕೆಲವು ದಿನಗಳಿಂದ ಮಳೆಯಾಗುತ್ತಲೇ ಇದೆ. ನಿನ್ನೆಯಿಂದ ಸ್ವಲ್ಪಮಟ್ಟಿಗೆ ತಗ್ಗಿದೆ. 

ಚಳಿಗಾಲ ಬಂದರೂ ಮುಗಿದಿಲ್ಲ ಮಳೆ; ಜ.11ರಿಂದ ಈ ರಾಜ್ಯಗಳಲ್ಲಿ ಭರ್ಜರಿ ಮಳೆಯಾಗುವ ಸಾಧ್ಯತೆ, ಯೆಲ್ಲೋ ಅಲರ್ಟ್​ ಘೋಷಿಸಿದ ಐಎಂಡಿ
ಮಳೆಯ ಚಿತ್ರ
TV9 Web
| Edited By: |

Updated on: Jan 10, 2022 | 8:38 AM

Share

ಚಳಿಗಾಲ ಮುಗಿದರೂ ಮಳೆಗಾಲ ಮುಗಿಯುವ ಲಕ್ಷಣಗಳೇ ಇಲ್ಲ. ದೆಹಲಿ ಸೇರಿ ಒಟ್ಟು ನಾಲ್ಕು ರಾಜ್ಯಗಳಲ್ಲಿ ಜನವರಿ 11ರಿಂದ 13ರವರೆಗೆ ಭರ್ಜರಿ ಮಳೆಯಾಗುವ ಸಾಧ್ಯತೆ ಇದ್ದು ಭಾರತೀಯ ಹವಾಮಾನ ಇಲಾಖೆ (India Meteorological Department (IMD) ಆ ರಾಜ್ಯಗಳಲ್ಲಿ ಯೆಲ್ಲೋ ಅಲರ್ಟ್ (Yello Alert) ಘೋಷಿಸಿದೆ. ದೆಹಲಿಯಲ್ಲಿ ಕಳೆದ ಕೆಲವು ದಿನಗಳಿಂದಲೂ ಮಳೆಯಾಗುತ್ತಲೇ ಇದೆ. ಐಎಂಡಿಯ ಹಿರಿಯ ವಿಜ್ಞಾನಿ ಆರ್​. ಕೆ.ಜೇನಾಮನಿ ಎಎನ್​ಐ ಜತೆ ಪ್ರತಿಕ್ರಿಯಿಸಿ, ಜನವರಿ 11ರಿಂದ  ದೇಶದ ಪೂರ್ವ ಭಾಗಕ್ಕೆ ಪಶ್ಚಿಮ ಅಡಚಣೆಗಳು ಅಪ್ಪಳಿಸಲಿವೆ. ಹೀಗಾಗಿ ದೇಶದ ಮಧ್ಯ ಮತ್ತು ಪೂರ್ವ ಭಾಗಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ತಿಳಿಸಿದ್ದಾರೆ. 

ಅಂದಹಾಗೇ, ಜನವರಿ 11ರಿಂದ ಒಡಿಶಾ, ಬಿಹಾರ್, ಜಾರ್ಖಂಡ ಮತ್ತು ಪಶ್ಚಿಮ ಬಂಗಾಳ, ದೆಹಲಿಯಲ್ಲಿ ಮಳೆಯಾಗಲಿದೆ. ಒಡಿಶಾದಲ್ಲಿ ಜನವರಿ 11 ಮತ್ತು 12ರಂದು ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಜನವರಿ 11ರಂದು ಒಡಿಶಾದಲ್ಲಿ ಆಲಿಕಲ್ಲು ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಆರೆಂಜ್​ ಅಲರ್ಟ್​ ಎಂದರೆ ಒಡಿಶಾದಲ್ಲಿ ಅತ್ಯಂತ ಕೆಟ್ಟ ವಾತಾವರಣ ಇರಲಿದೆ ಎಂದೇ ಅರ್ಥ. ಅಂದರೆ ರಸ್ತೆ ತಡೆ, ರೈಲು ಸೇವೆಗಳು ಬಂದ್​ ಆಗುವಷ್ಟು ಮಳೆಯಾಗಬಹುದು ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.

ಇನ್ನು ಬಿಹಾರ, ಜಾರ್ಖಂಡ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಜನವರಿ 11ರಿಂದ 13ರವರೆಗೆ ಯೆಲ್ಲೋ ಅಲರ್ಟ್​ ಹೇರಲಾಗಿದೆ.  ಇದು ಗಂಭೀರ ಸ್ವರೂಪದ ಕೆಟ್ಟ ವಾತಾವರಣದ ಮುನ್ನೆಚ್ಚರಿಕೆಯಾಗಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಇನ್ನು ದೆಹಲಿಯಲ್ಲಿ ಮಳೆಯ ಪ್ರಮಾಣ ಸ್ವಲ್ಪ ತಗ್ಗಲಿದೆ.  ಇನ್ನು ಪಂಜಾಬ್​, ರಾಜಸ್ಥಾನ, ಹರ್ಯಾಣಗಳಲ್ಲಿ ಕೆಲವು ದಿನಗಳಿಂದ ಮಳೆಯಾಗುತ್ತಲೇ ಇದೆ. ನಿನ್ನೆಯಿಂದ ಸ್ವಲ್ಪಮಟ್ಟಿಗೆ ತಗ್ಗಿದೆ.

ಇದನ್ನೂ ಓದಿ: IPL 2022: ಹರಾಜಿನ ಬಳಿಕ ಅಂತಿಮ ನಿರ್ಧಾರ: ಐಪಿಎಲ್ ಬಗ್ಗೆ ವಿಶೇಷ ಮಾಹಿತಿ ಹಂಚಿಕೊಂಡ ಬಿಸಿಸಿಐ

ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ!
ಸಿಎಂ ಕುರ್ಚಿ ಕದನ: ಡಿಕೆಶಿಗೆ ಇನ್ನೂ ಸಿಕ್ಕಿಲ್ವಾ ಸ್ವಷ್ಟ ಚಿತ್ರಣ?
ಸಿಎಂ ಕುರ್ಚಿ ಕದನ: ಡಿಕೆಶಿಗೆ ಇನ್ನೂ ಸಿಕ್ಕಿಲ್ವಾ ಸ್ವಷ್ಟ ಚಿತ್ರಣ?